ಬೆಂ.ಗ್ರಾ.ಜಿಲ್ಲೆ: ಕೃಷಿ ಬೆಳೆಗಳಲ್ಲಿ ಕೀಟ ಹಾಗೂ ರೋಗ ಬಾಧೆ ನಿಯಂತ್ರಣಕ್ಕೆ ಕ್ರಮಗಳು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಉತ್ತಮವಾಗಿ ಮಳೆಯಾಗಿದ್ದು, ಶೇ. 21ರಷ್ಟು ಅಧಿಕ ಮಳೆಯಾಗಿರುತ್ತದೆ. ಕಳೆದ ಸಾಲಿನಲ್ಲಿ ಆಗಸ್ಟ್ ಎರಡನೇ ವಾರದಲ್ಲಿ ಮಳೆಯಾಗಿ ಬಿತ್ತನೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 88ರಷ್ಟು ಪ್ರದೇಶದಲ್ಲಿ ಬಿತ್ತನೆಯಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.99 ರಾಗಿ, ಮುಸುಕಿನ ಜೋಳ, ತೊಗರಿ, ಅಲಸಂದೆ ಹಾಗೂ ನೆಲಗಡಲೆ ಬಿತ್ತನೆಯಾಗಿದ್ದು, ಬೆಳೆಗಳಲ್ಲಿ ಕೀಟ/ರೋಗಬಾಧೆ ಕಂಡುಬಂದಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಸತತವಾಗಿ ಮಳೆಯಾಗುತ್ತಿದ್ದು ರಾಗಿ ಬೆಳೆಯಲ್ಲಿ ಎಲೆಗಳ ಮೇಲೆ ಕಂದು ಬಣ್ಣದ ವಜ್ರಾಕಾರದ ಚುಕ್ಕೆಗಳು ಕಾಣಿಸಿಕೊಂಡು ಅವುಗಳು ಒಂದಕ್ಕೊಂದು ಸೇರಿ ಎಲೆಗಳು ಒಣಗುತ್ತಿದ್ದರೆ ಒಂದು ಗ್ರಾಂ ಕಾರ್ಬೆಂಡಾಜಿಯಮ್ 50% WP ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಎಕರೆಗೆ 200ರಿಂದ 250 ಲೀ ಸಿಂಪಡಿಸಬೇಕು. ನಿಯಂತ್ರಣಕ್ಕೆ ಬಾರದಿದ್ದಲ್ಲಿ ಬೆಂಕಿ ರೋಗವು ಇಳುಕುಗಳನ್ನು ಆವರಿಸಿ ಇಳುಕುಗಳು ಕಾಳು ಕಟ್ಟದೇ ಅಥವಾ ಕಾಳು ಕಟ್ಟದ ಪಕ್ಷದಲ್ಲಿ ಇಳುಕುಗಳು ಮುರಿದು ಆರ್ಥಿಕ ನಷ್ಟ ಉಂಟು ಮಾಡುತ್ತದೆ. ಆದುದರಿಂದ ಮೊದಲನೇ ಸಿಂಪರಣೆ ನಿಯಂತ್ರಣಕ್ಕೆ ಬಾರದಿದ್ದಲ್ಲಿ 15 ದಿನಗಳ ನಂತರ ಎರಡನೇ ಸಿಂಪರಣೆಯಾಗಿ ಒಂದು ಗ್ರಾಂ ಕಾರ್ಬೆಂಡಾಜಿಯಮ್ 50 WP ಅನ್ನು ಅಥವಾ 2.5ಗ್ರಾಂ ಡೈಯಥೇನ್- Z 78 ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಶೇ.50 ರಷ್ಟು ತೆನೆ ಬಂದಾಗ ಸಿಂಪಡಿಸಬೇಕು.

