ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್‌ಗಳಂತೆ: ಬಿ.ಸಿ.ಪಾಟೀಲ್

ಬೆಂಗಳೂರು: ರೈತರು ಕೋವಿಡ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್‌ಗಳಂತೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಕಾಸಸೌಧದಲ್ಲಿ ನಡೆದ‌ 2020-21ನೇ ಸಾಲಿನ‌ ಮುಂಗಾರು-ಹಿಂಗಾರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷಿ ಇಲಾಖೆ ಮುಳ್ಳಿನ ಹಾಸಿಗೆ ಇದ್ದಂತೆ.ಬಹಳಷ್ಟು ಸವಾಲುಗಳು ಈ ಇಲಾಖೆಯಲ್ಲಿಬರುತ್ತವೆ.ಕೃಷಿ ಮತ್ತು ರೈತರಿಗಾಗಿ ದುಡಿಯುವ ಅವಕಾಶ ತಮಗೆ ಲಭಿಸಿದೆ. ಕೃಷಿ ಇಲಾಖೆಯಲ್ಲಿ ಅಭಿವೃದ್ಧಿಗಳಾದರೆ ಸರ್ಕಾರಕ್ಕೂ ಹೆಸರು ಬರುತ್ತದೆ. ದೇಶದ ಜನರಿಗೆ ಅನ್ನವೂ ಸಿಗುತ್ತದೆ. ಕೋವಿಡ್ ಸಂದಿಗ್ಧತೆ ಎನ್ನುವುದು ಯುದ್ಧದಂತೆ‌ ಎಂದರು.

ಕರೊನಾ ಸಂದರ್ಭದಲ್ಲಿಯೂ ತಾವು ಸುಮ್ಮನೆ ಕೂರದೇ ಮೂವತ್ತು ದಿನಗಳಲ್ಲಿ ಮೂವತ್ತು ಜಿಲ್ಲೆಗಳ ಪ್ರವಾಸ ಮಾಡಿ ರೈತ ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ ಮಹತ್ತರ ಕ್ರಮಕೈಗೊಳ್ಳಲಾಯಿತು. ಗ್ರೀನ್ ಪಾಸ್, ಅಗ್ರಿವಾರ್ ರೂಮ್ ಸ್ಥಾಪನೆ ಮಾಡಿರುವುದು ಕೊರೊನಾ ಲಾಕ್ಡೌನ್‌ನಲ್ಲಿ‌ ರೈತರಿಗೆ ಬಹಳಷ್ಟು ಉಪಯುಕ್ತವಾಗಿದೆ.ನಕಲಿ ಗೊಬ್ಬರ ಬಿತ್ತನೆ‌ಬೀಜದ ವಿರುದ್ಧ ಸಮರ ಸಾರಲಾಯಿತು. ಒತ್ತಡಗಳನ್ನು ಲಕ್ಷಿಸಲಿಲ್ಲ. ಒಬ್ಬ ಕೃಷಿ ಸಚಿವನಾಗಿ ಕಳಪೆ‌ಬಿತ್ತನೆ ಬೀಜ ಮಾರಾಟಗಾರರಿಗೆ ಕ್ಷಮೆನೀಡುವುದು ರೈತರಿಗೆ ಮಾಡಿದ ಅನ್ಯಾಯವೆಂದು ಭಾವಿಸಿ ಮನಸಿಗೆ ತೃಪ್ತಿ ಇಲಾಖೆಗೆ ನ್ಯಾಯ ಒದಗಿಸುವಂತೆ ದುಡಿದೆ.‌ನಮ್ಮ ಮನಸಿಗೆ ಒಪ್ಪುವಂತೆ‌ ಕೆಲಸ‌ ಮಾಡಿದರೆ ದೇವರು ಸಹ ಮೆಚ್ಚುತ್ತಾನೆ‌ ಎಂದರು.

ಸೋಯಾಬಿನ್ ಮಧ್ಯಪ್ರದೇಶ ಆಂದ್ರದಿಂದ ಪೂರೈಕೆಯಾಗುತ್ತಿತ್ತು.ಸುಗ್ಗಿ ಸಂದರ್ಭದಲ್ಲಿ ಫ್ಲಡ್ ಬಂದಿರುವುದರಿಂದ ಬಹಳ ಕಡೆ ಸೋಯಾಬೀನ್ ಬೆಳೆ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.ಹೀಗಾಗಿ ಈ ಬಾರಿ ರೈತರು ಸೋಯಾ ಬೆಳೆಯುವುದಕ್ಕೂ ಮೊದಲೇ ಭೂಮಿ ಮತ್ತು ವಾತಾವರಣವನ್ನು ನೋಡಿಕೊಂಡು ಮುಂದಾಗಬೇಕು.1.5 ಲಕ್ಷ ಕ್ವಿಂಟಾಲ್ ಸೋಯಾಬೀನ್ ಬೀಜಕ್ಕೆ ಬೇಡಿಕೆ ಇತ್ತು.ಈಗಾಗಲೇ 

