ಮಾನವೀಯತೆ ಮರೆತ ವ್ಯಾಪಾರಿಗಳಿಗೆ ಜನರ ಹಿಡಿ ಶಾಪ..!

ಮುಖ್ಯಾಂಶಗಳು

ಕರೊನಾ ಸಂಕಷ್ಟದಲ್ಲಿ ದುಡ್ಡು ಮಾಡುವ ದುರಾಸೆಗಿಳಿದ ಆಸೆ ಬುರುಕ ವ್ಯಾಪಾರಿಗಳು.

ಸಾಮಗ್ರಿಗಳ ಕೊರತೆ ಇದೆ ಎಂಬ ನೆಪ / ಚಿತೆಯಲ್ಲಿ ಬೀಡಿ ಅಂಟಿಸಿಕೊಳ್ಳುವ ದುರಾಲೋಚನೆ

ಅನಿವಾರ್ಯವಾಗಿ ಖರೀದಿಸಬೇಕಾದ ಜನತೆಯಿಂದ ಹಿಡಿ ಶಾಪ 

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ಬಡವರು

ದೊಡ್ಡಬಳ್ಳಾಪುರ : ಕರೊನಾ ಸೋಂಕಿನ ಹಿನ್ನಲೆ ಘೋಷಿಸಲಾದ ಲಾಕ್ ಡೌನ್ ಕಾರಣ ತರಕಾರಿ-ದಿನಸಿ ಸಾಮಗ್ರಿಗಳ ಬೆಲೆ ಹೆಚ್ಚಳದಿಂದ ಜನ ಪರಿತಪಿಸುವಂತಾಗಿದೆ.

ತರಕಾರಿ ಹಾಗೂ ದಿನಸಿ ಸಾಮಗ್ರಿಗಳ ಕೊರತೆ ಇದೆ ಎಂಬ ನೆಪದಲ್ಲಿ ಮಾರಾಟಗಾರರು ಹಣ್ಣು,ತರಕಾರಿ, ಪಲ್ಯ, ದಿನಸಿ,ಕೋಳಿ ಸಾಮಗ್ರಿಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಮುಂದಾಗಿದ್ದಾರೆ.ಅನಿವಾರ್ಯವಾಗಿ ಜನರು ಹೆಚ್ಚಿನ ದರ ನೀಡಿ ಖರೀದಿಸಬೇಕಾದ ಸ್ಥಿತಿ ನಿರ್ಮಾಣಗೊಂಡಿದ್ದು,ಒಂದೆಡೆ ಕರೊನಾ ಹಾಗೂ ಇನ್ನೊಂದೆಡೆ ಮಾನವೀಯತೆ ಮರೆತು ದರ ಹೆಚ್ಚಳ ಮಾಡಿರುವ ವ್ಯಾಪಾರಸ್ಥರಿಗೆ ಜನ ಹಿಡಿಶಾಪ ಹಾಕತೊಡಗಿದ್ದಾರೆ.

5 – 15 ರೂ. ಬೆಲೆ ಏರಿಕೆ : ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳು ನಿರೀಕ್ಷಿತ ಮಟ್ಟದಲ್ಲಿ ಮಾರುಕಟ್ಟೆಗೆ ಬರುತ್ತಿಲ್ಲ ಎಂಬ ನೆಪವೊಡ್ಡಿ ಸಗಟು ಮಾರಾಟಗಾರ 1ರೂ ಬೆಲೆ ಏರಿಕೆ ಮಾಡಿದರೆ.ಚಿಲ್ಲರೆ ಮಾರಾಟಗಾರರು 5 ರಿಂದ 10ರೂ ಬೆಲೆ ಏರಿಕೆ ಮಾಡಿ ಜನತೆ ಸಂಕಷ್ಟದಲ್ಲಿ ಬಸವಳಿಯುತ್ತಿದ್ದರೆ,ಇಂತಹ ಸಂದರ್ಭದಲ್ಲಿ ಮಾನವೀಯತೆ ಮರೆತು ದುಡ್ಡು ಮಾಡುವ ದಂದೆಗಿಳಿದಿದ್ದಾರೆ.

ಪ್ರಸ್ತುತ ಪ್ರತಿ ಕೆಜಿಗೆ ಸಕ್ಕರೆ 4-5ರೂ,ತೊಗರಿ ಬೇಳೆ 4-8 ರೂ, ಎಣ್ಣೆ 10-15 ರೂ, ರವಾ-ಅಕ್ಕಿ ಸೇರಿದಂತೆ ಎಲ್ಲವೂ ಕೆಜಿಗೆ 5 ರಿಂದ 15 ರೂ. ಗಳವರೆಗೆ ಏರಿಕೆ ಕಂಡಿವೆ. ಇನ್ನು ತರಕಾರಿಯೂ ತುಟ್ಟಿಯಾಗಿದ್ದು, ಹಣ್ಣುಗಳ ಬೆಲೆ ದುಪ್ಪಟ್ಟಾಗಿದೆ. ಕಿತ್ತಳೆ 80 ರೂ. ಕೆಜಿ, ದ್ರಾಕ್ಷಿ 80-100 ರೂ.ಗಳು, ಕರಬೂಜ 50 ರೂ. ಗಳಿಗೆ ಒಂದು, ಕಲ್ಲಂಗಡಿ ಸಣ್ಣದು 50ರೂ. ಹಾಗೂ ದೊಡ್ಡದು 80-100 ರೂ., ಸೇಬು 80-150 ರೂ.ಗಳು, ಯಾಲಕ್ಕಿ ಬಾಳೆ ಕೆಜಿ 60 ರೂ.ಗಳಿಗೆ ಮಾರಾಟವಾಗ್ತಿವೆ.

