ನವದೆಹಲಿ: ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ ಬುಧವಾರ ಆರಂಭಿಕ ವಹಿವಾಟಿನಲ್ಲಿ ರೂಪಾಯಿ (Rupee) ಮೌಲ್ಯ ಕುಸಿದು ಡಾಲರ್ (Dollar) ಎದುರು 95.21 ಕ್ಕೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ, ಡಾಲರ್ ಎದುರು ರೂಪಾಯಿ 94.79 ಕ್ಕೆ ಪ್ರಾರಂಭವಾಯಿತು ಮತ್ತು ಆರಂಭಿಕ ವ್ಯವಹಾರಗಳಲ್ಲಿ 95.21 ಕ್ಕೆ ಮತ್ತಷ್ಟು ದುರ್ಬಲಗೊಂಡಿತು, ಮಂಗಳವಾರದ ಹಿಂದಿನ 94.68 ಕ್ಕೆ ಹೋಲಿಸಿದರೆ, ಈಗಾಗಲೇ 53 ಪೈಸೆ ಕುಸಿದಿತ್ತು.
ಜಾಗತಿಕ ತೈಲ ಮಾನದಂಡ ಬ್ರೆಂಟ್ ಕಚ್ಚಾ ತೈಲವು ಸ್ವಲ್ಪ ಕಡಿಮೆಯಾಗಿದ್ದು, ಭವಿಷ್ಯದ ವ್ಯಾಪಾರದಲ್ಲಿ ಪ್ರತಿ ಬ್ಯಾರೆಲ್ಗೆ ಶೇ 0.21 ರಷ್ಟು ಇಳಿಕೆಯಾಗಿ $111.03 ಕ್ಕೆ ತಲುಪಿದೆ.
ಏತನ್ಮಧ್ಯೆ, ಮೇ 1 ರಿಂದ OPEC ನಿಂದ ಹೊರಬರಲು ಯುನೈಟೆಡ್ ಅರಬ್ ಎಮಿರೇಟ್ಸ್ ತೆಗೆದುಕೊಂಡ ನಿರ್ಧಾರವು ಜಾಗತಿಕ ತೈಲ ಪೂರೈಕೆಯ ಸುತ್ತ ಅನಿಶ್ಚಿತತೆಯನ್ನು ಹೆಚ್ಚಿಸಿದೆ.
ದೇಶೀಯ ಷೇರುಪೇಟೆಯಲ್ಲಿ, ಮಾನದಂಡ ಸೂಚ್ಯಂಕಗಳು ಏರಿಕೆಯೊಂದಿಗೆ ತೆರೆದವು, ಸೆನ್ಸೆಕ್ಸ್ 358.92 ಪಾಯಿಂಟ್ಗಳ ಏರಿಕೆಯಾಗಿ 77,245.83 ಕ್ಕೆ ತಲುಪಿದೆ ಮತ್ತು ನಿಫ್ಟಿ 101.2 ಪಾಯಿಂಟ್ಗಳ ಏರಿಕೆಯಾಗಿ 24,096.90 ಕ್ಕೆ ತಲುಪಿದೆ.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಮಂಗಳವಾರ ನಿವ್ವಳ ಮಾರಾಟಗಾರರಾಗಿದ್ದು, 2,103.74 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ ಎಂದು ವಿನಿಮಯ ದತ್ತಾಂಶಗಳು ತಿಳಿಸಿವೆ.
ಪ್ರತ್ಯೇಕವಾಗಿ, ಪಶ್ಚಿಮ ಏಷ್ಯಾದ ಉದ್ವಿಗ್ನತೆಗಳ ಮಧ್ಯೆ, ಉತ್ಪಾದನೆ ಕುಂಠಿತ ಮತ್ತು ವಿದ್ಯುತ್ ವಲಯದಲ್ಲಿನ ಬಹುತೇಕ ಸಮತಟ್ಟಾದ ಬೆಳವಣಿಗೆಯಿಂದಾಗಿ, ಮಾರ್ಚ್ನಲ್ಲಿ ಭಾರತದ ಕೈಗಾರಿಕಾ ಉತ್ಪಾದನಾ ಬೆಳವಣಿಗೆಯು ಐದು ತಿಂಗಳ ಕನಿಷ್ಠ ಮಟ್ಟವಾದ ಶೇ. 4.1 ಕ್ಕೆ ಇಳಿದಿದೆ.
ಅಧಿಕೃತ ಅಂಕಿಅಂಶಗಳ ಪ್ರಕಾರ, ಕೈಗಾರಿಕಾ ಉತ್ಪಾದನಾ ಸೂಚ್ಯಂಕ (ಐಐಪಿ) ದಿಂದ ಅಳೆಯಲ್ಪಟ್ಟ ಕಾರ್ಖಾನೆ ಉತ್ಪಾದನೆಯು ಮಾರ್ಚ್ 2025 ರಲ್ಲಿ ಶೇ. 3.9 ರಷ್ಟು ವಿಸ್ತರಿಸಿದೆ.
ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯ ನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ದೊಡ್ಡಬಳ್ಳಾಪುರ: ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.
