I welcome the workers joining Congress from BJP: DCM D.K. Shivakumar

ಬಿಜೆಪಿಯಿಂದ ಕಾಂಗ್ರೆಸ್ ಸೇರುತ್ತಿರುವ ಕಾರ್ಯಕರ್ತರನ್ನು ಸ್ವಾಗತಿಸುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ದಾವಣಗೆರೆ: “ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರು ಈ ಭಾಗಕ್ಕೆ ನೀಡಿರುವ ಕೊಡುಗೆಯಿಂದ ಈ ಭಾಗದ ಜನರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರ ನಾಮಪತ್ರ ಸಲ್ಲಿಕೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಮುಖ್ಯಮಂತ್ರಿಗಳು, ನಾನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆಯುಬ್ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಸಮರ್ಥ್ ಅವರು ಇಂದು ಉಪಚುನಾವಣೆ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಎಲ್ಲರನ್ನು ವಿಶ್ವಾಸಕ್ಕೆ ಪಡೆದು, ಒಮ್ಮತದಿಂದ ಸಮರ್ಥ್ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿದ್ದರೂ ಗ್ರಾಮೀಣ ಭಾಗದ ಜನರ ಸೇವೆ ಮಾಡಲು ತಮ್ಮದೇ ಆದ ಆಸೆ, ಆಕಾಂಕ್ಷೆಯೊಂದಿಗೆ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ” ಎಂದು ತಿಳಿಸಿದರು.

“ಸಮರ್ಥ್ ಅವರು ಮತ್ತೆ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗುವುದನ್ನು ಶಾಮನೂರು ಶಿವಶಂಕರಪ್ಪನವರೇ ಇಲ್ಲೇ ಇದ್ದು ವೃತ್ತಿ ಮಾಡುವಂತೆ ಹೇಳಿದ್ದರು. ಕ್ಷೇತ್ರದ ಜನತೆ, ಎಲ್ಲಾ ವರ್ಗದ ಮುಖಂಡರು, ಪಕ್ಷದ ವರಿಷ್ಠರು ಎಲ್ಲರೂ ಚರ್ಚೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ಈ ಮಧ್ಯೆ ಮುಸಲ್ಮಾನ ಸಮುದಾಯದ ಶಾಸಕರುಗಳು ಈ ಕ್ಷೇತ್ರದಲ್ಲಿ ತಮ್ಮ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ನೀವು ನಮಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು. ನಾವು ಲೆಕ್ಕಾಚಾರ ಹಾಕಿದೆವು. ಕಾಂಗ್ರೆಸ್ ಪಕ್ಷ ಈ ಹಿಂದೆ ಟಿಕೆಟ್ ನೀಡಲಾಗದ ಕಾರಣಕ್ಕೆ ಜಬ್ಬಾರ್ ಅವರನ್ನು ಮೂರು ಬಾರಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೆವು. ಮುಂದಿನ ದಿನಗಳಲ್ಲಿ ರಾಜ್ಯಸಭೆ, ವಿಧಾನ ಪರಿಷತ್ ಹಾಗೂ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಈ ಸಮಾಜಕ್ಕೆ ನ್ಯಾಯ ಒದಗಿಸಿಕೊಂಡು ಬಂದಿದ್ದೇವೆ. ಇದನ್ನು ಮುಂದುವರಿಸುತ್ತೇವೆ. ಇದು ನಮ್ಮ ಪಕ್ಷದ ಸಿದ್ಧಾಂತ” ಎಂದು ಹೇಳಿದರು.

ಬಿಜೆಪಿಯಿಂದ ಕಾಂಗ್ರೆಸ್ ಸೇರುತ್ತಿರುವ ಕಾರ್ಯಕರ್ತರನ್ನು ಸ್ವಾಗತಿಸುತ್ತೇನೆ

“ಭಾನುವಾರ ರಾತ್ರಿ ಬಿಜೆಪಿಯ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಯಾಗಲು ಇನ್ನು ಹಲವರು ಮುಂದಾಗಿದ್ದು, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಬಿಜೆಪಿ ಅಭ್ಯರ್ಥಿ ಆಯ್ಕೆ ಗೊಂದಲದಿಂದ ಕಾಂಗ್ರೆಸ್ ಸೇರುತ್ತಿರುವವರನ್ನು ನಾವು ಪಕ್ಷಕ್ಕೆ ಸ್ವಾಗತಿಸುತ್ತಿದ್ದೇವೆ. ಇದರ ಜವಾಬ್ದಾರಿಯನ್ನು ಸ್ಥಳೀಯ ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಲ್ಲಿಕಾರ್ಜುನ್ ಅವರಿಗೆ ವಹಿಸಿದ್ದೇನೆ. ಇಲ್ಲಿ ಯಾರೂ ಆಂತಕಕ್ಕೆ ಒಳಗಾಗುವುದು ಬೇಡ. ಪಕ್ಷ ಸಿದ್ಧಾಂತದ, ನಾಯಕತ್ವದ ಮೇಲೆ ನಂಬಿಕೆ ಇಟ್ಟು ಬರುವಂತಹ ಜನರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ” ಎಂದರು.

