ಫಸಲ್ ವಿಮಾ ಯೋಜನೆ ಅರ್ಜಿ ಸಲ್ಲಿಕೆಗೆ ಗ್ರಹಣ / ಯೋಜನೆ ಅನುಷ್ಟಾನ ಕೈ ಚೆಲ್ಲಿತೆ ಇಲಾಖೆ..?

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಫಸಲ್ ವಿಮಾ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು,ಸಮಸ್ಯೆ ಬಗೆ ಹರಿಯದ ಕಾರಣ ರೈತರು ಕಳೆದ ಮೂರು ದಿನಗಳಿಂದ ವಿಮೆ ಮಾಡಿಸಲು ಬ್ಯಾಂಕ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿಗೆ ಅಲೆಯುವಂತಾಗಿದೆ.

ಅಕಾಲಿಕ ಮಳೆ,ಬರ ಅಥವಾ ರೋಗಗಳಿಂದ ಬೆಳೆ ನಷ್ಟ ಉಂಟಾಗಿ ರೈತರಿಗಾಗುವ ಆರ್ಥಿಕ ಅನಾನುಕೂಲವನ್ನು ತಪ್ಪಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ರೈತವಲಯದಲ್ಲಿ ಬಹಳಷ್ಟು ಪ್ರಯೋಜನಕಾರಿ ಎಂಬ ಆಶಾಭಾವನೆಯನ್ನು ತಂದಿದೆಯಾದರೂ.ಅರ್ಜಿ ಸಲ್ಲಿಸುವ ಅನೈನ್ ಪ್ರಕ್ರಿಯೆಗೆ ಗ್ರಹಣ ಬಡಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಗಿ,ಮುಸುಕಿನಜೋಳ,ಭತ್ತದ ಬೆಳೆ ವಿಮೆ ಮಾಡಿಸಲು ಆ.15 ಅಂತಿಮ ದಿನವಾಗಿದೆ.ಕರೊನಾ ಕರಿ ನೆರಳಿನಲ್ಲಿ ಸಾಮಾಜಿಕ ಅಂತರ ಕಾಪಾಡಬೇಕಾದ್ದು ಬ್ಯಾಂಕ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳ ಜವಬ್ದಾರಿ ಸಹ ಹೌದಾದರೂ,ಅರ್ಜಿ ಸಲ್ಲಿಕೆಯಾಗದೆ ಕಚೇರಿಗಳ ಮುಂದೆ ರೈತರು ಕಾಯಬೇಕಾ ಅನಿರ್ವಾರ್ಯತೆ ಉಂಟಾಗಿದೆ.

ಯೋಜನೆ ಅನುಷ್ಟಾನಕ್ಕೆ ಕೈ ಚೆಲ್ಲಿತೆ ಇಲಾಖೆ..?

ಅರ್ಜಿ ಸಲ್ಲಿಕೆ ನಂತರ ಪೇಮೆಂಟ್ ವೇಳೆ ಸಮಸ್ಯೆ ಎದುರಾಗುತ್ತಿದ್ದು,ಹಣ ಕಡಿತ ಗೊಂಡರು ವಿಮೆಗೆ ಹಣ ಸಂದಾಯವಾಗದಂತ ಸಮಸ್ಯೆ ಎದುರಾಗಿ ಸಾಮಾನ್ಯ ಸೇವಾ ಕೇಂದ್ರದ ವಿಎಲ್ ಇಗಳು ಪರದಾಡುತ್ತಿದ್ದಾರೆ.ರಾತ್ರಿವೇಳೆ ಕಾದು ಹಣ ಸಂದಾಯ ಮಾಡಲು ಯತ್ನಿಸುತ್ತಿದ್ದರು ಹಣ ಕಡಿತವಾಗುತ್ತದೆಯೇ ಹೊರತು,ಯೋಜನೆಗೆ ಹಣ ಸಂದಾಯವಾಗಿತ್ತಿಲ್ಲ.ಅಲ್ಲದೆ ಕಡಿತವಾದ ಹಣ ಮತ್ತೆ ಮರಳಿ ಖಾತೆ ಸೇರಲು ಒಂದು ವಾರ ಕಾಯಬೇಕೆಂಂಬ ಆರೋಪ ವಿಎಲ್ ಇ ಗಳದ್ದಾಗಿದೆ.

ರೈತರಿಗೆ ಅನುಕೂಲಕರವಾದ ಯೋಜನೆಯ ಸಮಾರ್ಪಕ ಅನುಷ್ಠಾನದ ಹೊಣೆಹೊತ್ತಿರುವ ಕೃಷಿ ಇಲಾಖೆಯಾಗಲಿ,ವಿಮಾ ಸಂಸ್ಥೆಯಾಗಲಿ,ಸಂರಕ್ಷಣೆ ಪೋರ್ಟಲ್,ಸಾಮಾನ್ಯ ಸೇವಾ ಕೇಂದ್ರ ದವರಾಗಲಿ ದೂರು ಬಂದರೂ ಕಾರ್ಯ ಪ್ರವೃತ್ತರಾಗದೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಸಮಸ್ಯೆ ಬಗೆ ಹರಿಯದೆ ಹಾಗೆ ಉಳಿದಿರುವುದರಿಂದ ಬೇಸತ್ತರಿವ ರೈತರು.ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಧಿಕಾರಿಗಳ ಬೇಜವಬ್ದಾರಿ ವಿರುದ್ಧ ಕ್ರಮಕೈಗೊಳ್ಳಲು ರೈತರು ಒತ್ತಾಯಿಸಿದ್ದಾರೆ.

ತಾಂತ್ರಿಕ ಸಮಸ್ಯೆ ನೀಗಿಸಲು ಸಹ ಮೇಲಧಿಕಾರಿಗಳಿಗಿಲ್ಲ ಕಾಳಜಿ..!

ಉತ್ತಮ ಯೋಜನೆಗಳನ್ನು ರೈತರಿಗೆ ತಲುಪಿಸ ಬೇಕಾದ್ದು ಅಧಿಕಾರಿಗಳ ಹೊಣೆ,ಆದರೆ ಮೇಲಧಿಕಾರಿಗಳು ಹಾಗೂ ತಾಂತ್ರಿಕ ಇಲಾಖೆಯ ಬೇಜವಬ್ದಾರಿಯಿಂದ ಅನೇಕ ಯೋಜನೆಗಳು ಯಶಸ್ವಿಯಾಗುತ್ತಿಲ್ಲ ಎಂದು ಹೆಸರೇಳಲು ಇಚ್ಚಿಸದ ಅಧಿಕಾರಿಯೋರ್ವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!