ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 92 ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಿದ್ದು, ಕೋವಿಡ್-19ರ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊದಲ ಹಂತದ ಚುನಾವಣೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳು ಹಾಗೂ ನೆಲಮಂಗಲ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿದೆ. 2020ರ ಡಿಸೆಂಬರ್ 07 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನವಾಗಿದ್ದು, ಡಿಸೆಂಬರ್ 11 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಡಿಸೆಂಬರ್ 12 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಡಿಸೆಂಬರ್ 14 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ, ಡಿಸೆಂಬರ್ 22 ರಂದು ಬೆಳಿಗ್ಗೆ 7.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯ ಇದ್ದಲ್ಲಿ ಡಿಸೆಂಬರ್ 24 ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಬೆಳಿಗ್ಗೆ 8.00 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಡಿಸೆಂಬರ್ 31 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.
ಎರಡನೇ ಹಂತದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳು ಹಾಗೂ ದೇವನಹಳ್ಳಿ ತಾಲ್ಲೂಕಿನ 20 ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿದೆ. 2020ರ ಡಿಸೆಂಬರ್ 11 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನವಾಗಿದ್ದು, ಡಿಸೆಂಬರ್ 16 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಡಿಸೆಂಬರ್ 17 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಡಿಸೆಂಬರ್ 19 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ, ಡಿಸೆಂಬರ್ 27 ರಂದು ಬೆಳಿಗ್ಗೆ 7.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯ ಇದ್ದಲ್ಲಿ ಡಿಸೆಂಬರ್ 29 ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಬೆಳಿಗ್ಗೆ 8.00 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಡಿಸೆಂಬರ್ 31 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.
ಮೊದಲ ಹಂತದಲ್ಲಿ ಹೊಸಕೋಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಾದ ಇಟ್ಟಸಂದ್ರ, ನೆಲವಾಗಿಲು, ನಂದಗುಡಿ, ದೊಡ್ಡರಳಗೆರೆ, ಸೂಲಿಬೆಲೆ, ಗಿಡ್ಡಪ್ಪನಹಳ್ಳಿ, ಕಂಬಳೀಪುರ, ಶಿವನಾಪುರ, ಬೈಲನರಸಾಪುರ, ತಾವರೆಕೆರೆ, ಮುಗಬಾಳ, ದೊಡ್ಡಹುಲ್ಲೂರು ಲಕ್ಕೊಂಡಹಳ್ಳಿ, ಕುಂಬಳಹಳ್ಳಿ, ದೊಡ್ಡಗಟ್ಟಿಗನಬ್ಬೆ, ದೊಡ್ಡನಲ್ಲಾಳ, ಓರೋಹಳ್ಳಿ, ಜಡಿಗೇನಹಳ್ಳಿ, ವಾಗಟ, ಖಾಜಿಹೊಸಹಳ್ಳಿ, ದೇವನಗುಂದಿ, ಅನುಗೊಂಡನಹಳ್ಳಿ, ಗಣಗಲೂರು, ಕಲ್ಕುಂಟೆ, ಅಗ್ರಹಾರ, ಹೆತ್ತಕ್ಕಿ, ಚೊಕ್ಕಹಳ್ಳಿ ಸೇರಿದಂತೆ ಒಟ್ಟು 26 ಗ್ರಾಮ ಪಂಚಾಯಿತಿಗಳು ಹಾಗೂ ನೆಲಮಂಗಲ ತಾಲ್ಲೂಕಿನ ಗ್ರಾಮ ಪಂಚಾಯತಿಗಳಾದ ಸೋಲದೇವನಹಳ್ಳಿ, ಎಂಟಗಾನಹಳ್ಳಿ, ಶ್ರೀನಿವಾಸಪುರ, ಬೂದಿಹಾಳ್, ಟಿ.