ಹೈನುಗಾರಿಕೆಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು, ಅಧಿಕ ಲಾಭ ಪಡೆಯಿರಿ / ಜಿಲ್ಲಾ ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಲಾಕ್‍ಡೌನ್ ಸಂದರ್ಭದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡ ರೈತರು ಆರ್ಥಿಕ ಸಂಕಷ್ಟದಿಂದ ಪಾರಾಗಿರುವುದು ಸಂತಸದ ವಿಷಯವಾಗಿದ್ದು, ಹೈನುಗಾರಿಕೆಯಲ್ಲಿ ವೈಜ್ಞಾನಿಕ  ಪದ್ದತಿಗಳನ್ನು ಅಳವಡಿಸಿಕೊಂಡು ಅಧಿಕ ಲಾಭ ಪಡೆಯುವ ಮೂಲಕ ಸ್ವಾವಲಂಬಿ ಬದುಕು ನಡೆಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿ ಚಿನ್ನಪ್ಪ ತಿಳಿಸಿದರು. 

ಪಶುಪಾಲನಾ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ಯಲಿಯೂರು ಗ್ರಾಮದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ  ಪಶುಪಾಲಕರನ್ನು ಉದ್ದೇಶಿಸಿ ಅವರು ಮಾತನಾಡಿದರು. 

ಬಮೂಲ್ ನಿರ್ದೇಶಕ ಇರಿಗೇನಹಳ್ಳಿ ಶ್ರೀನಿವಾಸ್ ಅವರು ಮಾತನಾಡಿ, ಹೈನುಗಾರಿಕೆಯು ಒಂದು ಉದ್ಯಮವಾಗಿ ಬೆಳೆದಿದ್ದು, ಇದರಲ್ಲಿ ವಿಫುಲ ಅವಕಾಶಗಳಿವೆ ಎಂದರಲ್ಲದೆ, ಹೈನುಗಾರಿಕೆಯನ್ನು ವ್ಯವಸ್ಥಿತವಾಗಿ ಮಾಡುವಂತೆ ಪಶುಪಾಲಕರಿಗೆ ಸಲಹೆ ನೀಡಿದರು.

ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಜಿ.ಎಂ.ನಾಗರಾಜು ಮಾತನಾಡಿ, ಇಲಾಖೆಯ ಆವಿಷ್ಕಾರಗಳಾದ ಲಿಂಗ ನಿರ್ಧರಿತ ವೀರ್ಯನಳಿಕೆಗಳನ್ನು ಹೆಚ್ಚಾಗಿ ಬಳಸುವ ಮೂಲಕ ಶೇ. 95% ರಷ್ಟು ಹೆಣ್ಣು ಕರುಗಳನ್ನು ಪಡೆಯಲು ತಿಳಿಸಿದರಲ್ಲದೆ, ಅಧಿಕ ಮೇವು ಇಳುವರಿ ನೀಡುವ ಸುಧಾರಿತ ಮೇವು ಬೆಳೆಯಾದ ಸುಬಾಬುಲ್ ನಾರಿ ನಿರ್ಬೀಜ ತಳಿಯನ್ನು ಅಳವಡಿಸಿಕೊಂಡು ಹೈನುಗಾರಿಕೆಯಲ್ಲಿ ಉತ್ಪಾದನಾ ವೆಚ್ಚವನ್ನು ಕಡಿಮೆಗೊಳಿಸಿ, ಹೆಚ್ಚಿನ ಲಾಭಂಶ ಪಡೆಯುವಂತೆ ತಿಳಿಸಿದರು.