“ನಾವು ದಾವಣಗೆರೆ ಜಿಲ್ಲೆ ಬೆಂಗಳೂರಿಗಿಂತ ಬಹಳ ಉತ್ತಮವಾಗಿ ಯೋಜಿತವಾಗಿ ರೂಪುಗೊಂಡಿರುವ ನಗರವಾಗಿದೆ. ಇದರ ಅಭಿವೃದ್ಧಿಗೆ ನೂರಾರು ಕೋಟಿ ರೂ. ಮೊತ್ತದ ಪ್ಯಾಕೇಜ್ ಗಳನ್ನು ನೀಡಲಾಗಿದೆ. ಈ ಭಾಗಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕೊಟ್ಟಿರುವ ಕೊಡುಗೆ, ಶಿಕ್ಷಣ ಸಂಸ್ಥೆ ಆ ಮೂಲಕ ಈ ಜಿಲ್ಲೆ ಶಿಕ್ಷಣ ಕೇಂದ್ರವಾಗಿ ರೂಪುಗೊಂಡಿದೆ. ಈ ಜಿಲ್ಲೆಯ ಈ ಪ್ರಗತಿಗೆ ಕೊಡುಗೆ ನೀಡಿದ್ದು ಶಾಮನೂರು ಶಿವಶಂಕರಪ್ಪ ಅವರ ಕುಟುಂಬ ಹಾಗೂ ಅವರ ಸಂಸ್ಥೆ. ಇದೆಲ್ಲವನ್ನು ಜನ ಸ್ಮರಿಸುತ್ತಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಎಲ್ಲಾ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ನೀಡಿರುವ ಕೊಡುಗೆಯನ್ನು ಜನ ಸ್ಮರಿಸುತ್ತಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಅವರು ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ. ಸ್ಥಳೀಯ ಮಾಧ್ಯಮಗಳು ನಮಗೆ ತಮ್ಮ ಮನವಿ ಸಲ್ಲಿಸಿದ್ದು, ನಾವು ಬೆಂಗಳೂರಿಗೆ ಹೋದ ಬಳಿಕ ಕೂತು ಚರ್ಚೆ ಮಾಡಿ ಈ ವಿಚಾರವಾಗಿ ಯಾವ ರೀತಿ ನೀತಿ ರೂಪಿಸಬೇಕು ಎಂದು ಚರ್ಚೆ ಮಾಡಿ ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ

ಪಕ್ಷದಲ್ಲಿ ಗೊಂದಲ ಹಾಗೂ ಬಂಡಾಯವನ್ನು ಯಾವ ರೀತಿ ಬಗೆಹರಿಸುತ್ತೀರಿ ಎಂದು ಕೇಳಿದಾಗ, “ರಾಜಕೀಯದಲ್ಲಿ ಎಲ್ಲರಿಗೂ ತಮ್ಮ ಬೇಡಿಕೆ ಕೇಳುವ ಅಧಿಕಾರವಿದೆ. ಅವರು ಕೇಳುವುದರಲ್ಲಿ ತಪ್ಪಿಲ್ಲ. ಪಕ್ಷಕ್ಕೆ ದುಡಿದಿರುತ್ತಾರೆ, ಅವರಿಗೆ ಕೇಳುವ ಹಕ್ಕಿರುತ್ತದೆ. ಇರುವುದು ಒಂದು ಸೀಟು. ನಾವು ಮೊದಲಿನಿಂದಲೂ ಎಲ್ಲರಿಗೂ ಅಧಿಕಾರ ನೀಡುತ್ತಾ ಬಂದಿದ್ದು, ಎಲ್ಲಾ ವಿಚಾರವನ್ನು ಬಗೆಹರಿಸುತ್ತೇವೆ. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಒಬ್ಬರು ಬಂಡಾಯವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ಶಾಮನೂರು ಶಿವಶಂಕರಪ್ಪ ಅವರ ಆತ್ಮೀಯರು. ಅವರು ಹಾಗೂ ಇತರರ ಜತೆ ನಾವು ಚರ್ಚೆ ಮಾಡುತ್ತಿದ್ದು, ಎಲ್ಲವನ್ನು ಸರಿ ಮಾಡುತ್ತೇವೆ” ಎಂದು ತಿಳಿಸಿದರು.

ಯಾವ ವಿಚಾರದ ಮೇಲೆ ಚುನಾವಣೆ ಮಾಡುತ್ತೀರಿ ಎಂದು ಕೇಳಿದಾಗ, “ನಾವು ಮಾಡುತ್ತಿರುವ ಅಭಿವೃದ್ಧಿ ಕೆಲಸದ ಮೇಲೆ, ಸಾಮಾಜಿಕ ಚಿಂತನೆ, ಎಲ್ಲಾ ಸಮಾಜಕ್ಕೂ ನೀಡುತ್ತಿರುವ ನ್ಯಾಯದ ಮೇಲೆ ಚುನಾವಣೆ ಮಾಡುತ್ತೇವೆ. ಇದೇ ನಮ್ಮ ಪಕ್ಷದ ಮೂಲ ಸಿದ್ಧಾಂತ” ಎಂದು ತಿಳಿಸಿದರು.

ರಾಜಕೀಯ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ (Modi) ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.

[ccc_my_favorite_select_button post_id="120397"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!