ಬೆಂ.ಗ್ರಾ.ಜಿಲ್ಲೆ: ಬೆಳೆಗಳನ್ನು ರೈತರು ನೇರವಾಗಿ ಮಾರಾಟ ಮಾಡಲು ಎಲ್ಲಾ ತೋಟಗಾರಿಕೆ ಇಲಾಖೆಯ ಉದ್ಯಾನವನ ಸೇರಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಡಾವಣೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉದ್ಯಾನವನಗಳಲ್ಲಿ ಶೀಘ್ರವಾಗಿ ಸಾವಯವ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು ಎಂದು ತೋಟಗಾರಿಕೆ ಇಲಾಖೆ ಸಚಿವ ಆರ್.ಶಂಕರ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಆಯೋಜಿಸಲಾಗಿದ್ದ, ಸಾವಯವ ಉತ್ಪನ್ನಗಳ ಮಾರಾಟ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು ತೋಟಗಾರಿಕೆ ಬೆಳೆಗಳಿಗೆ ಸೂಕ್ತ ವೇದಿಕೆ ಹಾಗೂ ಸ್ಥಳಾವಕಾಶವಿಲ್ಲದಿರುವ ಕಾರಣ, ರೈತರು ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿರುವುದನ್ನು ಅರಿತು, ಸರ್ಕಾರ ಸಾವಯವ ಮಾರಾಟ ಮಳಿಗೆಗಳನ್ನು ತೆರೆಯಲು ಮುಂದಾಗಿದೆ ಎಂದು ಹೇಳಿದರು.
ಬಳಿಕ ತೋಟಗಾರಿಕೆ ಸಚಿವರು ದೇವನಹಳ್ಳಿ ತಾಲ್ಲೂಕಿನ ಪೂಜೇನಹಳ್ಳಿಯಲ್ಲಿ ರೈತರ ಬೆಳೆಗಳ ಸಂರಕ್ಷಣೆಗಾಗಿ ನಿರ್ಮಾಣವಾಗುತ್ತಿರುವ ಶ್ವೇತಗರ ಘಟಕಕ್ಕೆ ಭೇಟಿ ನೀಡಿ, ನಿರ್ಮಾಣ ಪ್ರಕ್ರಿಯೆಯ ಹಂತವನ್ನು ಪರಿಶೀಲಿಸಿದರು.
ಈ ವೇಳೆ ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ರೇಖಾ ವೇಣುಗೋಪಾಲ್, ಸದಸ್ಯರಾದ ಗೀತಾ ಕೆ.ಶ್ರೀಧರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಮಹಾಂತೇಶ್, ಸ್ವದೇಶಿ ಜಾಗರಣ ಮಂಚ್ ನ ಜಗದೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ.ಸುದ್ದಿಗಳು ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….