
ಚೆನೈ: ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ ರಾಜ್ಯ ಪಾಲರು ಟಿವಿಕೆ ಬಳಿ, 118 ಶಾಸಕರ ಪಟ್ಟಿಯ ನ್ನಿಟ್ಟುಕೊಂಡು ಮರಳಿ ಬನ್ನಿ ಎಂದಿದ್ದಾರೆ ಎಂದು ಮೂಲಗಳು ಹೇಳಿವೆ.

ಇದು ತಮಿಳುನಾಡಿನಾಧ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಇದೇ ವಿಚಾರವಾಗಿ ಖ್ಯಾತ ಚಿತ್ರ ನಟ ಕಮಲ್ ಹಾಸನ್ ಕೂಡ ಪ್ರತಿಕ್ರಿಯೆ ನೀಡಿದ್ದು, ಜನರ ತೀರ್ಪನ್ನು ಅವಮಾನಿಸಬೇಡಿ ಎಂದು ರಾಜ್ಯಪಾಲರ ನಡೆಗೆ ಗರಂ ಆಗಿದ್ದಾರೆ.
தமிழ்நாடு சட்டமன்றத் தேர்தலில் தனித்து ஆட்சியமைக்கும் அதிகாரத்தை மக்கள் எந்தக் கட்சிக்கும் வழங்கவில்லை. இந்த முடிவு தமிழ்நாட்டு வரலாற்றில் முன்னெப்போதும் நிகழாதது.
— Kamal Haasan (@ikamalhaasan) May 7, 2026
என் சகோதரர் திரு. @mkstalin அவர்கள் ‘மக்கள் தீர்ப்பை மதிக்கிறோம்; பொறுப்பான எதிர்க்கட்சியாகச் செயல்படுவோம்’ என்று…
ಈ ಕುರಿತಂತೆ ಟ್ವೀಟ್ ಮಾಡಿರುವ ಅವರ ಸಂದೇಶದ ಅನುವಾದ ಗಮನಿಸುವುದಾದರೆ, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಜನರು ಯಾವುದೇ ಪಕ್ಷಕ್ಕೆ ಏಕಾಂಗಿಯಾಗಿ ಸರ್ಕಾರ ರಚಿಸುವ ಅಧಿಕಾರ ನೀಡಿಲ್ಲ. ಈ ನಿರ್ಧಾರ ತಮಿಳುನಾಡಿನ ಇತಿಹಾಸದಲ್ಲಿ ಅಭೂತಪೂರ್ವವಾಗಿದೆ.
ನನ್ನ ಸಹೋದರ ಶ್ರೀ ಎಂಕೆ ಸ್ಟಾಲಿನ್ ಅವರು ‘ನಾವು ಜನರ ತೀರ್ಪನ್ನು ಗೌರವಿಸುತ್ತೇವೆ; ನಾವು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ’ ಎಂದು ಘೋಷಿಸಿದ್ದಾರೆ. ಈ ಅವರ ರಾಜಕೀಯ ಪ್ರಬುದ್ಧತೆಯನ್ನು ನಾನು ಗೌರವಿಸುತ್ತೇನೆ.
