ಪೋಷಕರ ಪರಿಸ್ಥಿತಿ ಖಾಸಗಿ ಶಾಲೆಗಳು ಅರ್ಥಮಾಡಿಕೊಳ್ಳಬೇಕು.ಇದೇ ಸಮಯಕ್ಕೆ ತಮ್ಮ ಮಕ್ಕಳ ಶಿಕ್ಷಕರ ಪರಿಸ್ಥಿತಿ ಕುರಿತು ಪೋಷಕರು ಯೋಚಿಸಿ: ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ಖಾಸಗಿ ಶಾಲೆ ಶಿಕ್ಷಕರ ಸಮಸ್ಯೆ, ಪೋಷಕರ ಆಕ್ರೋಶ, ಪ್ರತಿಭಟನೆ ನಡೆಯುತ್ತಿರುವ ಕುರಿತಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಮ್ಮ ಮನದಾಳದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಪೋಷಕರ ಪರಿಸ್ಥಿತಿ ಖಾಸಗಿ ಶಾಲೆಗಳು ಅರ್ಥಮಾಡಿಕೊಳ್ಳಬೇಕು. ಇದೇ ಸಮಯಕ್ಕೆ ತಮ್ಮ ಮಕ್ಕಳ ಶಿಕ್ಷಕರ ಜೀವನದ  ಕುರಿತು ಪೋಷಕರು ಯೋಚಿಸಬೇಕು ಎಂದು ಮನವಿ ಮಾಡಿದ್ದಾರೆ‌

ಫೇಸ್ಬುಕ್ ಖಾತೆಯಲ್ಲಿ ಈ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಶಿಕ್ಷಣ ಸಚಿವನಾಗಿ ನಾನು ಎದುರಿಸುತ್ತಿರುವ ಸಮಸ್ಯೆಗಳ ಪೈಕಿ ಒಂದು ದೊಡ್ಡ ಸಮಸ್ಯೆಯೆಂದರೆ ಖಾಸಗಿ ಶಾಲೆಗಳು ಮತ್ತು ಪೋಷಕರ ನಡುವಿನ ಶುಲ್ಕದ ವಿಚಾರ. ಕರೊನಾ ಸಮಾಜದ ಎಲ್ಲಾ ಕ್ಷೇತ್ರಗಳ ಮೇಲೂ ತನ್ನ ಕರಾಳ ಛಾಯೆಯನ್ನು ಚಾಚಿದೆ. ಎಲ್ಲಾ ಕ್ಷೇತ್ರಗಳು ಆರ್ಥಿಕವಾಗಿ ಜರ್ಜರಿತವಾಗಿವೆ.  

ಆರ್ಥಿಕವಾಗಿ ಸಾಕಷ್ಟು ಶಕ್ತಿವಂತ ರಾಗಿದ್ದ ಕಾಲದಲ್ಲಿ ಕೆಲವು ಪೋಷಕರು ದುಬಾರಿ ಎಂದು ಹೇಳಬಹುದಾದ ಶುಲ್ಕ ತೆಗೆದುಕೊಳ್ಳುವ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಿದ್ದರು. ಅದೂ ಹೇಗೆ? ರಾತ್ರಿಯಿಡೀ ಶಾಲೆಯ ಮುಂದೆ ಸಾಲು ನಿಂತು ಶಾಲೆಯ ಅಡ್ಮಿಶನ್ ಅರ್ಜಿಯನ್ನು ಪಡೆದು ಕೆಲವು ಗಣ್ಯರಿಂದ ಶಿಫಾರಸು ಪತ್ರಗಳನ್ನು ಪಡೆದು ಕೊನೆಗೂ ತಮ್ಮ ಮಕ್ಕಳಿಗೆ ಆ ಶಾಲೆಯಲ್ಲಿ ಸೀಟು ದೊರಕಿದಾಗ ಪೋಷಕರಿಗೆ ಆಗಿರುವ ಆನಂದ ಊಹಾತೀತ. 

