ಅಥಣಿ; ಬೆಳಗಾವಿ ಜಿಲ್ಲೆಯ (Belagavi) ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.
ಬಳ್ಳಿಗೇರಿ ಗ್ರಾಮದ ಲಾಡ್ಜ್ ಮಾಲೀಕ ಸರದಾರ ಭಗವಂತ ಕಾಂಬಳೆ ಹಾಗೂ ವಿಜಯಪುರ ಜಿಲ್ಲೆಯ ಚಡಚಣ ಮೂಲದ ಪ್ರವೀಣ ಬಸವರಾಜ ಮಲ್ದಾರಿ ಬಂಧಿತ ಆರೋಪಿಗಳು.
ಈ ಲಾಡ್ಜ್ನಲ್ಲಿ ಕಳೆದ ಹಲವು ತಿಂಗಳುಗಳಿಂದ ಗುಟ್ಟಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಅದರಂತೆ ಶುಕ್ರವಾರ ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ, ದಂಧೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಭಾಗದಲ್ಲಿರುವ ಬಳ್ಳಿಗೇರಿ ಗ್ರಾಮವು ಇತ್ತೀಚಿನ ದಿನಗಳಲ್ಲಿ ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಇಲ್ಲಿ ಅಕ್ರಮ ಸಾರಾಯಿ ಮಾರಾಟ, ಶೇಂಧಿ ಮಾರಾಟ, ತಂಬಾಕು ಉತ್ಪನ್ನಗಳ ಕಳ್ಳಸಾಗಾಣಿಕೆ ಹಾಗೂ ಮಟ್ಕಾ ದಂಧೆಗಳು ಎಗ್ಗಿಲ್ಲದೆ ನಡೆಯುತ್ತಿವೆ ಎಂಬ ಆರೋಪ ವ್ಯಾಪಕವಾಗಿದೆ. ಇದರ ಜೊತೆಗೆ ಈಗ ಹೋಟೆಲ್ ಉದ್ಯಮದ ಮರೆಯಲ್ಲಿ ವೇಶ್ಯಾವಾಟಿಕೆ ದಂಧೆಯೂ ತಲೆ ಎತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ ಬಳಿ ಸಂಭವಿಸಿದೆ.
ಮೃತನನ್ನು ಬೆಂಗಳೂರಿನ ಮಂಡೂರು ನಿವಾಸಿ ವೇಣು (45 ವರ್ಷ) ಎಂದು ಗುರುತಿಸಲಾಗಿದೆ.
ಶನಿವಾರ ತಡರಾತ್ರಿ ದೊಡ್ಡಬಳ್ಳಾಪುರ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಬಸ್ ಪೇಟೆ ಮಾರ್ಗವಾಗಿ ತೆರಳುವ ವೇಳೆ, ಕೂಗೇನಹಳ್ಳಿ ಕಾಲೋನಿ ಬಳಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿದ್ದು, ಡಿವೈಡರ್ ಮೇಲೆ ಹಾರಿ ಸಾಗಿ, ದಾಬಸ್ ಪೇಟೆ ಕಡೆಯಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ಬರುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಟೆಂಪೋ ಚಾಲಕ ವೇಣು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

