ಸದನದಲ್ಲಿ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರಿಂದ ಸರ್ಕಾರ ಮಾಡಿಸಿದ್ದ ಭಾಷಣದಲ್ಲಿ ಒಂದಷ್ಟು ಸುಳ್ಳಿನ ಕಂತೆಗಳಿವೆ, ಒಂದಷ್ಟು ತಪ್ಪು ಮಾಹಿತಿಗಳಿವೆ ರಾಜ್ಯಪಾಲರಿಂದ ಸರ್ಕಾರ ಮಾಡಿಸಿದ್ದ ಭಾಷಣದಲ್ಲಿ ಒಂದಷ್ಟು ಸುಳ್ಳಿನ ಕಂತೆಗಳಿವೆ, ಒಂದಷ್ಟು ತಪ್ಪು ಮಾಹಿತಿಗಳಿವೆ ಜೊತೆಗೆ ಸರ್ಕಾರದ ಮಾನ ಉಳಿಸಿಕೊಳ್ಳಲು ನಿರ್ಲಜ್ಜವಾಗಿ ಹೇಳಿಕೊಂಡ ಹಿಂದಿನ ನಮ್ಮ ಸರ್ಕಾರದ ಸಾಧನೆಗಳಿವೆ. ಇದನ್ನು ಹೊರತುಪಡಿಸಿ ಸತ್ಯನೂ ಇಲ್ಲ, ಸತ್ವವೂ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರಾ ಭಾಷಣದ ಕುರಿತು ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನೀತಿ ಆಯೋಗವು ನಾವಿನ್ಯತಾ ಸೂಚ್ಯಂಕದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ ನೀಡಿತ್ತು. ಇದನ್ನು ಬಿಜೆಪಿ ಸರ್ಕಾರ ತನ್ನ ಸಾಧನೆ ಎಂದು ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದೆ. ಕೌಶಲ್ಯಾಭಿವೃದ್ಧಿ ಇಲಾಖೆ ಸ್ಥಾಪನೆ ಮಾಡಿ, ವಾರ್ಷಿಕ 5 ಲಕ್ಷ ಮಂದಿಗೆ ಕೌಶಲ್ಯ ತರಬೇತಿ ನೀಡಿದ್ದ ನಮ್ಮ ಸರ್ಕಾರ. ಇದರಲ್ಲಿ ಬಿಜೆಪಿಯವರ ಸಾಧನೆ ಏನಿದೆ?

ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರ “ಟೇಕ್ ಆಫ್ ಆಗಿಲ್ಲ, ಟೇಕ್ ಆಫ್ ಆಗಿಲ್ಲ” ಎಂದು ಇದೇ ಸದನದಲ್ಲಿ ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದರು. ಈಗಿನ ಸರ್ಕಾರ  ‘ಟೇಕ್ ಆಫ್’ ಅಲ್ಲ ಸಂಪೂರ್ಣ ‘ಆಫ್ ಆಗಿ ನಡುರಸ್ತೆಯಲ್ಲಿ ಕೆಟ್ಟು ನಿಂತಿರುವ ಹಳೆ ಡಕೋಟ ಬಸ್ ನಂತಾಗಿದೆ.

ಯಡಿಯೂರಪ್ಪನವರಿಗೆ ಡ್ರೈವಿಂಗ್ ಮೊದಲೇ ಬರೋದಿಲ್ಲ, ಜೊತೆಗೆ ನಾಲ್ಕು ದಿಕ್ಕುಗಳಿಂದಲೂ ಕಾಲೆಳೆಯುತ್ತಿರುವ ಸ್ವಪಕ್ಷದವರ ಕಾಟ. ಬಸ್ ಮುಂದಕ್ಕೆ ಹೇಗೆ ಹೋಗೋದು? ಇಂತಹ ಸರ್ಕಾರವನ್ನು  “ರಿಪೇರಿ” ಮಾಡಲಾಗುವುದಿಲ್ಲ “ರಿಪ್ಲೇಸ್’ ಮಾಡಬೇಕಾಗುತ್ತದೆ ಅಷ್ಟೇ.  ಆ ಕಾಲ ಸದ್ಯದಲ್ಲಿಯೇ ಬರಲಿದೆ.