ಹೀಗೆ ಇದೇ ಶಾಲೆಯಲ್ಲಿ ನಮ್ಮ ಮಗು ಓದಬೇಕು ಎಂಬ ಹಂಬಲದಿಂದ ಕೆಲವು ಬಾರಿ ಹಠದಿಂದ ಮಕ್ಕಳನ್ನು ಸೇರಿಸಿರುವ ಪ್ರಕರಣಗಳು ಅನೇಕರಲ್ಲಿದೆ. ಅದೇ ಶಾಲೆಯ ವಿರುದ್ಧ ಅದೇ ಪೋಷಕರು ಎಂದು ಘೋಷಣೆ ಹಾಕುವ ಸ್ಥಿತಿ ಬಂದಿದೆ. ಏಕೆಂದರೆ ಆ ಪೋಷಕರು ಇಂದು ಆರ್ಥಿಕವಾಗಿ ತುಸು ದುರ್ಬಲರಾಗಿದ್ದಾರೆ. 

ಆದರೆ ಶಾಲೆಗಳ ಮುಖ್ಯಸ್ಥರು ತಮ್ಮ ಶಿಕ್ಷಕರಿಗೆ ಸಂಬಳ ಕೊಡಲು ಈಗ ಪೋಷಕರು ಶುಲ್ಕ ಕಟ್ಟುತ್ತಿಲ್ಲ ಎಂದು ತಮ್ಮ ಕಷ್ಟವನ್ನು ಹೇಳುತ್ತಿದ್ದಾರೆ ಮತ್ತು ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಸಹ ಮಾಡುತ್ತಿದ್ದಾರೆ. 

ಶಿಕ್ಷಣ ಸಚಿವ ಖಾಸಗಿ ಶಾಲೆಗಳಿಗೆ ಸಹಾಯ ಮಾಡುತ್ತಿಲ್ಲ ಎಂಬ ಕೂಗು ಕೇಳುತ್ತಿದೆ. ಇದರ ಜೊತೆಜೊತೆಗೆ ಶಿಕ್ಷಣ ಸಚಿವ ಖಾಸಗಿ ಶಾಲೆಗಳಿಗೆ ಅಂಕುಶ ಹಾಕುತ್ತಿಲ್ಲ ಎಂಬ ಕೂಗೂ ಸಹ ಕೇಳುತ್ತಿದೆ. 

ನನಗೆ ಪೋಷಕರ ಕಷ್ಟದ ಅರಿವು ಇದೆ. ಎಷ್ಟೋ ಜನ ಕಳೆದ ಎಂಟು ತಿಂಗಳಲ್ಲಿ ಕೆಲಸ ಕಳೆದುಕೊಂಡಿದ್ದಾರೆ. ಅಥವಾ ಅವರ ಸಂಬಳದ ಶೇಕಡ 25ರಷ್ಟು ಇಂದು ಅವರಿಗೆ ಬರುತ್ತಿಲ್ಲ. 

ಅಂತಹವರಿಗೆ ತಾವು ಬಯಸಿ ತಮ್ಮ ಮಕ್ಕಳನ್ನು ಸೇರಿಸಿದ್ದ ಶಾಲೆಗಳ ದುಬಾರಿ ಶುಲ್ಕ ಕಟ್ಟಲು ಇಂದು ಅಸಾಧ್ಯವಾಗಿದೆ.  ಅಂತವರಿಗೆಲ್ಲ ಸಹಜವಾಗಿ ಈ ವರ್ಷ ಶುಲ್ಕದಲ್ಲಿ ರಿಯಾಯಿತಿ ಬೇಕು ಎಂದು ಅನಿಸಿದರೆ ತಪ್ಪಲ್ಲ. ಆದರೆ ಇದರ ಜೊತೆಜೊತೆಗೆ ಖಾಸಗಿ ಶಾಲೆಗಳ ಶಿಕ್ಷಕರು ಕಳೆದ ಎಂಟು ತಿಂಗಳಿಂದ ವೇತನವಿಲ್ಲದೆ ಪರದಾಡುತ್ತಿರುವ ಪರಿಸ್ಥಿತಿಯು ನಮ್ಮ ಮುಂದೆ ಇದೆ. ಅನೇಕ ಶಿಕ್ಷಕರು ಜೀವನ ನಿರ್ವಹಣೆಗಾಗಿ ತರಕಾರಿ ಮಾರುವುದು, ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಮಾಡುವುದು…. ಈ ಪ್ರಸಂಗಗಳು ಸಹ ವರದಿಯಾಗಿವೆ. 

ಖಾಸಗಿ ಶಾಲೆಗಳ ವ್ಯವಸ್ಥಾಪಕರು ಹೇಳುವುದೆಂದರೆ ಪೋಷಕರು ಶುಲ್ಕ ಕಟ್ಟದಿದ್ದರೆ ನಾವು ಶಿಕ್ಷಕರಿಗೆ ಸಂಬಳ ಕೊಡುವುದು ಹೇಗೆ ಎಂದು. 

