ಬೆಲೆ ಏರಿಕೆ ನಡುವೆ ಬೆಂ.ಗ್ರಾ.ಜಿಲ್ಲೆಯ ಸಾರ್ವಜನಿಕರಿಗೆ ಹೊರೆ / ತ್ಯಾಜ್ಯ ಸಂಗ್ರಹ ಶುಲ್ಕ ವಿಧಿಸಲು ಸ್ಥಳೀಯ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿರುವ ಎಲ್ಲಾ ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿನ ಮನೆ-ಮನೆಗೆ ತೆರಳಿ, ವಿಂಗಡಣೆ ಮಾಡಿರುವ ಕಸ ಸಂಗ್ರಹಣೆ ಮಾಡಬೇಕು ಹಾಗೂ ತ್ಯಾಜ್ಯ ಸಂಗ್ರಹಣೆಗೆ ನಿರ್ದಿಷ್ಟ ಶುಲ್ಕ ವಿಧಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ನಗರ ಸ್ಥಳೀಯ ಸಂಸ್ಥೆಗಳಲ್ಲಿ ಘನತ್ಯಾಜ್ಯ ವಸ್ತುಗಳಿಂದ ತಯಾರಿಸಿದ ಗೊಬ್ಬರವನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಸ್ಥಳೀಯ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರಸಭೆ ಹಾಗೂ ಪುರಸಭೆಗಳು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಪೀಠ ನೀಡಿರುವ ಎಲ್ಲಾ ಆದೇಶಗಳನ್ನು ತಪ್ಪದೇ ಪಾಲಿಸುವ ಕುರಿತು ಮಾಧ್ಯಮಗಳ ಮೂಲಕ ಜಾಹೀರಾತು ನೀಡುವುದು ಸೇರಿದಂತೆ ಕರಪತ್ರಗಳನ್ನು ಹಂಚುವ ಮೂಲಕ ಕಸವಿಂಗಡಣೆ ಹಾಗೂ ಶುಲ್ಕ ವಿಧಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.

ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಈಗಾಗಲೇ ಜಮೀನು ಮಂಜೂರು ಮಾಡಲಾಗಿದ್ದು, ಸರ್ವೇ ಮಾಡಿಸಿ ತಮ್ಮ ವಶಕ್ಕೆ ಪಡೆದುಕೊಳ್ಳಬೇಕು ಎಂದರು. ಅಲ್ಲದೆ, ಕೆಲವು ಕಡೆ ರೈತರು ಜಮೀನು ನೀಡಲು ನಿರಾಕರಿಸಿದ ಘಟನೆಗಳು ನಡೆದಿದ್ದು, ಅಂತಹ ಸಂದರ್ಭದಲ್ಲಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಈಗಾಗಲೇ ಸ್ಥಳೀಯ ಸಂಸ್ಥೆಗಳು ಗೊಬ್ಬರ ಉತ್ಪಾದನೆ ಮಾಡುತ್ತಿದ್ದು, ಕೃಷಿ ಇಲಾಖೆ ಸಹಯೋಗದೊಂದಿಗೆ ಪರೀಕ್ಷೆ ನಡೆಸಿ, ದರ ನಿಗದಿಪಡಿಸುವ ಮೂಲಕ ರೈತರಿಗೆ ಮಾರಾಟ ಮಾಡಬೇಕು ಹಾಗೂ ಇದರ ಕುರಿತು ರೈತರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಕಸ ಸಂಗ್ರಹಣೆ ಮಾಡುವ ಎಲ್ಲಾ ವಾಹನಗಳಿಗೆ ಜಿ.ಪಿ.ಎಸ್. ತಂತ್ರಜ್ಞಾನ ಅಳವಡಿಸಬೇಕು ಹಾಗೂ ವಿಲೇವಾರಿ ಸಂದರ್ಭದಲ್ಲಿ ಪ್ಲಾಸ್ಟಿಕ್ ನಂತಹ ವಸ್ತುಗಳನ್ನು ಹರಾಜು ಪ್ರಕ್ರಿಯೆ ನಡೆಸಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದರೊಂದಿಗೆ ನಗರ ವ್ಯಾಪ್ತಿಯಲ್ಲಿ ಹೊಸ ಮನೆಗಳನ್ನು ನಿರ್ಮಿಸುವ ಸಂದರ್ಭದಲ್ಲಿ ಹಳೆಯ ಮನೆಗಳನ್ನು ನೆಲಸಮ ಮಾಡುವ ಸಂದರ್ಭದಲ್ಲಿ ಕಟ್ಟಡ ಸಾಮಗ್ರಿಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. 

