People's sentiment is that Kumaranna should become CM: Nikhil Kumaraswamy

ಕುಮಾರಣ್ಣ ಮುಖ್ಯಮಂತ್ರಿ ಆಗ್ಬೇಕು ಅನ್ನೋದು ಏಳೂವರೆ ಕೋಟಿ ಜನರ ಭಾವನೆ: ನಿಖಿಲ್ ಕುಮಾರಸ್ವಾಮಿ

ಮೈಸೂರು: ಮಾನ್ಯ ಉಪ ಮುಖ್ಯಮಂತ್ರಿಗಳೇ ನಿಖಿಲ್ ಏನು ಅಂತ ಮುಂದೆ ತೋರಿಸ್ತೀನಿ. ಚುನಾವಣೆಯಲ್ಲಿ ಸೋಲು- ಗೆಲುವು ಶಾಶ್ವತವಲ್ಲ. ಇದು ಪ್ರಜಾಪ್ರಭುತ್ವ ಯಾರನ್ನ ಸೋಲಿಸಬೇಕು, ಗೆಲ್ಲಿಸಬೇಕು ಅಂತ ಜನ 2028ಕ್ಕೆ ಜನ ತೀರ್ಮಾನ ಮಾಡ್ತಾರೆ ಎಂದು ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಟಾಂಗ್ ನೀಡಿದರು.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಎರಡನೇ ಹಂತದ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

7 ಲಕ್ಷದ 64ಸಾವಿರ ಕೋಟಿ ಸಾಲ ಮಾಡಿರೋದೆ ನಿಮ್ಮ ಸಾಧನೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಮೂರು ವರ್ಷ ಆಗಿದೆ. ಹಾವೇರಿಯಲ್ಲಿ ಸಾವಿರ ದಿನಗಳ ಸಮಾವೇಶ ಸರ್ಕಾರದ ದುಡಲ್ಲಿ ಮಾಡಿದ್ರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮ್ಮ ಹಿರಿತನಕ್ಕೆ ಗೌರವವಿದೆ. ದಾಖಲೆ ಪ್ರಾಮಾಣದಲ್ಲಿ ಶಾಸಕರಿದ್ದಾರೆ. ಆದರೆ ನಿಮ್ಮ ದಾಖಲೆ 7 ಲಕ್ಷದ 64ಸಾವಿರ ಕೋಟಿ ಸಾಲ ಮಾಡಿರೋದೆ ನಿಮ್ಮ ಸಾಧನೆ ಎಂದು ಅವರು ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಅತಿ ಹೆಚ್ಚು ಸಾಲ ಮಾಡಿರುವ ಕೀರ್ತಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರಿಗೆ ಸಲ್ಲುತ್ತೆ. ಕುಮಾರಣ್ಣ ಅವರು ಕಾಂಗ್ರೆಸ್ ಜತೆ ಸರ್ಕಾರ ಮಾಡಿದ ಸಂದರ್ಭದಲ್ಲಿ ನಾಡಿನ ರೈತರ ಸಾಲ ಮನ್ನಾ ಮಾಡಿದ್ರು, ಸಾಲ ಮನ್ನಾ ಮಾಡಿದ್ರು ಕೂಡ, ರಾಜ್ಯದ ಪ್ರಜೆಗಳನ್ನ ಸಾಲಗಾರರನ್ನಾಗಿ ಮಾಡಿಲ್ಲ ಎಂದು ಹೇಳಿದರು.

ಕುಮಾರಣ್ಣ ಮುಖ್ಯಮಂತ್ರಿ ಆಗ್ಬೇಕು ಅನ್ನೋದು ನಿಖಿಲ್ ಕುಮಾರಸ್ವಾಮಿ ಭಾವನೆಯಲ್ಲ, ನಾನು 9 ಸಾವಿರ ಕಿ.ಲೋ ರಾಜ್ಯ ಪ್ರವಾಸ ಮಾಡಿದ್ದ ಸಂದರ್ಭದಲ್ಲಿ ಜನ ಕುಮಾರಣ್ಣ ಆಡಳಿತವನ್ನ ನೆನಸಿಕೊಂದಿರೋದನ್ನ ನಾನು ಹತ್ತಿರದಿಂದ ನೋಡಿದ್ದೇನೆ. ಅದನ್ನ ನಾನು ಮಾಧ್ಯಮಗಳಲ್ಲಿ ಹೇಳಿದೆ. ನನಗೂ ರಾಜಕೀಯ ಪ್ರಜ್ಞೆಯಿದೆ ಎಂದು ಒತ್ತಿಹೇಳಿದರು.