ಈ ಎಲ್ಲಾ ಖಾಸಗಿ ಶಾಲೆಗಳ ಶಿಕ್ಷಕರಿಗೆ ಯಾವುದಾದರೂ ಹಣಕಾಸಿನ ಸಹಾಯದ ನೀಡಬೇಕೆಂಬುದು ಒಂದು ಆಗ್ರಹ. ಅದಕ್ಕಾಗಿ ನಾವು ಸರ್ಕಾರದಲ್ಲಿ ಬೇರೆಬೇರೆ ಕ್ರಮಗಳ ಬಗ್ಗೆ ಯೋಚಿಸಿದರೂ ಅದು ಕಾರ್ಯಗತವಾಗಲಿಲ್ಲ. ಏಕೆಂದರೆ ಸರಕಾರದ ಹಣಕಾಸಿನ ಪರಿಸ್ಥಿತಿ ಬಹಳ ಆಶಾದಾಯಕವಾಗಿಲ್ಲ. 

ಕಳೆದವಾರ ಖಾಸಗಿ ಶಾಲೆಗಳ ಮುಖ್ಯಸ್ಥರ ಸಂಘಟನೆಯ ಪ್ರತಿನಿಧಿಗಳು ನನ್ನನ್ನು ಭೇಟಿ ಮಾಡಿದ್ದರು. ತಮ್ಮ ಕಷ್ಟಗಳನ್ನೆಲ್ಲ ವಿವರಿಸಿದರು. ಆಗ ನಾನು ಹೇಳಿದ ಮಾತು ಹೀಗಿತ್ತು: ” ನಿಮ್ಮ ಶಾಲೆಯ ಪೋಷಕರು ಮತ್ತು ನಿಮ್ಮ ನಡುವೆ ಬಹಳ ಆರೋಗ್ಯಕರ ಸಂಬಂಧ ಇರಬೇಕು. ಏಕೆಂದರೆ ಆ ಪೋಷಕರು ನಿಮ್ಮ ಶಾಲೆಯನ್ನು ಪ್ರೀತಿಸಿ ಇದೇ ಶಾಲೆ ಬೇಕೆಂದು, ತಮ್ಮ ಮಕ್ಕಳನ್ನು ನಿಮ್ಮ ಶಾಲೆಗಳಿಗೆ ಸೇರಿಸಿದ್ದಾರೆ. ಹೀಗಿರುವಾಗ ನೀವು ಶಾಲಾ ವ್ಯವಸ್ಥಾಪಕ ಮಂಡಳಿ ರಚಿಸಿ ಆ ವೇದಿಕೆಯಡಿ ಪೋಷಕರ ಜೊತೆ ಏಕೆ ಮಾತನಾಡಬಾರದು? ಪೋಷಕರ ಸಮಸ್ಯೆಯನ್ನು ಏಕೆ ಆಲಿಸಬಾರದು? ನಂತರ ನಿಮ್ಮ ಪರಿಸ್ಥಿತಿಯನ್ನು ಪೋಷಕರಿಗೆ ಏಕೆ ವಿವರಿಸ ಬಾರದು? ಇಬ್ಬರ ನಡುವೆ ಸಂವಾದದ ನಂತರ ಇಬ್ಬರಿಗೂ ಹಿತಕರವೆನಿಸುವ ಸೂತ್ರ ಏಕೆ ತೀರ್ಮಾನಿಸ ಬಾರದು?” 

ಅದಕ್ಕೆ ಆ ಮುಖ್ಯಸ್ಥರು ನಾವು ಚರ್ಚೆ ಮಾಡಿ ಬರುತ್ತೇವೆಂದು ಹೋಗಿದ್ದಾರೆ. ಅನೇಕ ಶಾಲೆಗಳಲ್ಲಿ ಪೋಷಕರಿಗೆ ಗೇಟಿನ ಒಳಗೆ ಪ್ರವೇಶ ಅವಕಾಶವಿಲ್ಲ ಎಂದು ಕೇಳಿ ಬಂದಿದೆ. ಆಗ ಸಹಜವಾಗಿ ಪೋಷಕರು ಗೇಟಿನ ಆಚೆ ನಿಂತು ಘೋಷಣೆ ಕೂಗುವ ಪರಿಸ್ಥಿತಿ ಬಂದೊದಗುತ್ತದೆ.

