
ದೊಡ್ಡಬಳ್ಳಾಪುರ: ತಾಲೂಕಿನ ಹಣಬೆ ಗ್ರಾಮಕ್ಕೆ ಹೊಂದಿಕೊಂಡಂತಿರುವ ಚಿಕ್ಕಕೆರೆಯಲ್ಲಿ ಕಾಡು ಬೆಕ್ಕುಗಳನ್ನು ಕಂಡ ಗ್ರಾಮಸ್ಥರು ಚಿರತೆ ಎಂದು ಆತಂಕಗೊಂಡಿದ್ದಾರೆ.
ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿನಲ್ಲಿ ಸ್ಥಳೀಯರಿಗೆ ಗ್ರಾಮದ ಸಮೀಪವಿರುವ ಚಿಕ್ಕ ಕೆರೆಯಲ್ಲಿ ಚಿರತೆಯಂತಿದ್ದ ಕಾಡು ಬೆಕ್ಕುಗಳು ಕಂಡುಬಂದಿದ್ದು, ಚಿರತೆ ಇರಬಹುದೆಂದು ಆತಂಕಗೊಂಡು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಅಧಿಕಾರಿ ಚೇತನ್ ನೇತೃತ್ವದಲ್ಲಿ ಚಿರತೆಗಳು ಗ್ರಾಮಕ್ಕೆ ಬರದಂತೆ ತಡೆಯಲು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಕಾರ್ಯಾಚರಣೆ ನಡೆಸುವ ವೇಳೆ ದೊಡ್ಡದಾದ ಕಾಡು ಬೆಕ್ಕುಗಳು ಕಂಡು ಬಂದಿದ್ದು. ಕಾಡು ಬೆಕ್ಕನ್ನೆ ಚಿರತೆ ಎಂದು ಗ್ರಾಮಸ್ಥರು ಆತಂಕಗೊಂಡಿದ್ದಾರೆ ಎನ್ನಲಾಗುತ್ತಿದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರಿಗೆ ತೊಂದರೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಹುಲುಕಡಿ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಕಾರಣ ಚಿರತೆಗಳು ಬೆಟ್ಟವನ್ನು ಬಿಟ್ಟು ಗ್ರಾಮಗಳತ್ತ ಬಂದಿರಬಹುದೆಂಬ ಆತಂಕ ಗ್ರಾಮಸ್ಥರದ್ದಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಮುಂಜಾಗ್ರತೆ ಕೈಗೊಂಡಿದ್ದಾರೆ ಎಂದು ಸ್ಥಳೀಯರಾದ ಕೀರ್ತಿಬೈರೇಗೌಡ ಹರಿತಲೇಖನಿಗೆ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

