
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಪ್ರಚಾರ ಮಾಡುವ ವಾಹನಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಗರ್ಭಿಣಿ ಮತ್ತು ಮಗುವಿನ ಜನನ ಸಮಯದ ಸೇವೆಗಳು, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ ಸೇವೆಗಳು, ಬಾಲ್ಯ ಮತ್ತು ಹದಿಹರೆಯದವರ ಸಮಗ್ರ ಆರೋಗ್ಯ ಸೇವೆಗಳು, ಕುಟುಂಬ ಕಲ್ಯಾಣ, ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳು, ರಾಷ್ಟ್ರೀಯ ಆರೋಗ್ಯ ಯೋಜನೆಗಳು ಹಾಗೂ ಸಾಂಕ್ರಾಮಿಕ ರೋಗಗಳ ನಿರ್ವಹಣೆ ಸೇವೆಗಳು, ಅಸಾಂಕ್ರಾಮಿಕ ರೋಗಗಳು (ಮಧುಮೇಹ, ಹೆಚ್ಚು ರಕ್ತದೊತ್ತಡ, ದೀರ್ಘಾವಧಿ ಶ್ವಾಸಕೋಶ ಕಾಯಿಲೆ, ಕೀಲು ನೋವು ಮತ್ತು ಸಂಧಿವಾತ, ಕ್ಯಾನ್ಸರ್-ಬಾಯಿ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ಗಳ ಸ್ಕ್ರೀನಿಂಗ್ ಸೇವೆಗಳು), ಮೂಲಭೂತ ನೇತ್ರ ಸೇವೆಗಳು, ಮೂಲಭೂತ ಕಿವಿ, ಮೂಗು, ಗಂಟಲು ಸೇವೆಗಳು, ಮೂಲಭೂತ ವೃದ್ಧಾಪ್ಯ ಆರೈಕೆ, ಮಾನಸಿಕ ಆರೋಗ್ಯದ ಮೂಲಭೂತ ಸ್ಕ್ರೀನಿಂಗ್ ಸೇವೆಗಳು, ಮೂಲಭೂತ ದಂತ ಆರೋಗ್ಯ ಸೇವೆಗಳು, ಅಪಘಾತಗಳು ಹಾಗೂ ಗಾಯಾಳುಗಳಿಗೆ ಮೂಲಭೂತ ಮತ್ತು ಪ್ರಥಮ ಚಿಕಿತ್ಸೆ, ಆರೈಕೆ(ಹಾವು, ನಾಯಿ ಕಚ್ಚುವುದು, ಕತ್ತರಿಸಿದ, ಮತ್ತಿತರ ಗಾಯಗಳಿಗೆ ಪ್ರಥಮ ಚಿಕಿತ್ಸೆ) ಸೇವೆಗಳು ದೊರೆಯಲಿದ್ದು, ಸಾರ್ವಜನಿಕರು ಸೇವೆಗಳ ಸೌಲಭ್ಯ ಪಡೆಯಬೇಕೆಂದು ತಿಳಿಸಿದರು.
ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾ ದೇವಿ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟಮಾತನಾಡಿ, ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

