ಘೋಷಿಸಿದ 20ಲಕ್ಷ ಕೋಟಿ ಎಲ್ಲಿ..? ಮೋದಿಗೆ ಕುಟುಕಿದ ಸಿದ್ದರಾಮಯ್ಯ

ದೊಡ್ಡಬಳ್ಳಾಪುರ : ಬಹುಪ್ರಚಾರದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿದ ರೂ.20 ಲಕ್ಷ ಕೋಟಿ ಕೊರೊನಾ ಪ್ಯಾಕೇಜ್ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಟಿವಿ ಪರದೆಯಲ್ಲಿ, ಪತ್ರಿಕೆಯ ಪುಟದಲ್ಲಿ ಕಾಣುತ್ತಿದೆ, ಜನರ ಕೈಗೆ ಸಿಗುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿಯ ವಿರುದ್ಧ ಕುಟುಕಿದ್ದಾರೆ.

ಈ ಕುರಿತು ಸಾಮಾಜಿಜಾಲತಾಣದಲ್ಲಿ ಸಂದೇಶ ಹರಿಬಿಟ್ಟಿರುವ ಅವರು,ನಿರ್ಮಲಾ ಸೀತರಾಮನ್ ಅವರು 5 ಕಂತುಗಳಲ್ಲಿ ಬಿಚ್ಚಿಟ್ಟ ಪ್ಯಾಕೇಜ್ ಅಂಕಿ ಅಂಶಗಳ ಕಸರತ್ತು ‘ಹಳೆಯ ಸರಕಿಗೆ ಹೊಸ ಹೊದಿಕೆಯಾಗಿದೆ.

ಕೊರೊನಾ ಹಾವಳಿಯಿಂದ ದೇಶ ಅತ್ಯಂತ ದೊಡ್ಡ ಮಾನವೀಯತೆಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಲಕ್ಷಾಂತರ ವಲಸೆ ಕಾರ್ಮಿಕರು, ಮಹಿಳೆಯರು, ಮಕ್ಕಳು ಊರು ಸೇರಲು ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಜನರ ಪ್ರಸ್ತಾವವೇ ಇಲ್ಲದ ಪ್ಯಾಕೇಜ್ ‘ಬೆತ್ತಲೆ ಮನುಷ್ಯನ ಮುಂದೆ ಅರಸನ ಬಟ್ಟೆಗಳ ಮೆರವಣಿಗೆ’ ಅಷ್ಟೆ. ಜನರ ಜೇಬಿಗೆ ದುಡ್ಡು ಹಾಕಿ ಎಂದು ನೊಬೆಲ್ ಪ್ರಶಸ್ತಿ ವಿಜೇತ ವಿದ್ವಾಂಸರು, ಪ್ರಖ್ಯಾತ ಆರ್ಥಿಕ ತಜ್ಞರು ಹೇಳುತ್ತಿದ್ದರೆ, ನರೇಂದ್ರ ಮೋದಿ ಅವರು ಖಾಲಿಯಾಗಿರುವ ಸರ್ಕಾರದ ಜೇಬು ತುಂಬಲು ಹೊರಟಿದ್ದಾರೆ. ಇದರಿಂದ ಬಡವರಿಗೆ, ಹಸಿದ ಹೊಟ್ಟೆಗಳಿಗೆ, ಕಾರ್ಮಿಕರಿಗೆ, ರೈತರಿಗೆ, ಸಣ್ಣ ವ್ಯಾಪಾರಿಗಳಿಗೆ ಸಿಕ್ಕಿದೆಷ್ಟು?

ದೇಶದಲ್ಲಿ ಗುರುತಿಸಲಾದ 13 ಕೋಟಿ ಬಡವರಿಗೆ ಮಾಸಿಕ ರೂ.5000 ನೀಡಿದರೆ ಆಗುವ ವೆಚ್ಚ ರೂ.65,000 ಕೋಟಿ. ರೂ.7000 ನೀಡಿದರೆ ಆಗುವ ವೆಚ್ಚ 97,500 ಕೋಟಿ. ಇಷ್ಟು ಕೊಟ್ಟು ಪುಣ್ಯ ಕಟ್ಕೊಳ್ಳಿ ಎಂದು ನಮ್ಮ ಪಕ್ಷ ಹೇಳುತ್ತಲೇ ಇದೆ. ಇಷ್ಟನ್ನೂ ನೀಡಲು ಸಾಧ್ಯ ಇಲ್ಲದಷ್ಟು‌ ಸರ್ಕಾರ ದಿವಾಳಿ‌ ಆಗಿದೆಯೇ? ನರೇಗಾ ಯೋಜನೆಯ ಕೆಲಸದ ದಿನಗಳನ್ನು 200ಕ್ಕೆ ಹೆಚ್ಚಿಸಿ ಮತ್ತು ಈ ಯೋಜನೆಯನ್ನು ನಗರ ಪ್ರದೇಶದ ಬಡವರಿಗೂ ವಿಸ್ತರಿಸಿ ಎಂದು ಪ್ರಾರಂಭದಿಂದಲೇ ನಮ್ಮ ಪಕ್ಷ ಹೇಳುತ್ತಲೇ ಬಂದಿದೆ. ಲಕ್ಷ ಕೋಟಿಗಳ ಪ್ಯಾಕೇಜ್ ನಲ್ಲಿ ಇದರ ಪ್ರಸ್ತಾವವೇ ಇಲ್ಲ.

