ಉಡುಪಿ: ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಅಧಿವೇಶನದಲ್ಲಿ ಜನರ ತೆರಿಗೆ ಹಣ ಹಾಳು ಮಾಡುವ ಕೆಲಸವಾಯಿತು. ಕೇಂದ್ರ ಸರಕಾರ ಮತ್ತು ಮೋದಿ ಅವರನ್ನು ಟೀಕೆ ಮಾಡಲು ಕರೆದ ಅಧಿವೇಶನ. ಜಿ ರಾಮ್ ಜಿ ಬಗ್ಗೆ ಸರಿಯಾದ ಚರ್ಚೆ ಆಗಲಿಲ್ಲ.
ಅಬಕಾರಿ ಇಲಾಖೆ ಭ್ರಷ್ಟಾಚಾರ ತಾರ್ಕಿಕ ಅಂತ್ಯವಾಗಿಲ್ಲ. ಇದೊಂದು ಅರ್ಥಹೀನ ಅಧಿವೇಶನ. ಕೇಂದ್ರ ಸರಕಾರದ ಪ್ರತಿನಿಧಿಯಾದ ರಾಜ್ಯಪಾಲರಿಂದ ಕೇಂದ್ರವನ್ನೇ ಟೀಕೆ ಮಾಡಿಸುವುದು ಎಷ್ಟು ಸರಿ? ರಾಜ್ಯ ಮತ್ತು ಕೇಂದ್ರದ ಸಂಬಂಧ ಹಾಳಾಗುತ್ತದೆ.
ಶಾಸಕರ ಸಂಬಳ ಭತ್ಯೆಗಾಗಿ ಅಧಿವೇಶನ ನಡೆಯಿತು. ಅಬಕಾರಿ ಇಲಾಖೆ ಭ್ರಷ್ಟಾಚಾರ ವಿಪಕ್ಷ ಸರಿಯಾಗಿ ನಿರ್ವಹಿಸಿಲ್ಲ ಎಂದು ಆರೋಪಿಸಿದರು.
ಅನಂತ್ ಕುಮಾರ್ ಹೆಗಡೆ ರಾಜ್ಯ ರಾಜಕಾರಣಕ್ಕೆ ಮರು ಪ್ರವೇಶದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆಯೇ ಹೊರತು, ಹೆಗಡೆ ಅವರು ಎಲ್ಲಿಯೂ ಪ್ರತಿಕ್ರಿಯೆ ನೀಡಿಲ್ಲ. ಈ ಕುರಿತು ಅವರೇ ಪ್ರತಿಕ್ರಿಯೆ ನೀಡಬೇಕಿದೆ.
ತಂದೆ ಮಕ್ಕಳ ಸಹಾವಾಸದಿಂದ ಬಿಜೆಪಿಯಲ್ಲಿ ಒಳ್ಳೆಯ ನಾಯಕತ್ವ ಗುಣಗಳನ್ನು ಮುಗಿಸಲಾಗುತ್ತಿದೆ. ಕೇಂದ್ರದವರು ತಿಳಿದುಕೊಳ್ಳಬೇಕು, ಇಂತವರ ನಾಯಕತ್ವದಿಂದ ಪರಿಣಾಮ ಏನು ಎಂಬುದನ್ನು. ಇವರ ಹೊಂದಾಣಿಕೆಯಿಂದ ಲೋಕಸಭೆಯಲ್ಲಿ ಹಿನ್ನಡೆಯಾಗಿದೆ.
ಡಿಕೆ ಶಿವಕುಮಾರ್ ನೇರವಾಗಿ ಹೇಳುತ್ತಾರೆ. ವಿಜಯೇಂದ್ರ ನಿನ್ನ ನಕಲಿ ಸಹಿ ಫೈಲ್ ತಗಿಲಾ ಎನ್ನುತ್ತಾರೆ ಅಲ್ಲಿಗೆ ಮುಗಿತು, ಇಗರ ಹೋರಟ. ಇಂತವರ ಮೇಲೆ ಕೇಂದ್ರದವರಿಗೆ ಏಕೆ ವಿಶೇಷ ಮಮಕಾರ ಇದೆಯೋ ನಮಗಂತು ಅರಿವಾಗ್ತಾ ಇಲ್ಲ ಎಂದರು.