ದೊಡ್ಡಬಳ್ಳಾಪುರದ ವ್ಯಕ್ತಿಯ ಅಂತ್ಯ ಸಂಸ್ಕಾರದ ನಂತರ ಕರೊನಾ ಪಾಸಿಟಿವ್,ಅಂತ್ಯ ಸಂಸ್ಕಾರಕ್ಕೆ ತೆರಳಿದವರಿಗೆ ಢವ ಢವ

ದೊಡ್ಡಬಳ್ಳಾಪುರ: ನಗರದಲ್ಲಿ ಕರೊನಾ ಸೋಂಕಿನ ಹರಡುವಿಕೆ ಮುಂದುವರೆದಿದ್ದು,ನಗರಸಭೆ ವ್ಯಾಪ್ತಿಯ ಚಿಕ್ಕಪೇಟೆ (ಶೆಟ್ಟರ ಬೀದಿ)ಯಲ್ಲಿ ನೇಕಾರಿಕೆ  ಉದ್ಯಮಿಯೊಬ್ಬರಿಗೆ ಭಾನುವಾರ ಕೋವಿಡ್-19 ದೃಢಪಟ್ಟಿದ್ದು ಇಡೀ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.ಹಾಗೆಯೇ ರಾಜೀವ್ ಧಿ ಬಡವಾಣೆಯಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು ಇವರಿಗು ಸಹ ಕೋವಿಡ್-19 ದೃಢಪಟ್ಟಿದೆ. ಹೀಗಾಗಿ ಈ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.

ಕೋವಿಡ್-19 ದೃಢಪಟ್ಟಿರುವ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರ ದ್ರವವನ್ನು ಪರೀಕ್ಷೆಗೆ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಪರಮೇಶ್ವರ ತಿಳಿಸಿದ್ದಾರೆ.

ಅಂತ್ಯ ಸಂಸ್ಕಾರಕ್ಕೆ ತೆರಳಿದವರಿಗೆ ಢವ ಢವ

ನಗರದ

ಹೊರವಲಯದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿಯೊಬ್ಬರು ಹೃದಯದ ಸಮಸ್ಯೆ ನಿಮಿತ್ತ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿದ್ದು,ಚಿಕಿತ್ಸೆ ನಂತರ ಮನೆಗೆ ಬಂದಿದ್ದಾರೆ,ಕೆಲ ದಿನಗಳಲ್ಲಿಯೇ ತೀವ್ರ ಅನಾರೋಗ್ಯಕ್ಕೀಡಾಗಿ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು,ಈ ವೇಳೆ ಈತನ ಗಂಟಲು ದ್ರವವನ್ನು ಕರೊನಾ ಪರೀಕ್ಷೆಗೆ ಕಳಿಸಲಾಗಿತ್ತು,ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿ  ಶನಿವಾರ ಮೃತಪಟ್ಟಿದ್ದರು.ಭಾನುವಾರ ಬೆಳಿಗ್ಗೆ ಮೃತ ವ್ಯಕ್ತಿಯ ಗಂಟಲ ದ್ರವದ ಪರೀಕ್ಷಾ ವರದಿ ಬಂದಿದ್ದು ಕೋವಿಡ್-19 ಇದ್ದದ್ದು ದೃಢಪಟ್ಟಿದೆ.ವಿಪರ್ಯಾಸವೆಂದರೆ ಶವವನ್ನು ಸಂಬಂಧಿಕರು ಸಂಸ್ಕಾರ ನಡೆಸಿದ್ದಾರೆ.ಆದರೆ ಶವಸಂಸ್ಕಾರದ ನಂತರ ಬಂದ ವರದಿಯಲ್ಲಿ ಆತನಿಗೆ ಕರೊನಾ ಇರುವುದು ದೃಢಪಟ್ಟಿರುವುದು,ಶವಸಂಸ್ಕಾರಕ್ಕೆ ತೆರಳಿದವರಿಗೆ ಆತಂಕ ಶುರುವಾಗಿದ್ದರೆ,ಶವ ಸಂಸ್ಕಾರಕ್ಕೆ ತೆರಳಿದವರನ್ನು ಹುಡುಕುವುದು ತಾಲೂಕು ಆಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.ಪ್ರಸ್ತುತ ಮೃತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪಕರ್ದಲ್ಲಿದ್ದ ಎಲ್ಲರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. 

ದೊಡ್ಡಬಳ್ಳಾಪುರದ ಚಿಕ್ಕಪೇಟೆ ಉದ್ಯಮಿಗೆ ಕರೊನಾ.

ಚಿಕ್ಕಪೇಟೆಯಲ್ಲಿ ಭಾನುವಾರ ಕೋವಿಡ್-19 ದೃಢಪಟ್ಟಿರುವ ವ್ಯಕ್ತಿ ರೇಷ್ಮೆ ಬಟ್ಟೆ ವ್ಯಾಪಾರಕ್ಕಾಗಿ ಪ್ರತಿ ನಿತ್ಯ ಬೆಂಗಳೂರಿಗೆ ಹೋಗಿ ಬರುತ್ತಿದ್ದರು. ಮೂರು ದಿನಗಳ ಹಿಂದೆಯಷ್ಟೆ ಜ್ವರ ಬಂದ ಹಿನ್ನೆಲೆಯಲ್ಲಿ ಯಲಹಂಕದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.ಅಲ್ಲಿ ಪರೀಕ್ಷೆ ನಡೆಸಿದಾಗ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು ಅಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ.ವ್ಯಕ್ತಿಯೊಬ್ಬರು ಮೃತಪಟ್ಟ ಪ್ರದೇಶದಲ್ಲಿ ಕರೊನಾ ವೈರಸ್ ಸೋಂಕು ಹರಡದಂತೆ ಅಗತ್ಯ ಇರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಟೋದಲ್ಲಿ ಪ್ರಚಾರ ನಡೆಸುವ ಮೂಲಕವು ಜನರಿಗೆ ತಿಳುವಳಿಕೆ ನೀಡಲಾಗುತ್ತಿದೆ ಎಂದು ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ್ ತಿಳಿಸಿದ್ದಾರೆ.