ಈ ವಾರ ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳ ಸಂಘಟನೆಗಳು ಪ್ರತಿಭಟನೆ ಮಾಡಿವೆ. ತಾವೂ ಒಂದು ಸಂಘಟನೆ ರಚಿಸಿಕೊಂಡು ಪೋಷಕರು ಸಹ ಪ್ರತಿಭಟನೆ ಮಾಡಿದ್ದಾರೆ. ಈ ಪರಿಸ್ಥಿತಿಯಲ್ಲಿ ಇಬ್ಬರಿಗೂ ಹಿತಕರವಾದ ಪರಿಹಾರ ಹುಡುಕುವ ಜವಾಬ್ದಾರಿ ನನ್ನ ಪಾಲಿಗೆ ಬಂದಿದೆ. ಇದು ಬಹಳ ಕಷ್ಟ ಸಹ. 

ಪೋಷಕರು ಮತ್ತು ಖಾಸಗಿ ಶಾಲಾ ಶಿಕ್ಷಕರು ಇಬ್ಬರ ಪರಿಸ್ಥಿತಿಯು ನನಗೆ ಸಂಪೂರ್ಣ ಅರ್ಥವಾಗಿದೆ. ಇದರೊಂದಿಗೆ ಆರ್ಥಿಕವಾಗಿ ಶಕ್ತಿವಂತರಾಗಿ ರವರು ಸಹ ತಮ್ಮ ಮಕ್ಕಳ ಶುಲ್ಕವನ್ನು ಪಾವತಿ ಮಾಡಲು ಹಿಂದೇಟು ಹಾಕುತ್ತಿರುವುದು ಮತ್ತು ಕೋವಿಡ್-19 ರ ನೆಪ ಮುಂದಿಡುತ್ತಿರುವ ಪ್ರಸಂಗಗಳು ನಡೆದಿವೆ. 

ಶ್ರೀಮಂತ ಶಾಲೆಗಳನ್ನು ಹೊರತು ಪಡಿಸಿ, ಬಜೆಟ್ ಶಾಲೆಗಳೆಂದು ಕರೆಯಲ್ಪಡುವ ಮಧ್ಯಮ ದರ್ಜೆ ಶಾಲೆಗಳು ಎದುರಿಸುತ್ತಿರುವ ಕಷ್ಟವೂ ಅಪಾರ. 

ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಕೋವಿಡ್ ಮಹಾಮಾರಿಯ ಪರಿಣಾಮ ಪ್ರಾರಂಭವಾದಾಗಿನಿಂದ ನಾನು ಪೋಷಕರ ಪರವಾಗಿ ಕೆಲವು ಕ್ರಮಗಳನ್ನು ಕೈಗೊಂಡಿದ್ದೇನೆ. 

ಪೋಷಕರ ಪರಿಸ್ಥಿತಿಯನ್ನು ಶಾಲೆಗಳು ಅರ್ಥಮಾಡಿಕೊಳ್ಳಬೇಕು. ಇದೇ ಸಮಯಕ್ಕೆ ತಮ್ಮ ಶಾಲೆಗಳ ಶಿಕ್ಷಕರ ಜೀವನ ನಿರ್ವಹಣೆಯ ಕುರಿತು ಪೋಷಕರು ಯೋಚಿಸಬೇಕು. 

ಇಂದು ಈ ಮಹಾಮಾರಿ ಯ ಕಾರಣ ಪೋಷಕರು ಮತ್ತು ಖಾಸಗಿ ಶಾಲೆಗಳ ನಡುವೆ ಉಂಟಾಗಿರುವ ಅಪನಂಬಿಕೆಯನ್ನು ದೂರ ಮಾಡುವುದು ಒಂದು ದೊಡ್ಡ ಸವಾಲು.

ಈ ಸವಾಲನ್ನು ಎದುರಿಸುವಲ್ಲಿ ನನಗೆ ಪೋಷಕರು ಮತ್ತು ಖಾಸಗಿ ಶಾಲಾ ವ್ಯವಸ್ಥಾಪಕ ಮಂಡಳಿ ಇಬ್ಬರೂ ಸಹ ಆರೋಗ್ಯಕರ ಸಹಕಾರ ನೀಡಬೇಕೆಂದು ನನ್ನ ಮನವಿ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]