ಈ ಸಮಿತಿಯ ರಾಜ್ಯಾಧ್ಯಕ್ಷರಾಗಿ ಕರ್ನಾಟಕ ರಾಜ್ಯದ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್, ಗೌರವ ಅಧ್ಯಕ್ಷರಾದ ಶ್ರೀ ಎಲ್ ಹನುಮಂತಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಅಂತೆಯೇ ಕರ್ನಾಟಕದ 31 ಜಿಲ್ಲೆಗಳ ಮಾದಿಗ ಸಮುದಾಯದ ಮುಖಂಡರನ್ನು ನೇಮಕ ಮಾಡಲಾಗಿದೆ.
ಇದರ ಅನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಆದಿತ್ಯ ನಾಗೇಶ್ ಸಿ.ಜಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷರಾಗಿ ಎಮ್.ಆಂಜನಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.
ಸಮಿತಿ ನೀಡಿರುವ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ಹಿರಿಯರ ಮಾರ್ಗದರ್ಶನ ಮತ್ತು ಕಿರಿಯರ ಸಹಕಾರದೊಂದಿಗೆ ಕರ್ನಾಟಕ ಶಕ್ತಿ ಕೇಂದ್ರ ಸಮಿತಿ (ರಿ) ತತ್ವ ಸಿದ್ದಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸಮಿತಿಯ ಸಂಘಟನೆಗೆ ಸಹಕರಿಸಿ, ಸಮಿತಿಯನ್ನು ಬಲಪಡಿಸಲು ಶ್ರಮಿಸಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದೆ.
ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!
ದೊಡ್ಡಬಳ್ಳಾಪುರ: ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಭಿನ್ನಮತ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ, ಪಕ್ಷದ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಹೌದು ಬಿ.ಮುನೇಗೌಡ ಅವರನ್ನು ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಏಕಾಏಕಿ ಕೆಳಗಿಳಿಸಿರುವ ಕುರಿತು ತೀವ್ರ ಆಘಾತಕ್ಕೆ ಒಳಗಾಗಿದ್ದ ಜೆಡಿಎಸ್ನ ಕಾರ್ಯಕರ್ತರು, ಇಂದು ಹೊಸಹಳ್ಳಿಯ ಸಮುದಾಯ ಭವನದಲ್ಲಿ ಹುಸ್ಕೂರು ಆನಂದ್ ಅವರ ನೇತೃತ್ವದಲ್ಲಿ ಸಭೆ ಸೇರಿದ್ದರು.
ದ್ವಿಚಕ್ರ ವಾಹನ, ಆಟೋ, ಕಾರು, ಟ್ರ್ಯಾಕ್ಟರ್ ಗಳ ಮೂಲಕ ಸಭೆಗೆ ಧಾವಿಸಿದ್ದ ಐನೂರಕ್ಕೂ ಹೆಚ್ಚು ಕಾರ್ಯಕರ್ತರು, ಜೆಡಿಎಸ್ ವರಿಷ್ಠರ ನಿಲುವಿನ ವಿರುದ್ಧ ಒಕ್ಕೊರಲಿನಿಂದ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರ ಆಯ್ಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು, ಮೇ.8 ರಂದು ನಿಖಿಲ್ ಕುಮಾರಸ್ವಾಮಿ ಅವರ ದೊಡ್ಡಬಳ್ಳಾಪುರದ ಕಾರ್ಯಕ್ರಮಕ್ಕೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ, ಜೆಡಿಎಸ್ ಹಿರಿಯ ಮುಖಂಡ ಹುಸ್ಕೂರು ಆನಂದ್, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ನೂತನ ಅಧ್ಯಕ್ಷ ಅವರಿಗೆ ಅಧಿಕಾರ ನೀಡುವ ಮೂಲಕ ದೊಡ್ಡಬಳ್ಳಾಪುರ ತಾಲ್ಲೂಕಿನ ನಿಷ್ಠಾವಂತ ಜೆಡಿಎಸ್ ಕಾರ್ಯಕರ್ತರನ್ನು ನಿರಾಸೆಗೊಳಿಸಿದ್ದಾರೆ.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ ದೊಡ್ಡಬಳ್ಳಾಪುರದ ವಾಸ್ತವ ಸ್ಥಿತಿಯನ್ನು ಮನವರಿಗೆ ಮಾಡಿದ್ದರು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರೊಂದಿಗೆ ಶಾಮೀಲಾಗಿ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಪಕ್ಷವನ್ನು ಸರ್ವನಾಶ ಮಾಡಲು ಮುಂದಾಗಿದ್ದಾರೆ.
ಈ ಬೆಳವಣಿಗೆಯ ನಂತರವೂ ಬಿ.ಮುನೇಗೌಡ ಅವರೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಜೆಡಿಎಸ್ ಬೆಂಬಲಿಗರು ಇರುವುದಕ್ಕೆ ಇಂದಿನ ಸಭೆ ಸಾಕ್ಷಿಯಾಗಿದೆ. ಈ ಕುರಿತು ಕಾದು ನೋಡುತ್ತಾ, ಪಕ್ಷ ಸಂಘಟನೆ ಮಾಡುತ್ತೇವೆ. ಬಳಿಕ ತಕ್ಕ ಉತ್ತರ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ
ದೊಡ್ಡಬಳ್ಳಾಪುರ: ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷ ಸಂಘಟನೆ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ, ಜನರೊಂದಿಗೆ ಜನತಾದಳ ಕಾರ್ಯಕ್ರಮ ಹಾಗೂ ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ಮೇ.08 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ.