ಮುಂಗಾರು ಬೆಳೆಯ ಸಿದ್ದತೆಯಲ್ಲಿರುವ ರೈತರು ಈಗಾಗಲೇ ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ ದಿವಾಳಿಯಾಗಿದ್ದಾರೆ. ಅವರ ಹಳೆ ಸಾಲ ಮನ್ನಾ ಮಾಡಿ, ರಸಗೊಬ್ಬರ, ಕ್ರಿಮಿನಾಶಕ ಮತ್ತು ಕೃಷಿ ಸಲಕರಣೆಗಳ ಮೇಲಿನ ಜಿಎಸ್ ಟಿ ರದ್ದುಪಡಿಸಿ ಎಂಬ ಬೇಡಿಕೆ ಬಗ್ಗೆ ಪ್ರಧಾನಿಗಳು ಮೌನವಾಗಿದ್ದಾರೆ. 

ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಆರ್ಥಿಕ ನೆರವಿನ ಪ್ಯಾಕೇಜ್ ಮೇಲ್ನೋಟಕ್ಕೆ ಬಂಪರ್ ಕೊಡುಗೆ ಎಂದು ಅನಿಸಿದರೂ ಒಳಗಿನ ಗುಟ್ಟು ಬೇರೆ ಇದೆ. ದೇಶದಲ್ಲಿರುವ 6.2 ಲಕ್ಷ ಕೋಟಿ ಕಿರುಉದ್ದಿಮೆಗಳಲ್ಲಿ 45 ಲಕ್ಷ ದೊಡ್ಡಗಾತ್ರದ ಕಿರುಉದ್ದಿಮೆಗಳಿಗೆ ಮಾತ್ರ ಈ ನೆರವು ಲಭ್ಯ. ಉಳಿದವರ ಗತಿ ಏನು? ಸಣ್ಣ ಕೈಗಾರಿಕೆಗಳಿಗೆ ಸಾಲ, ಸಾಲಕ್ಕೆ ಖಾತರಿ ನೀಡಿಕೆಯ ಬಗ್ಗೆ ಪ್ಯಾಕೇಜ್ ಹೇಳಿದೆ.

ಉತ್ಪಾದನೆ ಇಲ್ಲದೆ ಖಾಲಿ ಬಿದ್ದಿರುವ ಕೈಗಾರಿಕೆಗಳಿಗೆ ಸಾಲ‌ಮಾಡುವ ಶಕ್ತಿ ಎಲ್ಲಿದೆ? ಕಾರ್ಮಿಕರ ಸಂಬಳ ನೀಡಿಕೆಗೆ ನೆರವು, ಹಳೆ ಸಾಲದ ಮೇಲಿನ ಬಡ್ಡಿ ಮನ್ನಾ ಮೊದಲಾದ ನೆರವಿನಿಂದ ಮಾತ್ರ ಸಣ್ಣ ಕೈಗಾರಿಕೆಗಳ ರಕ್ಷಣೆ ಸಾಧ್ಯ.

ದೇಶದಲ್ಲಿ ಜನ ರಾಜ್ಯದಿಂದ ರಾಜ್ಯಕ್ಕೆ, ಜಿಲ್ಲೆಯಿಂದ ಜಿಲ್ಲೆಗೆ ಹೋಗಲು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಆಕಾಶದಲ್ಲಿ ವಿಮಾನ ಸಂಚಾರ ವ್ಯವಸ್ಥೆಯನ್ನು ಸುಲಭ ಮಾಡಿ ದುಡ್ಡು ಮಾಡುವ ಯೋಚನೆಯಲ್ಲಿದೆ. ಇದು ಹಸಿದ ಹೊಟ್ಟೆಗಳ ಅಪಹಾಸ್ಯವಲ್ಲದೆ ಇನ್ನೇನು?

ದೇಶಪ್ರೇಮದ ವಾರಸುದಾರರು ತಾವೆಂದು‌ ಸಾರಿಸಾರಿ ಹೇಳುತ್ತಿರುವ ನರೇಂದ್ರ ಮೋದಿ ಅವರು ಈಗ ರಕ್ಷಣಾ ಇಲಾಖೆಯ FDI ಮಿತಿಯನ್ನು ಶೇ 74ಕ್ಕೆ ಹೆಚ್ಚಿಸುವ ಮೂಲಕ ದೇಶದ ಭದ್ರತೆಯ ಜೊತೆ ರಾಜಿ ಮಾಡಲು ಹೊರಟಿದ್ದಾರೆ. ಇದೇನಾ ದೇಶ ಪ್ರೇಮ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]