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ ಅವರು ಮಾತನಾಡಿ, ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಪ್ರತಿದಿನ 8 ಟನ್ ಹಸಿಕಸ ಸಂಗ್ರಹಣೆಯಾಗುತ್ತಿದ್ದು, ಪ್ರತಿದಿನ 4 ಟನ್ ಗೊಬ್ಬರ ತಯಾರಾಗುತ್ತಿದೆ, ಪ್ರತಿ ಟನ್‍ಗೆ 1 ಸಾವಿರ ರೂಪಾಯಿ ನಿಗದಿ ಪಡಿಸಲಾಗಿದ್ದು, ಪ್ರತಿ ತಿಂಗಳು 15 ಟನ್ ಗೊಬ್ಬರ ಮಾರಾಟ ಮಾಡಲಾಗುತ್ತಿದೆ ಹಾಗೂ ದಾಸ್ತಾನಿನಲ್ಲಿ 144 ಟನ್ ಗೊಬ್ಬರ ಶೇಖರಿಸಲಾಗಿದ್ದು , ರೈತರಿಗೆ ಈ ದರದಲ್ಲೇ ಮಾರಾಟ ಮಾಡಲಾಗುತ್ತಿದೆ ಎಂದರು. 

ಹೊಸಕೋಟೆ ನಗರಸಭಾ ವ್ಯಾಪ್ತಿಯಲ್ಲಿ ಪ್ರತಿದಿನ 7 ಟನ್ ಹಸಿ ಕಸ ಸಂಗ್ರಹವಾಗುತ್ತಿದ್ದು, ಗೊಬ್ಬರವನ್ನು ನೇರವಾಗಿ ರೈತರಿಗೆ ಉಚಿತವಾಗಿ ನೀಡಲಾಗುತ್ತಿದೆ. ನೆಲಮಂಗಲ ನಗರಸಭೆಯಲ್ಲಿ ಪ್ರತಿದಿನ 3 ಟನ್ ಹಸಿಕಸ ಸಂಗ್ರಹವಾಗುತ್ತಿದ್ದು, ಪ್ರತಿದಿನ ಒಂದು ಟನ್ ಗೊಬ್ಬರ ತಯಾರಾಗುತ್ತಿದೆ ಹಾಗೂ ರೈತರಿಗೆ ಉಚಿತವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು. 

ದೇವನಹಳ್ಳಿ ಪುರಸಭೆಯಲ್ಲಿ ಪ್ರತಿದಿನ 2 ಟನ್ ಹಸಿಕಸ ಸಂಗ್ರಹವಾಗುತ್ತಿದ್ದು, ದಿನವೊಂದಕ್ಕೆ 0.5 ಟನ್ ಗೊಬ್ಬರ ತಯಾರಾಗುತ್ತಿದೆ. ಪ್ರತಿ ಟನ್‍ಗೆ ಐದು ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ, ಪ್ರತಿ ತಿಂಗಳು ಒಂದು ಟನ್ ಗೊಬ್ಬರ ಮಾರಾಟ ಮಾಡಲಾಗುತ್ತಿದೆ ಹಾಗೂ ವಿಜಯಪುರ ಪುರಸಭೆಯಲ್ಲಿ ಪ್ರತಿದಿನ ಒಂದು ಟನ್ ಹಸಿ ಕಸ ಸಂಗ್ರಹವಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ, ನಗರಸಭೆ ಆಯುಕ್ತರು, ಪುರಸಭೆ ಮುಖ್ಯಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]