ಕರೊನಾ ನಡುವೆಯೇ ಮಿಡತೆ ಕೀಟಗಳ ಆತಂಕ

ಕಲಬುರಗಿ : ಮಹಾರಾಷ್ಟ್ರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಲಸೆಗಾರ ಬೆಳೆನಾಶಕ ಮರುಭೂಮಿ ಮಿಡತೆ ಕೀಟ  (Desert Locust) ಗಳ ಹಾವಳಿ ಕಂಡುಬಂದಿದ್ದು, ಯಾವುದೇ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯಲ್ಲಿ  ಈ ಮಿಡತೆ ಕೀಟಗಳು ಬರುವ ಸಂಭವ ಇರುತ್ತದೆ. ಈ ಮಿಡತೆ ಕೀಟಗಳ ಹಾವಳಿ ಹತೋಟಿಗಾಗಿ ಜಿಲ್ಲೆಯ  ರೈತರು ವಿವಿಧ ಹಂತದಲ್ಲಿ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಲು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸುಗೂರ ಅವರು ಸಲಹೆ ನೀಡಿದ್ದಾರೆ. 

ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆ ಕಾಲದ ಬೆಳೆಗಳು, ಕಟಾವು ಹಂತದಲ್ಲಿರುವ ತೋಟಗಾರಿಕೆ ಹಾಗೂ ಅರಣ್ಯೀಕರಣದ ಗಿಡಮರಗಳು ಈ ಮಿಡತೆ ಕೀಟಗಳಿಂದ ಹಾನಿಗೊಳಗಾಗಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಿಡತೆ ಕೀಟಗಳ ನಿರ್ವಹಣಾ ಕ್ರಮಗಳು ಇಂತಿವೆ.  

ತತ್ತಿಗಳನ್ನು ನಾಶಪಡಿಸುವುದು: ಮಿಡತೆಗಳು ತತ್ತಿಗಳಿರಿಸಿದ ಜಾಗವನ್ನು ಗುರುತಿಸಿ ಅವುಗಳ ಸುತ್ತಲು ಕಂದಕ (2 ಅಡಿ ಅಗಲ  ಮತ್ತು 2 ಅಡಿ ಆಳ) ವನ್ನು ನಿರ್ಮಿಸಿ ತತ್ತಿಯಿಂದ ಬರುವ ಮರಿಗಳನ್ನು ಆ ಕಂದಕಗಳಲ್ಲಿ ಬಿಡುವಂತೆ ಮಾಡುವುದು. ಅಲ್ಲದೆ ತತ್ತಿಗಳನ್ನು ನಾಶಪಡಿಸಲು ಮೇಲಿಂದ ಮೇಲೆ ಉಳುಮೆ ಮಾಡಬೇಕು.  ರೈತರು ಮಿಡತೆ ಕಾಣಿಸಿಕೊಂಡಾಗ ತಗಡಿನ ಡಬ್ಬಿ, ಡ್ರಮ್ಮು, ತಟ್ಟೆ ಇವುಗಳನ್ನು ಬಾರಿಸುವ ಮೂಲಕ ಭಾರಿ ಶಬ್ದವನ್ನು ಹುಟ್ಟಿಸುವುದು. ರೇಡಿಯೋ ಅಥವಾ ಎಲೆಕ್ಟ್ರಾನಿಕ್ ಸೌಂಡ್‍ಗಳನ್ನು ಹಚ್ಚುವುದು. ಇದರಿಂದ ಮಿಡತೆ ತಂಡಗಳು ಭೂಮಿಯ ಮೇಲಿನ ಬೆಳೆಗಳಿಗೆ ಬರುವುದಿಲ್ಲ. 

ಬೇವು ಆಧಾರಿತ ಸಿಂಪರಣೆ ಮಾಡುವುದು. (0.15% ಇ.ಸಿ) 45 ಮಿ.ಲಿ. ಅನ್ನು 15 ಲೀ. ನೀರಿನಲ್ಲಿ ಬೆರೆಸಿ ಹಾಲಿ ಬೆಳೆಗಳಿಗೆ ಹಾಗೂ ಸುತ್ತಮುತ್ತ ಗಿಡಗಳಿಗೆ ಸಿಂಪಡಿಸುವುದು. ತೇವಾಂಶ ಹೊಂದಿದ ಮರಳು ಮಣ್ಣಿನಲ್ಲಿ ಮಿಡತೆಗಳು ತತ್ತಿ ಇಟ್ಟಿರುವ ಜಾಗಗಳನ್ನು ಗುರುತಿಸಿ, ರಾಸಾಯನಿಕಗಳನ್ನು ಸಿಂಪಡಿಸಿ ತತ್ತಿ ಹಂತದಲ್ಲಿ ನಾಶಪಡಿಸುವುದು. ಬೆಳೆದು ನಿಂತ ಬೆಳೆಗೆ ಕ್ವಿನಾಲ್‍ಪಾಸ್ 1.5 % ಡಿ.ಪಿ. ಅಥವಾ ಕ್ಲೋರಿಪೈರಿಪಾಸ್ 1.5% ಡಿ.ಪಿ. ಅಥವಾ ಮಿಥೈಲ್ ಪ್ಯಾರಾಥೀಯಾನ್ 2% ಡಿ.ಪಿ. ಪುಡಿಯನ್ನು ಪ್ರತಿ ಹೇಕ್ಟೇರ್‍ಗೆ 25 ಕೆ.ಜಿ. ಯಂತೆ ಧೂಳಿಕರಿಸುವುದು.