ಉಪ ನಿರ್ದೇಶಕರ ಕಚೇರಿಯ ಮುಖ್ಯ ಪಶುವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್.ಸಿ.ಎಸ್.  ಅವರು ಮಾತನಾಡಿ, ಇಲಾಖೆಯ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳುವಂತೆ ಪಶುಪಾಲಕರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಆಧುನಿಕ ಪಶುಪಾಲನಾ ಪದ್ದತಿಗಳನ್ನು ಅಳವಡಿಸಿಕೊಂಡು ಕರುಗಳನ್ನು ಸಾಕಾಣಿಕೆ ಮಾಡಲು ಹಾಗೂ ರೈತರನ್ನು ಪ್ರೋತ್ಸಾಹಿಸಲು ಮಿಶ್ರತಳಿ ಕರುಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಪ್ರದರ್ಶನದಲ್ಲಿ ಭಾಗವಹಿಸಿದ ಒಟ್ಟು 47 ಕರುಗಳ ಪೈಕಿ ಉತ್ತಮವಾಗಿ ಪೋಷಿಸಲಾದ 3 ತಿಂಗಳ ಕರುಗಳು, 3-6 ತಿಂಗಳ ಕರುಗಳು ಹಾಗೂ 6 ತಿಂಗಳಿಂದ 1 ವರ್ಷದವರೆಗಿನ ಕರುಗಳಿಗೆ ಪ್ರತ್ಯೇಕವಾಗಿ ಬಹುಮಾನಗಳನ್ನು ಮತ್ತು ಖನಿಜ ಮಿಶ್ರಣ ಪೊಟ್ಟಣಗಳನ್ನು ವಿತರಿಸಲಾಯಿತು.

ಸ್ಪರ್ಧೆಯಲ್ಲಿ ಜಿಲ್ಲೆಯ 4 ತಾಲ್ಲೂಕುಗಳಿಂದ ಒಟ್ಟು 17 ಹಸುಗಳು ಭಾಗವಹಿಸಿದ್ದು, ಎರಡು ಹೊತ್ತಿನ ಹಾಲಿನ ಇಳುವರಿಯ ಒಟ್ಟು ತೂಕದ ಮಾನದಂಡವನ್ನು ಪರಿಗಣನೆಗೆ ತೆಗೆದುಕೊಂಡು ಅಂತಿಮವಾಗಿ ಬಹುಮಾನಗಳನ್ನು ಘೋಷಿಸಲಾಯಿತು.

ದೇವನಹಳ್ಳಿ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದ ನಾರಾಯಣಪ್ಪ ಅವರ ಹಸು 37.110 ಕಿ.ಲೋ ಹಾಲು ಇಳುವರಿ ನೀಡುವ ಮೂಲಕ ಪ್ರಥಮ ಬಹುಮಾನ 25 ಸಾವಿರ ರೂಪಾಯಿ ನಗದು ಹಾಗೂ ಪಾರಿತೋಷಕ, ಪ್ರಶಸ್ತಿ ಪತ್ರ ಪಡೆಯಿತು. ದೇವನಹಳ್ಳಿ ತಾಲ್ಲೂಕಿನ ಮಾಳಿಗೇನಹಳ್ಳಿ ಗ್ರಾಮದ ಟಿ.ಲೋಕೇಶ್ ಅವರ ಹಸು 35.010 ಕಿ.ಲೋ ಹಾಲು ನೀಡುವ ಮೂಲಕ ದ್ವಿತೀಯ ಬಹುಮಾನ 20 ಸಾವಿರ ರೂಪಾಯಿ ಮತ್ತು ಪಾರಿತೋಷಕ, ಪ್ರಶಸ್ತಿ ಪತ್ರ ಪಡೆದುಕೊಂಡಿತು ಹಾಗೂ ಹೊಸಕೋಟೆ ತಾಲ್ಲೂಕಿನ ಇಟ್ಟಸಂದ್ರ ಗ್ರಾಮದ ರಾಮಚಂದ್ರಪ್ಪ ಅವರ ಹಸು 34.130 ಕಿ.ಲೋ ಹಾಲಿನ ಇಳುವರಿ ನೀಡುವ ಮೂಲಕ ತೃತೀಯ ಬಹುಮಾನ 10 ಸಾವಿರ ರೂಪಾಯಿ ಮತ್ತು ಪಾರಿತೋಷಕ ಪ್ರಶಸ್ತಿ ಪತ್ರ ಪಡೆದುಕೊಂಡಿತು. 

