ಪರಿಸರಕ್ಕೆ ಪೂರಕವಾಗುವಂತೆ ಪ್ರವಾಸೋದ್ಯಮ ನೀತಿ ಜಾರಿ: ಸಚಿವ ಸಿ.ಟಿ ರವಿ

ಚಿಕ್ಕಮಗಳೂರು: ರಾಜ್ಯದಲ್ಲಿ ಪರಿಸರಕ್ಕೆ ಪೂರಕವಾಗುವಂತೆ ಹಾಗೂ ಜನತೆ ಮತ್ತು ಅಧಿಕಾರಿಗಳ ಸಹಭಾಗಿತ್ವ ಒಳಗೊಂಡ ನೂತನ ಪ್ರವಾಸೋದ್ಯಮ ನೀತಿಯನ್ನು ಮುಂದಿನ ೫ ವರ್ಷದ ಕಾಲ ಜಾರಿಗೆ ತರಲಾಗುವುದು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಹೇಳಿದರು.

ಇಂದು ಕಡೂರು ತಾಲ್ಲೂಕು ಸಖರಾಯಪಟ್ಟಣದ ಬಳಿಯ ಅಯ್ಯನ ಕೆರೆಯಲ್ಲಿ ಪ್ರವಾಸೋದ್ಯಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಾಹಸ ಕ್ರೀಡಾ ತರಬೇತಿ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಅಯ್ಯನ ಕೆರೆಯಲ್ಲಿ ಆರಂಭವಾಗುತ್ತಿರುವ ಸಾಹಸ ಕ್ರೀಡಾ ಚಟುವಟಿಕೆಗಳಿಂದ ಇಲ್ಲಿನ ಯುವ ಜನತೆಯು ಸಾಹಸ ಪ್ರವೃತ್ತಿ, ಪ್ರಾಕೃತಿಕ ವಿಕೋಪದ ಸಂದರ್ಭ ನೆರವಿಗೆ ಧಾವಿಸುವುದು ಜೊತೆಗೆ ಸ್ವ-ಉದ್ಯೋಗ ಹೊಂದುವ ಅವಕಾಶ ದೊರೆಯಲಿದೆ ಇದನ್ನೇ ಉದ್ದೇಶವಾಗಿರಿಸಿಕೊಂಡು ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿಯು ಕಾರ್ಯಪ್ರವೃತ್ತವಾಗಿದೆ ಎಂದ ಅವರು ಇದರಿಂದಾಗಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಹಾಗೂ ಕ್ರೀಡೆಯನ್ನು ಪ್ರೋತ್ಸಾಹಿಸಿ ಅಭಿವೃದ್ದಿ ಪಡಿಸಲು ಸಾಧ್ಯವಾಗಲಿದೆ ಎಂದರು.

ಕೆರೆಯ ಸುತ್ತಲೂ ಪರಿಸರಕ್ಕೆ ಪೂರಕವಾಗುವಂತಹ ಮರ-ಗಿಡಗಳನ್ನು ಬೆಳೆಸುವುದು ಜೊತೆಗೆ ಸೈಕಲ್ ಪಥ ನಿರ್ಮಾಣ ಮಾಡಿ ಕ್ರೀಡೆಗೆ ಮತ್ತಷ್ಟು ಆದ್ಯತೆ ನೀಡಲಾಗುವುದು ಈಗಾಗಲೇ ಈ ಭಾಗದ ರಸ್ತೆಗೆ ರೂ.೭ ಕೋಟಿ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಕೂಡ ಮುಗಿದಿದೆ ಕಾಮಗಾರಿ ಕೆಲಸಗಳು ಆರಂಭವಾಗಬೇಕಿದೆ ಎಂದರು.

ಕೆರೆಯ ಮಾಲಿನ್ಯವಾಗದಂತೆ ಪರಿಸರಕ್ಕೆ ಪೂರಕವಾಗುವಂತಹ ಕ್ರೀಡಾ ತರಬೇತಿ ಚಟುವಟಿಕೆಗಳನ್ನು ಇಲ್ಲಿ ಆಯೋಜಿಸಲಾಗುವುದು ಅಲ್ಲದೇ ಈ ಭಾಗದ ರೈತರುಗಳಿಗೆ ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಸ್ವಚ್ಚತೆ ಹಾಗೂ ನಿರ್ವಹಣೆಗೆ ಹೆಚ್ಚು ಆದ್ಯತೆ ನೀಡಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಮೂಲಕ ಪ್ರವಾಸಿತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.