ಬಿ.ಎಸ್.ಯಡಿಯೂರಪ್ಪನವರೇ, ನೀವು ಅಧಿಕಾರಕ್ಕೆ ಬಂದು ಹದಿನೆಂಟು ತಿಂಗಳುಗಳಾಯಿತು. ಈ ಅವಧಿಯಲ್ಲಿ ನಿಮ್ಮ ಸರ್ಕಾರದ ಸಾಧನೆಯನ್ನು ನಿಮ್ಮ ಪಕ್ಷದ ಪ್ರಣಾಳಿಕೆಯ ಜೊತೆ ಓದಿಕೊಳ್ಳಿ. ನಿಮಗೆ ಆತ್ಮಸಾಕ್ಷಿ ಎಂಬುದು ಎಲ್ಲಾದರೂ ಉಳಿದುಕೊಂಡಿದ್ದರೆ ನೀವು ಖಂಡಿತ ಒಂದು ಕ್ಷಣ ಕೂಡಾ ಈ ಕುರ್ಚಿಯಲ್ಲಿ ಕೂರಲು ಸಾಧ್ಯವಿಲ್ಲ.

ದೇಶದ ರೈತರು ಸಂಕಷ್ಟದಲ್ಲಿದ್ದಾರೆ. ಒಂದೆಡೆ ಅತಿವೃಷ್ಟಿ ಮತ್ತು ಕೊರೊನಾ ಹಾವಳಿಯ ಪ್ರಕೃತಿ ವಿಕೋಪ, ಇನ್ನೊಂದೆಡೆ ನಿಮ್ಮ ಕೃಷಿ ವಿರೋಧಿ ಕಾನೂನುಗಳ ಮಾನವ ನಿರ್ಮಿತ ವಿಕೋಪ. ಕಷ್ಟ-ನಷ್ಟಗಳಲ್ಲಿ ಬೆಂದು ಹೋಗಿರುವ ರೈತರು ದೇಶಾದ್ಯಂತ ಬೀದಿಗಿಳಿದಿದ್ದಾರೆ. ಇಡೀ ದೇಶವೇ ಜ್ವಾಲಾಮುಖಿಯಂತಾಗಿದೆ, ಅದು ಯಾವಾಗ ಸಿಡಿಯುತ್ತೋ ಗೊತ್ತಿಲ್ಲ. 

ಕಳೆದ ಬಾರಿ ಮುಖ್ಯಮಂತ್ರಿಯಾದಾಗ ಗೊಬ್ಬರ ಕೇಳಿದ ಇಬ್ಬರು ರೈತರಿಗೆ ಪೊಲೀಸರ ಮೂಲಕ ಗುಂಡಿಟ್ಟು ಅವರ ಜೀವ ತೆಗೆದಿರಿ. ಈ ಬಾರಿ ಐದು ರೈತವಿರೋಧಿ ಕಾನೂನುಗಳನ್ನು ಜಾರಿಗೆ ತಂದು ರೈತರೆಲ್ಲರ ಜೀವದ ಜೊತೆ ಜೀವನವನ್ನು ನಾಶಮಾಡಲು ಹೊರಟಿದ್ದೀರಿ.

ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಸಹಕಾರಿ ಸಂಸ್ಥೆಗಳಲ್ಲಿರುವ ಒಂದು ಲಕ್ಷ ರೂಪಾಯಿ ವರೆಗಿನ ರಾಜ್ಯದ ಎಲ್ಲ ರೈತರ ಸಾಲವನ್ನು ಮನ್ನಾ ಮಾಡುತ್ತೇನೆ ಎನ್ನುವುದು ನಿಮ್ಮ ಪ್ರಣಾಳಿಕೆಯ ಮೊದಲ ಭರವಸೆ. ಆ ಭರವಸೆಯನ್ನು ಈಡೇರಿಸದ ನಿಮಗೆ ಹಸಿರು ಶಾಲು ಹೊದ್ದುಕೊಂಡು ರೈತಪರ ಎಂದು ಹೇಳಿಕೊಳ್ಳುವ ಯಾವ ನೈತಿಕತೆ ಇದೆ ಹೇಳಿ. 

