ಜಿಲ್ಲಾ ಕೇಂದ್ರದ ಹೆಸರು ಬದಲಿಸಲು ಪಟ್ಟುಹಿಡಿದಲ್ಲಿ ನಿಸರ್ಗ ನಾರಾಯಣಸ್ವಾಮಿಗೆ ಘೇರಾವ್: ರಾಜಘಟ್ಟರವಿ

ದೊಡ್ಡಬಳ್ಳಾಪುರ: ತನ್ನ ಸ್ವಾರ್ಥ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಜಿಲ್ಲಾ ಕೇಂದ್ರದ ಹೆಸರನ್ನು ದೇವನಹಳ್ಳಿಯನ್ನಾಗಿ ಬದಲಿಸುವ ಹುನ್ನಾರ ನಡೆಸುತ್ತಿರುವ ನಿಸರ್ಗ ನಾರಾಯಣಸ್ವಾಮಿ ತಮ್ಮ‌ ನಿಲುವು ಬದಲಿಸಿಕೊಳ್ಳದಿದ್ದರೆ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಬರದಂತೆ  ಘೇರಾವ್ ಹಾಕಲಾಗುವುದೆಂದು ಕರವೆ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಎಚ್ಚರಿಕೆ ನೀಡಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಕರವೆ ಪ್ರವೀಣ್ ಶೆಟ್ಟಿ ಬಣದ ತಾಲೂಕು ಘಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು,

ಜಿಲ್ಲಾ ಕೇಂದ್ರಕ್ಕೆ ಹೊಂದಿರಬೇಕಾದ ನಗರಸಭೆ, ಬೌಗೋಳಿಕ ವಿಸ್ತೀರ್ಣ, ಸರ್ಕಾರಕ್ಕೆ ವರಮಾನ, ಉಪವಿಭಾಗಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ಅರ್ಹತೆ ಇದ್ದರು ಜಿಲ್ಲಾ ಕೇಂದ್ರ ದೊಡ್ಡಬಳ್ಳಾಪುರಕ್ಕೆ ಬರುವುದು ತಾಲೂಕಿನ ಜನ ಪ್ರತಿನಿಧಿಗಳ ವೈಪಲ್ಯ ಕಾರಣವೆಂದು ಕೈತಪ್ಪಿತು.

ಆ ವೇಳೆ ತೀವ್ರ ಹೋರಾಟ,ನ್ಯಾಯಾಲಯದ ಮೆಟ್ಟಿಲೇರುವ ಕ್ರಮಕ್ಕೆ ಮುಂದಾದರು ಸಹ ಜಿಲ್ಲೆಯ ಎಲ್ಲಾ ತಾಲೂಕಿಗೆ ಅನುಕೂಲವಾಗಲೆಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಜನತೆ ಹೃದಯ ವೈಶಾಲ್ಯ ಪ್ರದರ್ಶಿಸಿ ಸರ್ಕಾರದ ತೀರ್ಮಾನಕ್ಕೆ ಒಪ್ಪಿದ್ದರು. ಆದರೆ ಇಡೀ ಪ್ರಕ್ರಿಯೆಯಲ್ಲಿ ಎಲ್ಲೂ ಇರದ ಜಿಲ್ಲಾ ಕೇಂದ್ರ ಹೆಸರು ಬದಲಾವಣೆ ಪ್ರಸ್ತಾಪವನ್ನು ಆ ವೇಳೆ ಎಲ್ಲೋ ಇದ್ದ ನಿಸರ್ಗ ನಾರಾಯಣಸ್ವಾಮಿ ಶಾಸಕರೆಂಬ ಕಾರಣಕ್ಕೆ ತನ್ನ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈಗ ಜಿಲ್ಲಾ ಕೇಂದ್ರದ ಹೆಸರನ್ನು ಒಂದು ತಾಲೂಕಿಗೆ ಸೀಮಿತಗೊಳಿಸುವ ಮೂಲಕ ಜಿಲ್ಲೆಯ ಇತರ ತಾಲೂಕಿನ ಜನರ ಭಾವನೆಗಳಿಗೆ ಕೊಳ್ಳಿಇಡುತ್ತಿದ್ದಾರೆ. ಕೂಡಲೇ ಈ ಶಡ್ಯಂತ್ರವನ್ನು ನಿಸರ್ಗ ನಾರಾಯಣಸ್ವಾಮಿ ಬಿಡಬೇಕಿದೆ ಇಲ್ಲವಾದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಕಾಲಿಡಲು ಸಹ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ನಿಲುವಿಗೆ ಒತ್ತಾಯ 