  ನೂತನ ಪ್ರವಾಸೋದ್ಯಮ ನೀತಿಗೆ ಸಂಬಂಧಿಸಿದಂತೆ ಅದರ ಕರಡನ್ನು ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದ್ದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಣಕಾಸು ಹಾಗೂ ಯೋಜನಾ ಇಲಾಖೆ ಒಪ್ಪಿಗೆ ಬಳಿಕ ಕ್ಯಾಬಿನೆಟ್‌ನಲ್ಲಿ ಮಂಡಿಸಿ ಅನುಮೋದನೆ  ಪಡೆದು ನಂತರ ಜಾರಿಗೊಳಿಸಲಾಗುವುದು. ಹೊಸ ಪ್ರವಾಸೋದ್ಯಮ ನೀತಿಯು ೨೦೨೦ ರಿಂದ ೨೦೨೫ ರ ವರೆಗಿನ ೫ ವರ್ಷದ ಕಾಲ ಜಾರಿಯಲ್ಲಿರಲಿದ್ದು ಇದರಲ್ಲಿ ಅಧಿಕಾರಿ ವರ್ಗ ಹಾಗೂ ಜನರ ಸಹಭಾಗಿತ್ವ ಕೂಡ ಇರಲಿದೆ ಎಂದ ಅವರು ಜಿಲ್ಲಾ ಮಟ್ಟದಲ್ಲಿಯೂ ನೀತಿಗೆ ಸಂಬಂಧಿಸಿದಂತೆ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದ್ದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಅಧಿಕಾರದೊಂದಿಗೆ ನಿಯಂತ್ರಣವನ್ನು ನೀಡುವ ಕುರಿತು ಕರಡು ರಚನೆಯಾಗುತ್ತಿದ್ದು ಇದು ಅನುಮೋದನೆಗೊಂಡ ಬಳಿಕ ಸಾರ್ವಜನಿಕವಾಗಿ ಚಾಲ್ತಿಗೆ ಬರಲಿದೆ ಎಂದರು.

ಜಿಲ್ಲೆಯಲ್ಲಿ ಕಳೆದ ಬಾರಿಯಂತೆ ಪ್ರವಾಹದ ಪರಿಸ್ಥಿತಿ ಎದುರಾಗಿಲ್ಲ,  ಉದ್ಭವವಾದಲ್ಲಿ ಅದನ್ನು ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ ಜಿಲ್ಲೆಯಲ್ಲಿ ಶಾಶ್ವತ ನೀರಾವರಿಗಾಗಿ ೧೩೫೦ ಕೋಟಿಯ ಡಿ.ಪಿ.ಆರ್ ತಯಾರಿಸಲಾಗಿದೆ ಕೋವಿಡ್-೧೯ ಹಿನ್ನೆಲೆಯಿಂದ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹಂತಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಜೊತೆಗೆ ಹಿರೇಕೊಳಲೆ, ಬಸವನಹಳ್ಳಿಯ ಕೆರೆಗಳ ಅಭಿವೃದ್ಧಿಗೆ ರೂಪುರೇಷೆಗಳನ್ನು ಸಿದ್ದಪಡಿಸಲಾಗಿದೆ ಎಂದರು.

ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರು ಮಾತನಾಡಿ ಅಯ್ಯನ ಕೆರೆಯು ಈ ಭಾಗದ ಜನರಿಗೆ ಜೀವನಾಡಿಯಿದ್ದಂತೆ ಇಲ್ಲಿ ಕ್ರೀಡಾಚಟುವಟಿಕೆಗಳನ್ನು ಆಯೋಜಿಸಿರುವುದು ಖುಷಿಯ ವಿಚಾರ ಆದರೆ ಪರಿಸರ ಸೌಂದರ್ಯಕ್ಕೆ ಯಾವುದೇ ಹಾನಿಯಾದಂತೆ ರೈತರ ಹಿತದೃಷ್ಟಿಯಿಂದ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದರು.

ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ, ಇಲ್ಲಿನ ನೀರು ಅಚ್ಚುಕಟ್ಟುದಾರರ ಹಕ್ಕಾಗಿದ್ದು ನೀರು ಮಲಿನವಾಗದಂತೆ ನೀರಾವರಿ ಇಲಾಖೆಯವರು ನೋಡಿಕೊಳ್ಳಬೇಕು, ಜೊತೆಗೆ ಈ ಭಾಗದಲ್ಲಿನ ಮೀನು ಸಂಗ್ರಹಗಾರಗಳಿದ್ದು ಇವುಗಳ ಮೂಲಕ ಮೀನುಮರಿ ವಿತರಣೆ ಮಾಡುವಂತೆ ಅಧಿಕಾರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಿ.ಜೆ. ಸೋಮಶೇಖರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶುಭಾ ಸತ್ಯಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರು, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್ ನಾಗರಾಜ್, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

"ಅನಿಲ ಸಿಲಿಂಡರ್ ಗಳು (LPG) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="120126"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!