ಜೆಡಿಎಸ್ ರೈತರ ಪಕ್ಷ, ಕಾರ್ಯಕರ್ತರೇ ನಮ್ಮ ಪಕ್ಷದ ಬೆನ್ನೆಲುಬು

ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ. ನಾನು ನಿಮ್ಮ ಜತೆಯಲ್ಲಿ ಇರ್ಬೇಕು ಅಂತ ಜನರೊಂದಿಗೆ ಜನತಾದಳ ಪ್ರವಾಸ ಮಾಡ್ತಿದ್ದೇನೆ.ಇವತ್ತು 25ವರ್ಷದ ಬೆಳ್ಳಿಹಬ್ಬ ಮಾಡ್ತಿದೆ ಅಂದ್ರೆ ನಿಮ್ಮ ಶ್ರಮ. ನಮ್ಮ ಪಕ್ಷದ ಕಾರ್ಯಕರ್ತರು ಯೋಧರು. ನಿಮ್ಮ ಜತೆ ನಾನಿರುತ್ತೇನೆ ಎಂದು ನಿಖಿಲ್ ಅವರು ಒತ್ತಿ ಹೇಳಿದರು.

ಜನತಾದಳಪಕ್ಷ ಇದು ನಿಮ್ಮ ಪಕ್ಷ , ರೈತರ ಪಕ್ಷ . ಕಾರ್ಯಕರ್ತರೇ ನಮ್ಮ ಪಕ್ಷದ ಬೆನ್ನೆಲುಬು. ಮೈಸೂರು ಭಾಗದಲ್ಲಿ ಪಕ್ಷವನ್ನು ಹಿಂದೆಗಿಂತಲೂ ಇನ್ನೂ ಹೆಚ್ಚಿನ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ, ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ನಾವು ನಿಮ್ಮೊಂದಿಗೆ ಗಟ್ಟಿಯಾಗಿ ನಿಲ್ಲುತ್ತೇವೆ. 2028ಕ್ಕೆ ಪಿರಿಯಾಪಟ್ಟಣದಿಂದ ನಮ್ಮ ಪಕ್ಷದ ಶಾಸಕರನ್ನು ಆಯ್ಕೆ ಮಾಡುವ ಮೂಲಕ NDA ಸರ್ಕಾರ ರಚಿಸಲು ಸಂಕಲ್ಪ‌ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಾರಾ ಮಹೇಶ್, ಶಾಸಕರಾದ ಜಿ.ಡಿ. ಹರೀಶ್‌ ಗೌಡ, ಮಾಜಿ ಶಾಸಕ ಕೆ.ಮಹದೇವ್‌, ಜಿಲ್ಲಾಧ್ಯಕ್ಷ ಅಶ್ವಿನ್‌ ಕುಮಾರ್‌, ವಿಧಾನಪರಿಷತ್‌ ಸದಸ್ಯ ವಿವೇಕಾನಂದ, ಮಂಜೇಗೌಡ, ಪ್ರಸನ್ನ ಕುಮಾರ್‌ ಸೇರಿದಂತೆ ಪ್ರಮುಖ ಮುಖಂಡರು ಜತೆಯಲ್ಲಿದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿ ಆಗ್ಬೇಕು ಅನ್ನೋದು ಏಳೂವರೆ ಕೋಟಿ ಜನರ ಭಾವನೆ: ನಿಖಿಲ್ ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿ ಆಗ್ಬೇಕು ಅನ್ನೋದು ಏಳೂವರೆ ಕೋಟಿ ಜನರ ಭಾವನೆ: ನಿಖಿಲ್ ಕುಮಾರಸ್ವಾಮಿ

ಮಾನ್ಯ ಉಪ ಮುಖ್ಯಮಂತ್ರಿಗಳೇ ನಿಖಿಲ್ ಏನು ಅಂತ ಮುಂದೆ ತೋರಿಸ್ತೀನಿ. ಚುನಾವಣೆಯಲ್ಲಿ ಸೋಲು- ಗೆಲುವು ಶಾಶ್ವತವಲ್ಲ. ಇದು ಪ್ರಜಾಪ್ರಭುತ್ವ ಯಾರನ್ನ ಸೋಲಿಸಬೇಕು, ಗೆಲ್ಲಿಸಬೇಕು ಅಂತ ಜನ 2028ಕ್ಕೆ ಜನ ತೀರ್ಮಾನ ಮಾಡ್ತಾರೆ ಎಂದು ಡಿ.ಕೆ.

[ccc_my_favorite_select_button post_id="119548"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಅಕ್ರಮ ಶ್ರೀಗಂಧ ಸಾಗಾಣಿಕೆ: ಇಬ್ಬರ ಬಂಧನ

ಅಕ್ರಮ ಶ್ರೀಗಂಧ ಸಾಗಾಣಿಕೆ: ಇಬ್ಬರ ಬಂಧನ

ಸಂಡೂರು ಉತ್ತರ ಮತ್ತು ದಕ್ಷಿಣ ವಲಯದ ಅರಣ್ಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಶ್ರೀಗಂಧ (Sandalwood) ಸಾಗಿಸುತ್ತಿದ್ದ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ.

[ccc_my_favorite_select_button post_id="119542"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!