ಗೌರವ ಅಧ್ಯಕ್ಷ ಪು.ಮಹೇಶ್, ನಗರ ಅಧ್ಯಕ್ಷ ಶ್ರೀ ನಗರ ಬಶೀರ್ ಮಾತನಾಡಿ, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಜನರ ಬಲಹೀನರೆಂದು ತಿಳಿದ್ದಿದ್ದರೆ ಅದೂ ತಪ್ಪು,

ಜಿಲ್ಲೆಯ ಹೆಸರು ಬದಲಿಸಲು ಮುಂದಾಗುವ ಮೂಲಕ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ  ತಾಲೂಕಿನ ಸಹೋದರತ್ವಕ್ಕೆ ಕೊಳ್ಳಿ ಇಡುತ್ತಿದ್ದಾರೆ.ಇದನ್ನು ಈ ಕೂಡಲೆ ಬಿಡಬೇಕಿದೆ ಇಲ್ಲವಾದಲ್ಲಿ ಇಡೀ ತಾಲೂಕಿನ ಜನತೆ ಹೋರಾಟಕ್ಕೆ ಇಳಿಯಲಿದ್ದಾರೆ‌.ತಾಲೂಕಿನ ಶಾಸಕ ಟಿ.ವೆಂಕಟರಮಣಯ್ಯ ಕೂಡಲೇ ಮಧ್ಯಪ್ರವೇಶ ಮಾಡಬೇಕಿದ್ದು ತಾಲೂಕಿಗೆ ಉಂಟಾಗುತ್ತಿರುವ ಅನ್ಯಾಯದ ವಿರುದ್ದ ತಮ್ಮ ನಿಲುವು ತಿಳಿಸಬೇಕೆಂದು ಒತ್ತಾಯಿಸಿದರು.

ಕಾನೂನು ಸಲಹೆಗಾರರ ಆನಂದ್ ಕುಮಾರ್ ಮಾತನಾಡಿ,ಶಾಸಕರಾಗಿ ನಿಸರ್ಗ ನಾರಾಯಣಸ್ವಾಮಿ ಬೇಜವಬ್ದಾರಿ ಹೇಳಿಕೆ ನೀಡುವುದನ್ನು ಬಿಡಬೇಕಿದೆ.ಬೆಂ.ಗ್ರಾ.ಜಿಲ್ಲೆ ನಾಲ್ಕು ತಾಲೂಕಿಗೆ ಸೇರಿ ಜಿಲ್ಲೆಯಾಗಿದ್ದು ಎಲ್ಲಾ ತಾಲೂಕಿನ ಜನರ ಭಾವನೆಗೆ ಮನ್ನಣೆಕೊಡುವುದನ್ನ ಶಾಸಕರಾದವರು ತಿಳಿಯಬೇಕಿದೆ,ನಾಲ್ಕು ತಾಲೂಕಿಗೂ ತಮ್ಮದೆ ಆದ ಅಸ್ಥಿತ್ವ,ಸ್ಥಾನ ಮಾನ ಹೊಂದಿವೆ ಎಂಬುದನ್ನ ಅರಿತು ವರ್ತಿಸಬೇಕೆಂದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಾವಣೆಯ ಯಾವುದೇ ಪ್ರಯತ್ನ ನಡೆಸಬಾರದೆಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ಮೂಲಕ ‌ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಕಾರ್ಯದರ್ಶಿ ಜೋಗಹಳ್ಳಿ ಅಮ್ಮು, ನಗರ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಹೆಮಂತ್, ಸದಸ್ಯರಾದ ಸೂರಿ,ಮುರುಳಿ,ಶ್ರೀನಿವಾಸ್,ಅಂಬರೀಶ್ ಮತ್ತಿತರರಿದ್ದರು.

ರಾಜಕೀಯ

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ (D.K.Shivakumar) ಮಂಗಳವಾರ ಪ್ರತಿಕ್ರಿಯೆ ನೀಡಿದರು.

[ccc_my_favorite_select_button post_id="110364"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!