ಶೀಘ್ರದಲ್ಲಿ ನೂತನ ಗಣಿ ನೀತಿ ಜಾರಿ: ಸಚಿವ ಮುರಗೇಶ ನಿರಾಣಿ

ಬೆಂಗಳೂರು: ರಾಜ್ಯದಲ್ಲಿ ಪರಿಸರ ಮತ್ತು ಉದ್ಯಮಸ್ನೇಹಿಯಾದ ನೂತನ ಗಣಿ ನೀತಿಯನ್ನು ರಾಜ್ಯ ಸರಕಾರದಿಂದ ರೂಪಿಸುತ್ತಿದ್ದು, ನೀತಿಯ ಕರಡು ಪ್ರತಿ ಪರಿಶೀಲನಾ ಹಂತದಲ್ಲಿದೆ. ಅಂತಿಮಗೊಳಿಸಿ ಶೀಘ್ರದಲ್ಲಿ ನೂತನ ಗಣಿ ನೀತಿ ಜಾರಿಗೊಳಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ ನಿರಾಣಿ ಹೇಳಿದ್ದಾರೆ.

ಗದಗ್ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಹಾಗೂ ಸ್ಟೋನ್‍ಕ್ರಶರ್ ಮತ್ತು ಕಲ್ಲು ಗಣಿಗಾರಿಕೆ ಸಂಘದ ಪದಾಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದರು.

ಹೊಸ ಮೈನಿಂಗ್ ನೀತಿಯಲ್ಲಿ ಲೈಸನ್ಸ್ ಸರಳೀಕರಣಕ್ಕೆ ಆದ್ಯತೆ ನೀಡಲಾಗಿದೆ ಮತ್ತು ಕ್ರಶರ್ ಮಾಲೀಕರ ಬೇಡಿಕೆಗಳಿಗೆ ಸ್ಪಂದಿಸಲಾಗಿದೆ. ಪಟ್ಟಾ ಭೂಮಿ ಹಾಗೂ ಸರಕಾರಿ ಭೂಮಿಗಳಲ್ಲಿ ನಡೆಯುವ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ (ರಾಯಲಿಟಿ) ಮೊತ್ತವನ್ನು ಬೇರೆ ಬೇರೆಯಾಗಿ ನಿಗದಿಗೊಳಿಸಲಾಗುವುದು ಎಂದು ಅವರು ಹೇಳಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ‘ಏಕಗವಾಕ್ಷಿ ಯೋಜನೆ’ ಜಾರಿ ಮೂಲಕ ಉಧ್ಯಮಿಗಳಿಗೆ ತ್ವರೀತವಾಗಿ ಸ್ಪಂದಿಸಲು ಕ್ರಮವಹಿಸಲಾಗುತ್ತಿದೆ. ಸಧ್ಯದಲ್ಲಿ ರಾಜ್ಯದ ಎಲ್ಲ ಕಂದಾಯ ವಿಭಾಗ ಮತ್ತು ಎಲ್ಲ ಜಿಲ್ಲೆಗಳಲ್ಲಿ ಮೈನಿಂಗ್ ಅದಾಲತ್ ಆಯೋಜಿಸಲಾಗುತ್ತಿದೆ. ಅದಾಲತ್ ನಡೆಯುವ ಸ್ಥಳದಲ್ಲಿಯೇ ಗಣಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಧಾರವಾಡ ಜಿಲ್ಲೆಯಲ್ಲಿ 62 ಸ್ಟೋನ್ ಕ್ರಶರ್ ಮತ್ತು 136 ಕಲ್ಲು ಗಣಿಗಾರಿಕೆಗಳಿವೆ. ನಿಯಮ ಉಲ್ಲಂಘಿಸಿ ಗಣಿಗಾರಿಕೆ ಹಾಗೂ ಸ್ಟೊನ್‍ಕ್ರಶರ್ ನಡೆಯುತ್ತಿದ್ದರೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಲಿದ್ದಾರೆ ಎಂದು ಅವರು ತಿಳಿಸಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಹಾಗೂ ಸ್ಟೊನ್‍ಕ್ರಶರ್, ಕಲ್ಲು ಗಣಿಗಾರಿಕೆ ನಡೆಸುವ ಉದ್ಯಮಗಳಿಗೆ ಸೂಕ್ತ ತರಬೇತಿ ನೀಡಲು ಸ್ಕೂಲ್ ಆಫ್ ಮೈನಿಂಗ್ ಆರಂಭಿಸಲು ಸರಕಾರ ಸಿದ್ಧತೆ ನಡೆಸಿದೆ ಎಂದು ಸಚಿವ ಮುರಗೇಶ ನಿರಾಣಿ ಹೇಳಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಪ್ರತಿ ತಿಂಗಳು ಜಿಲ್ಲಾ ಟಾಸ್ಕ್‍ಪೊರ್ಸ್ ಸಭೆ ಜರುಗಿಸಿ ನಿಯಮಾನುಸಾರ ಲೈಸೆನ್ಸ್ ನೀಡಲಾಗುತ್ತಿದೆ. ಪ್ರತಿ ಗಣಿಕಾರಿಕೆ ಹಾಗೂ ಸ್ಟೊನ್‍ಕ್ರಶರ್ ಸ್ಥಳದಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಅನುಮತಿಗೆ ವಿಧಿಸಿದ ನಿಯಮಗಳ ಪಾಲನೆ ಕುರಿತು ಅಧಿಕಾರಿಗಳಿಂದ ವರದಿ ಪಡೆಯಲಾಗುತ್ತಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಾಸಕ ಪ್ರಸಾದ ಅಬ್ಬಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಡಿಸಿಪಿ ರಾಮರಾಜನ್, ಪರಿಸರ ಅಧಿಕಾರಿ ಶೋಭಾ ಪೋಳ ಹಾಗೂ ಧಾರವಾಡ ಜಿಲ್ಲಾ ಸ್ಟೋನ್‍ಕ್ರಶರ್ ಮತ್ತು ಕಲ್ಲು ಗಣಿಗಾರಿಕೆ ಸಂಘಗಳ ಅಧ್ಯಕ್ಷ ಕಲ್ಲಪ್ಪ ಹಟ್ಟಿಯವರ, ಉಪಾಧ್ಯಕ್ಷ ವಿ.ಎಸ್. ಪಾಟೀಲ ಮಾತನಾಡಿದರು. 

ಹಿರಿಯ ಭೂ ವಿಜ್ಞಾನಿ ಚಂದ್ರಶೇಖರ ಸ್ವಾಗತಿಸಿ ಸಭೆ ನಿರ್ವಹಿಸಿದರು. ಸಭೆಯಲ್ಲಿ ರೇಷ್ಮೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಡಿವೈಎಸ್‍ಪಿ ಎಂ.ಬಿ. ಸಂಕದ ಸೇರಿದಂತೆ ವಿವಿಧ ಅಧಿಕಾರಿಗಳು, ಕ್ರಶರ್ ಮತ್ತು ಕಲ್ಲುಗಣಿಗಾರಿಕೆಗಳ ಮಾಲೀಕರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]