ರಾಜಕೀಯ ಸ್ವಾರ್ಥಕ್ಕೆ ಕರೊನಾ ವಿಚಾರ ಬಳಸಬೇಡಿ : ಜೆಡಿಎಸ್ ನಾಯಕರಿಗೆ ಶಾಸಕ ಟಿ.ವೆಂಕಟರಮಣಯ್ಯ ಟಾಂಗ್

ದೊಡ್ಡಬಳ್ಳಾಪುರ: ಕರೊನಾ ಸೋಂಕಿನಿಂದ ಗುಣಮುಖರಾಗಿ ಬಂದವರಿಂದ ತಾಲೂಕಿನಲ್ಲಿ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಪಡೆದು ನಂತರ ರಾಜಕೀಯ ಸ್ವಾರ್ಥಕ್ಕೆ ಆರೋಪ ಮಾಡಬೇಕೆಂದು ಶಾಸಕ ಟಿ.ವೆಂಕಟರಮಣಯ್ಯ ಜೆಡಿಎಸ್ ಮುಖಂಡರಿಗೆ ಕುಟುಕಿದ್ದಾರೆ.

ಕರೊನಾ ಸೋಂಕಿನ ನಿರ್ವಹಣೆ ಕುರಿತು ಶನಿವಾರ ಜೆಡಿಎಸ್ ಮುಖಂಡರ ಪತ್ರಿಕಾಗೋಷ್ಠಿಯಲ್ಲಿನ ಆರೋಪಕ್ಕೆ ತೀಕ್ಷ್ಣವಾಗಿ ಉತ್ತರ ನೀಡಿರುವ ಅವರು. ಕರೊನಾ ಸೋಂಕು ನಿರ್ವಹಣೆಗೆ ತಾಲೂಕು ಆಡಳಿತ ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದೆ. ಪ್ರಸ್ತುತ ತಾಲೂಕಿನ 1337 ಮಂದಿ ಕರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ರಾಜಕೀಯ ಸ್ವಾರ್ಥಕ್ಕೆ ಜೆಡಿಎಸ್ ಮುಖಂಡರು ಕರೊನಾ ನಿರ್ವಹಣೆಯಲ್ಲಿ ತಾಲೂಕು ಆಡಳಿತ ವಿಫಲ, ಶಾಸಕ ಟಿ.ವೆಂಕಟರಮಣಯ್ಯ ಕಾಣೆಯಾಗಿದ್ದಾರೆ ಎಂದು ಆರೋಪ ಮಾಡುವ ಮುನ್ನ ಗುಣಮುಖರಾಗಿ ಮನೆಗೆ ಮರಳಿದವರ ಕೇಳಿದರೆ ಉತ್ತರ ಸಿಗುತ್ತದೆ ಎಂದು ಟಾಂಗ್ ನೀಡಿದರು.

ನಗರದ ಸಾರ್ವಜನಿಕ ಆಸ್ಪತ್ರೆ, ಬಚ್ಚಹಳ್ಳಿ ಹಾಗೂ ಇಸ್ತೂರಿನ ವಸತಿ ಶಾಲೆಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿ ಸೊಂಕಿಗೆ ಒಳಗಾಗುವ ತಾಲೂಕಿನ ಜನತೆಗೆ ಉತ್ತಮವಾದ ಸೌಲಭ್ಯಯುತ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ನಗರದ ಹೊರವಲಯದ ಸ್ಕೌಟ್ ಕ್ಯಾಂಪ್ ನಲ್ಲಿ 100 ಹಾಸಿಗೆಗಳನ್ನು ಸಿದ್ದವಾಗಿಡಲಾಗಿದೆ.

