ಕರೊನಾ ನಡುವೆಯೇ ಮಿಡತೆ ಕೀಟಗಳ ಆತಂಕ

ಕಲಬುರಗಿ : ಮಹಾರಾಷ್ಟ್ರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಲಸೆಗಾರ ಬೆಳೆನಾಶಕ ಮರುಭೂಮಿ ಮಿಡತೆ ಕೀಟ  (Desert Locust) ಗಳ ಹಾವಳಿ ಕಂಡುಬಂದಿದ್ದು, ಯಾವುದೇ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯಲ್ಲಿ  ಈ ಮಿಡತೆ ಕೀಟಗಳು ಬರುವ ಸಂಭವ ಇರುತ್ತದೆ. ಈ ಮಿಡತೆ ಕೀಟಗಳ ಹಾವಳಿ ಹತೋಟಿಗಾಗಿ ಜಿಲ್ಲೆಯ  ರೈತರು ವಿವಿಧ ಹಂತದಲ್ಲಿ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಲು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸುಗೂರ ಅವರು ಸಲಹೆ ನೀಡಿದ್ದಾರೆ. 

ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆ ಕಾಲದ ಬೆಳೆಗಳು, ಕಟಾವು ಹಂತದಲ್ಲಿರುವ ತೋಟಗಾರಿಕೆ ಹಾಗೂ ಅರಣ್ಯೀಕರಣದ ಗಿಡಮರಗಳು ಈ ಮಿಡತೆ ಕೀಟಗಳಿಂದ ಹಾನಿಗೊಳಗಾಗಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಿಡತೆ ಕೀಟಗಳ ನಿರ್ವಹಣಾ ಕ್ರಮಗಳು ಇಂತಿವೆ.  

ತತ್ತಿಗಳನ್ನು ನಾಶಪಡಿಸುವುದು: ಮಿಡತೆಗಳು ತತ್ತಿಗಳಿರಿಸಿದ ಜಾಗವನ್ನು ಗುರುತಿಸಿ ಅವುಗಳ ಸುತ್ತಲು ಕಂದಕ (2 ಅಡಿ ಅಗಲ  ಮತ್ತು 2 ಅಡಿ ಆಳ) ವನ್ನು ನಿರ್ಮಿಸಿ ತತ್ತಿಯಿಂದ ಬರುವ ಮರಿಗಳನ್ನು ಆ ಕಂದಕಗಳಲ್ಲಿ ಬಿಡುವಂತೆ ಮಾಡುವುದು. ಅಲ್ಲದೆ ತತ್ತಿಗಳನ್ನು ನಾಶಪಡಿಸಲು ಮೇಲಿಂದ ಮೇಲೆ ಉಳುಮೆ ಮಾಡಬೇಕು.  ರೈತರು ಮಿಡತೆ ಕಾಣಿಸಿಕೊಂಡಾಗ ತಗಡಿನ ಡಬ್ಬಿ, ಡ್ರಮ್ಮು, ತಟ್ಟೆ ಇವುಗಳನ್ನು ಬಾರಿಸುವ ಮೂಲಕ ಭಾರಿ ಶಬ್ದವನ್ನು ಹುಟ್ಟಿಸುವುದು. ರೇಡಿಯೋ ಅಥವಾ ಎಲೆಕ್ಟ್ರಾನಿಕ್ ಸೌಂಡ್‍ಗಳನ್ನು ಹಚ್ಚುವುದು. ಇದರಿಂದ ಮಿಡತೆ ತಂಡಗಳು ಭೂಮಿಯ ಮೇಲಿನ ಬೆಳೆಗಳಿಗೆ ಬರುವುದಿಲ್ಲ. 

ಬೇವು ಆಧಾರಿತ ಸಿಂಪರಣೆ ಮಾಡುವುದು. (0.15% ಇ.ಸಿ) 45 ಮಿ.ಲಿ. ಅನ್ನು 15 ಲೀ. ನೀರಿನಲ್ಲಿ ಬೆರೆಸಿ ಹಾಲಿ ಬೆಳೆಗಳಿಗೆ ಹಾಗೂ ಸುತ್ತಮುತ್ತ ಗಿಡಗಳಿಗೆ ಸಿಂಪಡಿಸುವುದು. ತೇವಾಂಶ ಹೊಂದಿದ ಮರಳು ಮಣ್ಣಿನಲ್ಲಿ ಮಿಡತೆಗಳು ತತ್ತಿ ಇಟ್ಟಿರುವ ಜಾಗಗಳನ್ನು ಗುರುತಿಸಿ, ರಾಸಾಯನಿಕಗಳನ್ನು ಸಿಂಪಡಿಸಿ ತತ್ತಿ ಹಂತದಲ್ಲಿ ನಾಶಪಡಿಸುವುದು. ಬೆಳೆದು ನಿಂತ ಬೆಳೆಗೆ ಕ್ವಿನಾಲ್‍ಪಾಸ್ 1.5 % ಡಿ.ಪಿ. ಅಥವಾ ಕ್ಲೋರಿಪೈರಿಪಾಸ್ 1.5% ಡಿ.ಪಿ. ಅಥವಾ ಮಿಥೈಲ್ ಪ್ಯಾರಾಥೀಯಾನ್ 2% ಡಿ.ಪಿ. ಪುಡಿಯನ್ನು ಪ್ರತಿ ಹೇಕ್ಟೇರ್‍ಗೆ 25 ಕೆ.ಜಿ. ಯಂತೆ ಧೂಳಿಕರಿಸುವುದು.

