ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ. ಶಿವಕುಮಾರ್

Guarantee schemes are taking off in Karnataka: DCM D.K. Shivakumar

ಬೆಂಗಳೂರು: “ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಹೇಳಿದರು.

ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಸೋಮವಾರ ಮಾತನಾಡಿದರು.

ದಾವಣಗೆರೆ ದಕ್ಷಿಣದಲ್ಲಿ ಗೆಲುವಿನ ಅಂತರ 25-30 ಸಾವಿರಕ್ಕಿಂತ ಕಡಿಮೆ ಆಗಿರುವ ಬಗ್ಗೆ ಕೇಳಿದಾಗ, “ಇಷ್ಟೆಲ್ಲಾ ಗೊಂದಲ ಆದಮೇಲೆ 25-30 ಸಾವಿರ ಅಂತರದ ಗೆಲುವು ಸಿಗುವುದಿಲ್ಲ ಎಂಬುದು ಗೊತ್ತಿತ್ತು. ಆದರೆ ಆರಾಮವಾಗಿ ಗೆಲ್ಲುತೇವೆ ಎಂದು ಗೊತ್ತಿತ್ತು. ಎಸ್ ಡಿಪಿಐನಿಂದ ಅಪಾಯವಾಗಿದೆ” ಎಂದರು.

ಎಸ್ ಡಿಪಿಐ ಮತಗಳಿಕೆಯ ಬಗ್ಗೆ ಕೇಳಿದಾಗ, “ಅದರ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಮಾತನಾಡಿದ್ದಾರೆ. ನಾನೇನು ಮಾತನಾಡಲು ಹೋಗುವುದಿಲ್ಲ. ಎಸ್ ಡಿಪಿಐ ಅನ್ನು ಹಗುರವಾಗಿ ನಾವು ಪರಿಗಣಿಸಿರಲಿಲ್ಲ. ಅದೂ ಸಹ ರಾಜಕೀಯ ಪಕ್ಷ. ಅವರು ಅಲ್ಪಸಂಖ್ಯಾತರ ಮತ ತೆಗೆದುಕೊಂಡರು” ಎಂದರು.

ಚುನಾವಣೆ ಫಲಿತಾಂಶವು ರಾಜ್ಯದಲ್ಲಿ ಏನಾದರೂ ಬದಲಾವಣೆ ತರಲಿದೆಯೇ ಎಂದು ಕೇಳಿದಾಗ, “ನಮ್ಮ ರಾಜ್ಯಕ್ಕೆ ಏನೂ ಆಗುವುದಿಲ್ಲ. ಒಂದಷ್ಟು ಜನಕ್ಕೆ ಸಂತೋಷ, ಒಂದಷ್ಟು ಜನಕ್ಕೆ ಬೇಜಾರು ಆಗಬಹುದು. ಡಬಲ್ ಎಂಜಿನ್ ಸರ್ಕಾರ ಇದ್ದಾಗಲೇ ಅವರಿಗೆ ಏನೂ ಮಾಡಲಿಲ್ಲ” ಎಂದು ಹೇಳಿದರು.

ಕೇರಳದಲ್ಲಿ ಯುಡಿಎಫ್ ಮೈತ್ರಿಯ ಗೆಲುವಿನ ಬಗ್ಗೆ ಕೇಳಿದಾಗ, “ಅಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಗೆದ್ದಿದ್ದೆವು. ಎಲ್ ಡಿಎಫ್ 10 ವರ್ಷಗಳ ಕಾಲ ಆಡಳಿತ ನಡೆಸಿದೆ. ಅದಕ್ಕೆ ಜನ ಬದಲಾವಣೆ ಬೇಕು ಎಂದು ಫಲಿತಾಂಶ ನೀಡಿದ್ದಾರೆ. ಪ್ರಚಾರಕ್ಕೂ ಹೋದಾಗಲೂ ಜನ ನಮ್ಮ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದರು” ಎಂದು ಹೇಳಿದರು.

