ಮೋದಿಯವರ ಮೊದಲ ಅವಧಿಯಲ್ಲಿನ ವೈಫಲ್ಯಗಳ ಸರಣಿ ಎರಡನೇ ಅವಧಿಯಲ್ಲಿಯೂ ಮುಂದುವರೆದಿದೆ – ಸಿದ್ದರಾಮಯ್ಯ

ದೊಡ್ಡಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಒಂದು ವರ್ಷ ಪೂರೈಸಿದೆ. ಮೊದಲ ಅವಧಿಯಲ್ಲಿನ ವೈಫಲ್ಯಗಳ ಸರಣಿ ಎರಡನೇ ಅವಧಿಯಲ್ಲಿಯೂ ಮುಂದುವರೆದಿದ್ದು, ಅವರ ಆಡಳಿತ ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಎರಡನೆ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ ಇಂದಿಗೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರಣಿ ಟ್ವಿಟ್ ಮೂಲಕ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.

ಸಂವಿಧಾನದ 370ನೇ ಆರ್ಟಿಕಲ್ ರದ್ದತಿ, ಅಯೋಧ್ಯೆ ತೀರ್ಪು, ತ್ರಿವಳಿ ತಲಾಖ್ ರದ್ದತಿ ತಮ್ಮ ಸಾಧನೆ ಎಂದು ಪ್ರಧಾನಿಯವರು ಜನರಿಗೆ ಬರೆದ ಪತ್ರದಲ್ಲಿ  ಹೇಳಿಕೊಂಡಿದ್ದಾರೆ.‌ ಇವನ್ನು ಬಿಟ್ಟು ದೇಶದ ಬಡವರು, ರೈತರು, ಕಾರ್ಮಿಕರು, ಮಹಿಳೆಯರಿಗಾಗಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿರುವ ಅವರು.

ಹಿಂದೆ ಹೇಳಿದ್ದ ಸುಳ್ಳುಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದೇ ಪ್ರಧಾನಿ ಮೋದಿಯವರ ಕಳೆದ ಒಂದು ವರ್ಷದ ಸಾಧನೆ.ನಿನ್ನೆ ಅವರು ದೇಶದ ಜನರನ್ನು ಕುರಿತು ಪತ್ರವನ್ನು ಬರೆದಿದ್ದಾರೆ. ಅದರಲ್ಲಿ ಸಂವಿಧಾನದ 370ನೇ ಆರ್ಟಿಕಲ್ ರದ್ದತಿ, ರಾಮಮಂದಿರ, ತ್ರಿವಳಿ ತಲಾಖ್ ರದ್ದತಿಯನ್ನು ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿಯವರೇ, ಮೊದಲ‌ ಅವಧಿಯಲ್ಲಿ ನೀವೇ ನೀಡಿದ್ದ ಕಪ್ಪು ಹಣ ವಾಪಸ್, ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಬಗೆಗಿನ ಆಶ್ವಾಸನೆಗಳೇನಾಯ್ತು? ಇವುಗಳ ಬಗ್ಗೆ ಜನತೆಗೆ ಬರೆದಿದ್ದ ಪತ್ರದಲ್ಲಿ ತಿಳಿಸಬೇಕಿತ್ತಲ್ಲಾ?

ಇಂದು ಕೇಂದ್ರ ಅಂಕಿಅಂಶಗಳ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಜಿಡಿಪಿ ಕಳೆದ ಡಿಸೆಂಬರ್ ಅಂತ್ಯಕ್ಕೆ 4.1℅ಕ್ಕೆ ತಲುಪಿದೆ. ಇದು ಈ ವರ್ಷದ ಮೊದಲ 3 ತಿಂಗಳಲ್ಲಿ 3.1% ಮುಟ್ಟಿದೆ. ಕಳೆದ 11 ವರ್ಷಗಳಲ್ಲೆ ಇದು ಕನಿಷ್ಠ ದರ.

ಮಾತು ಮಾತಿಗೆ ಪಾಕಿಸ್ತಾನದ ಕಡೆ ಬೊಟ್ಟು ಮಾಡುವ ಬಿಜೆಪಿಗರೇ, ಈ ಸಾಲಿನ ಭಾರತದ ಜಿಡಿಪಿ ಪಾಕಿಸ್ತಾನ ಮಾತ್ರವಲ್ಲ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳದ ಜಿಡಿಪಿಗಿಂತಲೂ ಕಡಿಮೆ ಇದೆ ಎನ್ನುವುದು ಗೊತ್ತಾ? ಇದಕ್ಕೆ ಯಾರು ಹೊಣೆ?

