ಅಭಿವೃದ್ಧಿ ಹೆಸರಿನಲ್ಲಾಗುವ ಅರಣ್ಯ ನಾಶ ಆತಂಕಕಾರಿ ಬೆಳವಣಿಗೆ: ಜಿ.ಪಂ. ಅಧ್ಯಕ್ಷ ವಿ.ಪ್ರಸಾದ್

ಬೆಂ.ಗ್ರಾ.ಜಿಲ್ಲೆ: ಅಭಿವೃದ್ಧಿ ಹೆಸರಿನಲ್ಲಿ ದಿನಂಪ್ರತಿ ಅರಣ್ಯ ನಾಶಪಡಿಸಿ, ಹೆಚ್ಚು ನಗರೀಕರಣಗೊಳಿಸುವುದರಿಂದ, ಕಾಲಕ್ರಮೇಣ ಅರಣ್ಯ ಕಡಿಮೆಯಾಗಿ, ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಏರ್ಪಡಿಸಲಾಗಿದ್ದ “ಕೃಷಿ ಅರಣ್ಯ ಮತ್ತು ಶ್ರೀಗಂಧ ಬೇಸಾಯ ಕುರಿತ ಒಂದು ದಿನದ ಕಾರ್ಯಾಗಾರ”ವನ್ನು ಗಂಧದ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ಜಾಗತಿಕ ತಾಪಮಾನ ಏರಿಕೆಯಿಂದ ಹಲವಾರು ದುರಂತಗಳು ಸಂಭವಿಸುತ್ತಿರುವುದಕ್ಕೆ ನಾವೇ ಕಾರಣಕರ್ತರಾಗಿದ್ದು, ಅರಣ್ಯಾಭಿವೃದ್ಧಿ ಒಂದೇ ಇದಕ್ಕೆ ಪರಿಹಾರವಾಗಿದೆ ಎಂದರು.

ಅರಣ್ಯ ಅಭಿವೃದ್ಧಿಯಿಂದ ಮಾನವನಿಗೆ ಅತ್ಯಗತ್ಯವಾಗಿ ಬೇಕಿರುವ ಉತ್ತಮ ಗಾಳಿ ಮತ್ತು ನೀರು ಕೂಡ ಪಡೆಯಲು ಸಹಕಾರಿಯಾಗಲಿದೆ ಎಂದರು.

ಅರಣ್ಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಇಲಾಖೆಗಳ ಮೂಲಕ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ರೈತರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಇಂತಹ ಕಾರ್ಯಾಗಾರಗಳು ಉಪಯುಕ್ತವಾಗಲಿದೆ ಎಂದು ತಿಳಿಸಿದರು.

ರೈತರು ಕೇವಲ ಮಳೆ ಆಶ್ರಯದಲ್ಲಿ ಕೃಷಿ ಕೈಗೊಂಡಲ್ಲಿ, ಮಳೆಯ ಅಭಾವದಿಂದ ಕೆಲವೊಮ್ಮೆ ನಷ್ಟ ಅನುಭವಿಸುವಂತಾಗುತ್ತದೆ ಆದರೆ ಶ್ರೀಗಂಧ, ಹೆಬ್ಬೇವು, ತೇಗ ಮುಂತಾದ ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಕೃಷಿ ಮಾಡುವುದರಿಂದ ರೈತರ ಆದಾಯ ದ್ವಿಗುಣಗೊಳ್ಳುತ್ತದೆ ಮತ್ತು ಸ್ವಾವಲಂಬನೆ ಬದುಕು ಸಾಧಿಸಲು ಸಾಧ್ಯ ಎಂದು ಸಲಹೆ ನೀಡಿದರು.

ಸುಸ್ಥಿರ ಅಭಿವೃದ್ಧಿ ಸಾಧಿಸುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದ್ದು, ಎಲ್ಲರೂ ತಮ್ಮ ಜಮೀನಿನಲ್ಲಿ ಮರಗಳನ್ನು ನೆಟ್ಟು ಪೋಷಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. 

ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಅಪ್ಪಯ್ಯಣ್ಣ ಅವರು ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಮಹಿಳೆಯರು ಸಹ ಮುಂಚೂಣಿಯಲ್ಲಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಕಾರ್ಯಾಗಾರದಲ್ಲಿ ರೈತ ಮಹಿಳೆಯರು ಸಹ ಯೋಜನೆಯ ಸದುಪಯೋಗ ಪಡೆಯುವಂತಾಗಬೇಕು ಎಂದು ಆಶಿಸಿದರು.. 

ಜಿಲ್ಲಾ ಪಂಚಾಯಿತಿ ಸದಸ್ಯೆ ಅನಿತಾ ಕುಮಾರಿ ಚಿನ್ನಪ್ಪ  ಮಾತನಾಡಿ, ಅರಣ್ಯ ಇಲಾಖೆ ಸಹಯೋಗದೊಂದಿಗೆ ಪ್ರತಿ ವರ್ಷ ವನಮಹೋತ್ಸವ ಆಚರಿಸುವ ಮೂಲಕ ಅರಣ್ಯ ಅಭಿವೃದ್ಧಿ ಮಾಡುತ್ತಿರುವುದು ಶ್ಲಾಘನೀಯ ಎಂದರಲ್ಲದೆ, ರೈತರು ತಮ್ಮ ಜಮೀನಿನಲ್ಲಿ ಮರಗಳನ್ನು ಹೆಚ್ಚು ಬೆಳೆಸಬೇಕು ಎಂದರು. 

ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಾಮಾಜಿಕ ಅರಣ್ಯ ವಿಭಾಗದ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಅರೇಕಲ್ ಅವರು ಮಾತನಾಡಿ, ರೈತರು ಶ್ರೀಗಂಧ ಮರ ಬೆಳೆಯಲು ಭಯ ಪಡುವ ಅಗತ್ಯವಿಲ್ಲ, ಕಳ್ಳರ ಹಾವಳಿ ತಡೆಗೆ ಹಲವಾರು ತಂತ್ರಜ್ಞಾನಗಳಿದ್ದು, ಅವುಗಳನ್ನು ಅಳವಡಿಸಿಕೊಂಡು ರೈತರು ಧೈರ್ಯದಿಂದ ಮರ ಬೆಳೆಸಿ, ತಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳಬಹುದೆಂದು ಎಂದು ತಿಳಿಸಿದರು. 

ರಾಜ್ಯದಲ್ಲಿ 1000 ಚದರ ಕಿಲೋಮೀಟರ್ ಅರಣ್ಯ ಅಭಿವೃದ್ಧಿಯಾಗಿದ್ದು, ಕೃಷಿ ಜಮೀನಿನಲ್ಲಿ ಗಿಡಗಳನ್ನು ಬೆಳೆಸುವ ರೈತರಿಗೆ 3 ವರ್ಷಗಳ ಕಾಲಾವಧಿಗೆ ಸಹಾಯಧನ ನೀಡಲಾಗುವುದು ಎಂದರಲ್ಲದೆ, ತಿಳಿಸಿದರಲ್ಲದೆ, ಜಿಲ್ಲೆಯಲ್ಲಿ ಕರೋನಾ ಕಾರಣದಿಂದಾಗಿ ಕಾರ್ಯಾಗಾರ ತಡವಾಗಿ ನಡೆಯುತ್ತಿದ್ದು, ಜಿಲ್ಲೆಯ ರೈತರು ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ ಮಾತನಾಡಿ, ನರೇಗಾ ಯೋಜನೆಯಡಿ ರೈತರ ಜಮೀನಿನಲ್ಲಿ ಬದುಗಳ ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣಕ್ಕಾಗಿ ಹಣ ಬಿಡುಗಡೆ ಮಾಡಲಾಗಿದ್ದು, ಸದುಪಯೋಗ ಪಡಿಸಿಕೊಂಡು ಅಂತರ್ಜಲದ ಮಟ್ಟ ಹೆಚ್ಚಿಸುವ ಜೊತೆಗೆ ಮರಗಳನ್ನು ಪೋಷಿಸುವ ನಿಟ್ಟಿನಲ್ಲಿ ರೈತರು ಮುಂದಾಗಬೇಕು ಎಂದು ತಿಳಿಸಿದರು. 

ಸಾಮಾಜಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾಧಿಕಾರಿ ಭಾಸ್ಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದಲ್ಲಿ ಕರ್ನಾಟಕ ಮಳೆ ಆಧಾರಿತ ಕೃಷಿಯಲ್ಲಿ 2 ನೇ ಸ್ಥಾನದಲ್ಲಿದೆ. ಕೃಷಿ ಜೊತೆಗೆ ಮರಗಳನ್ನು ಬೆಳೆಸುವುದರಿಂದ ರೈತರಿಗೆ ಭವಿಷ್ಯದಲ್ಲಿ ಅನುಕೂಲವಾಗಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 10 ರಷ್ಟು ಮಾತ್ರ ಅರಣ್ಯ ಪ್ರದೇಶವಿರುವುದು ಆಘಾತಕಾರಿ ವಿಷಯವಾಗಿದೆ ಎಂದರು. ಅಲ್ಲದೆ, ಜಿಲ್ಲೆಯ ರೈತರು ತಮ್ಮ ವ್ಯಾಪ್ತಿಯಲ್ಲಿ ಮರಗಳನ್ನು ಬೆಳೆಸುವುದರಿಂದ ಅರಣ್ಯ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು. 

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ರೂಪ ಮರಿಯಪ್ಪ, ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಯಮ್ಮ, ಉಪಾಧ್ಯಕ್ಷರಾದ ಕಾಂತಮ್ಮ, ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ರಾಜ್ಯ ಕೃಷಿ ಅರಣ್ಯ ಉಪ ಅಭಿಯೋಜನೆಯ ಸಲಹೆಗಾರ ಚಂದ್ರಪ್ರಭ, ಭಾರತೀಯ ಮರ ವಿಜ್ಞಾನ ಸಂಸ್ಥೆಯ ನಿವೃತ್ತ ವಿಜ್ಞಾನಿ ಡಾ. ವಿ.ಪಿ.ಸೋಮಶೇಖರ್, ಭಾರತೀಯ ಮರ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳಾದ ಡಾ. ಕೆ.ಟಿ.ಚಂದ್ರಶೇಖರ್, ಜಿ.ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="121818"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]