ತೀವ್ರಗೊಳ್ಳುತ್ತಿರುವ ಕರೊನಾ ಸೋಂಕಿನ ನಿರ್ವಹಣೆಗೆ ಕ್ರಮಕೈಗೊಳ್ಳಿ ಇಲ್ಲವೆ ಪ್ರತಿಭಟನೆ ಎದುರಿಸಿ: ವಡ್ಡರಹಳ್ಳಿ ರವಿಕುಮಾರ್

ದೊಡ್ಡಬಳ್ಳಾಪುರ: ಕೊರೊನಾ ಸೋಕಿತರ ಸಾವುಗಳ ಪ್ರಮಾಣ ತಾಲ್ಲೂಕಿನಲ್ಲಿ ಶೇ6ಕ್ಕೆ ಏರಿಕೆಯಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿ ಕೊರತೆಯಿಂದಾಗಿ ಸೋಕಿತರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆ ಪರದಾಡುವಂತಾಗಿದೆ. ಜಿಲ್ಲಾಡಳಿತ ಆಸ್ಪತ್ರೆಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸದೇ ಇದ್ದರೆ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಡ್ಡರಹಳ್ಳಿರವಿ ಹೇಳಿದ್ದಾರೆ.

ಅವರು ನಗರದ ಜೆಡಿಎಸ್ ಕಾರ್ಯಾಲಯದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅನ್ಲಾಕ್ ಪ್ರಕ್ರಿಯೆ ಆರಂಭವಾದ ನಂತರ ಕೊರೊನಾ ಸಂಬಂಧಿಸಿದ ಯಾವುದೆ ಜವಾಬ್ದಾರಿಯನ್ನು ಜಿಲ್ಲಾ ಆಡಳಿತ ಸೂಕ್ತ ರೀತಿಯಲ್ಲಿ ನಿರ್ವಹಿಸುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ಷೇತ್ರದ ಶಾಸಕರು ಅಧಿಕಾರಿಗಳ ಸಭೆ ನಡೆಸುವುದಕ್ಕಷ್ಟೇ ಸೀಮಿತವಾಗಿದ್ದಾರೆ ವಿನಹ ವಾಸ್ತವ ಸ್ಥಿತಿಯ ಬಗ್ಗೆ ಒಂದು ದಿನವು ಸಹ ಆಸ್ಪತ್ರೆಗೆ ಭೇಟಿ ನೀಡಿಲ್ಲ. ಕೋವಿಡ್-19 ಪರೀಕ್ಷಾ ವರದಿ ಬರಲು 3 ರಿಂದ 4 ದಿನಗಳ ಕಾಲ ಕಾಯುವಂತಾಗಿದೆ. ಪರೀಕ್ಷಾ ವರದಿ ಬರದೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿಲ್ಲ. ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆಯೇ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ ಎಂದರು. 

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿ ದಿನ ಸುಮಾರು 100ಕ್ಕೂ ಹೆಚ್ಚು ಜನ ಕೋವಿಡ್ ಪರೀಕ್ಷೆಗೆ ಬರುತ್ತಾರೆ. ಆದರೆ ಸಿಬ್ಬಂದಿ ಕೊರತೆಯಿಂದಾಗಿ ಜ್ವರದಿಂದ ಬಳಲುತ್ತಿರುವವರು ಪರೀಕ್ಷೆ ಮಾಡಿಸಿಕೊಳ್ಳಲು ಇಡೀ ದಿನ ಕಾದು ಕುಳಿತುಕೊಳ್ಳಬೇಕು. ಪರೀಕ್ಷೆ ಮಾಡಿಸಿಕೊಳ್ಳುವ ಸ್ಥಳದಲ್ಲಿ ಸ್ವಚ್ಛತೆ, ಸಾಲಾಗಿ ನಿಂತುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ಒಬ್ಬರ ಮೇಲೆ ಒಬ್ಬರು ಮುತ್ತಿಗೆ ಹಾಕಿ ನಿಲ್ಲುವಂತಾಗಿದೆ. ಪರೀಕ್ಷೆ ಮಾಡಿಸಿಕೊಳ್ಳಲು ಹೋಗುವ ಸ್ಥಳದಲ್ಲಿಯೇ ಸೋಂಕು ಇಲ್ಲದವರಿಗೂ ಸೋಂಕು ಹರಡುವ ತಾಣವಾಗಿ ಪರಿಣಮಿಸಿದೆ ಎಂದರು

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ತಾಲ್ಲೂಕಿನ ಶಾಸಕ ಟಿ.ವೆಂಕಟರಮಣಯ್ಯ ಕಾಣೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆಯ ಕುರಿತು ಕಾಳಜಿ ಇಲ್ಲವಾಗಿದ್ದು, ಸ್ವಾತಂತ್ರ ದಿನಾಚರಣೆಯಂದು ಧ್ವಜಾರೋಹಣಕಷ್ಟೇ ಉಸ್ತುವಾರಿ ಸಚಿವರು ಸೀಮಿತವಾಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಹಾಗೂ ಸೌಲಭ್ಯಗಳ ಕೊರತೆಯಿಂದ ವೈದ್ಯಕೀಯ ಸಿಬ್ಬಂದಿ ತೀವ್ರ ಸಂಕಷ್ಟದಲ್ಲಿದ್ದಾರೆ ಎಂದರು.

2013ಕ್ಕೂ ಹಿಂದೆ ಇದ್ದ ಶಾಸಕ ಜೆ.ನರಸಿಂಹಸ್ವಾಮಿ ಅವರು ತಾಲ್ಲೂಕಿಗೆ ಎರಡು ಬಿಬಿಎಂಪಿ ಕಸವಿಲೇವಾರಿ ಘಟಕಗಳನ್ನು ತಂದು ತಾಲ್ಲೂಕನ್ನು ಕಸದ ತೊಟ್ಟಿಯಾಗಿಸಲು ಶ್ರಮಿಸಿದ್ದರು. ಈಗಿನ ಶಾಸಕ ಟಿ.ವೆಂಕಟರಮಣಯ್ಯ ಅವರು ಬಿಬಿಎಂಪಿ ಕಸ ಘಟಕಗಳನ್ನು ಇಲ್ಲಿಯೇ ಉಳಿಸಿಕೊಳ್ಳಲು ಶ್ರಮಿಸುತ್ತಿದ್ದಾರೆ ವಿನಹ ತಾಲ್ಲೂಕಿನ ಜನತೆಗೆ ಬಿಬಿಎಂಪಿ ಕಸದಿಂದ ಮುಕ್ತಿ ಮಾತ್ರ ದೊರೆತಿಲ್ಲ ಎಂದು ದೂರಿದರು.     

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ವಕೀಲರ ಘಟಕದ ಜಿಲ್ಲಾ ಅಧ್ಯಕ್ಷ ಅಂಜನಗೌಡ, ಜೆಡಿಎಸ್ ತಾಲ್ಲೂಕು ಕಾರ್ಯಾಧ್ಯಕ್ಷ ಆರ್.ಕೆಂಪರಾಜ್, ಕಾರ್ಯದರ್ಶಿ ನಾಗರಾಜ್, ನಗರ ಕಾರ್ಯದರ್ಶಿ ಅಖಿಲೇಶ್ ಇದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]