ಪ್ರಧಾನಿ ನರೇಂದ್ರಮೋದಿಯವರೇ, ತ್ರಿವಳಿ ತಲಾಖ್, ಆರ್ಟಿಕಲ್370 ರದ್ದತಿ ಬದಿಗಿಡಿ, ಉದ್ಯೋಗ ಸೃಷ್ಟಿ, ಕೃಷಿ, ಕೈಗಾರಿಕೆ, ಸೇವಾ ವಲಯ, ಬಂಡವಾಳ ಹೂಡಿಕೆಯ ಬೆಳವಣಿಗೆಗೆ ಸಂಬಂಧಿಸಿದ ದಾಖಲೆಗಳನ್ನು ಜನರಿಗೆ ತೋರಿಸಿ, ನಿಮ್ಮ ಸಾಧನೆ ಏನೆಂದು ಎಲ್ಲರೂ ನೋಡಲಿ.

ಒಬ್ಬ ವ್ಯಕ್ತಿಯ ನಾಯಕತ್ವ ಮತ್ತು ಸಾಮರ್ಥ್ಯವನ್ನು ಭಾವನಾತ್ಮಕ ವಿಚಾರಗಳಿಂದ ಅಥವಾ ಭಾಷಣಗಳಿಂದ ಅಳೆಯುವುದಲ್ಲ. ದೇಶದ ಜನರ ಬದುಕಿನಲ್ಲಿ ಏನು ಬದಲಾವಣೆ ತಂದಿದ್ದಾರೆ ಎಂಬುದು ಮುಖ್ಯ.

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಾಗದ ಭಯದಿಂದ ಪ್ರಧಾನಿಗಳು ಪತ್ರದ ಮೂಲಕ ತಮ್ಮ ವೈಫಲ್ಯಗಳನ್ನು ಸಾಧನೆಗಳೆಂದು ಹೇಳಲು ಹೊರಟಿದ್ದಾರೆ.

‌ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಿರುವುದರಿಂದ ರೈತರ ಆದಾಯ ಸ್ಥಿರವಾಗಿದೆ ಎಂದು ಮೋದಿಯವರು ಪತ್ರದಲ್ಲಿ ಹೇಳಿದ್ದಾರೆ. ಆದರೆ ನಮ್ಮದೇ ರಾಜ್ಯದ ಬೀದರ್, ಕಲಬುರಗಿ, ರಾಯಚೂರು ಭಾಗದಲ್ಲಿ ಬೆಳೆದ ತೊಗರಿ ಬೇಳೆ ಕೊಳ್ಳುವವರಿಲ್ಲದೆ ಬೆಳೆಗಾರರ ಬದುಕು ಸಂಕಷ್ಟದಲ್ಲಿದೆ. ಇತರೆ ಬೆಳೆಗಳನ್ನು ಬೆಳೆದ ರೈತರ ಪಾಡು ಇದಕ್ಕಿಂದ ಭಿನ್ನವಲ್ಲ.

ಪ್ರಧಾನಿ ಮೋದಿ ಅವರೇ, ನಿಮಗೆ ನಿಜವಾಗಿ ರೈತರ ಬಗ್ಗೆ ಕಾಳಜಿಯಿದ್ದರೆ ವಿರೋಧ ಪಕ್ಷಗಳು, ರೈತರ ವಿರೋಧದ ಹೊರತಾಗಿಯೂ ಎಂಪಿಎಂಸಿ ಕಾಯಿದೆಗೆ ತಿದ್ದುಪಡಿ ಏಕೆ ಮಾಡಿದ್ರಿ?ಬಂಡವಾಳಶಾಹಿಗಳು ಮತ್ತು ಉದ್ದಿಮೆದಾರರನ್ನು ಉದ್ಧಾರ ಮಾಡಲು ಕಾಯಿದೆಗೆ ತಿದ್ದುಪಡಿ ತಂದು, ರೈತರ ಬಗ್ಗೆ ಕಾಳಜಿ ಇದೆ ಎಂದರೆ ಹೇಗೆ ಎಂದು ಆರೋಪಿಸಿದ್ದಾರೆ.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!