ಶ್ರೀ ರಾಮ ಮಂದಿರದ ನಿರ್ಮಾಣದ ಶಿಲಾನ್ಯಾಸ ಹಬ್ಬವಾಗಿ ಆಚರಿಸಲು ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳ ಕರೆ

ದೊಡ್ಡಬಳ್ಳಾಪುರ: ಆಗಸ್ಟ್ 5 ರಂದು ಅಯೋದ್ಯೆಯಲ್ಲಿ ನಡೆಯಲಿರುವ ಶ್ರೀ ರಾಮ ಮಂದಿರದ ನಿರ್ಮಾಣದ ಶಿಲಾನ್ಯಾಸ ದಿನವನ್ನು ಮನೆ ಮನಗಳಲ್ಲಿ ಹಬ್ಬದ ವಾತಾವರಣ ನಿರ್ಮಿಸುವ ಮೂಲಕ ವಿಜಯೋತ್ಸವ ಆಚರಿಸುವಂತೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕರೆ ನೀಡಿರುವ ಹಿನ್ನಲೆಯಲ್ಲಿ ಅಂದಿನ ಆಚರಣೆಗಳ ಕುರಿತು ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳದಿಂದ ಸಮಾಜಕ್ಕೆ ತಿಳಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದು  ಭಜರಂಗ ದಳದ ತುಮಕೂರು ವಿಭಾಗದ ಸಂಚಾಲಕ ನರೇಶ್ ರೆಡ್ಡಿ  ತಿಳಿಸಿದ್ದಾರೆ.

ಆಗಸ್ಟ್ 5 ರಂದು ಶ್ರೀ ರಾಮ ಮಂದಿರ ನಿರ್ಮಾಣದ ಹಿನ್ನಲೆಯಲ್ಲಿ ಅನುಸರಿಸಬೇಕಿರುವ ಆಚರಣೆಗಳ ಕುರಿತ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಶ್ರೀ ರಾಮ ಮಂದಿರ ನಿರ್ಮಾಣದ 550 ವರ್ಷಗಳ ಕನಸು ಈಗ ನನಸಾಗುತ್ತಿದ್ದು, ಆ ಶುಭ ಗಳಿಗೆ ಸಮೀಪದಲ್ಲಿಯೇ ಇದೆ.ಈ ದಿಸೆಯಲ್ಲಿ  ಪ್ರತಿ ಮನೆಗಳಲ್ಲಿಯೂ ಹಬ್ಬದ ಸಂಭ್ರಮ ಕಾಣಬೇಕು.ಶಿಲಾನ್ಯಾಸಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲದಿರುವುದರಿಂದ ಆ.೫ರಂದು ಬೆಳಿಗ್ಗೆ 10.30ರಿಂದ ದೃಶ್ಯವಾಹಿನಿಗಳಲ್ಲಿ ಪ್ರಸಾರವಾಗುವ ನೇರ ಪ್ರಸಾರವನ್ನು ಎಲ್ಲರೂ ವೀಕ್ಷಿಸಬೇಕು. ಶ್ರೀರಾಮನನ್ನು ಸ್ಮರಿಸುವ ಮೂಲಕ ಮನೆಗಳ ಮೇಲೆ ಭಗವದ್ ಧ್ವಜ ಹಾರಿಸಿ, ಸಿಹಿ ಮಾಡಿ ಹಬ್ಬ ಆಚರಿಸಬೇಕಿದೆ ಎಂದರು.

ಭಜರಂಗ ದಳ ಹಾಗೂ ವಿಶ್ವ ಹಿಂದು ಪರಿಷತ್ ನಿಂದ 5 ಸಾವಿರ ಮನೆಗಳಿಗೆ ದೀಪಗಳು ಹಾಗೂ ಪಾಕೆಟ್ ಕ್ಯಾಲೆಂಡರ್ಗಳನ್ನು ನೀಡುವ ಮೂಲಕ ಶುಭ ಹಾರೈಸಲಾಗುತ್ತಿದೆ. ಶಿಲಾನ್ಯಾಸದ ದಿನದಂದು ದೀಪಗಳನ್ನು ಬೆಳಗುವಂತೆ ಮನವಿ ಮಾಡಲಾಗಿದೆ. ನಗರದ ನೆಲದಾಂಜನೇಯಸ್ವಾಮಿ, ಶ್ರೀ ರಾಮ ದೇವಾಲಯಗಳಿಂದ ಮೃತ್ತಿಕೆ, ತೀರ್ಥಗಳನ್ನು ಅಯೋದ್ಯೆಗೆ ಕಳುಹಿಸಿಕೊಡಲಾಗುತ್ತಿದೆ ಎಂದರು.

ಆ.5ರಂದು ಕರಸೇವಕರಿಗೆ ಅಭಿನಂದನೆ:

ಆ.5ರಂದು ಸಂಜೆ 4 ಗಂಟೆಗೆ ಕನ್ನಡ ಜಾಗೃತ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, 1992ರ ರಾಮ ಜನ್ಮ ಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ತೆರಳಿದ್ದ ಕರಸೇವಕರಿಗೆ ಹಾಗೂ ಅಂದು ಹುತಾತ್ಮರಾದ ಸತೀಶ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕಾರ್ಯಕರ್ತರ ಸಮ್ಮುಖದಲ್ಲಿ ನೆರವೇರಿಸಲಾಗುವುದು ಎಂದು ತಿಳಿಸಿದರು.

ವಿಶ್ವ ಹಿಂದು ಪರಿಷತ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ದೀಪಕ್ ಜೈನ್, ಭಜರಂಗ ದಳದ ಜಿಲ್ಲಾ ಸಂಚಾಲಕ ಮಧು ಬೇಗಲಿ, ತಾಲೂಕು ಸಂಚಾಲಕ ಭಾಸ್ಕರ್ ಭಗತ್, ಸಹ ಸಂಚಾಲಕ ಅರ್ಜುನ್ ವಿರಾಟ್ ಹಾಜರಿದ್ದರು.

ರಾಜಕೀಯ

ಬಿ.ಮುನೇಗೌಡರ ತಬ್ಬಲಿ ಮಾಡುದ್ರಾ ಜೆಡಿಎಸ್ ವರಿಷ್ಠರು..?!

ಬಿ.ಮುನೇಗೌಡರ ತಬ್ಬಲಿ ಮಾಡುದ್ರಾ ಜೆಡಿಎಸ್ ವರಿಷ್ಠರು..?!

ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಾತ್ಯತೀತ ಜನತಾದಳ (JDS) ಪಕ್ಷದ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ (Manjunath K.V) ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಹಲವು ವರ್ಷಗಳ ಕಾಲ ಪಕ್ಷಕ್ಕಾಗಿ ತನು, ಮನ, ಧನವನ್ನ ಅರ್ಪಿಸಿದ್ದ

[ccc_my_favorite_select_button post_id="119223"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!