ಬೇಗೂರು, ಹಸಿರುವಳ್ಳಿ, ದೊಡ್ಡಬೆಲೆ, ಕೊಡಿಗೇಹಳ್ಳಿ, ತ್ಯಾಮಗೊಂಡ್ಲು, ಕಳಲುಘಟ್ಟ, ಮಣ್ಣೆ, ಮರಳಕುಂಟೆ, ನರಸೀಪುರ, ಅಗಳಕುಪ್ಪೆ, ಸೋಂಪುರ, ಹೊನ್ನೇನಹಳ್ಳಿ, ಶಿವಗಂಗೆ, ಅರೆಬೊಮ್ಮನಹಳ್ಳಿ, ಕುಲುವನಹಳ್ಳಿ, ಗೊಲ್ಲಹಳ್ಳಿ, ಕಣೇಗೌಡನಹಳ್ಳಿ ಸೇರಿದಂತೆ ಒಟ್ಟು 21 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಾದ ಕೊಡಿಗೇಹಳ್ಳಿ, ಕೆಸ್ತೂರು, ರಾಜಘಟ್ಟ, ಕೊನಘಟ್ಟ, ಕಂಟನಕುಂಟೆ, ತೂಬಗೆರೆ, ಹಾಡೋನಹಳ್ಳಿ, ಮೆಳೇಕೋಟೆ, ಹೆಗ್ಗಡಿಹಳ್ಳಿ, ಹಣಬೆ, ತಿಪ್ಪೂರು, ದೊಡ್ಡಬೆಳವಂಗಲ, ಹಾದ್ರಿಪುರ, ಸಕ್ಕರೆಗೊಲ್ಲಹಳ್ಳಿ, ಹುಲಿಕುಂಟೆ, ಸಾಸಲು, ಭಕ್ತರಹಳ್ಳಿ, ಆರೂಢಿ, ಹೊಸಹಳ್ಳಿ, ಚನ್ನಾದೇವಿ, ಅಗ್ರಹಾರ, ಕಾಡನೂರು, ಕನಸವಾಡಿ, ಹೊನ್ನಾವರ ದೊಡ್ಡತುಮಕೂರು, ಮೇಲಿನಜೂಗಾನಹಳ್ಳಿ ಸೇರಿದಂತೆ ಒಟ್ಟು 25 ಗ್ರಾಮ ಪಂಚಾಯಿತಿಗಳು ಹಾಗೂ ದೇವನಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಾದ ಕುಂದಾಣ, ಜಾಲಿಗೆ, ಕನ್ನಮಂಗಲ, ವಿಶ್ವನಾಥಪುರ, ಕೊಯಿರಾ, ಕಾರಹಳ್ಳಿ, ಬಿದಲೂರು, ವೆಂಕಟಗಿರಿಕೋಟೆ, ಬಿಜ್ಜವಾರ, ಗೊಡ್ಲುಮುದ್ದೇನಹಳ್ಳಿ, ಆವತಿ, ಯಲಿಯೂರು, ಗಂಗವಾರಚೌಡಪ್ಪನಹಳ್ಳಿ, ಚನ್ನಹಳ್ಳಿ, ಬೆಟ್ಟಕೋಟೆ, ಬೂದಿಗೆರೆ, ಅಣ್ಣೇಶ್ವರ, ಆಲೂರುದುದ್ದನಹಳ್ಳಿ, ಮಂಡಿಬೆಲೆ, ಐಬಸಾಪುರ ಸೇರಿದಂತೆ ಒಟ್ಟು 20 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.
ಗ್ರಾಮ ಪಂಚಾಯತಿಗಳಿಗೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ನಾಮಪತ್ರ ಸಂಬಂಧಿತ ಎಲ್ಲಾ ಪ್ರಕ್ರಿಯೆಗಳು ಆಯಾ ಗ್ರಾಮ ಪಂಚಾಯತಿ ಕಾರ್ಯಾಲಯ/ಕಚೇರಿಗಳಲ್ಲಿ ನಡೆಯಲಿವೆ. ಆ ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಹಾಗೂ ವರ್ಗವಾರು ಮೀಸಲಾತಿ ನಿಗದಿಪಡಿಸಿರುವ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಿದ್ದು, ಸ್ಫರ್ಧಿಸಲು ಇಚ್ಚಿಸುವ ಅಭ್ಯರ್ಥಿಯು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟ ವ್ಯಕ್ತಿಯಾಗಿರಬೇಕು ಹಾಗೂ ಕನಿಷ್ಠ 21 ವರ್ಷ ವಯೋಮಾನವನ್ನು ಪೂರೈಸಿರಬೇಕು.
ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2020ರ ನವೆಂಬರ್ 30 ರಿಂದ ಡಿಸೆಂಬರ್ 31 ರ ಸಂಜೆ 5-00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಚುನಾವಣೆಯು ಪಕ್ಷರಹಿತ ಚುನಾವಣೆ ಆಗಿರುವುದರಿಂದ ಸದಾಚಾರ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು.
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪೂರ್ಣ ಪ್ರದೇಶವನ್ನು ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶಿಸಿ, ಸರ್ಕಾರವು (ನಗರಾಭಿವೃದ್ಧಿ ಇಲಾಖೆಯು) ಪ್ರಾಥಮಿಕ ಅಧಿಸೂಚನೆಯನ್ನು ಹೊರಡಿಸಿರುವ ಹಿನ್ನೆಲೆಯಲ್ಲಿ, ರಾಜ್ಯ ಚುನಾವಣಾ ಆಯೋಗದ ದಿನಾಂಕ:04.12.2020ರ ಆದೇಶದಂತೆ ಸದರಿ ಗ್ರಾಮ ಪಂಚಾಯತಿಯನ್ನು ಪ್ರಸ್ತುತ ಚುನಾವಣಾ ಪ್ರಕ್ರಿಯೆಯಿಂದ ಕೈಬಿಡಲಾಗಿದೆ.
ಹೊಸಕೋಟೆ ತಾಲ್ಲೂಕಿನ ಸಮೇತನಹಳ್ಳಿ, ಮುತ್ಸಂದ್ರ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ಮಜರಾಹೊಸಹಳ್ಳಿ, ಅರಳುಮಲ್ಲಿಗೆ, ದರ್ಗಾಜೋಗಿಹಳ್ಳಿ ಹಾಗೂ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ, ನಲ್ಲೂರು, ಹಾರೋಹಳ್ಳಿ, ಕೋರಮಂಗಲ ಗ್ರಾಮ ಪಂಚಾಯತಿಗಳ ಪ್ರಸ್ತುತ ಸದಸ್ಯರುಗಳ ಪದಾವಧಿಯು ಮುಕ್ತಾಯಗೊಂಡಿಲ್ಲ, ಆದ್ದರಿಂದ ಆ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಾಲಿ ಚುನಾವಣೆ ಇರುವುದಿಲ್ಲವೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

