ಕರೊನಾ ನಡುವೆ ಎಪಿಎಂಸಿ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಮುಖ್ಯಾಂಶಗಳು 

* ಜೂ.19ಕ್ಕೆ ಎಪಿಎಂಸಿ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆ 

* ನಾಮಿನಿ ನಿರ್ದೇಶಕರೇ ನಿರ್ಣಾಯಕ

* ಜೆಡಿಎಸ್ – ಕಾಂಗ್ರೆಸ್ ಮೈತ್ರಿ..?

* ಗೋವಿಂದರಾಜ್ – ಲೋಕೇಶ್ ನಡುವೆ ಸ್ಪರ್ದೆ..?

* ಜೆಡಿಎಸ್ ಪಕ್ಷದ ಲೋಕೇಶ್ಗೆ ಅದೃಷ್ಟ..?

ದೊಡ್ಡಬಳ್ಳಾಪುರ: ನಿಯಂತ್ರಣಕ್ಕೆ ಬಾರದ ಕರೊನಾ ಸೋಂಕಿನ ಹಾವಳಿಯ ನಡುವೆಯೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಆಡಳಿತ ಮಂಡಳಿಯ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಜೂ.19ಕ್ಕೆ ಚುನಾವಣೆ ನಡೆಯಲಿದ್ದು.ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಪೈಪೋಟಿ ಆರಂಭವಾಗಿದೆ.

13 ಜನ ನಿರ್ದೇಶಕರ ಸದಸ್ಯತ್ವ ಬಲದ ದೊಡ್ಡಬಳ್ಳಾಪುರ,ನೆಲಮಂಗಲ ಹಾಗೂ ದೇವನಹಳ್ಳಿ ತಾಲ್ಲೂಕನ್ನು ಒಳಗೊಂಡಿರುವ ಎಪಿಎಂಸಿಯಲ್ಲಿ ಕಾಂಗ್ರೆಸ್ 7, ಜೆಡಿಎಸ್ 6 ಸ್ಥಾನಗಳನ್ನು ಹೊಂದಿವೆ.ಸರ್ಕಾರದಿಂದ ನಾಮ ನಿರ್ದೇಶನ ಹೊಂದುವ 3 ಸ್ಥಾನಗಳ ಪೈಕಿ 1 ಸ್ಥಾನಕ್ಕೆ ಕೆಲ  ದಿನಗಳ ಹಿಂದೆಯಷ್ಟೇ ಎಂ.ಸಿದ್ದಲಿಂಗಯ್ಯ ನಾಮ ನಿರ್ದೇಶನಗೊಂಡಿದ್ದಾರೆ. ಉಳಿದ 2 ಸ್ಥಾನಗಳು ಖಾಲಿ ಉಳಿದಿವೆ. ಚುನಾವಣೆ ಒಂದು ದಿನ ಇರುವಂತೆಯು ಸರ್ಕಾರ ನಾಮ ನಿರ್ದೇಶನ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ದೊಡ್ಡಬಳ್ಳಾಪುರದಿಂದ 5ಜನ, ದೇವನಹಳ್ಳಿ ತಾಲ್ಲೂಕಿನಿಂದ 2 ಜನ ಕಾಂಗ್ರೆಸ್ ಪಕ್ಷದಿಂದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಹಾಗೆಯೇ ಜೆಡಿಎಸ್ ಪಕ್ಷದಿಂದ ದೊಡ್ಡಬಳ್ಳಾಪುರ 2, ನೆಲಮಂಗಲ 3 ಹಾಗೂ ದೇವನಹಳ್ಳಿ ತಾಲ್ಲೂಕಿನಿಂದ ಒಬ್ಬ ನಿರ್ದೇಶಕರು ಆಯ್ಕೆಯಾಗಿದ್ದಾರೆ.

ಹಾಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ದೇವನಹಳ್ಳಿ ತಾಲ್ಲೂಕಿಗೆ ನೀಡಲಾಗಿದೆ.ಹೀಗಾಗಿ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಗಳನ್ನು ದೊಡ್ಡಬಳ್ಳಾಪುರ ತಾಲ್ಲೂಕಿಗೆ ನೀಡಬೇಕು ಎಂದು ಎರಡೂ ಪಕ್ಷದ ಮುಖಂಡರು ಹೈಕಮಾಂಡ್ ಮೇಲೆ ಒತ್ತಡ ಹೆರುತಿದ್ದಾರೆ.

ಎರಡನೇ ಅವಧಿಯ 20 ತಿಂಗಳ ಆಡಳಿತಕ್ಕಾಗಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದಿಂದ ಜಿಂಕೆಬಚ್ಚಹಳ್ಳಿ ಬಿ.ವಿ.ಲೋಕೇಶ್, ಕಾಂಗ್ರೆಸ್ ಪಕ್ಷದಿಂದ ನಾರನಹಳ್ಳಿ ಎಂ.ಗೋವಿಂದರಾಜ್, ಹೊಸಹಳ್ಳಿಯ ವಿಶ್ವನಾಥರೆಡ್ಡಿ ಹಾಗೂ ಹಾಲಿ ಅಧ್ಯಕ್ಷರಾಗಿರುವ ಕುಂದಾಣದ ಕೆ.ವಿ.ಮಂಜುನಾಥ್ ಸಹ ಆಕಾಂಕ್ಷಿಗಳಾಗಿದ್ದಾರೆ.

