ಬೀಜ ಹಂಚಿಕೆಯಲ್ಲಿ ಸರ್ಕಾರಿ ಹಾಗೂ ಸಹಕಾರಿ ಸಂಸ್ಥೆಗಳಿಗೆ ಮೊದಲ ಆದ್ಯತೆ : ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ಕೃಷಿ ಇಲಾಖೆಯಿಂದ ಬೀಜ ಹಂಚಿಕೆ ಮಾಡುವಾಗ ಸರ್ಕಾರಿ ಹಾಗೂ ಸಹಕಾರಿ ಸಂಸ್ಥೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಲೆಗಾರರ ಮಹಾ ಮಂಡಲ ಕಚೇರಿಯಲ್ಲಿ ಮುಂಗಾರು ಹಂಗಾಮಿಗೆ ‘ಎಣ್ಣೆ ಕಾಳು ಬೀಜ ದಾಸ್ತಾನು ನೆಲಗಡಲೆ) ಹಾಗೂ ಪೂರೈಕೆ ಕುರಿತು(ಕುರಿತು ಸಭೆ ನಡೆಯಿತು.

ಸಭೆ ಬಳಿಕ ಮಾತನಾಡಿದ ಬಿ.ಸಿ.ಪಾಟೀಲ್ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಪೂರೈಸುವುದು ಕೃಷಿ ಸಚಿವನಾಗಿರುವ ತಮ್ಮ ಕರ್ತವ್ಯ. ರೈತರ ಬದುಕು ಸಂಪೂರ್ಣವಾಗಿ ಭೂಮಿ ಮೇಲೆ ಅವಲಂಬಿತವಾಗಿರುವುದರಿಂದ ರೈತನಿಗೆ ಯಾವುದೇ ಕಾರಣಕ್ಕೂ ನಕಲಿ, ಕಳಪೆ ಬೀಜ ವಿತರಣೆಯಾಗಬಾರದು ಎಂದು ಪಣತೊಟ್ಟಿದ್ದು, ಕೃಷಿ ಇಲಾಖೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸುಮಾರು 11 ಸಾವಿರ ಕ್ವಿಂಟಲ್ ಕಳಪೆ ಮೆಕ್ಕೆಜೋಳ ಬಿತ್ತನೆ ಬೀಜವನ್ನು ಪತ್ತೆ ಹಚ್ಚಲಾಗಿದೆ ಎಂದು ಪುನರುಚ್ಚರಿಸಿದರು.

ಕೃಷಿ ಸಚಿವನಾಗಿ ಕೃಷಿ ಮತ್ತು ಇಲಾಖೆಗೆ ಸಂಬಂಧಪಟ್ಟ ವಿಷಯಗಳನ್ನು ತಿಳಿದುಕೊಳ್ಳುವುದು ನನ್ನ ಕರ್ತವ್ಯ. ಮುಂಗಾರು ಪ್ರಾರಂಭವಾಗುತ್ತಿದ್ದು, ರೈತರಿಗೆ ಅಗತ್ಯವಾದ ಬೀಜ ಪೂರೈಕೆ ಸಂಬಂಧ ಬೀಜ ನಿಗಮದೊಂದಿಗೆ ಚರ್ಚಿಸಲಾಗಿದೆ.ನಿಗಮದಲ್ಲಿರುವ ಸಮಸ್ಯೆಗಳೇನು ಎಂಬುದನ್ನು ಪರಿಶೀಲಿಸಲಾಗಿದೆ. ಉತ್ತಮ ಗುಣಮಟ್ಟದ ಬೀಜ ಪೂರೈಕೆಗೆ ಗಮನಹರಿಸಲಾಗಿದೆ ಎಂದರು. 

ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರೈತರು 10 ವರ್ಷದ ಹಿಂದಿನ ಶೇಂಗಾ (ನೆಲಗಡಲೆ) ಬೀಜ ಖರೀದಿಸುವಾಗ ಯಾವುದೇ ಸಬ್ಸಿಡಿ ದೊರೆಯುವುದಿಲ್ಲ.ಹೀಗಾಗಿ ನಮ್ಮ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯ ಉಪಕುಲಪತಿಗಳಿಗೆ ಉತ್ತಮ ನೂತನ ಶೇಂಗಾ ತಳಿಗಳನ್ನು ವಿಶ್ವವಿದ್ಯಾಲಯದಿಂದ ಕಂಡುಹಿಡಿಯುವಂತೆ ಸೂಚಿಸಲಾಗಿದೆ ಎಂದರು.

ಮೆಕ್ಕೆಜೋಳ, ಶೇಂಗಾ ಸೇರಿದಂತೆ ಎಲ್ಲಾದಕ್ಕೂ ಮುಂದಿನ ದಿನಗಳಲ್ಲಿ ಏಕರೂಪ ಬೆಲೆ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ರಾಜ್ಯ ಸರ್ಕಾರದಿಂದ ಲಾಕ್ಡೌನ್ ಸಮಯದಲ್ಲಿ ನಷ್ಟವಾದ ಹೂವುಹಣ್ಣು,ತರಕಾರಿ ಬೆಳೆಗಳಿಗೆ ಪರಿಹಾರ ಘೋಷಿಸಲಾಗಿದೆ. ಮೆಕ್ಕೆಜೋಳಕ್ಕೂ ಪರಿಹಾರ ಘೋಷಿಸಲಾಗಿದೆ. ಇದರೊಂದಿಗೆ ವಿವಿಧ ವೃತ್ತಿಪರ ಕಾರ್ಮಿಕರಿಗೆ ಸಮುದಾಯದವರಿಗೆ ಸರ್ಕಾರ ಪರಿಹಾರ ಘೋಷಿಸಿದೆ ಎಂದು ಕೃಷಿ ಸಚಿವರು ತಿಳಿಸಿದರು.ಇದೇ ವೇಳೆ ಸಚಿವ ಕೆಓಎಫ್ ( ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳಿ) ಸಂಸ್ಥೆಯಿಂದ ಉದ್ದಿನ ಬೆಳೆ ಮೌಲ್ಯವರ್ಧಿತ ವಿವಿಧ ಉತ್ಪನ್ನ ಬಿಡುಗಡೆ ಮಾಡಿದರು. ಸಭೆಯಲ್ಲಿ ಮಹಾಮಂಡಳಿಯ ಅಧ್ಯಕ್ಷರೂ ಆಗಿರುವ ಸಂಸದರಾದ ಅಣ್ಣಾಸಾಹೇಬ ಶಂಕರ್ ಜೊಲ್ಲೆ, ಉಪಾಧ್ಯಕ್ಷ ಶಂಕ್ರಪ್ಪಗೌಡ, ಮಾಜಿ ಅಧ್ಯಕ್ಷರು ಹಾಗೂ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ, ವ್ಯವಸ್ಥಾಪಕ ನಿರ್ದೇಶಕ ಬಿ.ಸೋಮಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!