1.04 ಲಕ್ಷ ಕ್ವಿಂಟಾಲ್ ಪೂರೈಸಿದ್ದೇವೆ. ಕಳೆದ ಬಾರಿಯ ಪ್ರವಾಹದಿಂದಾಗಿ ಪಳಸೋಯಾ ಫಸಲು ಈ ಬಾರಿ ಉತ್ತಮವಾಗಿ ಬರುವುದು ಅನುಮಾನ‌. ಮುನ್ನೆಚ್ಚರಿಕೆ ಕ್ರಮವಾಗಿ

ರೈತರು ತಮ್ಮ ಭೂಮಿ ಮತ್ತು ಪೂರಕ ವಾತಾವರಣಕ್ಕೆ ಅನುಗುಣವಾದ ಪರ್ಯಾಯ ಬಿತ್ತನೆಗೆ ಮುಂದಾಗಲಿ ಎಂದು ಸಲಹೆ ನೀಡಿದರು.

ಈ  ದೇಶದಲ್ಲಿ ಎಲ್ಲರಿಗೂ ಫಸಲು ಬೆಳೆಯಲು ಹಕ್ಕಿದೆ. ಯುವಕರು ಪದವೀಧರು ಕೃಷಿಯತ್ತ ಆಕರ್ಷಿತರಿಗೆ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವವರಿಗೆ ಇದು ಅನುಕೂಲವಾಗಲಿದೆ. ಕರ್ನಾಟಕದಲ್ಲಿ ಮಾತ್ರ ಕೃಷಿ ಭೂಮಿ ಮಾರಾಟಕ್ಕೆ ನಿಬಂಧನೆ ಇತ್ತು. ಈಗ ಮಾರಾಟಕ್ಕೆ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕೃಷಿ ಭೂಮಿ ಮಾರಾಟದ ಬಗ್ಗೆ ಸರ್ಕಾರ ಕಂದಾಯ ಇಲಾಖೆ ಮಾರ್ಗಸೂಚಿ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಲಿದೆ.

ಕೋವಿಡ್‌ನಿಂದ ಪರಿಸ್ಥಿತಿಯೇ ಬದಲಾಗಿದೆ.

ವರ್ಷಕ್ಕೆ ಕೃಷಿ ವಿಶ್ವವಿದ್ಯಾಲಯದಿಂದ ನಾಲ್ಕು ಲಕ್ಷ ಪದವೀಧರರು ಹೊರಬರುತ್ತಿದ್ದಾರೆ. ಎಲ್ಲರಿಗೂ ಉದ್ಯೋ ಕಷ್ಟ.ಇಂತಹ ಪದವೀಧರರು ಈ ಹೊಸ‌ನಿಯಮದಿಂದ ಕೃಷಿಯತ್ತ ಆಕರ್ಷಕವಾಗಿ ಕೃಷಿಯಲ್ಲಿ 

ಆಗ್ರೋ ಇಂಡಸ್ಟ್ರೀಸ್‌ಗೂ ಕೃಷಿ ಭೂಮಿ ಅನುಕೂಲವಾಗಲಿದೆ.ಸಂಸ್ಕರಣಾ ಘಟಕ ಶೀಥಲೀಕರಣ ಆಹಾರ ಉತ್ಪಾದನಾ ಘಟಕಗಳಿಗೂ ಇದು ಬಳಕೆಯಾಗಬಹುದು.ಕೃಷಿ ಭೂಮಿ ಕೃಷಿಗೆ ಕೃಷಿ ಚಟುವಟಿಕೆಗಳಿಗೆ ಪೂರಕವಾಗಬೇಕು. ಕೃಷಿಭೂಮಿ ದುರ್ಬಳಕೆಯಾಗಬಾರದು ಎಂದು ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜಕುಮಾರ್ ಖತ್ರಿ, ಕೃಷಿ ಇಲಾಖೆ ನಿರ್ದೇಶಕ ಬಿ.ವೈ.ಶ್ರೀನಿವಾಸ್, ಕೃಷಿ ಆಯುಕ್ತ ಬ್ರಿಜೆಶ್ ಕುಮಾರ್ ದೀಕ್ಷಿತ್ ಸೇರಿದಂತೆ ಮತ್ತಿತರ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!