ಈಗ ಸಂವಿಧಾನದ ಉಸ್ತುವಾರಿ ವಹಿಸಿರುವವರು ಸಹ ಅದೇ ಕರ್ತವ್ಯವನ್ನು ಪೂರೈಸಬೇಕು. ಇದು ಬೇಡಿಕೆಯಲ್ಲ, ಆದರೆ ಅವರ ಸಾಂವಿಧಾನಿಕ ಕರ್ತವ್ಯದ ಜ್ಞಾಪನೆ ಎಂದು ರಾಜ್ಯಪಾಲರ ಹೆಸರು ಹೇಳದೆ ಸೂಕ್ಷ್ಮವಾಗಿ ಹೇಳಿದ್ದಾರೆಮ
ಶ್ರೀ ಟಿವಿಕೆ ವಿಜಯ್ ನೇತೃತ್ವದ ತಮಿಳುನಾಡು ವಿಕ್ಟರಿ ಪಾರ್ಟಿ 108 ಸ್ಥಾನಗಳನ್ನು ಗೆದ್ದಿದೆ. ಅವರನ್ನು ಸರ್ಕಾರ ರಚಿಸಲು ಆಹ್ವಾನಿಸದಿರುವುದು ತಮಿಳುನಾಡಿನ ಜನರ ಜನಾದೇಶಕ್ಕೆ ಮಾಡಿದ ಅವಮಾನ. 233 ಚುನಾಯಿತ ಸದಸ್ಯರು ಇನ್ನೂ ಅಧಿಕಾರ ವಹಿಸಿಕೊಳ್ಳಬೇಕಾಗಿದೆ. ಇದು ರಾಜ್ಯಕ್ಕೆ ಅವಮಾನ; ಪ್ರಜಾಪ್ರಭುತ್ವಕ್ಕೆ ಹಾನಿ.
ಎಸ್.ಆರ್. ಬೊಮ್ಮಾಯಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ಬಹುಮತವನ್ನು ರಾಜಭವನದಲ್ಲಿ ಅಲ್ಲ, ವಿಧಾನಸಭೆಯಲ್ಲಿ ಸಾಬೀತುಪಡಿಸಬೇಕು’ ಎಂದು ಸ್ಪಷ್ಟವಾಗಿ ಹೇಳಿದೆ.
ನಾನು ಮಾತನಾಡುತ್ತಿರುವುದು ಪಕ್ಷ ರಾಜಕೀಯದ ಬಗ್ಗೆ ಅಲ್ಲ. ಇದು ಭಾರತೀಯ ನಾಗರಿಕನ ತತ್ವಬದ್ಧ ಧ್ವನಿ. ತಮಿಳುನಾಡಿನ ಜನರ ತೀರ್ಪನ್ನು ಗೌರವಿಸಬೇಕು ಎಂದು ಕಮಲ್ ಹಾಸನ್ ಒತ್ತಾಯಿಸಿದ್ದಾರೆ.
ಪ್ರಜಾಪ್ರಭುತ್ವಕ್ಕೆ ಮಾದರಿಯಾದ ಎಂಕೆ ಸ್ಟಾಲಿನ್ ನಡೆ..!

ಚೆನ್ನೈ: ತಮ್ಮ ಸರ್ಕಾರವನ್ನು ಕೆಳಗಿಳಿಸಿ, ಅನ್ಯ ಪಕ್ಷದ ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ, ಸದಾ ಅವರನ್ನು ಕೆಳಗಿಳಿಸಲು ಸುಳ್ಳು ಪ್ರಾಚಾರ ಮಾಡುತ್ತಾ, ಸಾಂವಿಧಾನಿಕ ಬಿಕ್ಕಟ ಸೃಷ್ಟಿಸಲು ಕಾಯುವ ಪಕ್ಷಗಳ ನಡುವೆ ಎಂಕೆ ಸ್ಟಾಲಿನ್ (MK Stalin) ಮಾದರಿಯಾಗಿ ನಿಂತಿದ್ದಾರೆ.
ಹೌದು ಟಿವಿಕೆ ನಾಯಕ ಸಿ ಜೋಸೆಫ್ ವಿಜಯ್ ಸರ್ಕಾರ ರಚಿಸುವವರೆಗೆ ಡಿಎಂಕೆ ಕಾಯುತ್ತದೆ ಮತ್ತು “ಆರು ತಿಂಗಳ ಕಾಲ ತೊಂದರೆ ನೀಡದೆ ವೀಕ್ಷಿಸುತ್ತದೆ” ಎಂದು ನಿರ್ಗಮಿತ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.
