If garbage disposal is obstructed, we will dump garbage in front of houses and offices: D.K. Shivakumar

ಕಸ ವಿಲೇವಾರಿಗೆ ಅಡ್ಡಿಪಡಿಸಿದರೆ ಮನೆ, ಕಚೇರಿ ಮುಂದೆ ಕಸ ಸುರಿಯುತ್ತೇವೆ: ಬಿಜೆಪಿ ಶಾಸಕರು, ಮುಖಂಡರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: “ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ ಮುಂದೆ ಅಥವಾ ಬಿಜೆಪಿ ಕಚೇರಿ ಎದುರು ಲೋಡ್‌ ಕಸವನ್ನು ತೆಗೆದುಕೊಂದು ಹೋಗಿ ಹಾಕಬೇಕಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (D.K. Shivakumar) ಅವರು ಎಚ್ಚರಿಕೆ ನೀಡಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಮಹದೇವಪುರದಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸಿರುವ ಬಗ್ಗೆ ಕೇಳಿದಾಗ, “ಶಾಸಕರು ಕಸ ಹಾಕಬಾರದು ಹಾಗೂ ನಮಗೆ ಅನುದಾನ ಬೇಕು ಎಂದು ಬ್ಲಾಕ್‌ ಮೇಲ್‌ ಮಾಡುತ್ತಿದ್ದಾರೆ. ಮಂಗಳವಾರದಂದು ಅರವಿಂದ ಲಿಂಬಾವಳಿ, ದೊಡ್ಡಬಳ್ಳಾಪುರ ಶಾಸಕರು ಬ್ಲಾಕ್‌ ಮೇಲ್‌ ಮಾಡಿದ್ದಾರೆ. ಹೀಗೆ ಮಾಡಿದರೆ ಕಸ ಎಲ್ಲಿಗೆ ಹೋಗಬೇಕು? ಕಸವು ಆರ್‌.ಅಶೋಕ್‌, ವಿಜಯೇಂದ್ರ ಅಥವಾ ಬಿಜೆಪಿ ಕಚೇರಿಗೆ ಹೋಗಬೇಕಾಗುತ್ತದೆ. ಇವರುಗಳು ಯಾರಿಗೆ ಎಂದು ಬ್ಲಾಕ್‌ ಮೆಲ್‌ ಮಾಡುತ್ತಿದ್ದಾರೆ” ಎಂದರು.

ಯಾವ ಉದ್ದೇಶಕ್ಕೆ ಶಾಸಕರುಗಳು ಬ್ಲಾಕ್‌ ಮೆಲ್‌ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಈ ಹಿಂದಿನಿಂದ ಏನು ಕೆಲಸ ಮಾಡಿಕೊಂಡು ಬರಲಾಗುತ್ತಿತ್ತೊ ಅದೇ ಕೆಲಸವನ್ನು ಈಗಲೂ ಮಾಡಿಕೊಂಡು ಬರಲಾಗುತ್ತಿದೆ. ಅವರ ಕ್ಷೇತ್ರಗಳಿಗೆ ಅನುದಾನ ಬೇಕು ಎಂದು ಹೀಗೆ ಮಾಡುತ್ತಿದ್ದಾರೆ” ಎಂದು ಹೇಳಿದರು.

ಕಸದ ಲಾರಿಯಿಂದ ಅಪಘಾತವಾಗಿದೆ ಎನ್ನುವ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅಪಘಾತ ಆಗಬಾರದಿತ್ತು ಆಗಿದೆ. ಇದಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಕಸ ವಿಲೇವಾರಿ ನಿಲ್ಲಿಸಿರುವುದು ಸರಿಯಲ್ಲ. ಎಸ್‌.ಟಿ.ಸೋಮಶೇಖರ್‌, ಶಿವಣ್ಣ, ಕೃಷ್ಣಬೈರೇಗೌಡ ಅವರ ಕ್ಷೇತ್ರಗಳಲ್ಲೂ ಕಸ ವಿಲೇವಾರಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಈಗ ಹೊಸದಾಗಿ ಎರಡು ಜಾಗಗಳನ್ನು ಖರೀದಿ ಮಾಡಲಾಗಿದೆ. ಅಲ್ಲಿ ಕಸ ವಿಲೇವಾರಿಗೆ ಕಾನೂನಿನ ಪ್ರಕಾರ ಟೆಂಡರ್‌ ಕರೆಯಲಾಗಿದೆ. ಒಂದಷ್ಟು ಕಾನೂನಾತ್ಮಕ ವಿಚಾರಗಳನ್ನು ಬಗೆಹರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.

