ಕಳಪೆ ಆಹಾರ ಧಾನ್ಯ ಕಂಡು ಸಚಿವ ಗೋಪಾಲಯ್ಯ ಗರಂ

ಯಾದಗಿರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಡಿತರ ಧಾನ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ ಖಾತೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ಯಾದಗಿರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದ ಯಾದಗಿರಿ ಜಿಲ್ಲೆಯ ಜಿಲ್ಲಾ ಮಟ್ಟದ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಪ್ರತಿ ತಿಂಗಳು ಅನೇಕ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು,ಅದರಂತೆ ಇಂದು ಯಾದಗಿರಿ ಜಿಲ್ಲೆಗೆ ಆಗಮಿಸಿದ್ದೇನೆ. ಪ್ರಸುತ್ತ ಯಾದಗಿರಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ಪಡಿತರ ಧಾನ್ಯಗಳು ಬಡವರಿಗೆ ತಲುಪುತ್ತಿದೆಯೋ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದ್ದೇನೆ ಎಂದರು.

ಇನ್ನು ಜಿಲ್ಲೆಯ ಡಿಸಿ,ಜಿ.ಪಂ.ಸಿಇಓ,ಎಸಿ, ತಹಶೀಲ್ದಾರ್ ಸೇರಿದಂತೆ ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು,ಏಪ್ರಿಲ್‌ನಲ್ಲಿ ಕೊಟ್ಟಿರುವ ಪಡಿತರ ಧಾನ್ಯ ಎಷ್ಟು ಖರ್ಚಾಗಿದೆ.ಮೇ ತಿಂಗಳಿನಲ್ಲಿ ಎಷ್ಟು ಜನರಿಗೆ ಕೊಟ್ಟಿದ್ದೇವೆ ಎಂಬುದಾಗಿ ಮಾಹಿತಿ ಪಡೆದಿದ್ದೇನೆ ಜೊತೆಗೆ ಇವತ್ತಿನಿಂದ ವಿತರಣೆ ಮಾಡಲಾಗುತ್ತಿರುವ ಪಡಿತರ ಧಾನ್ಯಗಳ ಗುಣಮಟ್ಟದ ಬಗ್ಗೆ ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ ಎಂದರು.

ಇದಲ್ಲದೆ, ಹಿಂದುಳಿದ ಯಾದಗಿರಿ ಜಿಲ್ಲೆಗೆ ಮಹಾರಾಷ್ಟ್ರ ಹಾಗೂ ಬೆಂಗಳೂರುನಿಂದ ಸಾವಿರಾರು ಜನರು ಇಲ್ಲಿಗೆ ಬಂದಿದ್ದಾರೆ.ಈ ವೇಳೆ ಜಿಲ್ಲಾಡಳಿತ,ಶಾಸಕರು,ಸಂಸದರು ಶಕ್ತಿ ಮೀರಿ ಕೊರೊನಾ ತಡೆಯಲು ಪ್ರಯತ್ನ ಮಾಡಿದ್ದು,ಅವರೆಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು.

ಇನ್ನು ಆಹಾರ ಇಲಾಖೆಯಲ್ಲಿ ಕಟ್ಟಕಡೆಯ ಮನುಷ್ಯನಿಗೂ ಆಹಾರ ತಲುಪಬೇಕು ಎಂಬ ಉದ್ದೇಶದಿಂದ ಜಾರಿಗೊಳಿಸಿರುವ ಆತ್ಮನಿರ್ಭಾರ್ ಯೋಜನೆಯಲ್ಲಿ ಹೊರ ಜಿಲ್ಲೆ,ಹೊರ ರಾಜ್ಯಗಳಿಂದ ಬಂದಿರುವ ಹಾಗೂ ಕಾರ್ಡ್ಗಳಿಲ್ಲದವರಿಗೆ 2 ತಿಂಗಳು ತಲಾ 10 ಕೆಜಿ ಅಕ್ಕಿ ಮತ್ತು 2ಕೆಜಿ ಕಡಲೇ ಕಾಳು ಕೊಡಲು ತೀರ್ಮಾನ ಮಾಡಿ,ರಾಜ್ಯದಲ್ಲಿ 40ಲಕ್ಷ ಜನರಿಗೆ ವಿತರಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ಆಹಾರ ಧಾನ್ಯಗಳನ್ನು ಕಳುಹಿಸಿದೆ ಎಂದು ಮಾಹಿತಿ ನೀಡಿದರು.