ತಮಿಳುನಾಡಿನ ಫಲಿತಾಂಶ ಅಚ್ಚರಿ ತಂದಿದೆ

ತಮಿಳುನಾಡಿನ ಫಲಿತಾಂಶದ ಬಗ್ಗೆ ಕೇಳಿದಾಗ, “ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶ. ಅಲ್ಲಿ ಹೊಸ ಯುಗ ಪ್ರಾರಂಭವಾಗಿದೆ. ಜನರ ನಾಡಿಮಿಡಿತವನ್ನು ನಾವು ಗ್ರಹಿಸಲು ಆಗಲಿಲ್ಲ. ಸ್ಥಳೀಯ ನಾಯಕರು ಈ ಬಗ್ಗೆ ಹೇಳಿದ್ದರು. 40 ವರ್ಷಗಳ ರಾಜಕೀಯದಲ್ಲಿ ಸಂಬಂಧ, ನೆಂಟಸ್ತನ ಬಿಡಲು ಆಗುತ್ತದೆಯೇ” ಎಂದರು.

ಸ್ಟಾಲಿನ್ ಅವರ ಜೊತೆ ರಾಹುಲ್ ಗಾಂಧಿ ಅವರು ಎಲ್ಲಿಯೂ ಕಾಣಿಸಿಕೊಳ್ಳಲಿಲ್ಲ ಎನ್ನುವ ಬಗ್ಗೆ ಕೇಳಿದಾಗ, “ಆ ಬಗ್ಗೆ ಮಾತನಾಡಲು ನಾನು ಹೋಗುವುದಿಲ್ಲ. ಹೈಕಮಾಂಡ್ ತೀರ್ಮಾನ ಮಾಡಿದಂತೆ ನಾವೆಲ್ಲರೂ ಅಲ್ಲಿಗೆ ಹೋಗಿದ್ದೇವಲ್ಲ” ಎಂದರು.

ಸೆಲೆಬ್ರಿಟಿ ಅನ್ನುವ ಕಾರಣಕ್ಕೆ ಜನ ಮತ ಹಾಕಿದ್ದಾರೆಯೇ ಎಂದು ಕೇಳಿದಾಗ, “ಶೇ 30-40 ರಷ್ಟು ಮತ ಹೋಗಬಹುದು ಎಂದು ಕೊಂಡಿದ್ದೆವು. ಆದರೆ ಅದಕ್ಕೂ ಹೆಚ್ಚು ಮತ ಅವರಿಗೆ ಹೋಗಿದೆ” ಎಂದರು.

ಅಸ್ಸಾಂ ರಾಜ್ಯದಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿರುವ ಬಗ್ಗೆ ಕೇಳಿದಾಗ, “ನಾವು 50- 60 ಸ್ಥಾನ ಬರುತ್ತೇವೆ ಎಂದು ಕೊಂಡಿದ್ದೆವು. ಅಲ್ಲಿನ ಸ್ಥಳೀಯ ನಾಯಕರೂ 50 ಸ್ಥಾನಗಳನ್ನು ಮುಟ್ಟುತ್ತೇವೆ ಎಂದು ಹೇಳಿದ್ದರು” ಎಂದರು.

ಸೋಲಿಗೆ ಕಾರಣ ಏನಿರಬಹುದು ಎಂದು ಕೇಳಿದಾಗ, “ಕ್ಷೇತ್ರ ಮರುವಿಂಗಡಣೆ ಮಾಡುವಾಗ ಅಲ್ಪಸಂಖ್ಯಾತರು ಒಂದೇ ಕಡೆ ಬರುವಂತೆ ಮಾಡಿದ್ದಾರೆ. ಉಪಾಯವಾಗಿಯೇ ಇದನ್ನು ಮಾಡಲಾಗಿದೆ” ಎಂದರು.

