ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿದ್ದಲ್ಲಿ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ : ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು : ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ,  ಬಿ.ಬಿ.ಎಂ.ಪಿ ನಿಯಂತ್ರಣಾ ಕೊಠಡಿ/ಸಹಾಯವಾಣಿಗಳಿಗೆ  ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.  

ಮುಂಗಾರು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ಅವರ  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.   

ನಿನ್ನೆ ಮೊನ್ನೆ ಸುರಿದ ಅಕಾಲಿಕ ಮಳೆಯಿಂದ ಸಾವೀಗೀಡಾದ ಇಬ್ಬರು ಹೆಣ್ಣು ಮಕ್ಕಳ ಕುಟುಂಬಕ್ಕೆ ಬಿ.ಬಿ.ಎಂ.ಪಿ ವತಿಯಿಂದ ತಲಾ 5 ಲಕ್ಷ ರೂ.ಗಳ ಪರಿಹಾರ ಕೊಡಲಾಯಿತು. ಅಪಾಯಕಾರಿ ರೆಂಬೆ ಕೊಂಬೆಗಳನ್ನು ಗುರುತಿಸಿ ಕತ್ತರಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದ ಅವರು,  ಎರಡು ದಿನಗಳಲ್ಲಿ ನಗರದಲ್ಲಿ  ಮಳೆಯಿಂದ ಬಿದ್ದ ಮರಗಳನ್ನು  ತೆರವುಗೊಳಿಸಲು   ಅಧಿಕಾರಿಗಳಿಗೆ ಸೂಚಿಸಿದರು. ನಗರ ಸಂಚಾರಕ್ಕೆ ಬಂದ ಸಂದರ್ಭದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.  ನಗರದಲ್ಲಿ ಯಾವುದೇ ಸಾವು, ನೋವು ಸಂಭವಿಸದಂತೆ ಅಗತ್ಯವಿರುವ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. 

ಬಿ.ಬಿ.ಎಂ.ಪಿ, ಪೊಲೀಸ್, ಅರಣ್ಯ, ಸಾರಿಗೆ ಹಾಗೂ ಅಗ್ನಿಶಾಮಕ ಇಲಾಖೆಗಳು ಸಮನ್ವಯ ಸಾಧಿಸಿ ಕೆಲಸ ಮಾಡಬೇಕು ಎಂದು ಆದೇಶಿಸಿದರು. ಮರಗಳ ಕೆಳೆಗೆ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ಮುನ್ನೆಚ್ಚರಿಕೆ ವಹಿಸಿ ಅನಾಹುತವಾಗುವುದನ್ನು ತಡೆಗಟ್ಟಲು ಕ್ರಮ ವಹಿಸಲು ಸೂಚಿಸಿದ ಅವರು, ನಗರದ 8 ವಲಯಗಳಲ್ಲಿ ಮ್ಯಾನ್ ಹೋಲ್‍ಗಳನ್ನು ಮುಚ್ಚಬೇಕು. ಜೆಟ್ಟಿಂಗ್ ಮೆಶೀನ್‍ಗಳು ಲಭ್ಯವಿರಬೇಕು ಎಂದರು.

ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ ಬೆಂಗಳೂರು ನಗರದ ಎಲ್ಲ ಎಂಟು ವಲಯಗಳಲ್ಲಿ ಬಿ.ಬಿ.ಎಂ.ಪಿ, ಬೆಸ್ಕಾಂ, ಒಳಚರಂಡಿ ಮಂಡಳಿ ಹಾಗೂ ಪೋಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳನ್ನು  ಒಳಗೊಂಡ ತಂಡವನ್ನು ರಚಿಸಿ ಮಳೆ ಸಂಬಂಧಿ ದೂರುಗಳು ಬಂದಲ್ಲಿ ತಕ್ಷಣವೇ ಕ್ರಮವಹಿಸಬೇಕು ಎಂದರು.  ಅನಾಹುತಗಳು ಸಂಭವಿಸಿದಲ್ಲಿ  ಸಹಾಯಕ ಅಭಿಯಂತರರನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದರು. 

ಸಚಿವ ಭೈರತಿ ಬಸವರಾಜ್, ಮುಖ್ಯ ಕಾರ್ಯದರ್ಶಿ ಟಿ.ಯೆಂ.ವಿಜಯಭಾಸ್ಕರ್,  ಬಿ.ಬಿ.ಎಂ.ಪಿ.ಆಯುಕ್ತ ಬಿ.ಹೆಚ್ .ಅನಿಲ್ ಕುಮಾರ್,  ಬೆಂಗಳೂರು ನಗರ ಪೋಲೀಸ್ ಆಯುಕ್ತ ಭಾಸ್ಕರ್ ರಾವ್,  ನಗರಾಭಿವೃದ್ಧಿ ಇಲಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಉಪಸ್ಥಿತರಿದ್ದರು. 

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]