ಭಾಗವಹಿಸಿದ ಎಲ್ಲಾ ರಾಸುಗಳ ಮಾಲೀಕರಿಗೆ ಯಲಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೊಣ್ಣೇಗೌಡ ಅವರಿಂದ ತಲಾ ಒಂದು ಸಾವಿರ ನಗದು ಹಾಗೂ ಪಶುಪಾಲನಾ ಇಲಾಖೆಯಿಂದ ಸಮಾಧಾನಕರ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.

ಸ್ಪರ್ಧೆಯ ಮೊದಲನೇ ಬಹುಮಾನದ ಪ್ರಾಯೋಜಕತ್ವವನ್ನು ಮಾ ಇಂಟಿಗ್ರೇಟರ್ಸ್ ಕಂಪನಿಯ ಮಾಲೀಕರಾದ ಅಶೋಕ್ ಕುಮಾರ್ ಅವರು ವಹಿಸಿಕೊಂಡಿದ್ದರು.ಕಾರ್ಯಕ್ರಮದಲ್ಲಿ ಪಶು ಔಷಧ ಕಂಪನಿಗಳಾದ ಇಂಟಾಸ್, ವಿರ್‍ಬ್ಯಾಕ್ ಮತ್ತು Zydus Cadilla ಅವರು ಭಾಗವಹಿಸಿ ಜಂತುನಾಶಕ ಔಷಧಿ, 5 ಲೀಟರ್‌ನ ಖನಿಜ ಮಿಶ್ರಣ ಟಾನಿಕ್ ಹಾಗೂ 1 ಕೆ.ಜಿ ಪೊಟ್ಟಣಗಳನ್ನು ಭಾಗವಹಿಸಿದ್ದ ಎಲ್ಲಾ ರಾಸುಗಳಿಗೆ ಉಚಿತವಾಗಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ವಿಶ್ವನಾಥ್, ಡಾ.ಅಂಜಿನಪ್ಪ, ಡಾ.ಎಂ.ಕೆ.ಮಂಜುನಾಥ್, ಡಾ. ಸಿದ್ದಪ್ಪ, ಡಾ.ಮೋಹನ್ ಕುಮಾರ್, ಡಾ.ನಾರಾಯಣಸ್ವಾಮಿ, ಡಾ.ಲೋಕೇಶ್, ಯಲಿಯೂರು ಪಶುಚಿಕಿತ್ಸಾಲಯದ ಮುಖ್ಯ ಪಶುವೈದ್ಯಾಧಿಕಾರಿ ಡಾ.ಮಂಜುನಾಥ್ ಹಾಗೂ ಜಿಲ್ಲೆಯ ಎಲ್ಲಾ ಪಶುವೈದ್ಯಾಧಿಕಾರಿಗಳು, ಪಿ.ಎಲ್.ಡಿ ಬ್ಯಾಂಕ್‍ನ ನಿರ್ದೇಶಕ ಜಿ.ಕೆ.ಹನುಮಪ್ಪ, ಯಲಿಯೂರು ಕುರಿ/ಮೇಕೆ ಸಾಕಾಣಿಕೆ ರೈತ ಉತ್ಪಾದಕರ ಸಂಸ್ಥೆಯ ಮುಖ್ಯಸ್ಥ ಹಾಗೂ ಪಂಚಾಯತಿ ಸದಸ್ಯ ಆನಂದ್, ಯಲಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾಗರಾಜು, ಯಲಿಯೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಪವಿತ್ರ ಸೋಮಶೇಖರ್, ಸದಸ್ಯರಾದ ಸುನೀಲ್, ಲಕ್ಷ್ಮೀದೇವಮ್ಮ, ನೇತ್ರಾವತಿ ಮಂಜುನಾಥ್, ರೂಪ ಚಿಕ್ಕಣ್ಣ ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]