ಪಶ್ಚಿಮ ಬಂಗಾಳದ ಬಗ್ಗೆ ಕೇಳಿದಾಗ, “ಅಲ್ಲಿ ವ್ಯವಸ್ಥಿತವಾಗಿ ಅಧಿಕಾರ ದುರುಪಯೋಗವಾಗಿದೆ. ಎಲೆಕ್ಷನ್ ಕಮಿಷನ್ ಅನ್ನು ಎಷ್ಟು ದುರುಪಯೋಗ ಪಡಿಸಿಕೊಳ್ಳಬೇಕೋ ಅಷ್ಟು ದುರುಪಯೋಗ ಮಾಡಿಕೊಂಡಿದ್ದಾರೆ. ಈ ಹಿಂದೆ ಬಹಳ ಪ್ರಯತ್ನ ಮಾಡಿದರು. ಈಗ ಎರಡು ಲಕ್ಷಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕಿದ ಕಾರಣಕ್ಕೆ ಬದಲಾವಣೆಯಾಗಿದೆ” ಎಂದರು.

ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ಎಣಿಸಿರಲಿಲ್ಲ

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಇಲ್ಲಿ ನಡೆದಿರುವುದು ಷಡ್ಯಂತ್ರ. ಅತ್ಯಂತ ಆಘಾತಕಾರಿ ವಿಚಾರ. ನಾವು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿಸುತ್ತೇವೆ. ಕಾನೂನಾತ್ಮಕವಾಗಿಯೂ ಹೋರಾಟ ಮಾಡುತ್ತೇವೆ” ಎಂದು ಹೇಳಿದರು.

“ಇದೊಂದು ಅಂತಾರಾಷ್ಟ್ರೀಯ ಸಂಚಿನ ರೀತಿ ನಡೆದಿದ. ನಮಗೆ ಅನುಮಾನ ಇದ್ದರೆ ಸುಪ್ರೀಂ ಕೋರ್ಟಿಗೆ ಹೋಗುತ್ತಿದ್ದೆವು. ಇಲ್ಲಿ ಮತ ಎಣಿಕೆ ಬಾಕ್ಸ್ ಗಳನ್ನು ತೆರೆಯಲಾಗಿದೆ. ಕೆಲವರನ್ನು ಉಪಯೋಗಿಸಿಕೊಂಡು ನಮಗೆ ಮತ ಬಿದ್ದ ಬ್ಯಾಲೆಟ್ ಪೇಪರ್ ಗಳ ಮೇಲೆ ಮತ್ತೊಂದು ಗುರುತು ಹಾಕಲಾಗಿದೆ. ಎಲ್ಲಾ ಬಂಡಲ್ ಗಳು ಮಾನ್ಯ ಎಂದು ತೀರ್ಮಾನ ಆದ ಮೇಲೆ ಈ ತಿದ್ದುಪಡಿ ಹೇಗಾಯಿತು” ಎಂದರು.

“ಇಂತಹವರಿಗೆ ಮತ ಬಿದ್ದಿದೆ ಎಂದು ಪ್ರತಿ ಮತಗಳನ್ನು ಎಲ್ಲರಿಗೂ ತೋರಿಸಿರುತ್ತಾರೆ. ಇದನ್ನು ಕ್ಯಾಮೆರಾದಲ್ಲಿಯೂ ದಾಖಲೀಕರಣ ಮಾಡಿಕೊಳ್ಳಲಾಗಿರುತ್ತದೆ. ಎಲ್ಲಾ ಎಣಿಕೆಯಾದ ಮೇಲೆ ಬಂಡಲ್ ಗಳನ್ನು ಒಳಗೆ ಹಾಕಿ ಸೀಲ್ ಮಾಡಲಾಗಿರುತ್ತದೆ. ಇದಾದ ನಂತರ ಬಂಡಲ್ ತೆಗೆದು ಮತ್ತೊಂದು ಗುರುತು ಮಾಡಲಾಗಿದೆ. ಈಗ ಅದು ಮಾತ್ರ ಎಣಿಕೆಯಾಗಬೇಕು ಎಂದು ನ್ಯಾಯಲಯದ ಮೂಲಕ ಆದೇಶ ತಂದು ಈ ರೀತಿ ಮಾಡಲಾಗಿದೆ” ಎಂದರು.