ರೈತರು ಕಡ್ಡಾಯವಾಗಿ ಮೈ ತುಂಬಾ ಬಟ್ಟೆ ಧರಿಸಿ, ಮುಖಕ್ಕೆ ಮಾಸ್ಕ್, ಕೈ ಚೀಲಗಳು, ಟೋಪಿ ಹಾಗೂ ಕನ್ನಡಕವನ್ನು ಧರಿಸಿ ಬೆಳಗಿನ 7 ರಿಂದ 10 ಗಂಟೆಯೊಳಗಾಗಿ 500 ಮಿ.ಲಿ. ಡಿ.ಡಿ.ವಿ.ಪಿ. 76 % ಇ.ಸಿ. ಯನ್ನು 1500 ಲೀ. ನೀರಿಗೆ ಬೇರೆಸಿ ಅಥವಾ 100 ಕೆ.ಜಿ. ಮರಳು ಮಣ್ಣಿನ ಜೊತೆ ಬೆರೆಸಿ ಎರಚುವುದು. ಈ ಪುಡಿಯನ್ನು ಚೆಲ್ಲಿದ ನಂತರ ಕೂಡಲೇ ಹೊಲದಿಂದ ಹೊರಬರುವುದು. ಬಲಿಯುತ್ತಿರುವ ಮಿಡತೆಗಳು ಹೊಲದಲ್ಲಿ ಓಡಾಡುವಾಗ ಒಣಹುಲ್ಲು, ಕಸಕಡ್ಡಿಗಳಿಗೆ ಬೆಂಕಿ ಹಚ್ಚಿ ಸುಡುವುದು. ಸಾಗುವಳಿ ರಹಿತ ಜಮೀನಿನಲ್ಲಿ ಮಿಡತೆಗಳು ಗುಂಪು-ಗುಂಪಾಗಿ ಹರಡಿದಾಗ ಕ್ವಿನಾಲ್‍ಪಾಸ್ 1.5 % ಡಿ.ಪಿ. ಅಥವಾ ಕ್ಲೋರಿಪೈರಿಪಾಸ್ 1.5% ಡಿ.ಪಿ, ಅಥವಾ ಮಿಥೈಲ್ ಪ್ಯಾರಾಥೀಯಾನ್ 2% ಡಿ.ಪಿ. ಪುಡಿಯನ್ನು ಪ್ರತಿ ಹೇಕ್ಟೇರ್‍ಗೆ 25 ಕೆ.ಜಿ. ಯಂತೆ ಧೂಳಿಕರಿಸುವುದು ಅಥವಾ ಮೆಲಾಥಿಯಾ 96% ಯು.ಎಲ್.ವಿ.  1 ಲೀ. ಪ್ರತಿ ಹೇಕ್ಟರ್‍ಗೆ ಯು.ಎಲ್.ವಿ. ಸಿಂಪರಣೆ ಯಂತ್ರದ ಮೂಲಕ ನೇರವಾಗಿ ಮಿಡತೆಗಳ ಮೇಲೆ ಸಿಂಪಡಿಸುವುದು.

ಉತ್ತರ ಭಾರತದಲ್ಲಿನ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಮಿಡತೆಯ ಹಾವಳಿ ಉಲ್ಬಣವಾಗಿದ್ದು, ಪೂರ್ವ ಮಹಾರಾಷ್ಟ್ರದ ಭಾಗದಲ್ಲಿಯೂ ಹರಡುತ್ತಿದೆ. ಪಂಜಾಬ್ ಹಾಗೂ ಗುಜರಾತ್ ರೈತರಿಗೂ ಕೂಡ ಮಿಡತೆಗಳ ಹಾವಳಿ ಬಗ್ಗೆ ಎಚ್ಚರಿಸಲಾಗಿದೆ. ಈ ಮಿಡತೆಗಳು ಅಲೆ ಅಲೆಯಾಗಿ ಗುಂಪಿನಲ್ಲಿ ಒಂದು ದಿನದಲ್ಲಿ 150 ಕಿ.ಮೀ. ದೂರ ಗಾಳಿಯ ದಿಕ್ಕಿನಲ್ಲಿ ಹಾರಬಲ್ಲವು. ಒಂದು ಮಿಡತೆಯು ತನ್ನಷ್ಟೆ ತೂಕದ ಆಹಾರವನ್ನು ತಿನ್ನಬಲ್ಲವು. ಎಫ್.ಪಿ.ಓ. ವರದಿ ಪ್ರಕಾರ ಒಂದು ಚ.ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡ ಈ ಮಿಡತೆಗಳ ಸೈನ್ಯ (ಸುಮಾರು 40 ಮಿಲಿಯನ್) ಒಂದು ದಿನದಲ್ಲಿ 35,000 ಸಾವಿರ ಜನರು ತಿನ್ನುವಷ್ಟು ಅಹಾರವನ್ನು ತಿನ್ನಬಲ್ಲವು. 

