ಹರಿತಲೇಖನಿಯಲ್ಲಿ ಹವ್ಯಾಸಿ ವ್ಯಂಗ್ಯಚಿತ್ರಕಾರ ಅಶೋಕ್ ಅಣವೇಕರ್ ಕಾರ್ಟೂನ್ ಪಂಚ್

ದೊಡ್ಡಬಳ್ಳಾಪುರ: ರಾಜ್ಯ ಯುವ ವಕೀಲರ ರಾಜ್ಯಾಧ್ಯಕ್ಷರಾಗಿ ಯುವ ವಕೀಲರನ್ನು ಸಂಘಟಿಸುತ್ತಿರುವ ಅಶೋಕ ಅಣವೇಕರ ಹುಬ್ಬಳ್ಳಿ ವಕೀಲರ ಸಂಘದ ಅತ್ಯಂತ ಕ್ರಿಯಾಶೀಲ ನ್ಯಾಯವಾದಿ.

ದೇಶಭಕ್ತಿಯ ಹೋರಾಟದ ಮೂಲಕವೇ ಹುಬ್ಬಳ್ಳಿಯಲ್ಲಿ ಚಿರಪರಿಚಿತವಾಗಿರುವ ಇವರು ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದು ಇವರ ವ್ಯಂಗ್ಯ ಚಿತ್ರಗಳು ಇಂದಿನಿಂದ ಹರಿತಲೇಖನಿಯಲ್ಲಿ.

ಅಶೋಕ್ ಅಣವೇಕರ್ ಪರಿಚಯ

ಹುಬ್ಬಳ್ಳಿ ವಕೀಲರ ಸಂಘಕ್ಕೆ ಎರಡು ಬಾರಿ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಇವರು,ಹುಬ್ಬಳ್ಳಿಯಲ್ಲಿ ನೆಡೆದ  9ನೇ ರಾಜ್ಯ ವಕೀಲರ ಸಮ್ಮೇಳನವನ್ನು,ಸಮ್ಮೇಳನ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟಿರುತ್ತಾರೆ.

ವಿಶ್ವ ಹಿಂದೂ ಪರಿಷತ್ತಿನ ಸಹ ಸಂಪರ್ಕ ಪ್ರಮುಖರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.ಮಾತ್ರವಲ್ಲದೇ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ದೈವಜ್ಞ ಸಮುದಾಯದ ಸಹಕಾರ ಸಂಘದ  ನಿರ್ದೇಶಕರಾಗಿ,ಹುಬ್ಬಳ್ಳಿ ವಕೀಲರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ನಿರ್ದೇಶಕರಾಗಿ, ವಕೀಲರ ಸಾಹಿತ್ಯ ಮತ್ತು ಕಲಾ ಪರಿಷದ್ ಸಂಸ್ಥಾಪಕ ನಿರ್ದೇಶಕರಾಗಿ, ಹುಬ್ಬಳ್ಳಿ ವಕೀಲರ ಕಲ್ಯಾಣ ನಿಧಿಯ  ಸಂಸ್ಥಾಪಕ ಟ್ರಸ್ಟಿ ಯಾಗಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ!

ಹೀಗೆ ಅನೇಕ ಸಂಘ ಸಂಸ್ಥೆಗಳಲ್ಲಿ ಹಾಗೂ ತಮ್ಮ ಬಹುಮುಖ ವ್ಯಕ್ತಿತ್ವದಿಂದ ಹುಬ್ಬಳ್ಳಿ ವಕೀಲರ ಸಂಘದಲ್ಲಿ ವಿಶಿಷ್ಠವಾಗಿ ಗುರುತಿಸಿಕೊಂಡಿದ್ದಾರೆ!

ರಾಜ್ಯದಲ್ಲಿ ಎಲ್ಲೇ ವಕೀಲರ ಮೇಲೆ ದೌರ್ಜನ್ಯಗಳಾದರೆ ದೌರ್ಜನ್ಯವೆಸಗಿದ ಯಾರೇ ಆಗಿರಲಿ ಅವರ ವಿರುದ್ಧವಾಗಿ ವಕೀಲರ ಪರವಾಗಿ ಬೀದಿಗಿಳಿಯುತ್ತಾರೆ.

ಯುವ ವಕೀಲರಿಗೆ ಸರಕಾರ ನೀಡುವ ಗೌರವಧನವನ್ನು ಗುಳುಂ ಮಾಡಿದ ತಹಶಿಲ್ದಾರರ ವಿರುದ್ಧದ ಇವರ ನೇತೃತ್ವದಲ್ಲಿನ ಹೋರಾಟ ಇನ್ನೂ ಯುವ ವಕೀಲರಲ್ಲಿ ಅಚ್ಚಳಿಯದೇ ಉಳಿದಿದೆ.

ಹುಬ್ಬಳ್ಳಿ ವಕೀಲರ ಸಂಘದಲ್ಲಿ ಅನೇಕ ತಮ್ಮ ಜನಪರ ಯೋಜನೆಗಳು,ಕ್ರಿಯಾಶೀಲ ಚಟುವಟಿಕೆಗಳು ಯುವ ವಕೀಲರಿಗೆ ಸ್ಪೂರ್ತಿಯಾಗಿವೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಹಳೇ ನ್ಯಾಯಾಲಯದ ಆವರಣವು ಇವರ ನೇತೃತ್ವದಲ್ಲಿ ಸ್ವಚ್ಛವಾಯಿತು!

ವಕೀಲರ ಪರವಾಗಿ ಧ್ವನಿಯಾಗಲು ಈ ನ್ಯಾಯವಾದಿ ಎಂಬ ಮಾಸ ಪತ್ರಿಕೆಯನ್ನು ಹೊರತಂದಿದ್ದಾರೆ.ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಕಾಶ್ಮೀರಿ ಯುವಕರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಘಟನೆಯಲ್ಲಿ,ದೇಶದ್ರೋಹಿ ಯುವಕರ ಪರ ವಕಾಲತ್ತು ವಹಿಸಲೂ ತೀವ್ರವಾದ ಪ್ರತಿರೋಧ ಒಡ್ಡಿ ದೇಶ ಪ್ರೇಮ ಸಾರಿದ ಕೀರ್ತಿ ಇವರದ್ದು.

ಇಂತಹ ದೇಶಪ್ರೇಮಿಯ ಕಾರ್ಟೂನ್ ಪಂಚ್ ಹರಿತಲೇಖನಿ ಮೂಲಕ ಇಂದಿನಿಂದ ನಿಮಗಾಗಿ.

           *******

ರಾಜಕೀಯ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="119645"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!