ಬೆಳೆಗಳ ಬೆಲೆ ಕುಸಿತ ತಡೆಯಲು ರೂ.5,000 ಕೋಟಿ ವೆಚ್ಚದ ‘ರೈತಬಂಧು ಮಾರುಕಟ್ಟೆ ಮಧ್ಯಪ್ರವೇಶ ನಿಧಿ’, ರೈತರ ಮಕ್ಕಳ ಶಿಕ್ಷಣಕ್ಕೆ ನೂರು ಕೋಟಿ ರೂಪಾಯಿಗಳ ‘ರೈತಬಂಧು ವಿದ್ಯಾರ್ಥಿ ವೇತನ ನಿಧಿ. ನಿಮ್ಮ ಪ್ರಣಾಳಿಕೆಯ ಈ ಭರವಸೆಗಳು ಈಡೇರಿವೆಯೇ?

ರೈತರಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚು ಬೆಂಬಲ ಬೆಲೆ. ನೀರಾವರಿಗೆ ರೂ.1.50 ಲಕ್ಷ ಕೋಟಿ ಅನುದಾನ, ಪ್ರತಿವರ್ಷ ಒಂದು ಸಾವಿರ ರೈತರಿಗೆ ಇಸ್ರೇಲ್ ಮತ್ತು ಚೀನಾ ಪ್ರವಾಸ… 

ಎಲ್ಲಿದೆ ಬೆಂಬಲ ಬೆಲೆ? ಎಲ್ಲಿದೆ ರೈತರ ಪ್ರವಾಸ? ಅಧಿಕಾರ ವಹಿಸಿಕೊಂಡ 24 ಗಂಟೆಯೊಳಗೆ ಮಹದಾಯಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಿರಿ, ಏನಾಯಿತು? 

ಕೃಷಿಗೆ ಸಂಬಂಧಿಸಿದ ಎಲ್ಲ ಯೋಜನೆಗಳ ಉಸ್ತುವಾರಿಗೆ ಮುಖ್ಯಮಂತ್ರಿ ಅಧೀನದಲ್ಲಿ ಪ್ರತ್ಯೇಕ ‘’ರೈತಬಂಧು ಇಲಾಖೆ’ ರಚಿಸುವುದಾಗಿ ಹೇಳಿದ್ದೀರಿ? ಎಲ್ಲಿದೆ ಆ ಇಲಾಖೆ. ರೈತರಿಗೆ ನೀಡಿರುವ ಈ ಭರವಸೆಗಳಲ್ಲಿ ಯಾವುದನ್ನು ಈಡೇರಿಸಿದ್ದೀರಿ ಎಂದು ಹೇಳುವ ಧೈರ್ಯ ನಿಮಗಿದೆಯೇ?

ವಚನಭ್ರಷ್ಟತೆ ಎನ್ನುವುದು ನಿಮ್ಮ ಹುಟ್ಟುಗುಣ. ಕಳೆದ ಬಾರಿ ಹಸಿರುಶಾಲು ಹಾಕಿಕೊಂಡು ಅಧಿಕಾರಕ್ಕೆ  ಬಂದ ನೀವು ಸಾಲಮನ್ನಾ ಮಾಡಬೇಕೆಂದು ರೈತರು ಕೇಳಿದರೆ ‘’ ನಾನೇನು ನೋಟು ಪ್ರಿಂಟಿಂಗ್ ಮೆಷಿನ್ ಇಟ್ಟುಕೊಂಡಿದ್ದೇನಾ? ಎಂದು ಕೇಳಿದವರು ನೀವು.

ನಾನು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡದೆ ಇದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬೆದರಿಕೆ ಹಾಕಿದಿರಿ. ನಿಮ್ಮ ಪೊಳ್ಳು ಬೆದರಿಕೆಗೆ ಬೆದರುವವ ನಾನಲ್ಲ. ಆದರೆ ರೈತನ ಮಗನಾದ ನನಗೆ ರೈತರ ಕಷ್ಟಗಳು ಗೊತ್ತು. ಇದಕ್ಕಾಗಿ ನಾನು ಸಾಲ ಮನ್ನಾ ಮಾಡಿದೆ. 

ಮಹಿಳೆಯರಿಗೆ 1% ಬಡ್ಡಿದರದಲ್ಲಿ ಎರಡು ಲಕ್ಷ ಸಾಲ.