ಈ ಮಿಡತೆಗಳು ಬಹುಭಕ್ಷಕ ಕೀಟಗಳಾಗಿದ್ದು, ಯಾವುದೇ ಗಿಡದ ಅಥವಾ ಬೆಳೆಯ ಎಲೆಗಳು ಹೂ, ಹಣ್ಣು, ಬೀಜ, ಮರದ ತೊಗಟೆ ಹಾಗೂ ಬೆಳೆಯ ಕುಡಿಗಳನ್ನು ನಿರ್ದಾಕ್ಷಿಣ್ಯವಾಗಿ ಭಕ್ಷಿಸುತ್ತವೆ. ಪ್ರಪಂಚದಲ್ಲಿ ಮಿಡತೆಗಳಲ್ಲಿ 10 ಪ್ರಬೇದಗಳಿದು,್ದ ಭಾರತದಲ್ಲಿ ನಾಲ್ಕು ಪ್ರಭೇದಗಳಿರುತ್ತದೆ. ಹೆಣ್ಣು ಮಿಡತೆಯು ತೇವಾಂಶ ಹೊಂದಿರುವ ಮರಳು ಮಿಶ್ರಿತ ಮಣ್ಣಿನಲ್ಲಿ ತನ್ನ ಜೀವಾವಧಿಯಲ್ಲಿ ವಾರಕ್ಕೊಮ್ಮೆ 1000 ತತ್ತಿಗಳನ್ನು ಪ್ರತಿ ಚದುರ ಅಡಿಗೆ ಇಡುತ್ತಿದ್ದು, 3 ಸಲ ಈ ಆವೃತ್ತಿ ಇರುತ್ತದೆ. ಪ್ರಭುದ್ಧತೆ ಮಿಡತೆಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ 12-16 ಕಿ. ಮೀ. ವೇಗದಲ್ಲಿ ಹಾರುತ್ತವೆ.

ಮಿಡತೆಗಳು ಕಡಿಮೆ ಸಂಖ್ಯೆಯಲ್ಲಿದ್ದಾಗ ಅಷ್ಟೇನು ಹಾನಿ ಮಾಡುವುದಿಲ್ಲ. ಆದರೆ ಅನೂಕೂಲಕರ ಹವಾಮಾನ ಸಂದರ್ಭದಲ್ಲಿ ಅಂದರೆ ಬೇಸಿಗೆ ನಡುವೆ ಸರಣಿ ಮಳೆಗಳು ಬಂದಾಗ ತೇವಾಂಶವುಳ್ಳ ಪರಿಸರ ಇವುಗಳಿಗೆ ಹುಟ್ಟಿಕೊಳ್ಳಲು ಪೂರಕ ಪರಿಸ್ಥಿತಿ ಎನಿಸುತ್ತದೆ.  ಪ್ರಸ್ತುತ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಾನಾ ಬಗೆಯ ಚಂಡಮಾರುತಗಳು ಈ ಮಿಡತೆಗಳ ಹುಟ್ಟಿಗೆ ಪೂರಕವಾದ ವಾತಾವರಣ ಸೃಷ್ಟಿಸಿವೆ ಎನ್ನುವುದು ತಜ್ಞರ ಅಭಿಪ್ರಾಯ. ಈ ಸಂದರ್ಭದಲ್ಲಿನ ಅಪರಿಮಿತ ಸಂಖ್ಯೆಯಲ್ಲಿ ಹುಟ್ಟಿಕೊಂಡು ತಾವು ಹುಟ್ಟಿಕೊಂಡ ಪ್ರದೇಶದಿಂದ ಕೋಟ್ಯಾಂತರ ಸಂಖ್ಯೆಯಲ್ಲಿ ಚಕ್ರವಾಗಿ ಹರಡುತ್ತಾ ಕೆಳಗಿಳಿದು ಹೊಲದಲ್ಲಿರುವ ಬೆಳೆಗಳನ್ನು ಕ್ಷಣಾರ್ಧದಲ್ಲಿ  ತಿಂದು ದ್ವಂಸ ಮಾಡುತ್ತಾ ಅಲ್ಲಿಯೇ ಸಂತ್ತಾನೋತ್ಪತ್ತಿ ಮಾಡಿ ಮತ್ತಷ್ಟು ಸಂಖ್ಯೆಯಲ್ಲಿ ಬೆಳೆಯುತ್ತಾ ಹೋಗುತ್ತವೆ.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!