ವಿಶೇಷವಾಗಿ ಜಿಲ್ಲೆಯಲ್ಲಿ ಎಲ್ಲಾ ಬಡ ಕುಟುಂಬದವರಿಗೆ ಆಹಾರ ಧ್ಯಾನಗಳನ್ನು ತಲುಪಿಸುವುದು,ಗುಣಮಟ್ಟದ ಆಹಾರವನ್ನು ಸರಿಯಾಗಿ ಸರಬರಾಜು ಮಾಡಲು ಆಗದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು.ದೂರದ ಊರುಗಳಲ್ಲಿ 4-5ಕಿಲೋ ಮೀಟರ್ ದೂರ ಪಡಿತರ ಅಂಗಡಿಗಳು ಇದ್ದರೇ ಆ ಊರುಗಳಿಗೆ ಖುದ್ದಾಗಿ ತೆರಳಿ ಬಡವರಿಗೆ ಆಹಾರ ಧಾನ್ಯ ವಿತರಿಸಲು ಅಧಿಕಾರಿಗಳಿಗೆ ಸೂಚಿಸಿದ ಅವರು ಆ ಊರುಗಳಿಗೆ ಹೊಸ ಅಂಗಡಿ ನೀಡಲು ಪ್ರಸ್ತಾವನೆ ಸಲ್ಲಿಸಿದರೇ ಮುಂದಿನ ದಿನಗಳಲ್ಲಿ ಅದನ್ನು ಮಂಜೂರು ಮಾಡಲಾಗುವುದು ಎಂದರು.

ಇನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ 3 ತಿಂಗಳು ಗ್ಯಾಸ್ ಕೊಟ್ಟಿದ್ದೇವೆ,ಮುಖ್ಯಮಂತ್ರಿ ಅನಿಲ್ ಭಾಗ್ಯ ಯೋಜನೆಯಲ್ಲಿ 

3 ತಿಂಗಳು ಉಚಿತ ಗ್ಯಾಸ್ ಕೊಡುತ್ತಿದ್ದು,ಯಾದಗಿರಿ ಜಿಲ್ಲೆಗೆ 2,5೦೦ ಗ್ಯಾಸ್ ಕನೆಕ್ಷನ್ ಹೆಚ್ಚುವರಿಗೆ ಕೊಡಲಾಗಿದ್ದು,ಅದನ್ನು ಬಡವರಿಗೆ ತಲುಪಿಸಲು ವ್ಯವಸ್ಥೆ ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಇದಲ್ಲದೆ,ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯ ಗೋದಾಮು ಕಟ್ಟಲು 5 ಎಕರೆ ಜಾಗ ಕೊಡಲು ಜಿಲ್ಲಾಡಳಿತಕ್ಕೆ ಸಲ್ಲಿಸಲು ಆಹಾರ ಇಲಾಖೆ ಅಧಿಕಾರಿಗಳು ಸಲ್ಲಿಸಲು ಹೇಳಿದ್ದೇನೆ ಎಂದರು.

ಈ ನಡುವೆ ಯಾದಗಿರಿ ಯರಗೋಳ ನ್ಯಾಯ ಬೆಲೆ ಅಂಗಡಿ ಮತ್ತು ಗೋದಾಮುಗಳಿಗೆ ಭೇಟಿ ನೀಡಿದ ಆಹಾರ ಖಾತೆ ಸಚಿವ ಗೋಪಾಲಯ್ಯ ಪಡಿತರದಾರರಿಗೆ ನೀಡುತ್ತಿರುವ ಆಹಾರ ಧಾನ್ಯಗಳ ಗುಣಮಟ್ಟ ವೀಕ್ಷಿಸಿದರು.ಈ ವೇಳೆ ಕಳಪೆ ಮಟ್ಟದ ಬೇಳೆ,ಕಡಲೆ ಕಾಳು ನೋಡಿದ ಸಚಿವರು ಅಧಿಕಾರಿಗಳ ಮೇಲೆ ಗರಂ ಅದರು.

ಅಲ್ಲದೆ, ಈ ಕಳಪೆ ಆಹಾರವನ್ನು ನಿಮ್ಮ ಮನೆಗಳಲ್ಲಿರುವವರಿಗೆ ಕೊಡಿ ಅವರು ತಿನ್ನುತಾರ ನೋಡಿ ಎಂದು ಅಧಿಕಾರಿಗಳನ್ನು ನೇರವಾಗಿ ತರಾಟೆಗೆ ತೆಗೆದುಕೊಂಡರು.ಜೊತೆಗೆ ಯಾವುದೇ ಕಾರಣಕ್ಕೂ ಈ ಕಾಳುಗಳನ್ನು ನೀಡಬೇಡಿ ಹಿಂದಿರುಗಿಸಿ ಎಂದು ಖಡಕ್ ಸೂಚನೆ ನೀಡಿದರು.

**********************

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]