ಮಡಿವಾಳ ಜನಾಂಗದವರಿಗೆ ಆಹಾರಧಾನ್ಯ ಕಿಟ್ ವಿತರಣೆ

ದೊಡ್ಡಬಳ್ಳಾಪುರ :ಕೋವಿಡ್ 19 ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಕಾರಣ ಸಮಸ್ಯೆಗೆ ಒಳಗಾಗಿರುವ ಮಡಿವಾಳ ಜನಾಂಗದವರಿಗೆ ರಾಜ್ಯ ಮಡಿವಾಳ ಸಂಘ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಮಡಿವಾಳ ಮಾಚಿದೇವ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಹಾರಧಾನ್ಯದ ಕಿಟ್ ಗಳನ್ನು  ನಗರದ ಬಸವೇಶ್ವರ ಸಮುದಾಯ ಭವನದಲ್ಲಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುರುಡಯ್ಯ ಭಾಗವಹಿಸಿ ಮಾತನಾಡಿ,ಮಡಿವಾಳ ಸಮಾಜವು ಬಹಳ ಹಿಂದುಳಿದ ಸಮಾಜವಾಗಿದೆ.ಹಾಗೂ  ಕರೊನಾ ವಾರಿಯರ್ಸ್ ರೀತಿ ಬಟ್ಟೆ ತೊಳೆಯುವ ಕಾರ್ಯನಿರ್ವಹಿಸುತ್ತಿದ್ದು,ಮಡಿವಾಳರು ತಮ್ಮ ವೃತ್ತಿಯನ್ನು ನಿರ್ವಹಿಸುವಾಗ ಬಹಳ ಮುನ್ನೆಚ್ಚರಿಕಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಕರೊನಾ ವೈರಸ್ ತಡೆಯಲು ಕಡ್ಡಾಯವಾಗಿ ಎಲ್ಲರೂ ಮಾಸ್ಕ ಧರಿಸಿ ಕೈ ಚೀಲಗಳನ್ನು ಬಳಸಿ ಬಟ್ಟೆ ಶುಚಿ ಮಾಡುವ ಕಾರ್ಯವನ್ನು ನಿರ್ವಹಿಸಬೇಕು ಎಂದರು.

ಕರ್ನಾಟಕ ರಾಜ್ಯ ಮಡಿವಾಳ ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಮಾತನಾಡಿ,ನಮ್ಮ ಸಮಾಜವು ಆಸ್ಪತ್ರೆ ಹೋಟೆಲ್ ಸೇರಿದಂತೆ ಎಲ್ಲಾ ಸಮಾಜದವರ ಬಟ್ಟೆಗಳನ್ನು ಶುಚಿತ್ವ ಮಾಡುವ ಕರ್ತವ್ಯ ನಿರ್ವಹಿಸುತ್ತಾರೆ.ಆದರೆ ಸರ್ಕಾರ ನಮ್ಮ ವೃತ್ತಿ ಬಾಂಧವರಿಗೆ ಇದುವರೆಗೂ ಯಾವುದೇ ತರಹದ ಸುರಕ್ಷತಾ ಕಿಟ್ ಗಳನ್ನು ವಿತರಿಸಿಲ್ಲ. ದೋಬಿ ಘಾಟ್ ಗಳಲ್ಲಿ ದಿನನಿತ್ಯ ಸಾವಿರಾರು ಜನ ಮಡಿವಾಳ ಸಮಾಜದವರು ತಮ್ಮ ಕಾಯಕವನ್ನು ನಂಬಿ ಬದುಕುತ್ತಿದ್ದಾರೆ ಆದ್ದರಿಂದ ಸರ್ಕಾರ ಅವರನ್ನು ಗುರುತಿಸಿ ಸುರಕ್ಷತಾ ಕಿಟ್ ಗಳನ್ನು ವಿತರಿಸಬೇಕು ಸರ್ಕಾರ ಸಹಾಯಧನ  ಘೋಷಿಸಿರುವುದು ಸ್ವಾಗತಾರ್ಹ.ಆದರೆ,ಕೇವಲ 60 ಸಾವಿರ ಮಡಿವಾಳರಿಗೆ ಮಾತ್ರ ಸಹಾಯಧನ ಕಲ್ಪಿಸಿದ್ದು ಮುಂದಿನ ದಿನಗಳಲ್ಲಿ  ಮತ್ತಷ್ಟು ಸಹಾಯಧನ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ತಾಲೂಕು ಅಧ್ಯಕ್ಷ ಎಚ್.ಆರ್.ಮುನಿಶಾಮಯ್ಯ  ಮಾತನಾಡಿ,ನಮ್ಮ ಸಮಾಜ ರಾಜಕೀಯವಾಗಿ ಆರ್ಥಿಕವಾಗಿ ಬಹಳ ಹಿಂದುಳಿದ ಸಮಾಜವಾಗಿದೆ.ಆದ್ದರಿಂದ ಪ್ರತಿಯೊಬ್ಬರೂ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು  ಶ್ರಮಿಸಬೇಕು.ಮಕ್ಕಳು ವಿದ್ಯಾವಂತರಾದರೆ ಮುಂದಿನ ದಿನಗಳಲ್ಲಿ ಉತ್ತಮ ಸ್ಥಾನಮಾನಗಳು ಸಮಾಜದಲ್ಲಿ ದೊರೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮಡಿವಾಳ ಸಂಘದ ಪ್ರಧಾನ ಕಾರ್ಯದರ್ಶಿಆರ್ ಯಲ್ಲಪ್ಪ,ಉಪಾಧ್ಯಕ್ಷರಾದ ಆರ್.ವಿ.ರಾಜಣ್ಣ,ಖಜಾಂಚಿ ಆರ್.ಮಂಜುನಾಥ್,ತಾಲೂಕು ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ದೊಡ್ಡರಂಗಯ್ಯ,ಉಪಾಧ್ಯಕ್ಷ  ವೆಂಕಟಾಚಲ,ಕಾರ್ಯದರ್ಶಿ ಡಿ.ಎಲ್.ಗಂಗಾಧರ್,ಖಜಾಂಚಿ ನರಸಿಂಹಮೂರ್ತಿ, ನಿರ್ದೇಶಕರುಗಳಾದ ಮುತ್ತರಾಜು,ಎಂ. ಚಿಕ್ಕಪಾಪಯ್ಯ,ಗಂಗರಾಜು,ಹಾಗೂ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!