ದೊಡ್ಡಬಳ್ಳಾಪುರ: ಯಕ್ಷಗಾನ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ಎಸ್.ಸಿ.ಜಗದೀಶ್‌ ನಿಧನ

ದೊಡ್ಡಬಳ್ಳಾಪುರ: ಕರ್ನಾಟಕ ಸರ್ಕಾರದ ಯಕ್ಷಗಾನ ಅಕಾಡೆಮಿಯ 2018ನೇ ಸಾಲಿನ ಗೌರವ ಪ್ರಶಸ್ತಿ ಪುಸ್ಕೃತ ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ಅಧ್ಯಕ್ಷ ಎಸ್.ಸಿ.ಜಗದೀಶ್(87) ಗುರುವಾರ (ಸೆ.24) ರಾತ್ರಿ ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ರಾತ್ರಿ 10.30 ಕೊನೆಯುಸಿರೆಳೆದರು. ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆ ದೇವಾಂಗ ಮಂಡಳಿ ಮುಕ್ತಿಧಾಮದಲ್ಲಿ ಇಂದು (ಸೆ.25) 12 ಗಂಟೆ ಸುಮಾರಿಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಹರಿತಲೇಖನಿಗೆ ತಿಳಿಸಿವೆ.

ನಗರದ ಚೌಡೇಶ್ವರಿ ಗುಡಿ ಬೀದಿಯ ನಿವಾಸಿಗಳಾದ ಎಸ್.ಚನ್ನಪ್ಪ ಮತ್ತು ಲಕ್ಷ್ಮೀದೇವಮ್ಮ ದಂಪತಿಯ ಮಗನಾದ ಎಸ್.ಸಿ.ಜಗದೀಶ್ (87),8 ನೇ ವಯಸ್ಸಿನಲ್ಲಿಯೇ ಯಕ್ಷಗಾನ,ಬಯಲು ನಾಟಕಗಳ ಕುರಿತು ಆಸಕ್ತಿ ಬೆಳೆಸಿಕೊಂಡವರು.ತಮ್ಮ 15ನೇ ವಯಸ್ಸಿನಲ್ಲಿ ದೊಡ್ಡಬಳ್ಳಾಪುರದ ಪ್ರಸಿದ್ದ ಯಕ್ಷಗಾನ ಮಂಡಳಿಯಾದ ಶ್ರೀ ಯದ್ಗಳ್ಳಿ ಪಾಪಣ್ಣ ಭಾಗವತ ಯಕ್ಷಗಾನ ಮಂಡಳಿಯಲ್ಲಿ ಅಭಿನಯಿಸುವ ಮೂಲಕ ಬಣ್ಣದ ಬದುಕನ್ನು ಆರಂಭಿಸಿದವರಾಗಿದ್ದು, ಕರಿರಾಜ ಚರಿತ್ರೆ ಯಕ್ಷಗಾನದಲ್ಲಿ ಒಂದೇ ಪ್ರದರ್ಶನದಲ್ಲಿ ಮಂತ್ರಿ,ಸಖಿ,ಬಾಣಂತಿ ಪಾತ್ರಗಳನ್ನು ಅಭಿನಯಿಸಿ ಪ್ರಶಂಸೆಗೆ ಪಾತ್ರರದವರು.ಅಲ್ಲದೆ ಬಾಣಾಸುರ ನಾಟಕದಲ್ಲಿ ಬಾಣಸುರ ಹಾಗೂ ತಾರಾಚಂದ್ರ ನಾಟಕದಲ್ಲಿ ಚಂದ್ರ ಪಾತ್ರವನ್ನು ಅಚ್ಚುಕಟ್ಟಾಗಿ ಅಭಿನಯಿಸಿ ಜನ ಮೆಚ್ಚುಗೆ ಗಳಿಸಿದವರಾಗಿದ್ದರು.

ಅನಾರೋಗ್ಯಕ್ಕೆ ಈಡಾಗಿದ್ದರು ಯಕ್ಷಗಾನ ರಂಗದಲ್ಲಿ ಸಕ್ರಿಯರಾಗಿ ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಕಲಿಸುತ್ತಿದ್ದರು.ಅಲ್ಲದೆ ಗಾಳಿ ಪಟ ತಯಾರಿಸಿ ಹಾರಿಸುವ ಕಲೆಯಲ್ಲಿ ಪರಿಣಿತರಾದ ಜಗದೀಶ್,ವಿವಿಧ ಆಕಾರದ ಗಾಳಿ ಪಟಗಳನ್ನು ತಯಾರಿಸುವುದರಲ್ಲಿ ನಿಸ್ಸೀಮರು.ಇವರ ವಾಲಿ ಸುಗ್ರೀವ ಹಾಗೂ ಜೋಡಿ ಲೇಡಿಪಟಗಳನ್ನು ಮೆಚ್ಚಿ ಜಾನಪದ ತಜ್ಞ ಹೆಚ್.ಎಲ್.ನಾಗೇಗೌಡರು ಗಾಳಿಪಟದ ಅಜ್ಜರೆಂದು ಬಿರುದು ನೀಡಿ ಸನ್ಮಾನಿಸಿದ್ದಾರೆ. ಅಲ್ಲದೆ ಗಣರಾಜ್ಯೋತ್ಸವದಲ್ಲಿ ದೊಡ್ಡಬಳ್ಳಾಪುರ ನಗರಸಭೆಯಿಂದ ಸನ್ಮಾನ,ತುಮಕೂರಿನಲ್ಲಿ ನಡೆದ ಡಾ. ಹೆಚ್.ಎಲ್.ನಾಗೇಗೌಡರ ಜನ್ಮ ಶತಮಾನೋತ್ಸವದ ವೇಳೆ ನಡೆದ ರಾಜ್ಯ ಮಟ್ಟದ ಗಾಳಿಪಟ ಸ್ಪರ್ದೆಯಲ್ಲಿ ಕರ್ನಾಟಕ ಜಾನಪದ ಪರಿಷತ್‌ವತಿಯಿಂದ ಸನ್ಮಾನ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಂದಲೂ ಸನ್ಮಾನಿತರಗಿದ್ದಾರೆ.

ಇವರ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರದ ಯಕ್ಷಗಾನ ಅಕಾಡೆಮಿಯ 2018 ನೇ ಸಾಲಿನ ಗೌರವ ಪ್ರಶಸ್ತಿ ಆಯ್ಕೆ ಮಾಡಿ. ಡಿ.9 ರಂದು ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಡೆಯುವ 2018 ನೇ ಸಾಲಿನ ಪ್ರತಿಷ್ಟಿತ ಪರ್ತಿ ಸುಬ್ಬ ಪ್ರಶಸ್ತಿ,ಗೌರವ ಪ್ರಶಸ್ತಿ,ಹಾಗೂ ಯಕ್ಷ ಸಿರಿ ವಾರ್ಷಿಕ ಪ್ರಸಸ್ತಿ ಮತ್ತು ಪುಸ್ತಕ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಬೇಕಿತ್ತು. ಆದರೆ ಅನಾರೋಗ್ಯದ ಕಾರಣ ಕಾರ್ಯಕ್ರಮಕ್ಕೆ ತೆರಳದ ಜಗದೀಶ್ ಅವರ ಮನೆಗೆ ಬಂದು ಪ್ರಶಸ್ತಿ ನೀಡಿ ಗೌರವಿಸಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]