ಬಿಪಿಎಲ್ ಮಹಿಳೆಯರಿಗೆ ಸ್ಮಾರ್ಟ್ ಪೋನ್, ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್ ಕಿನ್.

ಮದುವೆಯಾಗುವ ಹೆಣ್ಣುಮಕ್ಕಳಿಗೆ ಮೂರು ಗ್ರಾಂ ಚಿನ್ನದ ತಾಳಿ ಮತ್ತು ರೂ.25.000.

 ರೂ.10,000 ಕೋಟಿ ವೆಚ್ಚದಲ್ಲಿ ‘ಸ್ತ್ರೀ ಉನ್ನತಿ ನಿಧಿ’-.ಯಾವ ಭರವಸೆ ಈಡೇರಿದೆ? 

ಕಾಲೇಜು ವಿದ್ಯಾರ್ಥಿಗಳಿಗೆಲ್ಲರಿಗೂ ಲ್ಯಾಪ್ ಟಾಪ್, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರೂ.1500 ಕೋಟಿ ವಿದ್ಯಾರ್ಥಿ ವೇತನ, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ರೂ.3000 ಕೋಟಿ ವೆಚ್ಚದ ವಿದ್ಯಾರ್ಥಿ ವೇತನ- ಇದು ರಾಜ್ಯ ಬಿಜೆಪಿಯ ಪ್ರಣಾಳಿಕೆಯಲ್ಲಿರುವ ಭರವಸೆಗಳು. 

ಪ್ರತಿವರ್ಷ 15-20 ಲಕ್ಷ ಉದ್ಯೋಗ ಸೃಷ್ಟಿ, ಉದ್ಯಮಗಳಲ್ಲಿ ಉದ್ಯೋಗ ನೀಡುವ ಸಾಮರ್ಥ್ಯವನ್ನು ಶೇಕಡಾ 50ರಷ್ಟು ಹೆಚ್ಚಳ, ಬಿಪಿಎಲ್ ಕುಟುಂಬದ ಪದವೀಧರರಿಗೆ ಮೂರು ಲಕ್ಷದ ವರೆಗೆ ಬಡ್ಡಿರಹಿತ ಸಾಲ,  ರೂ. 500 ಕೋಟಿ ವೆಚ್ಚದಲ್ಲಿ “ಸಣ್ಣ ವ್ಯಾಪಾರಿಗಳ ಕಲ್ಯಾಣ ನಿಧಿ’

ಈ ಭರವಸೆಗಳು ನೆನಪಿದೆಯೇ? 

ರೈತರು ಮಾತ್ರವಲ್ಲ ಮಹಿಳೆಯರು, ಯುವಕರು,ಕಾರ್ಮಿಕರು, ದಲಿತರು, ಹಿಂದುಳಿದ ಜಾತಿಗಳು, ಅಲ್ಪಸಂಖ್ಯಾತರು.. ಹೀಗೆ ಯಾವುದೇ ಜನವರ್ಗಕ್ಕೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ನೀವು ಈಡೇರಿಸಿಲ್ಲ. 

ರಾಜ್ಯದಲ್ಲಿ ಕೊರೊನಾ ರೋಗದ ಹಾವಳಿಯಿಂದ ಜನ ಸಾಯುತ್ತಿದ್ದಾಗ, ಇಡೀ ರಾಜ್ಯದಲ್ಲಿ ಸೂತಕದ ವಾತಾವರಣ ಇದ್ದಾಗ, ಜನ ಬೀದಿಗೆ ಕಾಲಿಡಲು ಹೆದರುತ್ತಿದ್ದ ಕಾಲದಲ್ಲಿ ನೀವು ತರಾತುರಿಯಿಂದ ಪ್ರಜಾತಾಂತ್ರಿಕ ವಿಧಿ ವಿಧಾನಗಳನ್ನು ಗಾಳಿಗೆ ತೂರಿ, ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದದ್ದು ರೈತರ ಪಾಲಿಗೆ ಮರಣಶಾಸನಗಳಾದ ಐದು ಕಪ್ಪು ಕಾನೂನುಗಳು.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ, ಜಾನುವಾರು ಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ, ಕೃಷಿಬೆಲೆ ಖಾತರಿ ಒಪ್ಪಂದ ಮತ್ತು ಕೃಷಿ ಸೇವೆಗಳ ಕಾಯ್ದೆಗೆ ತಿದ್ದುಪಡಿ ಮತ್ತು ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ಸೇರಿದಂತೆ ಈ ಐದು ಕಾನೂನುಗಳ ವಿರುದ್ಧ ರಾಜ್ಯದ ರೈತ ಸಮುದಾಯ ಬೀದಿಯಲ್ಲಿ ಹೋರಾಟ ನಡೆಸುತ್ತಿದೆ.

ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿಯೊಂದನ್ನು ಹೊರತುಪಡಿಸಿ ಉಳಿದ ಐದು ಕೃಷಿ ಸಂಬಂಧಿ ಕಾನೂನುಗಳ ಬಗ್ಗೆ ನಿಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖವೇ ಇಲ್ಲ. ಹೀಗಿದ್ದಾಗ ಇದನ್ನು ಜಾರಿಗೆ ತರಲು ನಿಮಗೆ ಮ್ಯಾನ್‌ಡೇಟ್ ಎಲ್ಲಿದೆ? 

ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ಸಂಘ ಪರಿವಾರದ ಅಜೆಂಡಾ. ಇದು ಗೋವುಗಳ ರಕ್ಷಣೆಗಾಗಿ ತಂದಿರುವ ಕಾಯ್ದೆ ಖಂಡಿತ ಅಲ್ಲ, ಇದು ಗೋರಕ್ಷಣೆಯ ಹೆಸರಲ್ಲಿ ಗೂಂಡಾಗಿರಿ ನಡೆಸುವ ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ತಂದಿರುವ ಕಾಯ್ದೆ ಅಷ್ಟೆ.

ಚುನಾವಣಾ ಕಾಲದ ಪ್ರಣಾಳಿಕೆ ಎನ್ನುವುದು ಜನತೆಗೆ ನೀಡುವ ವಚನ. ಗೆದ್ದ ಮೇಲೆ ಮೂಲೆಗೆಸೆದು ಮರೆತುಬಿಡುವ ಕಾಗದದ ಕಂತೆ ಅಲ್ಲ. ಗೆದ್ದು ಅಧಿಕಾರಕ್ಕೆ ಬಂದ ನಂತರ ಆ ಪ್ರಣಾಳಿಕೆಗೆ ಬದ್ಧತೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಇದನ್ನು ಎದೆತಟ್ಟಿ ಹೇಳುವ ನೈತಿಕತೆ ನನಗಿದೆ. 

ನಮ್ಮ ಪಕ್ಷ 165 ಭರವಸೆಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸದ ಮರುಗಳಿಗೆಯಲ್ಲಿಯೇ ಐದು ಭರವಸೆಗಳನ್ನು ಜಾರಿಗೆ ತಂದಿದ್ದೆ. ಐದು ವರ್ಷಗಳ ಅವಧಿಯಲ್ಲಿ ಎಲ್ಲ 165 ಭರವಸೆಗಳನ್ನು ಮಾತ್ರವಲ್ಲ, ಹೆಚ್ಚುವರಿ 25 ಯೋಜನೆಗಳನ್ನು ಜಾರಿಗೆ ತಂದಿದ್ದೆ. ಬಿಜೆಪಿಯವರ ಹಾಗೆ ಬಾಯಿ ಬಡಾಯಿ ಇಲ್ಲ. 

ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಪ್ರಧಾನಿ ಮೋದಿಯವರೂ ಸೇರಿದಂತೆ ಯಾರಾದರೂ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಈಡೇರಿಸಿದವರು ಇದ್ದಾರಾ? ಆಗಲೂ ಹೇಳಿದ್ದೆ, ಈಗಲೂ ಹೆಮ್ಮೆಯಿಂದ ಹೇಳುತ್ತೇನೆ, ನಮ್ಮದು ನುಡಿದಂತೆ ನಡೆದ ಸರ್ಕಾರ.