ಡಿಎಂಕೆ ಶೀಘ್ರದಲ್ಲೇ ಸಾಂವಿಧಾನಿಕ ಬಿಕ್ಕಟ್ಟು ಅಥವಾ ಮತ್ತೊಂದು ಚುನಾವಣೆಯನ್ನು ಬಯಸುವುದಿಲ್ಲ ಎಂದು ಸೂಚಿಸಿರುವ ಸ್ಟಾಲಿನ್, ಹೊಸ ಸರ್ಕಾರವು ತನ್ನ ಆಡಳಿತವು ಪರಿಚಯಿಸಿದ ಯೋಜನೆಗಳನ್ನು ಮುಂದುವರಿಸುತ್ತದೆ ಮತ್ತು ಟಿವಿಕೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಎಂದು ಹೇಳಿದರು.
ಹೊಸ ಸರ್ಕಾರವು ಉಚಿತ ಉಪಹಾರ ಯೋಜನೆಯನ್ನು ಮುಂದುವರಿಸಬೇಕು, “ಶಾಲಾ ಮಕ್ಕಳಿಗೆ,” ಸೌಲಭ್ಯ ಮುಂದುವರಿಸಬೇಕೆಂದರು.
ಇದೇ ವೇಳೆ ವಿಜಯ್ ಮಹಿಳೆಯರಿಗೆ ₹2,500 ಭರವಸೆ ನೀಡಿದ್ದಾರೆ ಎಂದು ಗಮನ ಸೆಳೆದಾಗ, ಸ್ಟಾಲಿನ್ ಆ ಭರವಸೆಯನ್ನು ಉಳಿಸಿಕೊಳ್ಳುವುದು ಕಷ್ಟ ಎಂದು ಹೇಳಿದರು. “ನಾವು ಮಾಡಿದಂತೆ ಮಹಿಳೆಯರಿಗೆ ಕನಿಷ್ಠ ರೂ.1,000 ನೀಡಿ” ದು ಸಲಹೆ ನೀಡಿದರು. ಇದೇ ವೇಳೆ ಅವರ ಸರ್ಕಾರವು 2021 ರ ಪ್ರಣಾಳಿಕೆಯಲ್ಲಿ ಪಕ್ಷ ನೀಡಿದ 90% ಭರವಸೆಗಳನ್ನು ಪೂರೈಸಿದೆ ಎಂದು ಡಿಎಂಕೆ ಅಧ್ಯಕ್ಷರು ಹೇಳಿದರು.
“ಈ ಚುನಾವಣೆಯಲ್ಲಿಯೂ ನಾವು ನಮಗೆ ನೀಡಬಹುದಾದ ಭರವಸೆಗಳನ್ನು ಮಾತ್ರ ನೀಡಿದ್ದೇವೆ. ಟಿವಿಕೆ ತನ್ನ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುವುದಿಲ್ಲ (ಪಡಿತರ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಆರು ಉಚಿತ ಎಲ್ಪಿಜಿ ಸಿಲಿಂಡರ್ಗಳನ್ನು ಉಲ್ಲೇಖಿಸಿ),” ಎಂದು ಅವರು ಹೇಳಿದರು. ಇದೇ ವೇಳೆ ಭರವಸೆ ಈಡೇರಿಸಿದರೆ ನಾವು ಸಂತೋಷಪಡುತ್ತೇವೆ.”
ಡಿಎಂಕೆ ಅಧ್ಯಕ್ಷರ ನಿವಾಸಕ್ಕೆ ಬುಧವಾರ ಬೆಳಗಿನ ಜಾವದಿಂದಲೇ ಮಾಜಿ ಸಚಿವರು, ಪಕ್ಷದ ಮುಖಂಡರು, ಮೈತ್ರಿಕೂಟದ ಪಾಲುದಾರರು ಮತ್ತು ವಿವಿಧ ಕ್ಷೇತ್ರಗಳ ಹಿತೈಷಿಗಳು ಭೇಟಿ ನೀಡಿದರು. ನಂತರ ಡಿಎಂಕೆ ಪ್ರಧಾನ ಕಚೇರಿಯಾದ ಅಣ್ಣಾ ಅರಿವಲಯಂನಲ್ಲಿ ಅವರಿಗೆ ಭೇಟಿಗೆ ಅವಕಾಶ ನೀಡಲಾಯಿತು.


