ಬೆಂ.ಗ್ರಾ.ಜಿಲ್ಲೆ: ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಭಾರತ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಜಿಲ್ಲೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ತೆರೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇರುವ ಅರ್ಹ/ನುರಿತ ಮಾಜಿ ರಾಷ್ಟ್ರ/ಅಂತಾರಾಷ್ಟ್ರೀಯ ಮಟ್ಟದ ಚಾಂಪಿಯನ್ ಕ್ರೀಡಾಪಟುಗಳು ಹಾಗೂ ಕ್ರೀಡಾ ಮೂಲಭೂತ ಸೌಕರ್ಯ ಹೊಂದಿರುವ ನೊಂದಾಯಿತ ಕ್ರೀಡಾ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. 

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆ ಅಡಿ ತಳಮಟ್ಟದಲ್ಲಿ ಪರಿಣಾಮಕಾರಿಯಾದ ಕ್ರೀಡಾ ತರಬೇತಿ ವ್ಯವಸ್ಥೆಯನ್ನು ಜಾರಿಗೊಳಿಸಲು ಉದ್ದೇಶಿಸಿದ್ದು, 

ದೇಶಾದ್ಯಂತ 14 ಕ್ರೀಡಾ ವಿಭಾಗ (ಆರ್ಚರಿ, ಅಥ್ಲೆಟಿಕ್ಸ್, ಬಾಕ್ಸಿಂಗ್, ಬ್ಯಾಡ್ಮಿಂಟನ್, ಸೈಕ್ಲಿಂಗ್, ಫೆನ್ಸಿಂಗ್, ಹಾಕಿ, ಜುಡೋ, ರೋಯಿಂಗ್, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್, ಭಾರ ಎತ್ತುವುದು ಮತ್ತು ಕುಸ್ತಿ) ಗಳಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಈ ಉದ್ದೇಶದಡಿ ಜಿಲ್ಲೆಗೆ 2-3 ರಂತೆ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ಸೂಚಿಸಿರುತ್ತದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಥ್ಲೆಟಿಕ್ಸ್, ಹಾಕಿ ಮತ್ತು ಕುಸ್ತಿ ಕ್ರೀಡೆಗಳಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು, ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳ ಪರಿಣಿತಿ ಮತ್ತು ಅನುಭವಗಳನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.

ಈ ಖೇಲೋ ಇಂಡಿಯಾ ಕೇಂದ್ರಗಳಿಗೆ ಕೇಂದ್ರ ಸರ್ಕಾರದಿಂದ ತರಬೇತುದಾರರ ಗೌರವಧನ, ಸಹಾಯಕ ಸಿಬ್ಬಂದಿ, ಕ್ರೀಡಾ ಉಪಕರಣಗಳು, ಕ್ರೀಡಾ ಕಿಟ್, ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆಗೆ ತಗಲುವ ವೆಚ್ಚವನ್ನು ಗರಿಷ್ಠ ವಾರ್ಷಿಕ ರೂ 5.00 ಲಕ್ಷ ವೆಚ್ಚವನ್ನು ಭರಿಸುತ್ತದೆ.   ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸಂಘ ಸಂಸ್ಥೆಗಳ/ಕ್ರೀಡಾ ಸಂಸ್ಥೆಗಳ ಮುಖಾಂತರ ಶೈಕ್ಷಣಿಕ ಸಂಸ್ಥೆಗಳ ಮುಖಾಂತರ ಮೂರು ಕ್ರೀಡೆಗಳಲ್ಲಿ ಪಾಸ್ಟ್ ಚಾಂಪಿಯನ್ ಆಗಿರುವವರು ತರಬೇತುದಾರರನ್ನಾಗಿ 4 ವರ್ಷಗಳ ಅವಧಿಗೆ ನಿಯೋಜಿಸಿಕೊಳ್ಳಲಾಗುವುದು.  ಸದರಿ ತರಬೇತುದಾರರು ಕನಿಷ್ಠ 30 ಮಂದಿಗೆ ತರಬೇತಿಯನ್ನು ನೀಡಬೇಕಾಗಿರುತ್ತದೆ.  ನೇಮಕಗೊಳ್ಳುವ ತರಬೇತುದಾರರಿಗೆ ಪ್ರತೀ ಮಾಹೆ ಗೌರವಧನ ನೀಡಲಾಗುವುದು. ಹಾಗೂ ಕ್ರೀಡಾ ತರಬೇತಿಗೆ ಅವಶ್ಯವಿರುವ ಕ್ರೀಡಾ ಕಿಟ್, ಕ್ರೀಡಾ ಸಲಕರಣೆಗಳನ್ನು ಸಹ ನೀಡಲಾಗುವುದು.ಎನ್‍ಐಎಸ್ ಪ್ರಮಾಣ ಪತ್ರ ಹೊಂದಿರುವ ಪಾಸ್ಟ್ ಚಾಂಪಿಯನ್/ ಕ್ರೀಡಾ ತರಬೇತುದಾರರುಗಳು ಈ ಕೇಂದ್ರ ಸರ್ಕಾರದ ಯೋಜನೆಯ ಅವಕಾಶವನ್ನು ಪಡೆಯಬಹುದಾಗಿದೆ. 

ಕ್ರೀಡಾ ಸಂಸ್ಥೆ/ಶಿಕ್ಷಣ ಸಂಸ್ಥೆಗಳು ಕನಿಷ್ಠ 5 ವರ್ಷಗಳಿಂದ ಕ್ರೀಡೆಯನ್ನು ಉನ್ನತೀಕರಿಸಲು ವಿವಿಧ ಕ್ರೀಡೆಯಲ್ಲಿ ತರಬೇತಿಯನ್ನು ನೀಡಿರುವ ಬಗ್ಗೆ ದಾಖಲೆಗಳೊಂದಿಗೆ  2020ರ ಆಗಸ್ಟ್ 21ರೊಳಗೆ ಅರ್ಜಿ ಸಲ್ಲಿಸುವುದು. 

ಕ್ರೀಡಾ ಸಂಸ್ಥೆ/ ಶಿಕ್ಷಣ ಸಂಸ್ಥೆಗಳು ಕನಿಷ್ಟ 5 ವರ್ಷಗಳಿಂದ ವಿವಿಧ ಕ್ರೀಡೆಗಳನ್ನು ಉನ್ನತೀಕರಿಸಲು ಕ್ರೀಡಾ ತರಬೇತಿಯನ್ನು ನೀಡಿರಬೇಕು, ಕನಿಷ್ಟ ಹಿರಿಯ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಂದ ಕ್ರೀಡಾ ತರಬೇತಿಯನ್ನು ನೀಡಲು ಅರ್ಹರಾಗಿರಬೇಕು,ವಯೋಮಿತಿ 40 ವರ್ಷದೊಳಗಿರಬೇಕು.

ಯೋಜನೆಯ ಮಾರ್ಗಸೂಚಿ ಮತ್ತು ಅರ್ಜಿ ನಮೂನೆಯನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, ಬೆಂಗಳೂರು ಗ್ರಾಮಾಂತರ ಹಾಗೂ ದೂ.ಸಂ.: 9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!