ಇದಲ್ಲದೆ ಕರೊನಾ ಸೋಂಕಿತರ ಅಂಕಿ ಸಂಖ್ಯೆಯ ಪಾರದರ್ಶಕವಾಗಿಡಲು ರಾಜ್ಯ ಸರ್ಕಾರಕ್ಕೆ ಸಡ್ಡು ಒಡೆದು. ತಾಲೂಕಿನ ಪ್ರತ್ಯೇಕ ಕೋವಿಡ್-19 ಬುಲೆಟಿನ್ ನೀಡಲಾಗುತ್ತಿದೆ. ಇದು ಹೇಳಬಾರದು ಆದಾಗ್ಯೂ ಮಂಚದ ಕೊರತೆ ಉಂಟಾದ ಮಾಹಿತಿ ಬಂದ ಕೂಡಲೇ ವಯಕ್ತಿಕವಾಗಿ ಶ್ರಮವಹಿಸಿ ಖಾಸಗಿ ಕಾರ್ಖಾನೆಯಿಂದ ನಿರ್ಮಿಸಲಾಗುವ ರಟ್ಟಿನ ಮಂಚಗಳನ್ನು ತಂದು ನೀಡಲಾಗಿದೆ ಎಂದರು.

ಕರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ

ಕರೊನಾ ನಿರ್ವಹಣೆ ನಿಜಕ್ಕೂ ವಿಫಲವಾಗಿರುವುದು ರಾಜ್ಯ ಸರ್ಕಾರವೇ ಹೊರತು, ದೊಡ್ಡಬಳ್ಳಾಪುರ ತಾಲೂಕು ಆಡಳಿತವಲ್ಲ ಎಂದು ಕಿಡಿಕಾರಿದ ಶಾಸಕ ಟಿ.ವೆಂಕಟರಮಣಯ್ಯ ಸರ್ಕಾರ ಕರೊನಾ ನಿರ್ವಹಣೆಗೆ ಸೂಕ್ತ ಸೌಲಭ್ಯ ನೀಡದೆ ಇರುವುದು ಹೆಚ್ಚುವರಿ ವೈದ್ಯರು, ಸಿಬ್ಬಂದಿಗಳನ್ನು ನೇಮಿಸದೆ ಸಂಕಷ್ಟಕ್ಕೆ ದೂಡಿದೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆಯ ನೆನಪೆ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರದ ವೈಪಲ್ಯದ ನಡುವೆಯೂ ದೊಡ್ಡಬಳ್ಳಾಪುರ ತಹಶಿಲ್ದಾರ್, ಆರೋಗ್ಯ ಅಧಿಕಾರಿ, ನಗರಸಭೆ, ತಾಲೂಕು ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯ ಸಾಧಿಸಿ ನಿರಂತರವಾಗಿ ಸಭೆ ನಡೆಸಿ ಕರೊನಾ ಸೋಂಕಿನ ನಿರ್ವಹಣೆಗೆ ಅವಿರತ ಶ್ರಮಿಸಲಾಗುತ್ತಿದೆ. ಆಕಾಶ್ ಆಸ್ಪತ್ರೆಯಲ್ಲಿ ಸೋಂಕಿತರ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ದೊಡ್ಡಬಳ್ಳಾಪುರ ತಾಲ್ಲೂಕಿನ ಸೋಂಕಿತರನ್ನು ಆಕಾಶ್ ಆಸ್ಪತ್ರೆಗೆ ಚಿಕಿತ್ಸೆಗೆ ಕಳಿಸುವುದನ್ನು ಸಹ ನಿಲ್ಲಿಸಲಾಗಿದೆ ಎಂದರು.

ಕರೊನಾ ಸೋಂಕು ಇಡೀ ಪ್ರಪಂಚವನ್ನೆ ಕಾಡುತ್ತಿರುವಂತೆ ದೊಡ್ಡಬಳ್ಳಾಪುರವನ್ನು ಕಾಡುತ್ತಿದೆ, ರಾಜಕೀಯ ಸ್ವಾರ್ಥಕ್ಕೆ ಆರೋಪ ಮಾಡಿ ಸೋಂಕಿನ ನಿರ್ವಹಣೆಗೆ ಶ್ರಮಿಸುತ್ತಿರುವ ಕರೊನಾ ವಾರಿಯರ್ಸ್‌ ಗಳ ಆತ್ಮ ಸ್ಥೈರ್ಯವನ್ನು ಕುಗ್ಗಿಸುವ ಪ್ರಯತ್ನ ಮಾಡಬಾರದೆಂದು ಮನವಿ ಮಾಡಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]