ಬೆಂ.ಗ್ರಾ.ಜಿಲ್ಲೆ: ಭಾರತ ಸರ್ಕಾರದ ರಾಷ್ಟ್ರೀಯ ತೋಟಗಾರಿಕೆ ಮಂಡಳಿಯು (NHB) ಹಣ್ಣು, ತರಕಾರಿ, ಪುಷ್ಪ, ತೋಟದ ಬೆಳೆ ಮತ್ತು ಸಾಂಬಾರು ಬೆಳೆಗಳ ಸಮಗ್ರ ಅಭಿವೃದ್ಧಿ ಗುರಿ ಹೊಂದಿದ್ದು, ಕ್ಲಸ್ಟರ್ ಡೆವಲಪ್ ಮೆಂಟ್ ಪ್ರೋಗ್ರಾಂ (CDP) ಎಂಬ ಹೊಸ ಯೋಜನೆಯನ್ನು ರಾಜ್ಯ ಮಟ್ಟದಲ್ಲಿ ಅನುಷ್ಠಾನ ಮಾಡಲಿದ್ದು, ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಯ ಮುಖ್ಯ ಉದ್ದೇಶ
ಒಂದು ಪ್ರದೇಶದಲ್ಲಿ ಸಾಮಾನ್ಯವಾಗಿ ಬೆಳೆಯಬಹುದಾದ ಬೆಳೆಯನ್ನು ಕ್ಲಸ್ಟರ್ ರೂಪದಲ್ಲಿ ಒಗ್ಗೂಡಿಸಿ ಉತ್ಪಾದನೆ-ಸಂಸ್ಕರಣೆ- ಸಂಗ್ರಹಣೆ-ಮಾರುಕಟ್ಟೆ- ರಫ್ತು ಸರಪಳಿಯನ್ನು ಬಲಪಡಿಸುವುದಾಗಿದೆ.

ಈ ಕ್ಲಸ್ಟರ್ ಗಳಿಗೆ ಎನ್.ಹೆಚ್.ಬಿ ಯಿಂದ ಹಣಕಾಸು ನೆರವು ನೀಡಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಂಡಳಿ (ಎನ್.ಹೆಚ್.ಬಿ) ಸಿ.ಡಿ.ಪಿ ಅನ್ನು ಜಾರಿಗೆ ತರಲು ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ರಾಜ್ಯ ತೋಟಗಾರಿಕೆ ಮಿಷನ್ ಏಜೆನ್ಸಿಯು ಸಿ.ಡಿ.ಪಿ ಯೋಜನೆಯ ಅನುಷ್ಟಾನಕ್ಕೆ ಅನುಕೂಲವಾಗುವ ಜವಾಬ್ದಾರಿಯುತ ಸಂಸ್ಥೆಯಾಗಿದ್ದು, ಇದರ ಪಾತ್ರವು ಬೆಳೆಯ ಕ್ಲಸ್ಟರ್ ಆಯ್ಕೆ, ಕಾರ್ಯಗತಗೊಳಿಸುವ ಸಂಸ್ಥೆ ಗುರುತಿಸುವುದು (ಐ.ಎ), ಯೋಜನೆಯ ಮೇಲ್ವಿಚಾರಣೆ ಮತ್ತು ತಳಮಟ್ಟದ ಪರಿಶೀಲನೆಯಾಗಿರುತ್ತದೆ.
ತೋಟಗಾರಿಕೆ ಇಲಾಖೆಯಿಂದ ಈಗಾಗಲೇ ನೀಡುತ್ತಿರುವ (ಹನಿ ನೀರಾವರಿ), ಪಾಲಿಮನೆ ಮತ್ತು ಬೆಳೆಪದ್ದತಿ, ಟ್ರಾಕ್ಟರ್, ಟಿಲ್ಲರ್, INM-IPM, ಕೃಷಿಹೊಂಡ, ಪ್ಯಾಕ್ ಹೌಸ್, ಪ್ಲಾಸ್ಟಿಕ್ ಮಲ್ಚಿಂಗ್, ನೆರಳು ಮನೆ, Cold room Stagging, ಶೀಥಲ ವಾಹನ, ಎರೆಹುಳು ಗೊಬ್ಬರ ಘಟಕ, Sensor based automation unit in poly house) ಘಟಕಗಳಿಗೆ ಆಸಕ್ತ ರೈತರು ಹತ್ತಿರದ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ರವರುಗಳ ಕಛೇರಿಯಲ್ಲಿ ಹೆಸರುಗಳನ್ನು ಏ. 17 ರ ಒಳಗಾಗಿ ನೋಂದಾಯಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.