ದೊಡ್ಡಬಳ್ಳಾಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅನುದಾನಿತ ಹಾಗೂ ಅನುದಾನ ರಹಿತ ಹಿರಿಯ ನಾಗರಿಕರ ವೃದ್ಧಾಶ್ರಮ ನಡೆಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ 2007ರಡಿ ನೋಂದಣಿ ಹಾಗೂ ನವೀಕರಣ ಮಾಡಲು ಪ್ರಸ್ತಾವನೆಗಾಗಿ ಆಹ್ವಾನಿಸಲಾಗಿದೆ.
ಪ್ರಸ್ತಾವನೆ ಸಲ್ಲಿಸಲಿಚ್ಛಿಸುವವರು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವುದು.
ಕೋವಿಡ್-19 ರ ಸಂದರ್ಭದಲ್ಲಿ ಹಿರಿಯ ನಾಗರಿಕರಿಗಾಗಿ ವೃದ್ದಾಶ್ರಮವನ್ನು ನಡೆಸುತ್ತಿರುವವರ ಮಾಹಿತಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಅವಶ್ಯಕವಿದ್ದು,2020ರ ಸೆಪ್ಟೆಂಬರ್ 29 ರೊಳಗೆ ಮಾಹಿತಿಯನ್ನು ನೋಂದಾಯಿಸಲು ಕೊನೆಯ ದಿನವಾಗಿದ್ದು, ಮಾಹಿತಿ ನೋಂದಾಯಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿ, ಕೊಠಡಿ ಸಂಖ್ಯೆ: 03, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಸಂಪರ್ಕಿಸುವುದು.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9980860605 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

