ದೊಡ್ಡಬಳ್ಳಾಪುರ: ಜಾಗತೀಕರಣ, ಖಾಸಗೀಕರಣದ ಇಂದಿನ ದಿನಗಳಲ್ಲಿ ನಾವು ದೇಶದ ಐಕ್ಯತೆ ಸಮಗ್ರತೆಗಳನ್ನು ಕಾಪಾಡಿಕೊಂಡು ದೇಶವನ್ನು ಮುನ್ನಡೆಸುವ ಗುರುತರ ಹೊಣೆಗಾರಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಕಾರಿ ಡಾ.ಜಗದೀಶ್.ಕೆ.ನಾಯಕ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ, ಪೌರಾಡಳಿತ ಇಲಾಖೆ, ಜಿಲ್ಲಾಡಳಿತ ಹಾಗೂ ನಗರಸಭೆ ಸಹಯೋಗದೊಂದಿಗೆ ಗ್ರಾಮಾಂತರ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಸಮಾರೋಪದ ಅಂಗವಾಗಿ ಪರಿಸರ ಸ್ವಚ್ಛತಾ ಕಾರ್ಯಕ್ರಮ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂವಿಧಾನದಲ್ಲಿ ನಂಬಿಕೆ ಇಟ್ಟು ಗೌರವ ನೀಡುವುದರೊಂದಿಗೆ ನಮ್ಮ ಕರ್ತವ್ಯ ನಿಭಾಯಿಸಬೇಕಿದೆ. ಐಕ್ಯತೆ ಹಾಗೂ ಸಮಗ್ರತೆಯಿಂದ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಭಾಷೆ, ನೆಲ, ಸಂಸ್ಕೃತಿ ವಿಷಯದಲ್ಲಿ ಭಾರತೀಯರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಶಕ್ತಿಯಿದ್ದು, ನಮ್ಮ ಕಲೆ ಸಂಸ್ಕೃತಿ ಪರಂಪರೆಗಳನ್ನು ವಿಶ್ವ ಮಟ್ಟದಲ್ಲಿ ಸಾರುವುದು ಹಾಗೂ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಕಾರ್ಯಕ್ರಮ ಈ ದ್ಯೇಯಗಳಿಗೆ ಇಂಬು ನೀಡುತ್ತಿದೆ. ನ.19ರಿಂದ 25ರವರೆಗೆ ಜಿಲ್ಲೆಯಾದ್ಯಂತ ಕಾನೂನು ಸೇವೆಗಳ ಮಾರ್ಗದರ್ಶನದಂತೆ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಿಸಲಾಗುತ್ತಿದ್ದು, ವಿವಿಧ ಇಲಾಖೆಗಳು ಇದರಲ್ಲಿ ತೊಡಗಿಸಿಕೊಂಡಿವೆ. ಪರಿಸರ ಸಂರಕ್ಷಣೆ, ಪ್ರತಿಜ್ಞಾ ವಿ ಬೋಧನೆ, ಕವಿ ಗೋಷ್ಟಿ ಮೊದಲಾದ ವಿವಿಧ ಕಾರ್ಯಕ್ರಮಗಳನ್ನು ಸಪ್ತಾಹದಲ್ಲಿ ಹಮ್ಮಿಕೊಳ್ಳಲಾಗಿತ್ತು ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ನಾಗರಕೆರೆ ಅಂಗಳದಲ್ಲಿ ಸಸಿಗಳನ್ನು ನೆಡಲಾಯಿತು ಹಾಗೂ ಗಗನಾರ್ಯ ಮಠದ ಅಯ್ಯ ಪಂತರ ಕಲ್ಯಾಣಿಯನ್ನು ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭದಲ್ಲಿ ಪೌರಾಡಳಿತ ಇಲಾಖೆಯ ಜಿಲ್ಲಾ ಯೋಜನಾ ನಿರ್ದೇಶಕರಾದ ಬಿ.ಎಸ್.ಸುಮಾ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಪರಿಸರ ಅಭಿಯಂತರ ಈರಣ್ಣ, ಹಿರಿಯ ಆರೋಗ್ಯ ನಿರೀಕ್ಷಕರಾದ ರೂಪಾ ಹಾಗೂ ನಗರಸಭೆ ಸಿಬ್ಬಂದಿ, ಪೌರ ಕಾರ್ಮಿಕರು ಭಾಗವಹಿಸಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

