ಕೆಲಸಕ್ಕೆ ಹಾಜರಾಗದ ಹಾಪ್‍ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ

ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ  150 ಜನ ಹಾಪ್‍ಕಾಮ್ಸ್ ನೌಕರರ ವಿರುದ್ಧ  ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ 550 ಹಾಪ್‍ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು.ಮಳಿಗೆ ತೆರೆಯದೇ ಇರುವವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಅವರು  ಸೂಚಿಸಿದರು.  

ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹುತೇಕ ಇಲ್ಲವಾಗಿದೆ.  ಹೊಸ ಕೊಳವೆಬಾವಿಗಳನ್ನು ಕೊರೆಯಲು  ಅನುಮತಿ ನೀಡಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಒಂದು ತಿಂಗಳ ನಂತರ ಪರಿಸ್ಥಿತಿಯನ್ನು  ಪರಿಶೀಲಿಸಿ ತೀರ್ಮಾನಿಸಬಹುದು ಎಂದರು.

ಕಳೆದ ಸಾಲಿನಲ್ಲಿ ಹೆಚ್ಚುವರಿ ಬಿತ್ತನೆ ಬೀಜವನ್ನು ಖರೀದಿಸಿ ವಿತರಿಸಲಾಗಿತ್ತು. ಈ ಬಾರಿಯೂ ವಿತರಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಆಹಾರ ಪದಾರ್ಥಗಳ ಸರಪಳಿ ನಿರ್ವಹಣಾ ಕೋಶ ಕಾರ್ಯ ನಿರ್ವಹಿಸುತ್ತಿದೆ.ಅಗ್ರಿ ವಾರ್ ರೂಂ ಸ್ಥಾಪಿಸಿದ್ದು, ಪರಿಕರಗಳ ಲಭ್ಯತೆ, ಉತ್ಪನ್ನಗಳ ಮಾರಾಟ, ಸಾಗಾಣಿಕೆಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಒದಗಿಸಲಾಗಿದೆ ಎಂದು ಸಚಿವ ಬಿ.ಸಿ.ಪಾಟೀಲ್  ಮಾಹಿತಿ ಒದಗಿಸಿದರು. ಕರ್ನಾಟಕಕ್ಕೆ ಮಿಡತೆ ಹಾವಳಿ ಇರುವುದಿಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸಿರುವುದಾಗಿ ಸಚಿವರು ತಿಳಿಸಿದರು.

ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ಬೇರೆ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿರುವ ಅಧಿಕಾರಿ/ ಸಿಬ್ಬಂದಿಯನ್ನು ಮಾತೃ ಇಲಾಖೆಗೆ ವಾಪಸ್ಸು ಕರೆಸಿಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದರು.  

ರೇಷ್ಮೆ ಇಲಾಖೆ : ಹಿಪ್ಪುನೇರಳೆ ವಿಸ್ತೀರ್ಣಕ್ಕೆ ಸಂಬಂಧಿಸಿದಂತೆ ಡ್ರೋನ್ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು, ಒತ್ತುವರಿ ಆಗಿರುವ ಸರ್ಕಾರಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲು ಮುಖ್ಯ ಮಂತ್ರಿಗಳು ಸೂಚಿಸಿದರು.

ಇದೇ ಸಂದರ್ಭದಲ್ಲಿ ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ ಒಟ್ಟು  666 ಕೋಟಿ ರೂ.ಗಳ ಮೊತ್ತವನ್ನು ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು. ಈ ಬಗ್ಗೆ ರೈತರಿಗೆ ಕರೆ ಮಾಡಿ  ಹಣ ಸಂದಾಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳು ಖಾತರಿಪಡಿಸಿಕೊಂಡರು.

ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ.ನಾರಾಯಣಸ್ವಾಮಿ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ  ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!