ಸಿಗರೇಟ್ ಮಾರಾಟದಲ್ಲಿ ಸುಲಿಗೆ

ಆಹಾರ ಪದಾರ್ಥ,ಮತ್ತೊಂದೆಡೆ ಮದ್ಯ ಮಾರಾಟದಲ್ಲಿ ಬೆಲೆ ಏರಿಕೆಯಾದರೆ ಅಲ್ಲೊಂದು ಆಕ್ರಂದನ ಯಾರಿಗೂ ಕೇಳಿಸದಾಗಿದೆ.ಲಾಕ್ ಡೌನ್ ಆರಂಭವಾದಾಗಿನಿಂದ ಧೂಮಪಾನಿಗಳ ಜೇಬನ್ನು ಹಾಡು ಹಗಲೆ ಕತ್ತರಿ ಹಾಕುತ್ತಿರುವ ಸಿಗರೇಟ್ ಮಾರಾಟಗಾರರು.10 ರ ಬೆಲೆಗೆ 20,16ರ ಬೆಲೆಯ ಸಿಗರೇಟಿಗೆ 30ರೂಗೆ ಮಾರುವ ಮೂಲಕ ರಾಜಾರೋಶವಾಗಿ ಹಗಲು ಸುಲಿಯನ್ನು ನಡೆಸುತ್ತಿದ್ದರು ಧೂಮಪಾನಿಗಳು ಮಾತ್ರ ಯಾರಿಗೂ ಹೇಳಲಾಗದೆ ಮೌನ ವ್ಯಥೆ ಪಡುತ್ತಿದ್ದಾರೆ.

ಇಡೀ ದೇಶವೇ ಸಂಕಷ್ಟದಲ್ಲಿರುವಾಗ.ಚಿತೆಯಲ್ಲಿ ಬೀಡಿ ಅಂಟಿಸಿಕೊಳ್ಳುವ ದುರಾಲೋಚನೆಗೆ ಇಳಿದಿರುವ ವ್ಯಾಪಾರಿಗಳಿಗೆ ಜನರ ಶಾಪ ತಟ್ಟದೇ ಇರುವುದೆ…?

ನುಂಗಲಾರದ ತುತ್ತಾಗಿದೆ.

ಕರೊನಾ ಸೋಂಕು ತಡೆಗೆ ಹೋರಾಟ ನಡೆಸುತ್ತಿರುವಾಗಲೇ ಬೆಲೆ ಏರಿಕೆ ಎನ್ನುವುದು ಸಾರ್ವಜನಿಕರನ್ನು ಬಾಧಿಸತೊಡಗಿದೆ. ಏನೇ ಖರೀದಿಸಲು ಹೋದರೂ ಈ ಹಿಂದಿಗಿಂತಲೂ ಹೆಚ್ಚಿನ ಬೆಲೆ ನೀಡಿ ಖರೀದಿಸಬೇಕಾಗಿದೆ. ಸಂಬಂಧಪಟ್ಟವರು ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು – ರಾಜ್‌ವಡ್ಡಳ್ಳಿ,ಸಾರ್ವಜನಿಕ,ದೊಡ್ಡಬಳ್ಳಾಪುರ

ಸಾರಿಗೆ ವೆಚ್ಚ ಹೆಚ್ಚು.

ಎಲ್ಲೆಡೆ ಲಾಕ್‌ಡೌನ್ ಆಗಿರುವುದರಿಂದ ಸಂಚಾರ ಅಸ್ತವ್ಯಸ್ತವಾಗಿದ್ದು, ವಾಹನಗಳ ಓಡಾಟ ಇಲ್ಲವಾಗಿದೆ. ಇದರಿಂದ ಇರುವಷ್ಟು ದಾಸ್ತಾನು ಖಾಲಿ ಮಾಡಲಾಗುತ್ತಿದ್ದು, ಜೊತೆಯಲ್ಲಿಯೇ ಎಪಿಎಂಸಿಯಿಂದ ದಾಸ್ತಾನು ತರಿಸಿಕೊಳ್ಳಬೇಕು. ಇದಕ್ಕಾಗಿ ಸಣ್ಣ ವಾಹನದ ಮೊರೆ ಹೋಗುತ್ತಿದ್ದು, ಅವರು ಬಾಡಿಗೆ ದರವನ್ನು ಏರಿಸಿದ್ದಾರೆ. ಒಂದು ಟನ್‌ಗೆ ಸುಮಾರು 50-100 ರೂ.ಗಳವರೆಗೆ ಏರಿಕೆ ಮಾಡಿದ್ದು, ಇದರಿಂದ ಅನಿವಾರ್ಯವಾಗಿ ಬೆಲೆ ಏರಿಕೆಯಾಗುತ್ತಿದೆ. ಇದು ಕೂಡಾ ಗ್ರಾಹಕರ ಮೇಲೆ ಬೀಳುತ್ತಿದೆ – ಹೆಸರು ಹೇಳಲಿಚ್ಛಿಸದ ವ್ಯಾಪಾರಿ

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಕರವೇ ರಾಜಘಟ್ಟರವಿ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teacher) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ.

[ccc_my_favorite_select_button post_id="110310"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!