ಬಿಜೆಪಿಯವರದು ನುಡಿದಂತೆ ಎಂದೂ ನಡೆಯದ ವಚನಭ್ರಷ್ಟ, ಜನದ್ರೋಹಿ, ಆತ್ಮವಂಚಕ ಸರ್ಕಾರ. ಯಡಿಯೂರಪ್ಪ ಅವರೇ, ಈ ಆರೋಪವನ್ನು ನಿರಾಕರಿಸುವುದಾದರೆ ನಿಮ್ಮ ಪಕ್ಷದ ಪ್ರಣಾಳಿಕೆಯನ್ನು ಮುಂದಿಟ್ಟು ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸಿ. ಈ ಸವಾಲನ್ನು ನೀವು ಸ್ವೀಕರಿಸುವುದಾದರೆ ದಿನವನ್ನು ನೀವೇ ನಿಗದಿಪಡಿಸಿ. ನಾನು ಚರ್ಚೆಗೆ ಸಿದ್ದನಿದ್ದೇನೆ. 

ಮೂರು ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಕೃಷಿ ಸಾಲ, ಶೇಕಡಾ ಮೂರರ ಬಡ್ಡಿ ದರದಲ್ಲಿ ಹತ್ತು ಲಕ್ಷ ರೂಪಾಯಿ ವರೆಗೆ ಕೃಷಿ ಸಾಲ ನೀಡಿದ್ದೆ. ಸಹಕಾರಿ ಬ್ಯಾಂಕ್ ಗಳಲ್ಲಿನ ರೈತರ 50 ಸಾವಿರ ವರೆಗಿನ ಸಾಲ ಮನ್ನಾ ಮಾಡಿದ್ದೆ. ಇದರಿಂದಾಗಿ ರಾಜ್ಯದ 22,27,506  ರೈತರ ಒಟ್ಟು ರೂ.8,165 ಕೋಟಿ ಸಾಲ ಮನ್ನಾ ಆಗಿದೆ. 

ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಜಾರಿಗೆ ತಂದಿದ್ದ ಆನ್ ಲೈನ್ ಮಾರುಕಟ್ಟೆಯಿಂದಾಗಿ ರೈತರ ಆದಾಯ ಶೇಕಡಾ 38ರಷ್ಟು ಹೆಚ್ಚಿದೆ ಎಂದು ಕೇಂದ್ರ ನೀತಿ ಆಯೋಗವೇ ಶಹಬ್ಭಾಸ್ ಗಿರಿ ಕೊಟ್ಟಿತ್ತು. ಇಂತಹ ಒಂದೇ ಒಂದು ರೈತಪರ ಕಾರ್ಯಕ್ರಮವನ್ನು ಕಳೆದ ಹದಿನೆಂಟು ತಿಂಗಳಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿದೆಯಾ? 

ಕರ್ನಾಟಕ ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಕ್ಷೀರಧಾರೆ ಯೋಜನೆ ಮೂಲಕ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡಿ, ಹೈನುಗಾರಿಕೆಗೆ ಉತ್ತೇಜನ ನೀಡಿದ್ದು ನಮ್ಮ ಸರ್ಕಾರ. ಇಂದು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದ ಹಾಲು ಉತ್ಪಾದನೆ ಆಗುತ್ತಿದ್ದರೆ ಅದಕ್ಕೆ ಕಾಂಗ್ರೆಸ್ ಸರ್ಕಾರದ ಯೋಜನೆಗಳೂ ಕಾರಣ. 

ಅಕ್ರಮ ಡಿನೋಟಿಫಿಕೇಷನ್‌ಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿಯವರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಹೀಗಾಗಿ ಅಕ್ರಮ ಆರೋಪದ ತನಿಖೆ ಎದುರಿಸುತ್ತಿರುವ ವ್ಯಕ್ತಿ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕೆ? ಎಂಬುದು ರಾಜ್ಯದ ಜನರ ಪ್ರಶ್ನೆಯಾಗಿದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ವಿಜಯ್‌ಗೆ ಬೆಂಬಲ ನೀಡಿದ ಕಾಂಗ್ರೆಸ್

ವಿಜಯ್‌ಗೆ ಬೆಂಬಲ ನೀಡಿದ ಕಾಂಗ್ರೆಸ್

ದ್ರಾವಿಡರ ನಾಡು ತಮಿಳುನಾಡಿನಲ್ಲಿ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಬುಡಮೇಲು ಮಾಡಿರುವ ಟಿವಿಕೆ (TVK) ಪಕ್ಷದ ಮುಖಂಡ ವಿಜಯ್ (Vijay) ಅವರು ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

[ccc_my_favorite_select_button post_id="121783"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]