“ಇದರ ಬಗ್ಗೆ ದೊಡ್ಡ ತನಿಖೆ ಅವಶ್ಯಕತೆಯಿದೆ. ಈ ಹಿಂದೆ ಫಲಿತಾಂಶ ಸರಿಯಾಗಿತ್ತು ಎಂದು ಎಲ್ಲರೂ ಸಹಿ ಮಾಡಿದ್ದಾರೆ. ಚುನಾವಣಾ ಆಯೋಗದ ಬಳಿಯೂ ದಾಖಲೆಯಿದೆ. ಆದರೆ ಮರುಎಣಿಕೆಯಲ್ಲಿ ಬದಲಾವಣೆಯಾಗಿದೆ. ಒಬ್ಬರಿಗೆ ಮತ ಬಿದ್ದ ಕಡೆ ಇನ್ನೊಬ್ಬರಿಗೂ ಗುರುತು ಹಾಕಲಾಗಿದೆ. ಇದರ ಬಗ್ಗೆ ದೂರನ್ನು ಸಹ ನೀಡಲಾಗಿದೆ” ಎಂದರು.

“ಫಲಿತಾಂಶದ ಬಗ್ಗೆ ರಿಟರ್ನಿಂಗ್ ಆಫೀಸರ್ ನ್ಯಾಯಲಯಕ್ಕೆ ಕಳುಹಿಸಬೇಕಿತ್ತು. ಸಂಬಂಧಿಸಿದ ಅಧಿಕಾರಿ ಇದನ್ನೆಲ್ಲಾ ಗಮನಿಸಿದ್ದಾರೆ. ಇದು ಇಡೀ ರಾಜ್ಯಕ್ಕೆ ಕಳಂಕದ ಪ್ರಕರಣ” ಎಂದರು.

“ಈ ಹಿಂದೆ ನಾಯಕರೊಬ್ಬರು ಸಹಕಾರಿ ಚುನಾವಣೆ ವೇಳೆ ಮತಪತ್ರವನ್ನೇ ನುಂಗಿದ್ದರು. ಈಗ ಇಲ್ಲಿಯೂ ಹೆಚ್ಚಿನ ಗುರುತು ಮಾಡಿ, ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಅಕ್ರಮ ಎಸಗಲಾಗಿದೆ. ಗಾಯತ್ರಿ ಶಾಂತನಗೌಡ ಅವರ ವಿಚಾರವನ್ನು ನ್ಯಾಯಲಯದಲ್ಲಿ ಬ್ಲಾಕ್ ಮಾಡಿಕೊಂಡೆ ಬರುತ್ತಿದ್ದಾರೆ. ಸೌಮ್ಯ ರೆಡ್ಡಿ ಅವರು 12 ಮತಗಳ ಅಂತರದಲ್ಲಿ ಸೋತಿದ್ದಾರೆ. ಅದು ಇನ್ನು ಎಣಿಕೆಯಾಗಿಲ್ಲ. ಇದು ಹೇಗೆ ಎಣಿಕೆಯಾಗುತ್ತದೆ” ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರಗಳ ಬಳಕೆ ಮಾಡಿದರೆ ದರುಪಯೋಗವಾಗುತ್ತದೆ ಎನ್ನುವ ಜೆಡಿಎಸ್ ಆರೋಪದ ಬಗ್ಗೆ ಕೇಳಿದಾಗ, “ಅವರು ಮೊದಲು ಚುನಾವಣೆಗೆ ನಿಲ್ಲುತ್ತಾರೋ ಅಥವಾ ಬಿಜೆಪಿ ಜೊತೆ ವಿಲೀನ ಆಗುತ್ತಾರೋ ಎಂಬುದನ್ನು ಮೊದಲು ನೋಡೋಣ” ಎಂದರು.

ರಾಜಕೀಯ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ.

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="121720"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]