ರೈತರು ಕಡ್ಡಾಯವಾಗಿ ಮೈ ತುಂಬಾ ಬಟ್ಟೆ ಧರಿಸಿ, ಮುಖಕ್ಕೆ ಮಾಸ್ಕ್, ಕೈ ಚೀಲಗಳು, ಟೋಪಿ ಹಾಗೂ ಕನ್ನಡಕವನ್ನು ಧರಿಸಿ ಬೆಳಗಿನ 7 ರಿಂದ 10 ಗಂಟೆಯೊಳಗಾಗಿ 500 ಮಿ.ಲಿ. ಡಿ.ಡಿ.ವಿ.ಪಿ. 76 % ಇ.ಸಿ. ಯನ್ನು 1500 ಲೀ. ನೀರಿಗೆ ಬೇರೆಸಿ ಅಥವಾ 100 ಕೆ.ಜಿ. ಮರಳು ಮಣ್ಣಿನ ಜೊತೆ ಬೆರೆಸಿ ಎರಚುವುದು. ಈ ಪುಡಿಯನ್ನು ಚೆಲ್ಲಿದ ನಂತರ ಕೂಡಲೇ ಹೊಲದಿಂದ ಹೊರಬರುವುದು. ಬಲಿಯುತ್ತಿರುವ ಮಿಡತೆಗಳು ಹೊಲದಲ್ಲಿ ಓಡಾಡುವಾಗ ಒಣಹುಲ್ಲು, ಕಸಕಡ್ಡಿಗಳಿಗೆ ಬೆಂಕಿ ಹಚ್ಚಿ ಸುಡುವುದು. ಸಾಗುವಳಿ ರಹಿತ ಜಮೀನಿನಲ್ಲಿ ಮಿಡತೆಗಳು ಗುಂಪು-ಗುಂಪಾಗಿ ಹರಡಿದಾಗ ಕ್ವಿನಾಲ್‍ಪಾಸ್ 1.5 % ಡಿ.ಪಿ. ಅಥವಾ ಕ್ಲೋರಿಪೈರಿಪಾಸ್ 1.5% ಡಿ.ಪಿ, ಅಥವಾ ಮಿಥೈಲ್ ಪ್ಯಾರಾಥೀಯಾನ್ 2% ಡಿ.ಪಿ. ಪುಡಿಯನ್ನು ಪ್ರತಿ ಹೇಕ್ಟೇರ್‍ಗೆ 25 ಕೆ.ಜಿ. ಯಂತೆ ಧೂಳಿಕರಿಸುವುದು ಅಥವಾ ಮೆಲಾಥಿಯಾ 96% ಯು.ಎಲ್.ವಿ.  1 ಲೀ. ಪ್ರತಿ ಹೇಕ್ಟರ್‍ಗೆ ಯು.ಎಲ್.ವಿ. ಸಿಂಪರಣೆ ಯಂತ್ರದ ಮೂಲಕ ನೇರವಾಗಿ ಮಿಡತೆಗಳ ಮೇಲೆ ಸಿಂಪಡಿಸುವುದು.

ಉತ್ತರ ಭಾರತದಲ್ಲಿನ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಮಿಡತೆಯ ಹಾವಳಿ ಉಲ್ಬಣವಾಗಿದ್ದು, ಪೂರ್ವ ಮಹಾರಾಷ್ಟ್ರದ ಭಾಗದಲ್ಲಿಯೂ ಹರಡುತ್ತಿದೆ. ಪಂಜಾಬ್ ಹಾಗೂ ಗುಜರಾತ್ ರೈತರಿಗೂ ಕೂಡ ಮಿಡತೆಗಳ ಹಾವಳಿ ಬಗ್ಗೆ ಎಚ್ಚರಿಸಲಾಗಿದೆ. ಈ ಮಿಡತೆಗಳು ಅಲೆ ಅಲೆಯಾಗಿ ಗುಂಪಿನಲ್ಲಿ ಒಂದು ದಿನದಲ್ಲಿ 150 ಕಿ.ಮೀ. ದೂರ ಗಾಳಿಯ ದಿಕ್ಕಿನಲ್ಲಿ ಹಾರಬಲ್ಲವು. ಒಂದು ಮಿಡತೆಯು ತನ್ನಷ್ಟೆ ತೂಕದ ಆಹಾರವನ್ನು ತಿನ್ನಬಲ್ಲವು. ಎಫ್.ಪಿ.ಓ. ವರದಿ ಪ್ರಕಾರ ಒಂದು ಚ.ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡ ಈ ಮಿಡತೆಗಳ ಸೈನ್ಯ (ಸುಮಾರು 40 ಮಿಲಿಯನ್) ಒಂದು ದಿನದಲ್ಲಿ 35,000 ಸಾವಿರ ಜನರು ತಿನ್ನುವಷ್ಟು ಅಹಾರವನ್ನು ತಿನ್ನಬಲ್ಲವು. 

