ಭಾರತ್ ಬಂದ್: ರೈತರ ಹೆಸರಲ್ಲಿ ದಲ್ಲಾಳಿಗಳು, ವಿರೋಧ ಪಕ್ಷಗಳ ಪ್ರತಿಭಟನೆ – ಪುಷ್ಪಾ ಶಿವಶಂಕರ್

ದೊಡ್ಡಬಳ್ಳಾಪುರ: ಬಿಜೆಪಿ ಸರ್ಕಾರವನ್ನು ವಿರೋಧಿಸುವ ಪಕ್ಷಗಳು ಹಾಗೂ ದಲ್ಲಾಳಿಗಳು ಕೃಷಿ ಮಸೂದೆ ವಿರೋಧಿಸಿ ರೈತರ ಹೆಸರಿನಲ್ಲಿ ಧರಣಿ, ಬಂದ್ ನಡೆಸುತ್ತಿದ್ದಾರೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಮಾದ್ಯಮ ವಕ್ತಾರೆ ಪುಷ್ಪಾ ಶಿವಶಂಕರ್ ಆರೋಪಿಸಿದ್ದಾರೆ.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆ ವಿರೋಧಿಸಿ ಬಂದ್, ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ರೈತರ ಹಿತ ಕಾಪಾಡಲು ಕೇಂದ್ರ ಸರ್ಕಾರ ಕೃಷಿಕರ ಹಾಗೂ ಕೃಷಿ ಕ್ಷೇತ್ರದ ಸುಧಾರಣೆಗೆ ಸ್ವಾತಂತ್ರ್ಯಾನಂತರ ಇಷ್ಟೊಂದು ದೊಡ್ಡ ನಿರ್ಣಯ ಮಾಡಲಾಗಿದೆ ಎಂದರು.

ಪ್ರಧಾನಮಂತ್ರಿ ಫಸಲ್ ಭಿಮಾ, ಕಿಸಾನ್ ಸಮ್ಮಾನ್ ನಿಧಿ ಸೇರಿ ಅನೇಕ ರೈತಪರ ಯೋಜನೆ ಜಾರಿ ಮಾಡಲಾಗಿದ್ದು, ರೈತರ ಆದಾಯ ದ್ವಿಗುಣ ಮಾಡಬೇಕೆಂಬ ಕಲ್ಪನೆ ನರೇಂದ್ರ ಮೋದಿ ಅವರ ಸರ್ಕಾರದ್ದಾಗಿದೆ. ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ರಾಜಕೀಯ ಪ್ರೇರಿತ ಹೋರಾಟ ನಡೆಸಲಾಗುತ್ತಿದೆ ಎಂದರು.

ಜಿಲ್ಲಾ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರ ತಂದಿರುವ ಕೃಷಿ ಮಸೂದೆಗಳನ್ನೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ರೈತರ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರ ದೃಢ ಹೆಜ್ಜೆ ಇಟ್ಟಿದೆ.ಆದರೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಎದುರಿಸಲಾಗದೆ ರೈತರ ಹೆಸರಿನಲ್ಲಿ ವಿರೋಧ ಪಕ್ಷಗಳು, ದಲ್ಲಾಳಿಗಳು ವಿವಿಧ ಸಂಘಟನೆಗಳನ್ನು ಬಳಸಿ ರೈತರನ್ನು ಪ್ರಚೋದಿಸುವ ಕೆಲಸ ಮಾಡುತ್ತಿವೆ ಎಂದರು.

ಬಿಜೆಪಿ ರೈತ ಮೋರ್ಚಾ ತಾಲೂಕು ಅಧ್ಯಕ್ಷ ಕೋಡಿ ಆರ್.ಎಂ.ನರಸಿಂಹಮೂರ್ತಿ ಮಾತನಾಡಿ, ರೈತ ಪರ ಕಾಯ್ದೆ ವಿರುದ್ದ ರೈತರ ವಿರೋಧವಿಲ್ಲ, ರೈತರ ಹೆಸರಲ್ಲಿ ರಾಜಕೀಯ ಮಾಡಲು ಈ ಶಡ್ಯಂತ್ರವನ್ನು ವಿರೋಧ ಪಕ್ಷಗಳು ರೂಪಿಸಿವೆ ಎಂದರು.

ನಗರ ಘಟಕದ ಅಧ್ಯಕ್ಷ ಎಚ್.ಎಸ್.ಶಿವಶಂಕರ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಿಜೆಪಿ ವಿರೋಧಿಸುವವರೆ ಹೆಚ್ಚಾಗಿದ್ದಾರೆಯೇ ಹೊರತು ರೈತರಿಲ್ಲ. ರೈತ ಸಂಘದವರಿಗೆ ತಪ್ಪು ಮಾಹಿತಿ ನೀಡಿ ಪ್ರತಿಭಟನೆಗೆ ಕರೆತರಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರುಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ತಾಲೂಕು ಮಂಡಲ ಅಧ್ಯಕ್ಷ ನಾಗರಾಜು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಗೌಡ, ರಾಜ್ಯ ಸಾಮಾಜಿಕ ಜಾಲತಾಣ ಪ್ರಮುಖ ಶಿವಾನಂದರೆಡ್ಡಿ, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಬಿ.ಸಿ.ನಾರಾಯಣಸ್ವಾಮಿ, ಜಿಲ್ಲಾ ಮಾದ್ಯಮ ಪ್ರಮುಖ ರಮೇಶ್, ನಗರ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಮುನಿರಾಜು ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]