ತೊಗರಿಯಲ್ಲಿ 45 ರಿಂದ 50 ದಿನಗಳ ಬೆಳೆಯಿದ್ದಲ್ಲಿ ಕುಡಿಯನ್ನು ಚಿವುಟುವುದರಿಂದ ಕವಡುಗಳ ಸಂಖ್ಯೆ ಹೆಚ್ಚಾಗಲಿದ್ದು ಅಧಿಕ ಇಳುವರಿ ಪಡೆಯಬಹುದಾಗಿದೆ. ತೊಗರಿ ಬೆಳೆಯಲ್ಲಿ ಪೈಟಾಪ್ತೆರಾ ಮಚ್ಚೆ ರೋಗಕ್ಕೆ ಮೆಟಲಾಕ್ಸಿನ್+ಮ್ಯಾಂಕೋಜೆಬ್ 2ಗ್ರಾಂ/ಲೀ ಅನ್ನು ಗಿಡದ ಬುಡಕ್ಕೆ ಸಿಂಪಡಿಸುವುದು ಮತ್ತು ಬಂಜೆ ನಂಜು ರೋಗ ತಡೆಗಟ್ಟಲು ಪ್ರೋಪಾರ್ಗೈಟ್ (2.5 ಮಿ.ಲಿ/ಲೀ) ಅನ್ನು ಸಿಂಪಡಿಸಬಹುದಾಗಿದೆ. ತೊಗರಿಯಲ್ಲಿ ಸೊರಗು ರೋಗದ ಹತೋಟಿಗೆ 1ಗ್ರಾಂ ಥಯೋಫಿನೇಟ್ ಮೀತೈಲ್ ಅನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಗಿಡದ ಸುತ್ತಲೂ ತೋಯಿಸಬೇಕು. ತೊಗರಿ ಮತ್ತು ಅವರೆಯಲ್ಲಿ ಕಾಯಿಕೊರಕದ ಹತೋಟಿಗೆ 0.25 ಮಿ.ಲೀ ಸ್ಪೈನೋಸ್ಯಾಡ್ ಅನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. 

ಮುಸುಕಿನ ಜೋಳದಲ್ಲಿ ಲದ್ದಿ ಹುಳು ಬಾಧೆಯಿದ್ದು, ರೈತರು ಬಿತ್ತನೆಯ ಒಂದು ವಾರದ ನಂತರ ಬೇವಿನ ಔಷಧಿಗಳನ್ನು ಸಿಂಪಡಿಸುವುದರಿಂದ ಪತಂಗಗಳು ಮೊಟ್ಟೆ ಇಡುವುದನ್ನು ತಪ್ಪಿಸಬಹುದು. ಎರಡನೇ ವಾರದ ನಂತರ ವಿಷ ಪಾಷಣವನ್ನು (10 ಕೆ.ಜಿ ಯಷ್ಟು ಭತ್ತದ ಹೊಟ್ಟನ್ನು ಮತ್ತು 2 ಕೆ.ಜಿ ಬೆಲ್ಲವನ್ನು 2 ರಿಂದ 3ಲೀ ನೀರಿನಲ್ಲಿ 24 ಗಂಟೆಗಳ ಕಾಲ ನೆನೆಸಿಡಬೇಕು. ನಂತರ ಸಿಂಪರಣೆಯ ಅರ್ಧಗಂಟೆ ಮುಂಚೆ 100 ಗ್ರಾಂ ತಯೋಡೈಕಾರ್ಬ್ ಅನ್ನು ಮಿಶ್ರಣ ಮಾಡಿ)ಸಸಿಗಳ ಸುಳಿಗೆ ಹಾಕುವುದು ಅಥವಾ 0.4 ಗ್ರಾಂ ಎಮಾಮೆಕ್ಟಿನ್ ಬೆಂಜೋಯೆಟ್ ಅನ್ನು ಪ್ರತಿ ಲೀ. ನೀರಿಗೆ ಬೆರೆಸಿ ಸುಳಿಗೆ ಸಿಂಪಡಿಸುವುದು. ಎಲ್ಲಾ ಸಿಂಪರಣೆಯನ್ನು ಪೂರ್ವಾಹ್ನ 11.00 ಘಂಟೆಯೊಳಗೆ ಅಥವಾ ಅಪರಾಹ್ನ 3 ರಿಂದ 5 ಘಂಟೆಯೊಳಗೆ ಸಿಂಪಡಿಸಿದಲ್ಲಿ ಪರಿಣಾಮಕಾರಿಯಾಗಿ ಕೀಟಗಳನ್ನು ನಿಯಂತ್ರಿಸಬಹುದಾಗಿದೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]