ಅನುದಾನ ಅಲಭ್ಯತೆಗೆ ಬಿಜೆಪಿ ಸರ್ಕಾರವೇ ಕಾರಣ

ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಕಮಿಷನ್‌ ಹೆಚ್ಚಿದೆ, ಕಾಮಗಾರಿ ನಿಲ್ಲಿಸುತ್ತೇವೆ ಎಂದು ಗುತ್ತಿಗೆದಾರರ ಸಂಘ ತಿಳಿಸಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ದೂರು ನೀಡಲು ಅವರಿಗೆ ತಿಳಿಸಿ. ಅವರುಗಳು ಮೊದಲು ಕಾಮಗಾರಿ ನಿಲ್ಲಿಸಲಿ. ಯಡಿಯೂರಪ್ಪ ಅವರ ಸರ್ಕಾರ ಇದ್ದಾಗ ಅನುದಾನವಿಲ್ಲ ಕೆಲಸ ತೆಗೆದುಕೊಳ್ಳಬೇಡಿ ಎಂದು ಹೇಳಿಲ್ಲವೇ? ಆದರೂ ಏಕೆ ಕೆಲಸಗಳನ್ನು ತೆಗೆದುಕೊಂಡರು. ಆರ್ಥಿಕ ಲಭ್ಯತೆ ಇಲ್ಲದೇ ಇದ್ದರೂ ಸಹ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಕೆಲಸಗಳನ್ನು ತೆಗೆದುಕೊಳ್ಳಲಾಯಿತು. ಬೆಂಗಳೂರು ನಗರದಲ್ಲಿ ಎಷ್ಟು ಹೊಂದಿಸಬೇಕೋ ಆ ಕೆಲಸವನ್ನು ನಾನು ಮಾಡಿದ್ದೇನೆ. ಉದಾಹರಣೆಗೆ 10 ಸಾವಿರ ಕೋಟಿ ಅನುದಾನವಿದ್ದರೆ 30- 40 ಸಾವಿರ ಕೋಟಿ ಟೆಂಡರ್‌ ಕರೆದಿದ್ದಾರೆ. ಇದೆಲ್ಲದ್ದಕ್ಕೂ ಬಿಜೆಪಿ ಸರ್ಕಾರವೇ ಕಾರಣ. ಈಗ ಬಿಲ್‌ ಬಿಲ್‌ ಎಂದರೆ ಏನು ಮಾಡುವುದು. ಅಂದು ಏಕೆ ಕೆಲಸಗಳನ್ನು ತೆಗೆದುಕೊಂಡರು. ನನ್ನ ಇಲಾಖೆಯ ದಾಖಲೆಗಳನ್ನು ನೀಡುತ್ತೇನೆ. ಹಣ ಇಲ್ಲ ಎಂದು ಗೊತ್ತಿದ್ದರೂ ಕೆಲಸಗಳನ್ನು ಏಕೆ ಪ್ರಾರಂಭ ಮಾಡಿದರು” ಎಂದು ಹೇಳಿದರು.

ನಿಮಗೂ ಕೆಲಸ ನಿಲ್ಲಿಸುತ್ತೇವೆ ಎಂದು ಬ್ಲಾಕ್‌ ಮೆಲ್‌ ಮಾಡುತ್ತಿದ್ದಾರೆಯೇ ಎಂದು ಕೇಳಿದಾಗ, “ಕೆಲಸ ನಿಲ್ಲಿಸಿಕೊಳ್ಳುವವರು ನಿಲ್ಲಿಸಿಕೊಳ್ಳಲಿ. ಏನು ಬೇಕಾದರೂ ಮಾಡಿಕೊಳ್ಳಲಿ. ನಮ್ಮ ಸರ್ಕಾರ ಬಜೆಟ್‌ ಪ್ರಕಾರ ಹಣ ನೀಡುತ್ತಿದೆ. ಎಷ್ಟು ಆಗುತ್ತದೆಯೋ ಅಷ್ಟು ಹಣವನ್ನು ನಾವು ಕೊಡುತ್ತೇವೆ. ಬಜೆಟ್‌ ಆದ ನಂತರ ಏನಾದರೂ ಮಾಡೋಣ. ನಮಗೂ ಮಾನವೀಯತೆ ಇದೆ. ಬ್ಲಾಕ್‌ ಮೆಲ್‌ ಮಾಡುತ್ತೇವೆ ಅನ್ನುವವರೆಲ್ಲಾ ಮಾಡಿಕೊಳ್ಳಲಿ” ಎಂದರು.

ನಕಲಿ ಬೆರಳಚ್ಚಿನ ಮೂಲಕ ಅನ್ನಭಾಗ್ಯ ಅಕ್ಕಿ ಲೂಟಿ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಗೊತ್ತಿಲ್ಲ” ಎಂದರು

ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!