ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

If garbage disposal is obstructed, we will dump garbage in front of houses and offices: D.K. Shivakumar

ದಾವಣಗೆರೆ: “ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ ದಾಳಿ ಮಾಡಿದ್ದು, ಇದಕ್ಕೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ವಾಗ್ದಾಳಿ ನಡೆಸಿದರು.

ದಾವಣಗೆರೆಯ ಬಾಪೂಜಿ ಗೆಸ್ಟ್ ಹೌಸ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಂಗಳವಾರ ಮಾತನಾಡಿದರು.

“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶಕ್ಕೆ ಮಾದರಿಯಾಗುವ ಯೋಜನೆ ಜಾರಿಗೆ ತಂದಿದ್ದೇವೆ. ಪ್ರಧಾನಮಂತ್ರಿಗಳು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ಜಾರಿಯಾಗಿಲ್ಲ, ಕಾಂಗ್ರೆಸ್ ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂದು ಕೇಳಿದೆ. ಅಷ್ಟು ದೊಡ್ಡ ಸ್ಥಾನದಲ್ಲಿರುವವರಿಗೆ ಈ ಬಗ್ಗೆ ಮಾಹಿತಿ ಇರುತ್ತದೆ ಎಂದು ಭಾವಿಸಿದ್ದೆ. ನಮ್ಮ ಕಾರ್ಯಕ್ರಮವನ್ನು ಟೀಕೆ ಮಾಡಿದ ಅವರೇ ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡಿದ್ದಾರೆ” ಎಂದು ತಿಳಿಸಿದರು.

“ಈ ಪರಿಸ್ಥಿತಿಯಲ್ಲಿ ಬಿಜೆಪಿಯವರ ಮುಖವಾಡ ಕಳಚಿದೆ. ನಾವು ಯುವಕರಿಗೆ ಹಾಗೂ ಮಹಿಳೆಯರಿಗೆ ನೀಡುತ್ತಿರುವ ಕಾರ್ಯಕ್ರಮ ನಿಲ್ಲಿಸಲು ಮೊದಲಿನಿಂದಲೂ ದೊಡ್ಡ ಸಂಚು ರೂಪಿಸಿದ್ದಾರೆ. ನಮ್ಮ ಯೋಜನೆಗಳು ಈ ಚುನಾವಣೆಗೆ ಮಾಡಿರುವ ಯೋಜನೆಯಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿ ಕಳೆದ ಎರಡೂವರೆ ವರ್ಷದಲ್ಲಿ ಜನರಿಗಾಗಿ 1.25 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಿನಿಯೋಗಿಸಲಾಗಿದೆ. ಬಿಜೆಪಿಯವರ ಈ ಪತ್ರವು ಗ್ಯಾರಂಟಿ ಯೋಜನೆ ನಿಲ್ಲಿಸುವ ಷಡ್ಯಂತ್ರಕ್ಕೆ ಸಾಕ್ಷಿಯಾಗಿದೆ. ನಾವು ಕಾನೂನು ಅಡಿಯಲ್ಲಿ ಈ ಯೋಜನೆ ಹಣ ನೀಡುತ್ತಾ ಬಂದಿದ್ದೇವೆ. ಬಿಜೆಪಿಯ ಈ ನಡೆ, ಆಲೋಚನೆ ಖಂಡನೀಯ. ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಬಡವರ ರಕ್ಷಣೆಗೆ ಜಾರಿಗೆ ತಂದಿರುವ ಯೋಜನೆ ನಿಲ್ಲಿಸಲು ಬಿಜೆಪಿಗರು ಮುಂದಾಗಿದ್ದಾರೆ” ಎಂದು ಹರಿಹಾಯ್ದರು.

“ನಾನು ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದು, ಕಳೆದ ತಿಂಗಳವರೆಗಿನ ಕಂತನ್ನು ಬಿಡುಗಡೆ ಮಾಡಲಾಗಿದ್ದು, ಈ ತಿಂಗಳ ಕಂತನ್ನು ಚುನಾವಣೆ ಮುಗಿದ ಬಳಿಕ ಬಿಡುಗಡೆ ಮಾಡಲಾಗುವುದು. ಗ್ಯಾರಂಟಿ ಯೋಜನೆ ನಿಂತು ಹೋಗಲಿದೆ ಎಂಬ ಚಿಂತೆ ಬೇಡ. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದೇವೆ. ನಿಮ್ಮಲ್ಲಿ ಆತಂಕ ಸೃಷ್ಟಿಸುತ್ತಿರುವವರು ಈ ಚುನಾವಣೆಯಲ್ಲಿ ಗೆಲ್ಲುವುದಿಲ್ಲ, ಅವರ ಸರ್ಕಾರ ಮುಂದಿನ ದಿನಗಳಲ್ಲಿ ಬರುವುದಿಲ್ಲ” ಎಂದು ತಿಳಿಸಿದರು.

“ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಇಲ್ಲಿಯವರೆಗೂ ಶಾಂತಿಯುತವಾಗಿ ಪ್ರಚಾರ ನಡೆದಿದ್ದು, ಎಲ್ಲಾ ಪಕ್ಷದವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಸರ್ಕಾರ ಅಧಿಕಾರಿಗಳು ಬಹಳ ಶಾಂತಿಯಿಂದ ಚುನಾವಣೆ ನಡೆಸಲು ಸಹಕಾರ ನೀಡಿದ್ದಾರೆ. ನಾವು ಹಾಗೂ ಸಿಎಂ ಅವರು ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸಿ ಬೆಂಬಲ ನೀಡಿದ್ದೇವೆ. ನಮ್ಮ ಪಕ್ಷದ ಸಂಪ್ರದಾಯದಂತೆ ಎರಡು ಕ್ಷೇತ್ರಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ಮುಖಗಳಿಗೆ ಟಿಕೆಟ್ ನೀಡಿದ್ದೇವೆ. ದಾವಣಗೆರೆ ದಕ್ಷಿಣದಲ್ಲಿ ಆರಂಭದಲ್ಲಿ ಕೆಲವು ಸ್ನೇಹಿತರು ಹಾಗೂ ಮಾಧ್ಯಮಗಳು ಗೊಂದಲ ಮೂಡಿಸುವ ಪ್ರಯತ್ನ ಮಾಡಿದರು. ಕೆಲವರು ಸ್ಪರ್ಧೆಯಿಂದ ಹಿಂದೆ ಸರಿದು ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ. ಇದಕ್ಕೆ ಅನೇಕ ನಾಯಕರ ಸಹಕಾರ ಸಿಕ್ಕಿದ್ದು, ಈ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

ಬೆಂಗಳೂರಿಗಿಂತ ಉತ್ತಮವಾಗಿ ಈ ಕ್ಷೇತ್ರದಲ್ಲಿ ಕೆಲಸ ಮಾಡಲಾಗಿದೆ

“ಇಂದು ದಾವಣಗೆರೆಯಲ್ಲಿ ಕೊನೆ ದಿನದ ಪ್ರಚಾರದಲ್ಲಿ ಭಾಗವಹಿಸಿದ್ದೇನೆ. ಈ ಕ್ಷೇತ್ರದ ಜನತೆ ಬಹಳ ಅದೃಷ್ಟವಂತರು, ಪುಣ್ಯವಂತರು, ಈ ನಗರ ಕಾಂಕ್ರೀಟ್ ರಸ್ತೆ, ಪಾರ್ಕ್, ಕೆರೆಗಳು ಸ್ವಚ್ಛತೆ ವಿಚಾರದಲ್ಲಿ ಬೆಂಗಳೂರಿಗಿಂತ ಉತ್ತಮವಾಗಿದೆ. ಇದಕ್ಕೆ ಶ್ರಮಿಸಿರುವ ಎಲ್ಲಾ ಅಧಿಕಾರಿಗಳು ಹಾಗೂ ಶಾಮನೂರು ಶಿವಶಂಕರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 95 ವರ್ಷವಾದರೂ ಎಲ್ಲಾ ವರ್ಗದ ಜನರನ್ನು ಸಮಾನವಾಗಿ ಕಂಡು ಒಟ್ಟಾಗಿ ತೆಗೆದುಕೊಂಡು ಹೋಗಿದ್ದಾರೆ. ಪ್ರತಿ ಕ್ಯಾಬಿನೆಟ್ ಸಭೆಯಲ್ಲಿ ಈ ಭಾಗದ ಜನರ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ನಾವುಗಳು ಮಾಡಲಾಗದ ಕೆಲಸವನ್ನು ಈ ನಗರದಲ್ಲಿ ಶಿವಶಂಕರಪ್ಪ ಅವರು ಹಾಗೂ ಮಲ್ಲಿಕಾರ್ಜುನ ಅವರು ಮಾಡಿದ್ದಾರೆ” ಎಂದು ತಿಳಿಸಿದರು.

ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಗೆ 70% ಜನರ ಬೆಂಬಲ

“ಎಲ್ಲಾ ಧರ್ಮಗಳ ಧಾರ್ಮಿಕ ಕೇಂದ್ರಗಳಿಗೆ ಇವರು ದಾನ ಮಾಡಿ ಅಭಿವೃದ್ಧಿ ಮಾಡಿದ್ದಾರೆ. ಆಮೂಲಕ ದಾವಣಗೆರೆಗೆ ಶಕ್ತಿ ತುಂಬಿದ್ದಾರೆ. ನಾವು ಈ ಕ್ಷೇತ್ರದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಜನರನ್ನು ಸಂಪರ್ಕಿಸಿ ಸಮೀಕ್ಷೆ ಮಾಡಿಸಿದ್ದು, ಶೆ.70ಕ್ಕಿಂತ ಹೆಚ್ಚಿನ ಜನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕುವುದಾಗಿ ತಿಳಿಸಿದರು. ಶಾಮನೂರು ಅವರ ಕುಟುಂಬ ಕ್ಷೇತ್ರದ ಜನತೆಗೆ ಆರೋಗ್ಯ, ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕವಾಗಿ ಸೇವೆ ಮಾಡುತ್ತಾ ಬಂದಿದೆ. ಕೋವಿಡ್ ಸಮಯದಲ್ಲಿ ಮೊದಲ ಬಾರಿಗೆ ಉಚಿತ ಲಸಿಕೆ ಹಂಚಿಕೆ ಮಾಡಿದ್ದರು” ಎಂದರು.

“ನಾನು ವಿಶೇಷವಾಗಿ ವರ್ತಕರು ಹಾಗೂ ಅಲ್ಪಸಂಖ್ಯಾತರ ಬಳಿ ಸಮೀಕ್ಷೆ ಮಾಡಿಸಿದ್ದು, ಎಲ್ಲರೂ ಶಿವಶಂಕರಪ್ಪನವರ ಆಡಳಿತದಲ್ಲಿ ಈ ಕ್ಷೇತ್ರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದೇ, ಇದನ್ನು ಶಾಂತಿನಗರವಾಗಿ ರೂಪಿಸಿದ್ದರು. ಇಲ್ಲಿ ಯಾವುದೇ ರೀತಿಯ ಶೋಷಣೆ, ಸಮಸ್ಯೆಗೆ ಅವಕಾಶ ನೀಡಿಲ್ಲ ಎಂದು ಅಭಿಪ್ರಾಯ ತಿಳಿಸಿದ್ದಾರೆ. ಇದು ನಮಗೆ ಶಕ್ತಿ ತರುವ ವಿಚಾರವಾಗಿದೆ. ಹೊಸ ಪೀಳಿಗೆ, ಯುವಕರ ಚಿಂತನೆಯನ್ನು ಬಳಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕು” ಎಂದು ತಿಳಿಸಿದರು.

“ಪಕ್ಷದ ಎಲ್ಲಾ ಮುಖಂಡರು ಸೇರಿ ಈ ಕ್ಷೇತ್ರದಲ್ಲಿ ಒಬ್ಬ ಯುವಕ, ವಿದ್ಯಾವಂತ ಹಾಗೂ ಪ್ರಜ್ಞಾವಂತನಿಗೆ ಟಿಕೆಟ್ ನೀಡಲು ತೀರ್ಮಾನ ಮಾಡಿದ್ದೇವೆ. ಇವರ ತಾಯಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಇಲ್ಲವಾದರೂ ನಾವೇ ಬಲವಂತ ಮಾಡಿ ಸ್ಪರ್ಧೆ ಮಾಡುವಂತೆ ಮಾಡಿ ಗೆಲ್ಲಿಸಲಾಗಿದೆ. ಅವರು ಲೋಕಸಭೆಯಲ್ಲಿ ಉತ್ತಮವಾಗಿ ಕೆಲಸ ಮಾಡಿ ನಮ್ಮ ಪಕ್ಷದ ಆಸ್ತಿಯಾಗಿ ಬೆಳೆಯುತ್ತಿದ್ದಾರೆ. ಶಿವಶಂಕರಪ್ಪನವರು ಬಡವರಿಗಾಗಿ ಉಚಿತ ಸಭಾಂಗಣಗಳನ್ನು ಕಟ್ಟಿಸಿಕೊಟ್ಟಿದ್ದಾರೆ. ಯಾರು ಎಷ್ಟೇ ಶ್ರೀಮಂತರಾಗಬಹುದು. ಆದರೆ ಜನರಿಂದ ಕೊಡುಗೈ ದಾನಿ ಎಂದು ಕರೆಸಿಕೊಳ್ಳುವುದು ಬಹಳ ವಿಶೇಷವಾದದ್ದು. ಇದನ್ನು ನಮ್ಮ ಅಭ್ಯರ್ಥಿ ಮುಂದುವರಿಸಿಕೊಂಡು ಹೋಗಲಿದ್ದಾರೆ” ಎಂದು ಭರವಸೆ ನೀಡಿದರು.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]