ಈ ಮಿಡತೆಗಳು ಬಹುಭಕ್ಷಕ ಕೀಟಗಳಾಗಿದ್ದು, ಯಾವುದೇ ಗಿಡದ ಅಥವಾ ಬೆಳೆಯ ಎಲೆಗಳು ಹೂ, ಹಣ್ಣು, ಬೀಜ, ಮರದ ತೊಗಟೆ ಹಾಗೂ ಬೆಳೆಯ ಕುಡಿಗಳನ್ನು ನಿರ್ದಾಕ್ಷಿಣ್ಯವಾಗಿ ಭಕ್ಷಿಸುತ್ತವೆ. ಪ್ರಪಂಚದಲ್ಲಿ ಮಿಡತೆಗಳಲ್ಲಿ 10 ಪ್ರಬೇದಗಳಿದು,್ದ ಭಾರತದಲ್ಲಿ ನಾಲ್ಕು ಪ್ರಭೇದಗಳಿರುತ್ತದೆ. ಹೆಣ್ಣು ಮಿಡತೆಯು ತೇವಾಂಶ ಹೊಂದಿರುವ ಮರಳು ಮಿಶ್ರಿತ ಮಣ್ಣಿನಲ್ಲಿ ತನ್ನ ಜೀವಾವಧಿಯಲ್ಲಿ ವಾರಕ್ಕೊಮ್ಮೆ 1000 ತತ್ತಿಗಳನ್ನು ಪ್ರತಿ ಚದುರ ಅಡಿಗೆ ಇಡುತ್ತಿದ್ದು, 3 ಸಲ ಈ ಆವೃತ್ತಿ ಇರುತ್ತದೆ. ಪ್ರಭುದ್ಧತೆ ಮಿಡತೆಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ 12-16 ಕಿ. ಮೀ. ವೇಗದಲ್ಲಿ ಹಾರುತ್ತವೆ.

ಮಿಡತೆಗಳು ಕಡಿಮೆ ಸಂಖ್ಯೆಯಲ್ಲಿದ್ದಾಗ ಅಷ್ಟೇನು ಹಾನಿ ಮಾಡುವುದಿಲ್ಲ. ಆದರೆ ಅನೂಕೂಲಕರ ಹವಾಮಾನ ಸಂದರ್ಭದಲ್ಲಿ ಅಂದರೆ ಬೇಸಿಗೆ ನಡುವೆ ಸರಣಿ ಮಳೆಗಳು ಬಂದಾಗ ತೇವಾಂಶವುಳ್ಳ ಪರಿಸರ ಇವುಗಳಿಗೆ ಹುಟ್ಟಿಕೊಳ್ಳಲು ಪೂರಕ ಪರಿಸ್ಥಿತಿ ಎನಿಸುತ್ತದೆ.  ಪ್ರಸ್ತುತ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಾನಾ ಬಗೆಯ ಚಂಡಮಾರುತಗಳು ಈ ಮಿಡತೆಗಳ ಹುಟ್ಟಿಗೆ ಪೂರಕವಾದ ವಾತಾವರಣ ಸೃಷ್ಟಿಸಿವೆ ಎನ್ನುವುದು ತಜ್ಞರ ಅಭಿಪ್ರಾಯ. ಈ ಸಂದರ್ಭದಲ್ಲಿನ ಅಪರಿಮಿತ ಸಂಖ್ಯೆಯಲ್ಲಿ ಹುಟ್ಟಿಕೊಂಡು ತಾವು ಹುಟ್ಟಿಕೊಂಡ ಪ್ರದೇಶದಿಂದ ಕೋಟ್ಯಾಂತರ ಸಂಖ್ಯೆಯಲ್ಲಿ ಚಕ್ರವಾಗಿ ಹರಡುತ್ತಾ ಕೆಳಗಿಳಿದು ಹೊಲದಲ್ಲಿರುವ ಬೆಳೆಗಳನ್ನು ಕ್ಷಣಾರ್ಧದಲ್ಲಿ  ತಿಂದು ದ್ವಂಸ ಮಾಡುತ್ತಾ ಅಲ್ಲಿಯೇ ಸಂತ್ತಾನೋತ್ಪತ್ತಿ ಮಾಡಿ ಮತ್ತಷ್ಟು ಸಂಖ್ಯೆಯಲ್ಲಿ ಬೆಳೆಯುತ್ತಾ ಹೋಗುತ್ತವೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!