ಘನತ್ಯಾಜ್ಯ ಸಂಸ್ಕರಣೆ, ವಿಲೇವಾರಿ ಘಟಕದ ಸಮರ್ಪಕ ನಿರ್ವಹಣೆಯಾಗದಿದ್ದಲ್ಲಿ ಶಿಸ್ತು ಕ್ರಮ: ಅರಣ್ಯ ಸಚಿವ ಅನಂದ್‌ಸಿಂಗ್

ನೆಲಮಂಗಲ: ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕದ ನಿರ್ವಹಣೆಯು ಸರ್ಕಾರದ ನಿಯಮಗಳ ಅನ್ವಯ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಅರಣ್ಯ ಹಾಗೂ ಪರಿಸರ ಸಚಿವ ಆನಂದ್‌ಸಿಂಗ್ ಅವರು ಎಚ್ಚರಿಕೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕು, ಸೋಂಪುರ ಹೋಬಳಿಯ ಪೆಮ್ಮನಹಳ್ಳಿ, ತಿಮ್ಮನಾಯ್ಕನಹಳ್ಳಿ ಬಳಿಯ ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿರುವ ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕಕ್ಕೆ ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಚಿವರು ಮಾತನಾಡಿದರು.

ಎ ಡಿವಿಜನ್ ಆಫ್ ರಾಮ್ಕಿ ಎನ್ವಿರೋ ಇಂಜಿನಿಯರ್ಸ್ ಲಿಮಿಟೆಡ್‌ ವತಿಯಿಂದ ಕರ್ನಾಟಕ ವೇಸ್ಟ್ ಮ್ಯಾನೇಜ್‌ಮೆಂಟ್ ಪ್ರಾಜೆಕ್ಟ್‌ನಡಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಕರಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಹಾಗೂ ತ್ಯಾಜ್ಯ ಸಂಸ್ಕರಣೆ ನಿರ್ವಹಣೆ ಸಮರ್ಪಕವಾಗಿಲ್ಲ ಎಂಬ ದೂರಿನ ಹಿನ್ನೆಲೆ ಖುದ್ದು ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು. 

ಸ್ಥಳೀಯರ ಸಹಕಾರದೊಂದಿಗೆ ಸರ್ಕಾರ ನಿಯಮಗಳನ್ನು ಪಾಲಿಸಬೇಕು. ಮತ್ತೊಮ್ಮೆ ಇಲ್ಲಿಗೆ ಭೇಟಿ ನೀಡಿದಾಗ ಇಂಥದ್ದೆ ಪರಿಸ್ಥಿತಿ ಕಂಡುಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಇಂತಹ ದೂರುಗಳು ಬಾರದಂತೆ ಜಾಗ್ರತೆ ವಹಿಸಬೇಕು ಎಂದರು. 

ಘಟಕದಲ್ಲಿ ನಿರಂತರ ತ್ಯಾಜ್ಯ ಸಂಸ್ಕರಣೆ ನಡೆಯುತ್ತಿದೆ. ಇದರಿಂದ ಹರಡುವ ವಾಸನೆ ಪ್ರಮಾಣವೂ ಹೆಚ್ಚಾಗಿದೆ. ಇದನ್ನು ತಡೆಯಲು ಈ ಪ್ರದೇಶದಲ್ಲಿ 200 ಮೀಟರ್ ಬಫರ್ ಜೋನ್ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ಈ ಕಾರ್ಖಾನೆ ಸುತ್ತಮುತ್ತ ಸಾಕಷ್ಟು ಗ್ರಾಮಗಳಿವೆ ಹಾಗೂ ದಾಬಸ್‌ಪೇಟೆ ಪಟ್ಟಣವು ತುಂಬಾ ಹತ್ತಿರದಲ್ಲಿದೆ. ಈ ಘಟಕದಿಂದ ದುರ್ವಾಸನೆ ಬಾರದಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ಸಚಿವರು ಭರವಸೆ ನೀಡಿದರು.

ಕರೊನಾ ಮಹಾಮಾರಿ ವಿಶ್ವವನ್ನೇ ತಲ್ಲಣಗೊಳಿಸಿದೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದೆ. ಕೇಂದ್ರ ಸರ್ಕಾರದ ಪೂರಕ ನೆರವಿನೊಂದಿಗೆ ರಾಜ್ಯ ಸರ್ಕಾರವು ಕೊರೋನಾ ನಿಯಂತ್ರಣಕ್ಕೆ ಸಾಕಷ್ಟು ಶ್ರಮಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಘಟಕ ಆರಂಭದಿಂದಲೂ ಸಾಕಷ್ಟು ಸಮಸ್ಯೆ ಎದುರಾಗಿದೆ. ಸಂಜೆ ವೇಳೆ ಸಾರ್ವಜನಿಕರ ಓಡಾಟಕ್ಕೂ ತೊಂದರೆಯಾಗಿದೆ. ತ್ಯಾಜ್ಯ ಘಟಕದ ವಿಷಕಾರಿ ವಸ್ತುಗಳು ಅಂತರ್ಜಲ ಸೇರಿ ಕೊಳವೆಬಾವಿಗಳಲ್ಲಿ ನೀರು ಕಲುಷಿತಗೊಂಡಿವೆ. ಘಟಕದಿಂದ ಬರುವ ನೀರನ್ನು ಕುಡಿದು ಜಾನುವಾರುಗಳು ಮೃತಪಟ್ಟಿವೆ. ಸುತ್ತಮತ್ತಲ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ದುರ್ವಾಸನೆಗೆ ಸಾರ್ವಜನಿಕರು ಮೂಗುಮುಚ್ಚಿಕೊಂಡೇ ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು  ಸ್ಥಳೀಯ ಜನಪ್ರತಿನಿಧಿಗಳು ಸಮಸ್ಯೆ ತೋಡಿಕೊಂಡರು. 

ರಾಮ್ಕಿ ಕಂಪನಿ ವ್ಯವಸ್ಥಾಪಕ ಅಮಿತ್ ಚೌಧರಿ ಘಟಕದ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ.

ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="111927"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!