ಮೂರು ಕಂಟೈನ್ಮೆಂಟ್ ಪ್ರದೇಶ: ಶುಕ್ರವಾರದಿಂದ ನಗರದಲ್ಲಿ ಮೂರು ಕೋವಿಡ್-19 ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಚೈತನ್ಯನಗರ, ಚಿಕ್ಕಪೇಟೆ, ರಾಜೀವ್ಗಾಂದಿ ಬಡಾವಣೆಯ ಪ್ರದೇಶಗಳನ್ನು ಕಂಟೈನ್ಮೆಂಟ್ ಪ್ರದೇಶಗಳನ್ನಾಗಿ ಮಾಡಲಾಗಿದೆ. ಈ ಪ್ರದೇಶ ಹೊರಗಿನವರ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ ಈ ಪ್ರದೇಶಗಳಿಂದಲು ಸಹ ಯಾರು ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಕಂಟೈನ್ಮೆಂಟ್ ಪ್ರದೇಶದಲ್ಲಿ ಇರುವ ಆರು ಜನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಪರೀಕ್ಷಾ ಕೇಂದ್ರ ಬದಲಾವಣೆ:ಚಿಕ್ಕಪೇಟೆಯಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್-19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜೂ.29 ರಂದು ನಗರದ ಎಂಎಬಿಎಲ್ ಪ್ರೌಢ ಶಾಲೆಯಲ್ಲಿ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು  ರೋಜಿಪುರದ ಕಾರ್ಮಲ್ ಜ್ಯೋತಿ ಪ್ರೌಢಶಾಲೆಗೆ ವರ್ಗಾಯಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯ್ಯಪ್ಪರೆಡ್ಡಿ ತಿಳಿಸಿದ್ದಾರೆ.

ಆಟೋ ಪ್ರಚಾರ ಬಿರಿಸು:ಎರಡೇ ದಿನಗಳಲ್ಲಿ ಕೋವಿಡ್-19 ಮೂರು ಜನರಲ್ಲಿ ದೃಢಪಟ್ಟಿರುವುದರಿಂದ ನಗರಸಭೆ ವತಿಯಿಂದ ಸಾರ್ವಜನಿಕರಲ್ಲಿ ಕರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಅನುಸರಿಸಬೇಕಿರುವ ಮುಂಜಾಗೃತ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಆಟೋ ಪ್ರಚಾರವನ್ನು ಬಿರುಸುಗೊಳಿಸಲಾಗಿದೆ.

ಯಾವ ರಸ್ತೆ ಬಂದ್: ಚಿಕ್ಕಪೇಟೆ(ಶೆಟ್ಟರಬೀದಿ) ನಗರದ ಹೃದಯಭಾಗದಲ್ಲಿದೆ. ಹೀಗಾಗಿ ಈ ಪ್ರದೇಶದಲ್ಲಿನ ರಸ್ತೆಗಳಲ್ಲಿ ಬಸ್ ನಿಲ್ದಾಣ, ತಾಲ್ಲೂಕು ಕಚೇರಿ ಸೇರಿದಂತೆ ನಗರದಲ್ಲಿನ ವಾಣಿಜ್ಯ ಪ್ರದೇಶಗಳಿಗೆ ಹೋಗುವ ಜನರು ಹೆಚ್ಚಾಗಿ ಓಡಾಡುತ್ತಾರೆ. ಹೀಗಾಗಿ ಈ ಭಾಗದ ಚೌಕ ವೃತ್ತದಿಂದ ರುಮಾಲೆ ಛತ್ರದ ವೃತ್ತದ ಕಡೆಗೆ ಹೋಗುವ ರಸ್ತೆ, ಬೆಸ್ತರಪೇಟೆ ಕಡೆಯಿಂದ ರುಮಾಲೆ ಛತ್ರದ ಕಡೆಗೆ ಹೋಗುವ ರಸ್ತೆಗಳಿಗೆ ಬ್ಯಾರಿಕೇಡ್ ಹಾಗೂ ಮರದ ಕಡ್ಡಿಗಳನ್ನು ಕಟ್ಟುವ ಮೂಲಕ ಆಟೋ, ಬೈಕ್ ಸೇರಿದಂತೆ ಎಲ್ಲಾ ರೀತಿಯ ಸಂಚಾರವನ್ನು ಬಂದ್ ಮಾಡಲಾಗಿದೆ. ನಗರಸಭೆ ವತಿಯಿಂದ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ.

ಒಂದು ಸಾವು, 26 ಜನರಲ್ಲಿ ಕೋವಿಡ್-19 ಸೋಂಕು….

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!