ನಾಮಿನಿ ನಿರ್ದೇಶಕರೇ ನಿರ್ಣಾಯಕ

ಕಾಂಗ್ರೆಸ್ ಪಕ್ಷಕ್ಕೆ ಒಂದು ಸ್ಥಾನ ಹೆಚ್ಚಾಗಿದ್ದರು ಸಹ ಸರ್ಕಾರದಿಂದ ನಾಮ ನಿರ್ದೇಶನಗೊಳ್ಳುವ ನಿರ್ದೇಶಕರ ಮತಗಳೇ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಯಲ್ಲಿ ನಿರ್ಣಾಯಕವಾಗಲಿವೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುವುದರಿಂದ ಸರ್ಕಾರದಿಂದ ನಾಮ ನಿರ್ದೇಶನಗೊಳ್ಳುವವರು ಸಹಜವಾಗಿಯೇ ಬಿಜೆಪಿ ಪಕ್ಷದವರೇ ಆಗಿರುತ್ತಾರೆ. ಈಗ ಒಂದು ಸ್ಥಾನಕ್ಕೆ ನಾಮ ನಿರ್ದೇಶಕರಾಗಿರುವ ಎಂ.ಸಿದ್ದಲಿಂಗಯ್ಯ ಅವರು ಸಹ ಬಿಜೆಪಿ ಅಭ್ಯರ್ಥಿಗಳೇ ಆಗಿದ್ದು,ಉಳಿದಿಬ್ಬರು ಯಾರಾಗಲಿದ್ದಾರೆ ಎಂಬ ಕುತೂಹಲ ಮೂರು ಪಕ್ಷಗಳಲ್ಲಿದೆ.

ಜೆಡಿಎಸ್ – ಕಾಂಗ್ರೆಸ್ ಮೈತ್ರಿ..?

ಮಿತ್ರ ಪಕ್ಷ ರಚಿಸಿಕೊಂಡು ರಾಜ್ಯದಲ್ಲಿ ಸರ್ಕಾರ ನಡೆಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಉಳಿದ ೨೦ ತಿಂಗಳಲ್ಲಿ ತಲಾ ಹತ್ತು ತಿಂಗಳು ಅಧಿಕಾರ ನಡುಸುವ ಸಾಧ್ಯತೆಗಳು ಹೆಚ್ಚಾಗಿದ್ದು,ಎರಡು ಪಕ್ಷಗಳ ಒಲವು ಏನಿರಲಿದೆ ಕಾದು ನೋಡಬೇಕಿದೆ.

ಗೋವಿಂದರಾಜ್ – ಲೋಕೇಶ್ ನಡುವೆ ಸ್ಪರ್ದೆ..?

ಕಾಂಗ್ರೆಸ್ ಪಕ್ಷದಿಂದ ಗೋವಿಂದ ರಾಜ್ ಹಾಗೂ ವಿಶ್ವನಾಥ ರೆಡ್ಡಿ ಆಕಾಂಕ್ಷಿಗಳಾಗಿದ್ದರು.ಪಕ್ಷದ ಹಿರಿಯ ಮುಖಂಡ ಗೋವಿಂದರಾಜ್ ಪರವಾಗಿ ಹೈಕಮಾಂಡ್ ಒಲವನ್ನು ಹೊಂದಿದ್ದು.ಕಾಂಗ್ರೆಸ್ ಪಕ್ಷದ ಮೂಲಗಳು ಗೋವಿಂದರಾಜ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನುತ್ತಿರುವುದರಿಂದ, ಎಂ.ಗೋವಿಂದರಾಜ್ ಹಾಗೂ ಜೆಡಿಎಸ್ ಪಕ್ಷದ ಲೋಕೇಶ್ ನಡುವೆ ಸ್ಪರ್ದೆ ಏರ್ಪಡುವ ಸಾಧ್ಯತೆ ಹೆಚ್ಚಾಗಿದೆ.

ಜೆಡಿಎಸ್ ಪಕ್ಷದ  ಲೋಕೇಶ್ಗೆ ಅದೃಷ್ಟ..?

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುವುದರಿಂದ ಸರ್ಕಾರದಿಂದ ನಾಮ ನಿರ್ದೇಶನಗೊಳ್ಳುವವರು ಸಹಜವಾಗಿಯೇ ಬಿಜೆಪಿ ಪಕ್ಷದವರೇ ಆಗಿರುತ್ತಾರೆ. ನಾಮ ನಿರ್ದೇಶನಗೊಳ್ಳುವ ನಿರ್ದೇಶಕರ ಮತಗಳೇ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಯಲ್ಲಿ ನಿರ್ಣಾಯಕವಾಗಲಿದ್ದು.ಜಾತಿ ರಾಜಕೀಯ ನಡೆದಿದ್ದೆ ಆದಲ್ಲಿ ಬಿಜೆಪಿ ಪಕ್ಷವು ಲಿಂಗಾಯಿತರಾದ ಲೋಕೇಶ್ ಆಯ್ಕೆಗೆ ಬೆಂಬಲಿಸಲಿದೆ ಎನ್ನುವ ಮಾತುಗಳು ರಾಜಕೀಯವಲಯದಲ್ಲಿ ಕೇಳಿಬರುತ್ತಿದೆ. 

******** ಹರಿತಲೇಖನಿ ವೆಬ್ ನ್ಯೂಸ್ ದೊಡ್ಡಬಳ್ಳಾಪುರ***********

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!