ಟ್ರಾಕ್ಟರ್ ರ್ಯಾಲಿಗೆ ಬೆಂಗಳೂರಿಗೆ ತೆರಳಲು ಬಿಡದ ಪೊಲೀಸರು / ದೊಡ್ಡಬಳ್ಳಾಪುರದಲ್ಲಿಯೇ ರ್ಯಾಲಿ ನಡೆಸಿದ ರೈತ ಸಂಘಟನೆಯ ಮುಖಂಡರು / ಅಪಾಯಕಾರಿ ವರ್ತನೆಗೆ ಆಕ್ರೋಶ

ದೊಡ್ಡಬಳ್ಳಾಪುರ: ಕೃಷಿ ಕಾಯ್ದೆ ತಿದ್ದುಪಡಿ ಖಂಡಿಸಿ ಗಣರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಟ್ರಾಕ್ಟರ್ ರ್ಯಾಲಿಗೆ ತೆರಳುತ್ತಿದ್ದ ರೈತ ಸಂಘದ ಮುಖಂಡರನ್ನು ಪೊಲೀಸರು ತಡೆದ ಕಾರಣ, ದೊಡ್ಡಬಳ್ಳಾಪುರದಲ್ಲಿಯೇ ಟ್ರಾಕ್ಟರ್ ರ್ಯಾಲಿ ನಡೆಸಿದ ರೈತರು ಕೇಂದ್ರ ಸರ್ಕಾರದ ವಿರುದ್ದ ಅಕ್ರೋಶ ಹೊರಹಾಕಿದರು.

ಟ್ರಾಕ್ಟರ್ ಗಳಲ್ಲಿ ಬೆಂಗಳೂರಿಗೆ ಹೊರಟಿದ್ದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರನ್ನು ನಗರದ ಎಪಿಎಂಸಿ ಬಳಿ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಮತ್ತು ರೈತ ಸಂಘಟನೆಗಳ ಮುಖಂಡರ ನಡುವೆ ಮಾತಿನ ಚಕಮಕಿ‌ನಡೆಯಿತು. ರೈತ ಸಂಘದವರ ನೇರವಿಗೆ ವಿವಿಧ ಸಂಘಟನೆಗಳ ಮುಖಂಡರು ಧಾವಿಸಿ ಬೆಂಬಲ ಸೂಚಿಸಿದರು.

ಬೆಂಗಳೂರಿನ ರ್ಯಾಲಿಗೆ ತೆರಳ ಬೇಕೆಂದು ಪಟ್ಟು ಹಿಡಿದ ರೈತ ಸಂಘಟನೆಗಳ ಮುಖಂಡರನ್ನು ಡಿವೈಎಸ್ಪಿ ಟಿ.ರಂಗಪ್ಪ ಮನವೊಲಿಸಲು ಮುಂದಾದರು. ಆದರೆ ರೈತ ಸಂಘಟನೆಗಳ ಮುಖಂಡರ ಆಕ್ರೋಶ ಮಣಿದು ನಗರ ವ್ಯಾಪ್ತಿಯಲ್ಲಿ ರ್ಯಾಲಿ ನಡೆಸಲು ಅವಕಾಶ ಮಾಡಿಕೊಟ್ಟರು.

ನಗರದಲ್ಲಿ ಎಪಿಎಂಸಿ ಮುಂಭಾಗದಿಂದ ಆರಂಭವಾದ ಟ್ರಾಕ್ಟರ್ ರ್ಯಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ. ಕೇಂದ್ರ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ, ಕೃಷಿ ತಿದ್ದು ಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿದರು.

ಶಾಸಕ ಟಿ.ವೆಂಕಟರಮಣಯ್ಯ ಬೆಂಬಲ: ರ್ಯಾಲಿ ತಾಲೂಕು ಕಚೇರಿಗೆ ಬರುವ ವೇಳೆಗೆ ಶಾಸಕ ಟಿ.ವೆಂಕಟರಮಣಯ್ಯ ಸ್ಥಳಕ್ಕೆ ಬಂದು ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ ಸೂಚಿಸಿ. ಕೇಂದ್ರ ಸರ್ಕಾರದ ನಿಲುವನ್ನು ತೀವ್ರವಾಗಿ ಖಂಡಿಸಿದರು. ಅಲ್ಲದೆ ರೈತರ ಸಮಸ್ಯೆಯನ್ನು ಕೂಡಲೆ ಬಗೆ ಹರಿಸುವಂತೆ ಆಗ್ರಹಿಸಿದರು.

ರೈತ ಸಂಘದ ಮುಖಂಡರು ಮಾತನಾಡಿ, ದೆಹಲಿಯಲ್ಲಿ ರೈತರ ರ್ಯಾಲಿಗೆ ಅನುಮತಿ ದೊರಕಿದ್ದರೆ, ರಾಜ್ಯ ಬಿಜೆಪಿ ಸರ್ಕಾರ ಪೊಲೀಸರ ಮೂಲಕ ರೈತರ ಹೊರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಇದೇ ಧೋರಣೆ ಮುಂದುವರಿದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದಂತೆ ದೇಶದ ಪ್ರತಿ ಹಳ್ಳಿಗಳ್ಳಲ್ಲಿಯು ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಅಪಾಯಕಾರಿ ವರ್ತನೆಗೆ ಆಕ್ರೋಶ: ನಗರದಲ್ಲಿ ಟ್ರಾಕ್ಟರ್ ರ್ಯಾಲಿ ಆರಂಭವಾದ ವೇಳೆ, ಒಂದಿಬ್ಬರು ಟ್ರಾಕ್ಟರ್ ಮುಂಭಾಗದಲ್ಲಿ ಅಪಾಯಕಾರಿಯಾಗಿ ಕೂತು ಅತಿರೇಕದ ವರ್ತನೆ ತೋರಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಪೊಲೀಸರ ಎದುರಲ್ಲಿಯೇ ಈ ವರ್ತನೆ ತೋರಿದ್ದರು ಪೊಲೀಸರು ಮೌನಕ್ಕೆ ಶರಣಾಗಿದ್ದು ತೀವ್ರ ಚರ್ಚೆಗೆ ಕಾರಣವಾದರೆ, ಆಯತಪ್ಪಿ ಬಿದ್ದಿದ್ದರೆ ಮುಂದಾಗಬಹುದಾಗಿದ್ದ ಅವಘಡಕ್ಕೆ ಹೊಣೆಯಾರದು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]