ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು:ಬಿ.ಸಿ.ಪಾಟೀಲ್

ಉತ್ತರಕನ್ನಡ: ಕೃಷಿ ವಿಶ್ವವಿದ್ಯಾಲಯಗಳು ಕೇವಲ ಬೋಧನೆಗಷ್ಟೇ ಸೀಮಿತವಾಗದೇ ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು.ಕೃಷಿ ವಿಜ್ಞಾನಿಗಳು ರೈತರ ಹೊಲದ ಕಡೆಗೂ ಹೋಗಿ ರೈತ ಸಂಪರ್ಕ ಸಾಧಿಸಿ, ಕೃಷಿಕರಿಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಇಂದು ಕೃಷಿ ವಿಶ್ವವಿದ್ಯಾಲಯ ಧಾರವಾಡ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ನವ ದೆಹಲಿ,ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಉತ್ತರ ಕನ್ನಡ(ಶಿರಸಿ)ಯ ನೂತನ ಆಡಳಿತ ಭವನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಅಧಿಕಾರಿಯನ್ನು ವಿಶ್ವವಿದ್ಯಾಲಯದ ವ್ಯಾಪ್ಯಿಗೊಳಪಡುವ ಪ್ರತಿಜಿಲ್ಲೆಗೊಬ್ಬ ನೋಡೆಲ್ ಆಫಿಸರ್ ಹಾಗೂ ಪ್ರತಿಯೊಂದು ರೈತ ಸಂಪರ್ಕ‌ಕೇಂದ್ರಕ್ಕೆ ಅಸಿಸ್ಟೆಂಟ್ ಪ್ರೊಫೆಸರ್ ಗಳನ್ನು ನೇಮಕ ಮಾಡಬೇಕು. ಕೃಷಿ ವಿಜ್ಞಾನ ಕೇಂದ್ರಗಳು, ವಿಶ್ವವಿದ್ಯಾಲಯಗಳು, ರೈತಸಂಪರ್ಕ‌ಕೇಂದ್ರಗಳು ರೈತನಿಗೋಸ್ಕರ ಇರುವುದು ಎಂಬುದನ್ನು ಮನದಟ್ಟು ಮಾಡಬೇಕು ಎಂದು ಸಚಿವರು ಹೇಳಿದರು.

ಭುಸುಧಾರಣೆ ಕಾಯಿದೆ ತಿದ್ದುಪಡಿ ಹಾಗೂ ಕೊರೊನಾ ಕಾರಣಕ್ಕಾಗಿ ಪಟ್ಟಣದಿಂದ ಹಳ್ಳಿಗಳಗೆ ವಲಸೆ ಹೋಗಿರುವ ಯುವಕರಿಗೆ ಕೃಷಿಯಿಂದಾಗಿ ಉದ್ಯೋಗ ಸಿಗುವಂತಾಗಿದೆ ಎಂದರು.

ಈ ಬಾರಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು ರೈತರ ಆದಾಯ ದುಪ್ಪಟ್ಟಗೊಳಿಸುವ ಬೆಳೆಗೆ ಉತ್ತಮ ಬೆಲೆ ನೀಡುವಂತೆ ಮಾಡಲು ಸರ್ಕಾರ ಮತ್ತು ಇಲಾಖೆ ಹಲವಾರು ಮಹತ್ವದ  ಯೋಜನೆಗಳನ್ನು ಕೈಗೊಳ್ಳುತ್ತಿದೆ.ಇದರ ಪ್ರಮುಖ ಭಾಗವಾಗಿ ಆಸ್ಟ್ರೇಲಿಯಾದಲ್ಲಿ ಬೆಳೆ ಸಮೀಕ್ಷೆಗೆ ಇದ್ದಂತಹ ಆ್ಯಪ್ ಸೌಲಭ್ಯವನ್ನು ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ರೈತ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಸ್ವಾಭಿಮಾನಿ ರೈತ ತನ್ನ ಬೆಳೆಗೆ ತಾನೇ ಮೌಲ್ಯಮಾಪನ ಮಾಡಿ ಪ್ರಮಾಣಪತ್ರ ನೀಡುವ ಹಾಗೂ ಸರ್ಕಾರದಿದ ಸೌಲಭ್ಯವನ್ನು ಪಡೆಯುವಂತಹ ಕ್ರಾಂತಿಕಾರಕ ಹೆಜ್ಜೆ ಇದಾಗಿದೆ ಎಂದರು.

