ಉಳ್ಳವರೇ ಭೂಮಿ ಒಡೆಯ ಕಾನೂನು ತರಲು ಸರ್ಕಾರ ಮುಂದಾಗಿದೆ : ಸಿದ್ದರಾಮಯ್ಯ

ಬೆಂಗಳೂರು : ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಉಳ್ಳವರೇ ಭೂಮಿ ಒಡೆಯರು ಎಂಬ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರುವ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ  ಕೈಗೊಳ್ಳಲಾಗಿದೆ. ಈ ಬಗ್ಗೆ ಚರ್ಚೆ ನಡೆಸಲು ಸಿದ್ದರಾಮಯ್ಯ ಅವರು ತಮ್ಮ ಕಚೇರಿಯಲ್ಲಿ ಇಂದು ಪಕ್ಷದ ಹಿರಿಯ ನಾಯಕರ ಸಭೆ ಕರೆದಿದ್ದರು. ಸಭೆ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದರು. 

ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ಸರ್ಕಾರ ತಿದ್ದುಪಡಿತ ತರಲು ಮುಂದಾಗಿದೆ. ಕಾಯಿದೆಯಲ್ಲಿನ ಕೆಲ ಅಂಶಗಳನ್ನು ಬದಲಾವಣೆ ಮಾಡುವುದು ಸರ್ಕಾರದ ಉದ್ದೇಶ. 

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಭೂ ಸುಧಾರಣೆ ಕಾಯಿದೆ ಜಾರಿಗೆ ತಂದ ಬಳಿಕ ಉಳುವವನೇ ಹೊಲದ ಒಡೆಯ ಎಂದಾಯಿತು. ಯಾರ್ಯಾರು ಭೂಮಿ ಒಡೆಯರು ಆಗಬಹುದು ಎಂಬುದನ್ನು ಕಾನೂನಿನಲ್ಲಿ ಸ್ಪಷ್ಟವಾಗಿ ಹೇಳಲಾಗಿತ್ತು.  ಗುತ್ತಿಗೆ ಆಧಾರದ ಮೇಲೆ ಭೂಮಿ ಉಳುಮೆ ಮಾಡುತ್ತಿದ್ದವರಿಗೆ ಇದರಿಂದ ಅನುಕೂಲವಾಗಿತ್ತು. 

ಶ್ರೀಮತಿ ಇಂದಿರಾಗಾಂಧಿ ಮತ್ತು ದೇವರಾಜ ಅರಸು ಅವರ ಸರ್ಕಾರ ಉಳುವವನೇ ಭೂಮಿ ಒಡೆಯ ಎಂದು ಮಾಡಿದರೆ ಈಗಿನ ಬಿಜೆಪಿ ಸರ್ಕಾರ ಉಳ್ಳವರೇ ಭೂಮಿ ಒಡೆಯ ಎಂದು ಮಾಡಲು ಮುಂದಾಗಿದೆ. 

ಭೂ ಸುಧಾರಣೆ ಕಾಯಿದೆಯ 79ಎ.ಬಿ.ಸಿ ಮತ್ತು 80 ಹಾಗೂ ಸೆಕ್ಷನ್ 63 ಮುಖ್ಯ ತಿದ್ದುಪಡಿಗಳನ್ನು ಪೂರ್ವಾನ್ವಯ ಆಗುವಂತೆ ರದ್ದು ಮಾಡುವುದು, ಹಾಗೂ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು  ವಜಾ ಮಾಡುವುದು ಸರ್ಕಾರದ ಉದ್ದೇಶ. ಕಾನೂನಿನಲ್ಲಿ ನ್ಯೂನತೆ ಇದ್ದರೆ ಮಾತ್ರ ಕಾಲ ಕಾಲಕ್ಕೆ ಬದಲಾವಣೆ ಮಾಡಬೇಕು. ಅದು ಬಿಟ್ಟು ನೆಗಡಿ ಬಂದಿದೆ ಎಂಬ ಕಾರಣಕ್ಕೆ ಮೂಗು ಕುಯ್ಯುವುದು, ಗಾಯವಾಗಿದೆ ಎಂದು ಕಾಲು ಕತ್ತರಿಸುವ ಕೆಲಸಕ್ಕೆ ಕೈ ಹಾಕಬಾರದು. 

ಕಾರ್ಪೊರೇಟ್  ಕಂಪನಿಗಳಿಗೆ, ಶ್ರೀಮಂತರಿಗೆ, ಬಂಡವಾಳ ಶಾಹಿಗಳಿಗೆ ಕೃಷಿ ಭೂಮಿ ಧಾರೆ ಎರೆಯಲು ಸರ್ಕಾರ ಮುಂದಾಗಿದೆ. ಉಳುವವರಿಗೆ ಭೂಮಿ ಸಿಗಬೇಕು. ಒಬ್ಬರಿಗೆ ಉದ್ಯೋಗ ದೊರಕಬೇಕು ಎಂಬ ಕಾರಣಕ್ಕೆ ಈ ಹಿಂದೆ ಭೂ ಸುಧಾರಣೆ ಕಾಯಿದೆ ಜಾರಿಗೆ ತರಲಾಗಿತ್ತು. 

ಕಾಯಿದೆ ತಿದ್ದುಪಡಿಯಿಂದ ಭೂ ಮಾಫಿಯಾ ಆರಂಭವಾಗುತ್ತದೆ. ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವಾಗುತ್ತದೆ. ಶ್ರೀಮಂತರು ಭೂಮಿ ಖರೀದಿ ಮಾಡಿ ಲ್ಯಾಂಡ್ ಬ್ಯಾಂಕ್ ಮಾಡಿಕೊಳ್ಳುತ್ತಾರೆ. ಇದರಿಂದ ಸಣ್ಣ ಹಿಡುವಳಿದಾರರಿಗೆ ತೊಂದರೆಯಾಗಿ  ಭೂಮಿ ಕಳೆದುಕೊಂಡು ಅವರು ಕೃಷಿ ಕೂಲಿ ಕಾರ್ಮಿಕರಾಗುತ್ತಾರೆ. ಹೀಗಾಗಿ  ಸಂಪುಟದ ನಿರ್ಣಯವನ್ನು ತೀವ್ರವಾಗಿ ವಿರೋಧಿಸುತ್ತೇವೆ. 

ಈ ಕುರಿತು ಪಕ್ಷದ ಹಿರಿಯ ನಾಯಕರು, ರೈತರ ಸಂಘಟನೆಗಳ ಮುಖಂಡರ ಜೊತೆ  ಮತ್ತೊಂದು ಸುತ್ತಿನಲ್ಲಿ ಸಮಗ್ರವಾಗಿ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು. 

ಸಭೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿ.ಎಂ.ಇಬ್ರಾಹಿಂ, ರಮೇಶ್ ಕುಮಾರ್, ಸಲೀಂ ಅಹಮದ್, ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ಡಾ. ಎಚ್.ಸಿ. ಮಹಾದೇವಪ್ಪ, ಟಿ.ಬಿ. ಜಯಚಂದ್ರ, ನಸೀರ್ ಅಹಮದ್, ಜಮೀರ್ ಅಹಮದ್, ವಿ.ಎಸ್. ಉಗ್ರಪ್ಪ, ಪುಷ್ಪ ಅಮರನಾಥ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್, ಡಾ. ಅಜಯಸಿಂಗ್, ನರೇಂದ್ರ ಸ್ವಾಮಿ, ಐವಾನ್ ಡಿಸೋಜ ಮತ್ತಿರರರು ಭಾಗವಹಿಸಿದ್ದರು.

           *******

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!