ಕರೊನಾ ‌ಲಾಕ್ಡೌನ್‌ ಬಳಿಕವೂ ಹಾಗೂ ಲಾಕ್ಡೌನ್ ಸಂದರ್ಭದಲ್ಲಿಯೂ ಉಳಿದಂತಹ ಒಂದೇ ಒಂದು ಉದ್ಯಮವೆಂದರೆ ಅದು ಕೃಷಿ‌ಮಾತ್ರ. ಲಾಕ್ಡೌನ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗಬಾರದು ಹಾಗೂ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಬಾರದು ಎಂದು ಲಾಕ್ಡೌನ್‌ನಿಂದ ಕೃಷಿ ಚಟುವಟಿಕೆಗಳಿಗೆ ‌ನಿರ್ಬಂಧ ತೆರವುಗೊಳಿಸಲಾಯಿತು. ಲಾಕ್ಡೌನ್ ಸಂದರ್ಭದಲ್ಲಿ ಕೃಷಿಗೆ ಬಾಧೆಯಾದಲ್ಲಿ ಮುಂದಿನ ದಿನಗಳಲ್ಲಿ ಉಣ್ಣಲು ಅನ್ನ ಸಿಗದು ಎಂಬುದನ್ನು ಮನಗಂಡು ಈ ತೆರವು ನಿರ್ಬಂಧಿಸಿ ಕೃಷಿ ಇಲಖೆ‌ ಮತ್ತು ಸರ್ಕಾರ ರೈತರೊಂದಿಗೆ ಏಪ್ರಿಲ್ 10 ರಂದು ಮುವತ್ತು ಜಿಲ್ಲೆಗಳಲ್ಲಿ ಮುವತ್ತು ದಿನಗಳ ರಾಜ್ಯಾದ್ಯಂತ ಪ್ರವಾಸ ಆರಂಭಿಸಿ ಕೃಷಿ ಚಟುವಟಿಕೆ ಮತ್ತು ರೈತರ ಸಮಸ್ಯೆಗಳನ್ನು ಆಲಿಸಿ ರೈತರಿಗೆ ಆತ್ಮಸ್ಥೈರ್ಯ ತುಂಬಲಾಯಿತು ಎಂದರು.

ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,ಸಚಿವ ಶಿವರಾಮ ಹೆಬ್ಬಾರ್, ಮೇಲ್ಮನೆ ಸದಸ್ಯ ಶಾಂತರಾಮ್ ಸಿದ್ದಿ,ಧಾರವಾಡ  ಕೃಷಿ ವಿವಿಯ ಕುಲಪತಿ ಡಾ.ಮಹಾದೇವ ಚೆಟ್ಟಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಜೆಡಿಎಸ್ ಜೊತೆ ಮೈತ್ರಿ ಬೇಡ ಅಂತಿರೋ ಬಿಜೆಪಿ ಶಾಸಕರಿಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ಜೆಡಿಎಸ್ ಜೊತೆ ಮೈತ್ರಿ ಬೇಡ ಅಂತಿರೋ ಬಿಜೆಪಿ ಶಾಸಕರಿಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ಜೆಡಿಎಸ್ (JDS)- ಬಿಜೆಪಿ (BJP) ಮೈತ್ರಿ ಬಗ್ಗೆ ಹಾದಿ ಬೀದಿಯಲ್ಲಿ ಚರ್ಚೆಯಾದರೆ ಬಗೆಹರಿಯುವುದಿಲ್ಲ. ನಾಲ್ಕು ಗೋಡೆಗಳ ಒಳಗಡೆ ಚರ್ಚೆಯಾಗಿರುವುದು ಆ ಗೋಡೆಗಳ ಒಳಗೆಯೇ ಇರಬೇಕು. ಬೀದಿಯಲ್ಲಿ ಚರ್ಚೆ ಆಗಬಾರದು ಎಂದು ಬಿಜೆಪಿ ನಾಯಕರು ಹೇಳಿಕೆಗೆ

[ccc_my_favorite_select_button post_id="119507"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!